• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಮ್ಮ ನಗರ ; ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

ಪ್ರತಿಧ್ವನಿ by ಪ್ರತಿಧ್ವನಿ
June 29, 2025
in Top Story, ಕರ್ನಾಟಕ, ರಾಜಕೀಯ
0
ನಮ್ಮ ನಗರ ; ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌
Share on WhatsAppShare on FacebookShare on Telegram

ADVERTISEMENT

7 ವಾರ್ಡ್‌ಗಳ 16 ಕ್ಕೂ ಹೆಚ್ಚು ಬೀದಿಗಳಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

ವಿದ್ಯಾಕಾಶಿಯನ್ನು ಸ್ವಚ್ಛ, ಸುಂದರ, ಹಸಿರು ನಗರವಾಗಿ ರೂಪಿಸಲು ಕೈ ಜೋಡಿಸಿ

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಅಪ್ಪ-ಮಗ ಡಬ್ಬಲ್‌ ಗೇಮ್..! #pratidhvani

ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ʼನಮ್ಮ ನಗರ; ಸ್ವಚ್ಛ ನಗರʼ ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ ಮಾಳಮಡ್ಡಿ ಸುತ್ತಮುತ್ತಲಿನ ಪ್ರದೇಶ, ರೈಲು ನಿಲ್ದಾಣ ರಸ್ತೆ ಸಮೀಪ ಹಾಗೂ ಮಹಿಷಿ ರಸ್ತೆ ಹತ್ತಿರ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಚ್ಛತಾ ಅಭಿಯಾನಕ್ಕೆ ಸಾರ್ವಜನಿಕರಾದ ನೀವು ಕೈ ಜೋಡಿಸಿ ನಮ್ಮ ನಗರ, ಸ್ವಚ್ಛ ನಗರ ಎಂಬ ಅಭಿಮಾನ ಪ್ರಜ್ಞೆ ನಗರದ ಪ್ರತಿ ನಾಗರಿಕರಲ್ಲಿ ಇರಬೇಕು. ಅಂದಾಗ ಮಾತ್ರ ನಗರದ ಸೌಂದರ್ಯ ಹೆಚ್ಚಿಸಲು ಮತ್ತು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಮಹಾನಗರ ಪಾಲಿಕೆಯಿಂದ ಆರಂಭಿಸಿರುವ ಸ್ವಚ್ಛತಾ ಅಭಿಯಾನಕ್ಕೆ ಎಲ್ಲರೂ ಕೈ ಜೋಡಿಸಿ ಹಾಗೂ ನಗರ ನಿವಾಸಿಗಳು ಸಕ್ರಿಯವಾಗಿ ಭಾಗವಹಿಸಿದರೆ, ನಗರ ಸ್ವಚ್ಛತೆ ಕಾಪಾಡಬಹುದು ಎಂದು ಸಾರ್ವಜನಿಕರಿಗೆ ತಿಳಿಸಿದರು.

ಮಹಾನಗರ ಪಾಲಿಕೆಯಿಂದ ಈ ಸ್ವಚ್ಛತಾ ಅಭಿಯಾನವನ್ನು ಪ್ರತಿವಾರ ನಡೆಸಬೇಕು. ಅವಳಿನಗರದ ನಾಗರಿಕರಲ್ಲಿ ಹೆಚ್ಚೆಚ್ಚು ಸಿವಿಕ್ ಸೆನ್ಸ್ ಬಳಸಬೇಕು. ಪ್ರತಿಯೊಬ್ಬರು ಪೌರ ಕಾರ್ಮಿಕರಂತೆ ತಮ್ಮ ಮನೆ ಹಾಗೂ ತಮ್ಮ ಮನೆ ಸುತ್ತಮುತ್ತಲಿನ ಪ್ರದೇಶವನ್ನು ತಾವೇ ಪ್ರತಿದಿನ ಸ್ವಚ್ಛವಾಗಿ ಇಡಬೇಕು. ತಮ್ಮ ಮನೆಯ ಹಿಂದೆ ಮುಂದೆ ಸರಕಾರಿ ಜಮೀನು, ರಸ್ತೆ ಇದ್ದರೂ ಅದು ತಮ್ಮದೆಂದು ತಿಳಿದು ಕ್ಲೀನ್ ಮಾಡಿ ಇಟ್ಟಕೊಳ್ಳಬೇಕು. ಇದು ನಮ್ಮ ನಗರ ಎಂಬ ಹೆಮ್ಮೆ ಮತ್ತು ಇದು ನನ್ನ ಕೆಲಸ ಎಂಬ ಭಾವನೆ ಇದ್ದಾಗ ಮಾತ್ರ ನಗರ ಸುಂದರ, ಹಸಿರು ಆಗಲು ಸಾಧ್ಯವೆಂದು ಸಚಿವರು ತಿಳಿಸಿದರು.

