
ನಟಿ ರಮ್ಯಾ, ತಮನ್ನಾ ಕೂಡ ನಮಗೆ ಈ ತರಹ ಟಾರ್ಚರ್ ಕೊಟ್ಟಿಲ್ಲ..!
ಸಂಜುವೆಂಡ್ಸ್ ಗೀತಾ ಸಿನಿಮಾ ಪ್ರಚಾರಕ್ಕೆ ಒಂಚೂರು ಸಪೋರ್ಟ್ ಮಾಡ್ಲಿಲ್ಲ..!
ನಟಿ ರಚಿತಾ ರಾಮ್ ವಿರುದ್ಧ ಸಿಡಿದ ಶ್ರೀನಗರ ಕಿಟ್ಟಿ & ನಾಗಶೇಖರ್..!
ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ಮೈಲಿಗಲ್ಲು ಸೃಷ್ಟಿಸಿದಂತೆ ಚಿತ್ರ ಅಂದ್ರೆ ಅದು ನಟಿ ರಮ್ಯಾ ಶ್ರೀನಗರ ಕಿಟ್ಟಿ ಅಭಿನಯದ, ನಾಗಶೇಖರ್ ನಿರ್ದೇಶನದಲ್ಲಿ ಮೂಡಿಬಂದ ಸಂಜುವೆಡ್ಸ್ ಗೀತಾ ಚಿತ್ರ…. 2011 ..ಏಪ್ರಿಲ್ -1 ರಂದು ಚಿತ್ರ ರಿಲೀಸ್ ಆಗಿತ್ತು…ಅತ್ಯಂತ ಯಶಸ್ವಿ ಆಗಿತ್ತು ಸಿನಿಮಾ… ಆದ್ರೆ ಸಂಚುವೆಡ್ಸ್ ಗೀತಾ-2 ಜನವರಿ 17ರಂದು ರಿಲೀಸ್ ಆಯ್ತು… ಮತ್ತೆ ರೀ ರಿಲೀಸ್ ಮಾಡಿದ್ರು…

ಸಂಜು ವೆಡ್ಸ್ ಗೀರಾ 2 ಸಿನಿಮಾದಲ್ಲಿ ಅಭಿನಯಿಸಿದ್ದ ನಟಿ ರಚಜಿತಾ ರಾಮ್ ವಿರುದ್ಧ ನಿರ್ದೇಶಕ ನಾಗಶೇಖರ್ ನಟ ಶ್ರೀನಗರ ಕಿಟಟಿ ಅವರು ಕಂಪ್ಲೇಂಟ್ ಕೊಟ್ಟಿದ್ದಾರೆ. ಫಿಲ್ಮ್ ಚೇಂಬರ್ಗೆ ದೂರು ಕೊಟ್ಟ ನಿರ್ದೇಶಕ ನಾಗಶೇಖರ್, ರಮ್ಯಾ, ತಮನ್ನಾ ಎಲ್ಲರಿಗೂ ನಾನು ಸಿನಿಮಾ ಮಾಡಿದ್ದೀನಿ. ಆದ್ರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ ಎಂದಿದ್ದಾರೆ.
ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ರಚಿತಾ ರಾಮ್ ಬಂದಿಲ್ಲ. ಹೀಗಾಗಿ ರಚಿತಾ ರಾಮ್ ವಿರುದ್ಧ ನಿರ್ದೇಶಕರು ತಿರುಗಿ ಬಿದ್ದಿದ್ದಾರೆ. ನಮ್ಮ ಸಿನಿಮಾ ಪ್ರಚಾರಕ್ಕೆ ಒಂಚೂರು ಸಪೋರ್ಟ್ ಕೊಟ್ಟಿಲ್ಲ. ರಾಕ್ಲೈನ್ ವೆಂಕಟೇಶ್ ಮನವೊಲಿಸಲು ಪ್ರಯತ್ನಿಸಿದ್ರು. ಆದರೂ ರಚಿತಾ ಒಪ್ಪಿಲ್ಲ. ನಾವು ಇಂತಹ ಕಲಾವಿದರಿಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.

ರಮ್ಯಾ, ತಮನ್ನಾ ಎಲ್ಲರಿಗೂ ಸಿನಿಮಾ ಮಾಡಿದ್ದೀನಿ. ಆದ್ರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ. ಸಂಜು ವೆಡ್ಸ್ ಗೀತಾ ಸಿನಿಮಾ ಇಷ್ಟು ದಿನ ಪ್ರದರ್ಶನ ಕಂಡರು ಒಂದು ದಿನವೂ ರಚಿತಾ ರಾಮ್ ಸಪೋರ್ಟ್ ಕೊಟ್ಟಿಲ್ಲ.
ಶಿವಣ್ಣ, ಉಪೇಂದ್ರ, ಸುದೀಪ್ ಅಂತಹವರೇ ಈ ಸಿನಿಮಾವನ್ನು ಬೆಂಬಲಿಸಿದ್ದಾರೆ. ನಾವು ಪೇಮೆಂಟ್ ಕಮ್ಮಿ ಕೊಟ್ಟಿಲ್ಲ. ಹೀಗಾಗಿ ನಟಿ ರಚಿತಾ ರಾಮ್ ವಿರುದ್ಧ ಹಾಗೂ ಕನ್ನಡ ಸಿನಿಮಾಗೆ ಥಿಯೇಟರ್ ಸಮಸ್ಯೆ ಕುರಿತು ನಿರ್ದೇಶಕ ನಾಗಶೇಖರ್ ಮತ್ತು ನಟ ಶ್ರೀನಗರ ಕಿಟ್ಟಿ ಫಿಲ್ಮ್ ಚೇಂಬರ್ಗೆ ಕಂಪ್ಲೇಂಟ್ ಕೊಟ್ಟಿದ್ದಾರೆ.
