ಅಭಿನಯ ನಟಿ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಹಿರಿಯ ನಟಿ ಅಭಿನಯ ಸರಸ್ವತಿ ಬಿ.ಸರೋಜಾದೇವಿ(87) ನಿಧನರಾಗಿವುದು

ಜನವರಿ 7, 1938 ರಲ್ಲಿ ಜನಿಸಿದ್ದ ಸರೋಜಾದೇವಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ನಿಧರಾದರು. ಮೃತದೇಹ ಮಲ್ಲೇಶ್ವರಂ ನಿವಾಸದಲ್ಲಿದ್ದು ಪೊಲೀಸರು ಭದ್ರತೆ ವ್ಯವಸ್ಥೆ ಮಾಡುತ್ತಿದ್ದಾರೆ. ಹಲವು ಗಣ್ಯರು ಈಗ ನಿವಾಸಕ್ಕೆ ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ
ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದ ಸಾಧನೆಗೆ ಇವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ನೀಡಿ ಪುರಸ್ಕರಿಸಿತ್ತು.1969 ಪದ್ಮಶ್ರೀ, 1992ಪದ್ಮಭೂಷಣ ಪ್ರಶಸ್ತಿ, ಹಲವು ಪ್ರಶಸ್ತಿ ಲಭಿಸಿದೆ
ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು

ಸರೋಜಾದೇವಿ ಅವರು ಕನ್ನಡದಲ್ಲಿ ಡಾ. ರಾಜ್ಕುಮಾರ್ ಅವರೊಂದಿಗೆ ಅಮರಶಿಲ್ಪಿ ಜಕಣಾಚಾರಿ, ಕಥಾಸಾಗರ, ಬಬ್ರುವಾಹನ, ಭಾಗ್ಯವಂತರು, ಆಷಾಡಭೂತಿ, ಶ್ರೀರಾಮಪೂಜಾ, ಕಚ ದೇವಯಾನಿ, ರತ್ನಗಿರಿ ರಹಸ್ಯ, ಕೋಕಿಲವಾಣಿ, ಸ್ಕೂಲ್ಮಾಸ್ಟರ್, ಪಂಚರತ್ನ, ಲಕ್ಷ್ಮೀಸರಸ್ವತಿ, ಚಿಂತಾಮಣಿ, ಭೂಕೈಲಾಸ, ಅಣ್ಣತಂಗಿ, ಜಗಜ್ಯೋತಿ ಬಸವೇಶ್ವರ, ದೇವಸುಂದರಿ, ವಿಜಯನಗರದ ವೀರಪುತ್ರ, ಮಲ್ಲಮ್ಮನ ಪವಾಡ, ಶ್ರೀಕೃಷ್ಣರುಕ್ಮಿಣಿ ಸತ್ಯಭಾಮ, ಪೂರ್ಣಿಮಾ, ಗೃಹಿಣಿ, ಪಾಪಪುಣ್ಯ, ಸಹಧರ್ಮಿಣಿ, ಶ್ರೀನಿವಾಸಕಲ್ಯಾಣ, ಚಾಮುಂಡೇಶ್ವರಿ ಮಹಿಮೆ, ಚಿರಂಜೀವಿ, ಶನಿಪ್ರಭಾವ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ.

ಸರೋಜಾದೇವಿ ಅವರು ತಮಿಳಿನಲ್ಲಿ ಜೆಮಿನಿ ಗಣೇಶನ್, ಶಿವಾಜಿ ಗಣೇಶನ್, ಮತ್ತು ಎಂ.ಜಿ. ರಾಮಚಂದ್ರನ್ ಅವರೊಂದಿಗೆ ಅನೇಕ ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದರು. ಅವರು ಹಿಂದಿಯಲ್ಲಿ ದಿಲೀಪ್ ಕುಮಾರ್, ರಾಜೇಂದ್ರ ಕುಮಾರ್, ಶಮ್ಮಿ ಕಪೂರ್, ಮತ್ತು ಸುನೀಲ್ ದತ್ ಅವರೊಂದಿಗೆ ಸಿನಿಮಾದಲ್ಲಿ ನಟನೆ

ಸರೋಜಾ ದೇವಿ ಅವರ ಯಶಸ್ಸಿನ ಗುಟ್ಟು ಅವರ ಸೌಂದರ್ಯ ಮಾತ್ರವಾಗಿರಲಿಲ್ಲ. ಪಾತ್ರಗಳಿಗೆ ಜೀವ ತುಂಬುವ ಅವರ ಸಾಮರ್ಥ್ಯ ಅನನ್ಯವಾಗಿತ್ತು. ದುಃಖದ ದೃಶ್ಯಗಳಲ್ಲಿ ಕಣ್ಣೀರು ಹಾಕದೆ, ಕೇವಲ ಕಣ್ಣಿನ ನೋಟದಲ್ಲೇ ನೋವನ್ನು ವ್ಯಕ್ತಪಡಿಸುತ್ತಿದ್ದ ಅವರ ನಟನೆಗೆ ‘ಅಭಿನಯ ಶಾರದೆ’ ಎಂಬ ಬಿರುದು ತಾನಾಗಿಯೇ ಒಲಿದು ಬಂದಿತ್ತು.

ಸರೋಜಾದೇವಿಯ ನಗು, ನಾಟ್ಯ, ಸಂಭಾಷಣೆ ಹೇಳುವ ರೀತಿ ಎಲ್ಲವೂ ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸುತ್ತಿತ್ತು. ಅವರು ಕೇವಲ ನಟಿಯಾಗಿರಲಿಲ್ಲ, ಅದೆಷ್ಟೋ ಯುವತಿಯರಿಗೆ ಸ್ಫೂರ್ತಿಯಾಗಿದ್ದರು.

ಭಾರತೀಯ ಚಿತ್ರ ರಂಗದಲ್ಲಿ ಬಹಳ ದೊಡ್ಡ ಹೆಸರು ಮಾಡಿದವರು ರಾಜ್ಯದ ಒಬ್ಬ ಹಿರಿಯತಾರೆ ಜೊತೆಗೆ ಅಭಿಮಾನಿಗಳ ಪಾಲಿಗೆ ಕನ್ನಡ ಚಿತ್ರರಂಗ ಕ್ಕೆ ತುಂಬಲಾರದ ನಷ್ಟ ಅವರ ಆತ್ಮಕ್ಕೆ ಶಾಂತಿ ಸಿಗಲಿ












