• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅದ್ದೂರಿ ಸೆಟ್ ನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರಕ್ಕೆ ಚಿತ್ರೀಕರಣ .

ಪ್ರತಿಧ್ವನಿ by ಪ್ರತಿಧ್ವನಿ
June 8, 2025
in Top Story, ಕರ್ನಾಟಕ, ಸಿನಿಮಾ
0
ಅದ್ದೂರಿ ಸೆಟ್ ನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರಕ್ಕೆ ಚಿತ್ರೀಕರಣ .
Share on WhatsAppShare on FacebookShare on Telegram

ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಾಣದ ಈ ಚಿತ್ರಕ್ಕೆ ಧನಂಜಯ್ ನಿರ್ದೇಶನ .

ADVERTISEMENT

ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ಗೋಲ್ಟನ್ ಸ್ಟಾರ್ ಗಣೇಶ್‍ ಅಭಿನಯದ ‘ಪಿನಾಕ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ನೆಲಮಂಗಲ ಬಳಿ ಚಿತ್ರಕ್ಕಾಗಿ ಆರು ಎಕರೆ ಪ್ರದೇಶದಲ್ಲಿ ದೊಡ್ಡ ಸೆಟ್‍ ಹಾಕಲಾಗಿದೆ. ಸೆಟ್‍ ಎಂದರೆ ಅದು 500 ವರ್ಷಗಳ ಹಿಂದಿನ ದೇವಗಿರಿ ಎಂಬ ಸಾಮ್ರಾಜ್ಯದ ಸೆಟ್‍. ಒಂದು ನಗರವನ್ನೇ ನಿರ್ಮಿಸಲಾಗಿದ್ದು, ಮಧ್ಯದಲ್ಲೊಂದು ಅರ್ಧನಾರೀಶ್ವರನ ಪ್ರತಿಮೆ ನಿಲ್ಲಿಸಲಾಗಿದೆ.

ಇಲ್ಲಿ ಕಳೆದ 32 ದಿನಗಳಿಂದ ಚಿತ್ರೀಕರಣ ನಡೆಯುತ್ತಿದ್ದು, ಇನ್ನೂ 15 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆಯಂತೆ. ಈ ಸೆಟ್ ಚಿತ್ರದಲ್ಲಿ ಮಹತ್ವದ ಪಾತ್ರ ವಹಿಸುವುದರಿಂದ, ಚಿತ್ರತಂಡ ಈ ಸೆಟ್‍ ಹೇಗಿದೆ ಎಂದು ಗೌಪ್ಯವಾಗಿಟ್ಟಿದೆ. ಚಿತ್ರಂಡದವರು ಮತ್ತು ಚಿತ್ರಕ್ಕೆ ಸಂಬಂಧಪಟ್ಟವರನ್ನು ಹೊರತುಪಡಿಸಿದರೆ, ಇಲ್ಲಿ ಹೊರಗಿನವರಿಗೆ ಸುಲಭವಾಗಿ ಪ್ರವೇಶವಿಲ್ಲ. ಮಾಧ್ಯಮದವರಿಗೆ ಇಡೀ ನಗರವನ್ನು ಪರಿಚಯ ಮಾಡಿಕೊಟ್ಟ ನಂತರ ನಿರ್ದೇಶಕ ಧನಂಜಯ್‍ ಚಿತ್ರತಂಡದವರ ಜೊತೆಗೆ ಮಾತಿಗೆ ಕುಳಿತರು.

Chetan Ahimsa Podcast: ಸ್ಟೇಡಿಯಂ ದುರಂತಕ್ಕೆ ಸಿದ್ದರಾಮಯ್ಯ, ಡಿಕೆಶಿ ನೇರ ಹೊಣೆ.? #siddaramaiah #dkshivakumar

‘ಮಳೆ, ಬಿಸಿಲು, ಗಾಳಿಯ ನಡುವೆ ಕಳೆದ ಒಂದು ತಿಂಗಳಿನಿಂದ ಚಿತ್ರೀಕರಣ ಮಾಡುತ್ತಿದ್ದೇವೆ. ಅದಕ್ಕೂ ಮುನ್ನ ಎರಡು ತಿಂಗಳ ಕಾಲ ಸೆಟ್‍ ನಿರ್ಮಾಣದ ಕೆಲಸ ನಡೆದಿದೆ. ಸಂತೋಷ್‍ ಪಾಂಚಲ ಮತ್ತು ತಂಡದವರು ಈ ಸೆಟ್‍ ನಿರ್ಮಿಸಿದ್ದಾರೆ. ಯುದ್ಧ ನಡೆದ ನಂತರದ ದೃಶ್ಯಗಳನ್ನು ಇಂದು ಚಿತ್ರೀಕರಣ ಮಾಡಿದ್ದೇವೆ. ಕಳೆದ ಒಂದು ತಿಂಗಳಿನಿಂದ ಪ್ರತಿ ದಿನ 800 ಜನ ಕೆಲಸ ಮಾಡುತ್ತಿದ್ದಾರೆ. ಇಲ್ಲಿ ಚಿತ್ರೀಕರಣ ಮಾಡಿ, ಹೈದರಾಬಾದ್‍ಗೆ ಫುಟೇಜ್‍ ಕಳಿಸುತ್ತಿದ್ದೇವೆ. ಅಲ್ಲಿ ಗ್ರಾಫಿಕ್ಸ್ ಕೆಲಸ ಸತತವಾಗಿ ನಡೆಯುತ್ತಿದೆ’ ಎಂದು ಮಾಹಿತಿ ಕೊಟ್ಟರು.

‘ಪಿನಾಕ’ ಎಂದರೆ ಒಬ್ಬ ರಕ್ಷಕ ಎನ್ನುವ ಅವರು, ‘ಇದೊಂದು ಕಾವಲುಗಾರ ಪರಂಪರೆಯ ಕುರಿತಾದ ಚಿತ್ರ. ಮುಂದಿನ ವರ್ಷ ಈ ಚಿತ್ರವನ್ನು ತೆರೆಗೆ ಬರಲಿದೆ. ಇದು ಒತ್ತಡದಲ್ಲಿ ಮಾಡುವ ಕೆಲಸವಲ್ಲ. ಒಂದೊಂದು ಸಣ್ಣ ದೃಶ್ಯಕ್ಕೂ ಸಾಕಷ್ಟು ಸಮಯವಾಗುತ್ತಿದೆ. ಗಣೇಶ್‍ ಜೊತೆಗೆ ನೃತ್ಯ ನಿರ್ದೇಶಕನಾಗಿ ಕೆಲಸ ಮಾಡಿದ್ದೆ. ಅವರ ಜೊತೆಗೊಂದು ಒಳ್ಳೆಯ ಸಂಬಂಧ ಇದೆ. ಅವರೊಂದಿಗೆ ಕೆಲಸ ಮಾಡುವುದು ಖುಷಿಯ ವಿಚಾರ. ಈ ಚಿತ್ರಕ್ಕೆ ಅವರ ಸಹಕಾರ ದೊಡ್ಡದು. ಇನ್ನು ನಿರ್ಮಾಪಕರು ಪ್ರತಿ ಹೆಜ್ಜೆಯಲ್ಲೂ ಜೊತೆಯಾಗಿದ್ದಾರೆ, ಇದು ನನ್ನೊಬ್ಬನ ಚಿತ್ರವಲ್ಲ. ಇದೊಂದು ತಂಡದ ಚಿತ್ರ’ ಎಂದರು ನಿರ್ದೇಶಕ ಧನಂಜಯ್.

ನಿರ್ಮಾಣದ ಮೇಲ್ವಿಚಾರಣೆ ಹೊತ್ತಿರುವ ವಿಜಯಾ ಮಾತನಾಡಿ, ‘ಗಣೇಶ್‍ ಜೊತೆಗೆ ಚಿತ್ರ ಮಾಡಬೇಕು ಎಂಬುದು ನನ್ನ ಸಹೋದರನ (ವಿಶ್ವಪ್ರಸಾದ್‍) ಆಸೆಯಾಗಿತ್ತು. ಅವರ ಜೊತೆಗೆ ಚಿತ್ರ ಮಾಡಬೇಕು ಎಂದು ನಿರ್ಧಾರವಾದಾಗ, ಕಥೆ ಸಹ ಇರಲಿಲ್ಲ. ಗಣೇಶ್‍ ಅವರಿಗೆ ಎಂಥಾ ಚಿತ್ರ ಮಾಡಬೇಕು ಎಂದು ಯೋಚಿಸಿ, ಒಂದು ವಿಭಿನ್ನ ಪ್ರಯತ್ನ ಮಾಡುತ್ತಿದ್ದೇವೆ’ ಎಂದರು.ತಮ್ಮ ನಿರ್ಮಾಣ ಸಂಸ್ಥೆಯು ಫ್ಯಾಕ್ಟರಿ ಮಾದರಿಯಲ್ಲಿ ಕೆಲಸ ಮಾಡುತ್ತಿದೆ ಎನ್ನುವ ಅವರು, ‘ಕಳೆದ ಏಳು ವರ್ಷಗಳಲ್ಲಿ ನಮ್ಮ ಸಂಸ್ಥೆಯಿಂದ 50 ಚಿತ್ರಗಳು ತಯಾರಾಗಿವೆ. ಈ ಪೈಕಿ 43 ಬಿಡುಗಡೆಯಾದರೆ, ಏಳು ಚಿತ್ರಗಳು ಬಿಡುಗಡೆ ಆಗುವುದಕ್ಕೆ ತಯಾರಿ ನಡೆಸಿವೆ. 20 ಚಿತ್ರಗಳು ಬೇರೆಬೇರೆ ಹಂತಗಳಲ್ಲಿದೆ.

ಈ ಚಿತ್ರದಲ್ಲಿನ ರಾಜಗುರುವಿನ ಪಾತ್ರಕ್ಕೆ ಶ್ರೀನಿವಾಸಮೂರ್ತಿ ಅವರೇ ಬೇಕು ಎಂದು ಗಣೇಶ್‍ ಪಟ್ಟುಹಿಡಿದರಂತೆ. ಈ ಕುರಿತು ಮಾತನಾಡಿದ ಹಿರಿಯ ನಟ ಶ್ರೀನಿವಾಸಮೂರ್ತಿ ಅವರು, ‘’ಕೃಷ್ಣಂ ಪ್ರಣಯ ಸಖಿ’ ಚಿತ್ರದ ನಂತರ ಗಣೇಶ್‍ ಜೊತೆಗೆ ಬಾಂಧವ್ಯ ಗಟ್ಟಿಯಾಗಿದೆ. ಈ ಚಿತ್ರವನ್ನು ನೀವೇ ಮಾಡಬೇಕು ಎಂದು ಅವರು ಹೇಳಿದರು.ಈ ಚಿತ್ರವು ಬೇರೆಯದೇ ಲೆವೆಲ್‍ನಲ್ಲಿದೆ’ ಎಂದರು.

CT ravi : ವಿರಾಟ್ ಕೊಹ್ಲಿ ನಿಮ್ಗೆ  ಇನ್ವೈಟ್ ಮಾಡಿದ್ನ ಶಿವಕುಮಾರ್ #pratidhvani #dkshivakumar #siddaramaiah

ಬರುವಾಗಲೇ ಏನಾದರೂ ವಿಭಿನ್ನವಾಗಿ ಮಾಡಬೇಕು ಎಂಬ ತೀರ್ಮಾನದೊಂದಿಗೆ ನಿರ್ಮಾಪಕರು ಬಂದರು ಎಂದ ನಾಯಕ ಗಣೇಶ್, ‘ಈ ತರಹದ ಪಾತ್ರವನ್ನು ನನ್ನಿಂದ ಮಾಡಿಸಬಹುದು ಎಂದು ಮಾಡಿಸುತ್ತಿದ್ದಾರೆ. ಪ್ರತಿ ದೃಶ್ಯದಲ್ಲೂ ನಿರ್ಮಾಪಕರು ತೊಡಗಿಸಿಕೊಂಡಿದ್ದಾರೆ. ಚಿತ್ರೀಕರಣ ಪ್ರಾರಂಭವಾಗಿ ಎರಡು ದಿನಗಳಲ್ಲೇ ನಿರ್ಮಾಪಕಿ ವಿಜಯಮ್ಮ ಕಿರುಚಾಡುತ್ತಿದ್ದರು. ಏನು ಎಂದು ಕೇಳಿದಾಗ, ಬರೀ 600 ಜ್ಯೂನಿಯರ್ ಕಲಾವಿದರು ಮಾತ್ರ ಬಂದಿದ್ದಾರೆ, 800 ಜನ ಬರಬೇಕಿತ್ತು ಎಂದರು. ಕಡಿಮೆಯಾದರೆ ಹಣ ಉಳಿಯುತ್ತದೆ ಎಂದು ಖುಷಿಪಡಬೇಕು. ಆದರೆ, ಅವರು ಹಾಗಲ್ಲ. ಈ ಸೆಟ್‍ ಈ ಮಟ್ಟಕ್ಕೆ ಬರಬೇಕೆಂದರೆ ಅವರು ಮತ್ತು ನಿರ್ದೇಶಕ ಧನಂಜಯ್‍ ಕಾರಣ. ನಾಲ್ಕೈದು ತಿಂಗಳು ನಿಂತು ಸೆಟ್‍ ಹಾಕಿಸಿದ್ದಾರೆ. ಧನು ಮೊದಲ ಚಿತ್ರದಲ್ಲೇ ಇಂಥದ್ದೊಂದು ದೊಡ್ಡ ಪ್ರಯತ್ನ ಮಾಡುತ್ತಿದ್ದಾರೆ. ಅವರು ಹೇಗೆ ಮಾಡಬಹುದು ಎಂಬ ಪ್ರಶ್ನೆ ನನಗೂ ಇತ್ತು. ಆದರೆ, ಇಲ್ಲಿ ನೂರಕ್ಕೆ ನೂರು ತೆಗೆದಿದ್ದಾನೆ. ಪ್ರತಿ ದಿನ ಸೆಟ್‍ನಲ್ಲಿ ನಾಲ್ಕು ಕ್ಯಾಮೆರಾಳಿವೆ. 32 ದಿನಗಳಲ್ಲಿ 64 ದಿನಗಳ ಕೆಲಸವಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಅವರು, ‘ಬಹಳ ಖುಷಿಕೊಟ್ಟ ಪಾತ್ರವಿದು. ನನಗೆ ಖುಷಿಕೊಟ್ಟರೆ ಪ್ರೇಕ್ಷಕರಿಗೂ ಖುಷಿಯಾಗುತ್ತದೆ ಎಂದು ನಂಬಿದವನು ನಾನು. ಇದು ಬೇರೆ ತರಹದ ಸಿನಿಮಾ. ನನ್ನ ಚಿತ್ರಜೀವನದಲ್ಲಿ ವಿಭಿನ್ನವಾದ ಸಿನಿಮಾ ಎಂದು ಹೇಳಿದರು. ಅದನ್ನು ನಿಜವಾಗಿಸಲು ಸಂಪೂರ್ಣವಾಗಿ ಪ್ರಯತ್ನ ಮಾಡುತ್ತೇನೆ’. ಇನ್ನೂ, ನನ್ನ ಕನ್ನಡದ ಸಂಭಾಷಣೆ ಬಗ್ಗೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅದರಲ್ಲೂ ವಿಶೇಷವಾಗಿ “ಭೋಜರಾಜ”ರಿಂದ ನನ್ನ ಕನ್ನಡದ ಮಾತಿಗೆ ಮೆಚ್ಚುಗೆ ದೊರಕಿದ್ದು ಖುಷಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಹಿರಿಯ ನಟ
ಹೊನ್ನವಳ್ಳಿ ಕೃಷ್ಣ, ರವೀಂದ್ರನಾಥ್‍, ಛಾಯಾಗ್ರಾಹಕ ಕರಮ್‍ ಚಾವ್ಲಾ ಮುಂತಾದವರು ಹಾಜರಿದ್ದರು.

Tags: ganeshganesh hitsganesh songsganesh wifegolden star ganes new songsgolden star ganeshgolden star ganesh actorgolden star ganesh amulyagolden star ganesh dancegolden star ganesh familygolden star ganesh hitsgolden star ganesh homegolden star ganesh housegolden star ganesh pinakagolden star ganesh songolden star ganesh songsgolden star ganesh videogolden star ganesh wifegoldens tar ganesh songs
Previous Post

ಕಾವೇರಿ ಆರತಿಗೆ ₹100 ಕೋಟಿ ಖರ್ಚು; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

Next Post

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

Related Posts

Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
0

ನಮ್ಮ ಮತ, ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳಲು ಸಿದ್ಧರಾಗಬೇಕು, ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಕರೆ “ನಮ್ಮ ರಾಜ್ಯದ ಚುನಾವಣೆಯಲ್ಲಿ ಆಗಿರುವ ಅಕ್ರಮ, ಚುನಾವಣಾ ಆಯೋಗದಿಂದ ಆಗಿರುವ ಅನ್ಯಾಯವನ್ನು...

Read moreDetails

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

July 30, 2025

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

July 30, 2025
Next Post
ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

Recent News

Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
Top Story

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada