• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Delhi High Court: ಕೋವಿಡ್-19ರಲ್ಲಿ ಸಮಾವೇಶ: 70 ಜನರ ವಿರುದ್ಧದ ಪ್ರಕರಣ ಕೈಬಿಟ್ಟ ದೆಹಲಿ ಹೈ ಕೋರ್ಟ್..

ಪ್ರತಿಧ್ವನಿ by ಪ್ರತಿಧ್ವನಿ
July 18, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಕೊರೊನಾ ಸೋಂಕು ಭೀಕರವಾಗಿದ್ದ ಸಂದರ್ಭದಲ್ಲಿ ಕಟ್ಟುನಿಟ್ಟಿನ ಕಾನೂನು ಧಿಕ್ಕರಿಸಿ ದೆಹಲಿಯಲ್ಲಿ ತಬ್ಲಿಗ್ ಧಾರ್ಮಿಕ ಸಭೆ ಆಯೋಜಿಸಿ, ಮುಸ್ಲಿಂ ಧಾರ್ಮಿಕ ನಾಯಕರಿಗೆ ಆಶ್ರಯ ನೀಡಲಾಗಿದೆ ಎಂದು ಆರೋಪಿಸಿ 70 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ದೆಹಲಿ ಹೈಕೋರ್ಟ್ ಕೈಬಿಟ್ಟಿದೆ.

ADVERTISEMENT

2020ರ ಮಾರ್ಚ್‌ನಲ್ಲಿ ದೆಹಲಿಯಲ್ಲಿ ತಬ್ಲಿಗ್ ಸಮಾವೇಶ ಆಯೋಜನೆಗೊಂಡಿತ್ತು. ಇದರಲ್ಲಿ ದೇಶವಿದೇಶಗಳ ಮುಸ್ಲಿಂ ಧಾರ್ಮಿಕ ಮುಖಂಡರು ಪಾಲ್ಗೊಂಡಿದ್ದರು. ಧರ್ಮಪ್ರಚಾರಕರು ಒಂದೆಡೆ ಕೂಡಿದ ಕಾರಣದಿಂದ ಮತ್ತು ಆನಂತರ ದೇಶದ ವಿವಿಧ ಪ್ರಾಂತಗಳಲ್ಲಿ ಅವರು ಜನ ಸಂಪರ್ಕ ಹೊಂದಿದ ಕಾರಣದಿಂದ ಕೊರಾನಾ ವೈರಾಣು ಸೋಂಕು ದ್ವಿಗುಣಗೊಂಡಿದೆ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ಪ್ರಕರಣವೂ ದಾಖಲಾಗಿತ್ತು. ಎಫ್‌ಐಆ‌ರ್ ರದ್ದು ಕೋರಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಡೆಸಿತು.

ವಿಚಾರಣೆ ನಡೆಸಿದ ನ್ಯಾ. ನೀನಾ ಬನ್ಸಲ್ ಕೃಷ್ಣ ಅವರು, ‘ಆಯೋಜಕರಿಗೆ ಅಥವಾ ಪಾಲ್ಗೊಂಡವರಿಗೆ ಕೋವಿಡ್-19 ದೃಢಪಟ್ಟ ಬಗ್ಗೆಯಾಗಲೀ ಅಥವಾ ಅಜಾಗರೂಕತೆಯಿಂದ ಸಮಾವೇಶ ಆಯೋಜಿಸಿದ್ದರ ಕುರಿತಾಗಲೀ ಅಥವಾ ಕಾನೂನು ಉಲ್ಲಂಘಿಸಿದ್ದರ ಬಗ್ಗೆಯಾಗಲೀ ಅಥವಾ ಕೋವಿಡ್-19 ಹರಡುವ ಉದ್ದೇಶದಿಂದಲೇ ಸಮಾವೇಶ ಆಯೋಜಿಸಿದ್ದರ ಕುರಿತು ಸಣ್ಣ ಅಂಶವೂ ಎಫ್‌ಐಆರ್ ಅಥವಾ ಆರೋಪಪಟ್ಟಿಯಲ್ಲಿ ಇಲ್ಲ’ ಎಂದಿದ್ದಾರೆ. ಈ ಕುರಿತು ಪೊಲೀಸರನ್ನು ತೀವ್ರ ತರಾಟೆಗೆ ತೆಗೆದುಕೊಂಡ ನ್ಯಾ. ನೀನಾ, ‘ಇಲ್ಲಿ ನ್ಯಾಯದ ಹಿತಾಸಕ್ತಿಗಿಂತ, ಇಡೀ ಪ್ರಕ್ರಿಯೆಯನ್ನು ದೂಷಿಸುವ ಉದ್ದೇಶವಿರುವುದು ಕಂಡುಬರುತ್ತದೆ. ಹೀಗಾಗಿ ಈ ಪ್ರಕರಣವನ್ನು ಕೈಬಿಡಲಾಗಿದೆ’ ಎಂದಿದ್ದಾರೆ.

ಸುನ್ನಿ ಧಾರ್ಮಿಕ ಕಾರ್ಯಕ್ರಮವಾದ ತಬ್ಲಿಗ್ ಜಮಾತ್‌ನ ವಿದೇಶಿ ಅತಿಥಿಗಳಿಗೆ ಆಶ್ರಯ ನೀಡಿದ ಆರೋಪದಡಿ 70 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಕಾರ್ಯಕ್ರಮ ಆಯೋಜನೆಗೊಂಡಿದ್ದ ಸಂದರ್ಭದಲ್ಲಿ ಕೋವಿಡ್-19ಕ್ಕೆ ಸಂಬಂಧಿಸಿದಂತೆ ದೇಶದಲ್ಲಿ ಕಟ್ಟುನಿಟ್ಟಿನ ನಿಷೇಧಾಜ್ಞೆ ಜಾರಿಯಲ್ಲಿತ್ತು. ಸಭೆಯಲ್ಲಿ ಪಾಲ್ಗೊಂಡಿದ್ದವರ ಕೋವಿಡ್ ಪರೀಕ್ಷೆಯನ್ನು 2020ರ ಏ. 3ರಂದು ನಡೆಸಲಾಗಿತ್ತು. ಅವರಲ್ಲಿ ಸೋಂಕು ಪತ್ತೆಯಾಗಿರಲಿಲ್ಲ. ವೈದ್ಯಕೀಯ ನಿಗಾದಲ್ಲಿ ಇವರನ್ನು ಐಸೊಲೇಷನ್‌ನಲ್ಲಿ ಇಡಲಾಗಿತ್ತು ಎಂಬುದನ್ನು ನ್ಯಾಯಾಲಯ ಗಮನಿಸಿತು. ಎಫ್‌ಐಆ‌ರ್ ರದ್ದತಿಗೆ ದೆಹಲಿ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದರು. ಸೆಕ್ಷನ್ 144ರ ಅಡಿಯಲ್ಲಿ ಆರೋಪಿಗಳು ಕಾನೂನು ಬಾಹಿರವಾಗಿ ಜಮಾವಣೆಗೊಂಡಿದ್ದರು ಎಂದು ತೋರಿಸುವ ಯಾವುದೇ ಸಾಕ್ಷಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿಲ್ಲ ಎಂದು ನ್ಯಾಯಾಲಯ ಹೇಳಿ ಪ್ರಕರಣವನ್ನು ಕೈಬಿಟ್ಟಿತು.

Tags: CoronaCOVID-19Delhi High Courtdelhi high court appointmentdelhi high court casesdelhi high court expansiondelhi high court film orderdelhi high court judgedelhi high court judgesdelhi high court judges listdelhi high court livedelhi high court new judgesdelhi high court new verdictdelhi high court newsdelhi high court pocsodelhi high court pocso rulingdelhi high court strength 37delji high courthigh courtlatest delhi high court newsmuslimNeena Bansal KrishnaPoliceTablictwo new judges delhi high court
Previous Post

Dharmastala: ಸಾಕ್ಷಿಗೆ ಅಪಾಯವಾದರೆ ಸರ್ಕಾರವೇ ಹೊಣೆ: ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ

Next Post

PM Modi: ನರೇಂದ್ರ ಮೋದಿ ಮಾರ್ಗದರ್ಶನದಲ್ಲೇ ಉಚಿತ ವಿದ್ಯುತ್‌ ಘೋಷಣೆ: ನಿತೀಶ್ ಕುಮಾ‌ರ್

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post

PM Modi: ನರೇಂದ್ರ ಮೋದಿ ಮಾರ್ಗದರ್ಶನದಲ್ಲೇ ಉಚಿತ ವಿದ್ಯುತ್‌ ಘೋಷಣೆ: ನಿತೀಶ್ ಕುಮಾ‌ರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada