
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯದಿಂದ ಸಂಕಷ್ಟಕ್ಕೆ ಸಿಲುಕಿದಾಗಲೆಲ್ಲಾ, ಮುಜುಗರಕ್ಕೀಡಾದಾಗಲೆಲ್ಲಾ ಜಾತಿ ಜನಗಣತಿ (Caste census) ವರದಿಯನ್ನುಮುನಲ್ಲೆಗೆ ತರುತ್ತದೆ. ಆದ್ರೆ ಸರ್ಕಾರ ಅಥವಾ ಸಿಎಂಗೆ (Cm) ಯಾವುದೇ ಸಾಮಾಜಿಕ ಕಾಳಜಿಯಿಲ್ಲ,ಕೇವಲ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಈ ರೀತಿಯ ಸಂಚು ರೂಪಿಸುತ್ತಿರುತ್ತದೆ ಎಂದು ವಿಜಯೇಂದ್ರ (Vijayendra) ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಬಿ.ವೈ.ವಿಜಯೇಂದ್ರ, ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ (Chinnaswamy stadium) ಕಾಲ್ತುಳಿತದಲ್ಲಿ 11 ಜನ ಅಮಾಯಕರ ಸಾವುಗಳಿಗೆ ರಾಜ್ಯವಷ್ಟೇ ಅಲ್ಲ ಇಡೀ ದೇಶವೇ ಮಮ್ಮಲ ಮರುಗುತ್ತಿದೆ. ಆದರೆ ಪ್ರಚಾರದ ಘೀಳಿಗೆ ಬಿದ್ದು ದೇಶದ ಜನಸಾಮಾನ್ಯರ ಆಕ್ರೋಶ ಎದುರಿಸುತ್ತಿರುವ ಈ ಸರ್ಕಾರ ಜನಗಣತಿಯನ್ನು ಪುನಃ ಪ್ರಸ್ತಾಪಿಸುವ ಮೂಲಕ ತನ್ನ ಹುಳುಕು ಮುಚ್ಚಿಕೊಳ್ಳಲು ಹೊರಟಿರುವುದು ನಿಜಕ್ಕೂ ದುರ್ದೈವದ ಸಂಗತಿ ಎಂದು ಪೋಸ್ಟ್ ಮಾಡಿದ್ದಾರೆ.

ಈಗ ಮತ್ತೆ ಮರು ಗಣತಿ ಮಾಡುವುದಾದರೆ.ಈಗಾಗಲೇ ರಾಜ್ಯ ಸರ್ಕಾರ ಈ ಹಿಂದಿನ ಅವಧಿಯಲ್ಲಿ ಜಾತಿಗಣತಿಗಾಗಿ ಖರ್ಚು ಮಾಡಿರುವ ₹160 ಕೋಟಿಗೂ ಅಧಿಕ ಹಣ ಸಂಪೂರ್ಣ ವ್ಯರ್ಥ ಎಂದು ಒಪ್ಪಿಕೊಳ್ಳುತ್ತಿದ್ದಾರೆಯೇ? ಡಿಸಿಎಂ ಹೇಳಿಕೆಯಿಂದ ಈ ಸಂಗತಿ ಬಹಿರಂಗವಾದಂತಿದೆ ಎಂದು ಬಿ.ವೈ ವಿಜಯೇಂದ್ರ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.