ಧಾರವಾಡ ನಗರದಲ್ಲಿ ರೈಲ್ವೆ ಸ್ಟೇಶನ್, ಮಾಳ ಮಡ್ಡಿ , ವನವಾಸಿ ರಾಮಮಂದಿರ, ಕಬ್ಬೂರ ರಸ್ತೆ ಮತ್ತು ರಾಮನಗೌಡ ಆಸ್ಪತ್ರೆ, ಮಾಳಾಪುರ ಲಾಸ್ಟ್ ಬಸ್ ನಿಲ್ದಾಣ, ಮತ್ತು ಶಿವಾಜಿ ಸರ್ಕಲ್, ಹೆಬ್ಬಳ್ಳಿ ಅಗಸಿ, ಚರಂತಿಮಠ ಗಾರ್ಡನ್, ಹೊಸಯಲ್ಲಾಪುರ ರಸ್ತೆ ಮತ್ತು ಪೌಲ್ ಕ್ಯಾಂಟಿನ್, ಸರಸಗಂಗಾ ಶಾಲೆ, ಜನ್ನತನಗರ ಪ್ರದೇಶಗಳಿಗೆ ಭೇಟಿ ನೀಡಿ, ಪೌರಕಾರ್ಮಿಕರೊಂದಿಗೆ ಸ್ವಚ್ಛತಾ ಕಾರ್ಯಕ್ಕೆ ಕೈ ಜೋಡಿಸಿ, ಸಲಿಕೆಯಿಂದ ತ್ಯಾಜ್ಯ ಸಂಗ್ರಹಿಸಿದರು, ಬುಟ್ಟಿ ತುಂಬಿ ಕಸದ ಟ್ರ್ಯಾಕ್ಟರಿಗೆ ಸ್ವತಃ ಕಸ ಹಾಕಿದರು. ಕಸಬರಿಗೆಯಿಂದ ಕಸಗೂಡಿಸಿದರು. ಸಚಿವರು, ಜಿಲ್ಲಾಧಿಕಾರಿಗಳು ಬುಟ್ಟಿ, ಕಸಬರಿಗೆ ಹಿಡಿದು ಸ್ವಚ್ಛತೆಗೆ ಕೈ ಜೋಡಿಸಿದ್ದರಿಂದ, ಪೌರಕಾರ್ಮಿಕರ ಆತ್ಮಸ್ಥೈರ್ಯ ಹೆಚ್ಚಿ, ಅವರ ಅಭಿಮಾನ, ಗೌರವ, ಹೆಮ್ಮೆಯಿಂದ ಇನ್ನಷ್ಟು ಕೆಲಸ ಮಾಡಲು ಸ್ಫೂರ್ತಿ ದೊರೆಯಿತು.

ಅಭಿಯಾನದಲ್ಲಿ ಜಿ.ಪಂ.ಸಿಇಓ ಭುವನೇಶ ಪಾಟೀಲ, ಎಸ್.ಪಿ. ಡಾ.ಗೋಪಾಲ ಬ್ಯಾಕೋಡ, ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ ಆದಿಯಾಗಿ ಜಿಲ್ಲೆಯ ಎಲ್ಲ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ತಮ್ಮ ಇಲಾಖೆ, ಕಚೇರಿ ಸಿಬ್ಬಂದಿಗಳೊಂದಿಗೆ ಭಾಗವಹಿಸಿ, ಸಚಿವರ ಕನಸಿನ ಸ್ವಚ್ಛನಗರ ಅಭಿಯಾನಕ್ಕೆ ಕೈ ಜೋಡಿಸಿ, ಕಸಕಡ್ಡಿ, ಚರಂಡಿ ತ್ಯಾಜ್ಯ ತೆಗೆದರು.

ಕೊಳೆತ ಕಸಕಡ್ಡಿ ಚಲ್ಲಬೇಡಿ: ಚರಂಡಿ ಸ್ವಚ್ಛಗೊಳಿಸುವುದು, ತ್ಯಾಜ್ಯದ ಕಸ ತುಂಬುವುದು, ಪರಿಕರಗಳಿಂದ ತ್ಯಾಜ್ಯ ತುಂಬುವುದರ ಮೂಲಕ ಅವರು ಎಲ್ಲೆಂದರಲ್ಲಿ ಕಸ, ಮುಸುರೆ, ತ್ಯಾಜ್ಯ ಚೆಲ್ಲದಂತೆ ಹಾಗೂ ಅಲ್ಲಿಯೇ ತರಕಾರಿ ಮಾರುವವರಿಗೆ ಬೇಡವಾದ, ಕೊಳೆತ ತಪ್ಪಲು, ತರಕಾರಿಯನ್ನು ಎಲ್ಲಿ ಬೇಕಂದರಲ್ಲಿ ಎಸೆಯದಂತೆ ಸಚಿವರು ವಿನಂತಿಸಿದರು.

ಹೂಳು ತುಂಬಿದ ಚರಂಡಿ ಕ್ಲೀನ್: ಧಾರವಾಡ ರೈಲ್ವೆ ಸ್ಟೇಷನ್ ರಸ್ತೆ ಹತ್ತಿರ ಹುಳು ತುಂಬಿದ ಗಟಾರು ಸ್ವತಃ ಅವರೇ ಸ್ವಚ್ಛಗೊಳಿಸಿದರು, ಕಸಚಲ್ಲಿದ ಬ್ಲ್ಯಾಕ್ ಸ್ಪಾಟ್ ಗಳನ್ನು ಎಲ್ಲಾ ಅಧಿಕಾರಿಗಳು ಸೇರಿಕೊಂಡು ಸ್ವಚ್ಛತೆ ಕಾರ್ಯ ಮಾಡಿದರು. ಮನೆಯ ಕಾಂಪೌಂಡಿಗೆ ಹಚ್ಚಿ ಫುಟಪಾತ್ ಮೇಲೆ ಮಣ್ಣಿನ ರಾಶಿ ಬಿದ್ದಿರುವುದನ್ನು ಕಂಡು ತಕ್ಷಣವೇ ಜೆಸಿಬಿ ಮುಖಾಂತರ ತೆರವುಗೊಳಿಸಿದರು. ರಸ್ತೆಯಿಂದ ಮೇಲಿರುವ ಮತ್ತು ಕೆಳಗಿರುವ ಮ್ಯಾನ್ ಹೋಲ್ ಮುಚ್ಚಳಗಳು, ಕಸ ತುಂಬಿದ ಖಾಲಿ ಸೈಟ್‍ಗಳನ್ನು ಪರಿಶೀಲಿಸಿ, ತಕ್ಷಣ ಸಂಬಂಧಿಸಿದವರ ಮೇಲೆ ಕ್ರಮಕೈಗೊಳ್ಳಲು ಸೂಚಿಸಿದರು.

ಸ್ವಚ್ಛತಾ ಅಭಿಯಾನದಲ್ಲಿ ಐಎಎಸ್ ಪ್ರೊಬೇಷನರಿ ಅಧಿಕಾರಿ ರಿತಿಕಾ ವರ್ಮಾ, ಮಹಾನಗರಪಾಲಿಕೆ ಮಹಾಪೌರ ರಾಮಪ್ಪ ಬಡಿಗೇರ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ ಸಂತೋಷ ಬಿರಾದಾರ, ಶಾಲಾ ಮತ್ತು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್. ಎಸ್. ಕೆಳದಿಮಠ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಮಹಾನಗರಪಾಲಿಕೆಯ ಸದಸ್ಯರು, ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಅಧ್ಯಾಪಕರು, ಶಿಕ್ಷಕರು, ಇತರ ವಿವಿಧ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು, ಸಿಬ್ಬಂದಿಗಳು, ಸಾರ್ವಜನಿಕರು, ಪೌರಕಾರ್ಮಿಕರು ಭಾಗವಹಿಸಿದ್ದರು.

Tags: minister santosh ladSantosh Ladsantosh lad ballarysantosh lad biographysantosh lad congresssantosh lad dharwadsantosh lad interviewsantosh lad life storysantosh lad livesantosh lad ministersantosh lad mlasantosh lad newssantosh lad on bjpsantosh lad on modisantosh lad on pm modisantosh lad slams modisantosh lad speechsantosh lad statussantosh lad teamsantosh lad today newssantosh lad videosantosh lad vs pm modisantosh lad with ajit
Previous Post

ಬೆಂಗಳೂರಿನ ಕೇಂದ್ರೀಯ ಉತ್ಪಾದನಾ ತಂತ್ರಜ್ಞಾನ ಸಂಸ್ಥೆಗೆ (CMTI) ಹೆಚ್.ಡಿ. ಕುಮಾರಸ್ವಾಮಿ ಭೇಟಿ

Next Post

Santhosh Lad: ನಮ್ಮ ನಗರ ; ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post

Santhosh Lad: ನಮ್ಮ ನಗರ ; ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada