• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

CM Siddaramaiah: ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
July 18, 2025
in Top Story, ಅಂಕಣ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಜನರ ನೋವುಗಳನ್ನು ಅರ್ಥಮಾಡಿಕೊಳ್ಳುವ ಮನುಷ್ಯತ್ವ ಮತ್ತು ತಾಳ್ಮೆ ನಿಮಗೆ ಇರಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ. ನಿಮ್ಮಲ್ಲಿ ಎಷ್ಟು ಮಂದಿಗೆ ವೈಜ್ಞಾನಿಕ ಮನೋಭಾವ ಇದೆ, ಆತ್ಮವಂಚನೆ ಇಲ್ಲದೆ ಆತ್ಮವಿಮರ್ಷೆ ಮಾಡಿಕೊಳ್ಳಿ: ಸಿ.ಎಂ ಕರೆ

ADVERTISEMENT


ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಭಾರತೀಯ ಸಾರ್ವಜನಿಕ‌ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಸ್ವಾತಂತ್ರ್ಯ ಬಂದು 78 ವರ್ಷ ಆಗುತ್ತಿದೆ. ಆದರೂ ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ. ಸಮಾನ ಅವಕಾಶಗಳು ಇನ್ನೂ ಸಿಕ್ಕಿಲ್ಲ. ಸಮಾನತೆ, ಬ್ರಾತೃತ್ವ ನೆಲೆಸಿಲ್ಲ. ಏಕೆ ಎನಗನುವುದನ್ನು ನಾವು ಪ್ರಶ್ನಿಸಿಕೊಂಡು ಪರಿಹಾರ ಕಂಡುಕೊಳ್ಳಬೇಕು ಎಂದರು.

1949 ನವೆಂಬರ್ 25 ರಂದು ಸಂವಿಧಾನ ಜಾರಿಯ ಮೊದಲ ದಿನ‌ ಅಂಬೇಡ್ಕರ್ ಅವರು ಐತಿಹಾಸಿಕ ಭಾಷಣ ಮಾಡಿದ್ದರು. ಅದರಲ್ಲಿ ಅವರು, ಅಸಮಾನತೆ, ವೈರುದ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಅಸಮಾನತೆ ಅಳಿಸದಿದ್ದರೆ , ಅಸಮಾನತೆಗೆ ಒಳಗಾದ ಜನ ಪ್ರಜಾಪ್ರಭುತ್ವದ ಸೌಧವನ್ನು ದ್ವಂಸ ಮಾಡುತ್ತಾರೆ” ಎಂದು ಅಂಬೇಡ್ಕರ್ ಎಚ್ಚರಿಸಿದ್ದರು.

ಇದು ಪ್ರತಿಯೊಬ್ಬ ಅಧಿಕಾರಿಗೆ ನೀಡಿರುವ ಎಚ್ಚರಿಕೆ. ಪ್ರಜಾಪ್ರಭುತ್ವದ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಈ ಜವಾಬ್ದಾರಿ ನಿರ್ವಹಿಸದಿದ್ದರೆ ಏನಾಗುತ್ತದೆ ಎನ್ನುವುದನ್ನು ಅಂಬೇಡ್ಕರ್ ಎಚ್ಚರಿಸಿದ್ದಾರೆ ಎಂದರು.

ನಮ್ಮ ದೇಶದಲ್ಲಿ ಅನೇಕ ಜಾತಿ, ಧರ್ಮಗಳಿವೆ. ಬುದ್ದನಿಂದ, ಬಸವಣ್ಣ, ಅಂಬೇಡ್ಕರ್ ಎಲ್ಲರೂ ಜಾತಿ ರಹಿತ ಸಮಾಜಕ್ಕಾಗಿ ಶ್ರಮಿಸಿದ್ದಾರೆ. ಆದರೂ ಜಾತಿ ಹೋಗಿಲ್ಲ . ಅದಕ್ಕೇ ಲೋಹಿಯಾ ಅವರು, ನಮ್ಮ ಸಮಾಜ ಚಲನೆ ರಹಿತವಾದ ವ್ಯವಸ್ಥೆ ಎಂದರು. ಎಲ್ಲರಿಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬಂದಾಗ ಸಮಾಜದಲ್ಲಿ ಚಲನಶೀಲತೆ ಬರುತ್ತದೆ ಎಂದರು.

KAS ಅಧಿಕಾರಿಗಳು ಎಂದರೆ ಬುದ್ದಿವಂತರು ಎನ್ನುವ ನಂಬಿಕೆ ಇದೆ. ನಿಮ್ಮಲ್ಲಿ ಎಷ್ಟು ಮಂದಿಗೆ ವೈಚಾರಿಕತೆ ಇದೆ. ನಿಮ್ಮಲ್ಲಿ ಎಷ್ಟು ಮಂದಿ ವೈಜ್ಞಾನಿಕ‌ ಮನೋಭಾವ ಬೆಳೆಸಿಕೊಂಡಿದ್ದೀರಿ ಎನ್ನುವುದನ್ನು ಆತ್ಮವಂಚನೆ ಮಾಡಿಕೊಳ್ಳದೆ, ಆತ್ಮವಿಮರ್ಷೆ ಮಾಡಿಕೊಳ್ಳಿ ಎಂದು ಕರೆ ನೀಡಿದರು.

ವಿದ್ಯಾವಂತರೂ ಕೂಡ ಹಣೆಬರಹ, ಕರ್ಮಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡವರಿದ್ದಾರೆ. ದೇವರು ಹಾಗೆಲ್ಲಾ ತಾರತಮ್ಯ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು.

ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನರ ಬಳಿ ಹೋಗಿ ರಿನೀವಲ್ ಮಾಡಿಕೊಳ್ಳಬೇಕು. ಆದರೆ ನಿಮಗೆ ಅಧಿಕಾರಿಗಳಿಗೆ ಈ ಪರಿಸ್ಥಿತಿ ಇಲ್ಲ. ಹೀಗಾಗಿ ನಿಮ್ಮಗಳ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಸರ್ಕಾರ ರೂಪಿಸುವ ಜನಪರವಾದ ಕಾರ್ಯಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.

ಕೊಳ್ಳುವ ಶಕ್ತಿ ಹೆಚ್ಚಿರುವ ಸಮಾಜ ಆರ್ಥಿಕವಾಗಿ ಪ್ರಗತಿ ಕಾಣುತ್ತದೆ. ನಮ್ಮ ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಆರ್ಥಿಕ ಶಕ್ತಿ ಮತ್ತು ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿರುವುದು ಹೇಗೆ ಎನ್ನುವುದನ್ನು ಮುಖ್ಯಮಂತ್ರಿಗಳು ವಿವರಿಸಿದರು.

ನಮಗಿಂತ ಬುದ್ದಿವಂತರು ಸಮಾಜದಲ್ಲಿ ಇರ್ತಾರೆ. ರೈತರು ಅವರ ಕ್ಷೇತ್ರದಲ್ಲಿ ನಮಗಿಂತ ಬುದ್ದಿವಂತರು. ಅವಕಾಶ ಇಲ್ಲದ ಬಹಳ ಮಂದಿ ಬುದ್ದಿವಂತರು ಸಮಾಜದಲ್ಲಿ ತುಂಬಿದ್ದಾರೆ. ಅವರಿಗೆ ಅವಕಾಶ ಸಿಕ್ಕಾಗ ಶೋಷಣೆಗೆ ಅವಕಾಶ ಇರುವುದಿಲ್ಲ ಎಂದರು.

ಕೋಮುಗಲಭೆ, ಸುಳ್ಳು ಸುದ್ದಿ, ಜಾತಿ ಶೋಷಣೆ, ಧಾರ್ಮಿಕ ಶೋಷಣೆಗಳು ಇರುವವರೆಗೆ ಅಸಮಾನತೆ ಇರುತ್ತದೆ ಎಂದರು.

ಸಂವಿಧಾನದ ಆಶಯಗಳು ಈಡೇರಿಸುವ ಜವಾಬ್ದಾರಿ ನಿಮ್ಮ ಮತ್ತು ನಮ್ಮ ಮೇಲಿದೆ. ಇದನ್ನು ಸರಿಯಾಗಿ ನಿರ್ವಹಿಸೋಣ, ಕರ್ತವ್ಯಲೋಪ ಆಗುವುದು ಬೇಡ. ನಾವು ಈ ಸಮಾಜದ ಖುಣಿಗಳಾಗೋಣ. ಕೇವಲ ಅಪ್ಪ ಅಮ್ಮ ಖರ್ಚು ಮಾಡುವ ಹಣದಲ್ಲಿ ನೀವು ಅಧಿಕಾರಿಗಳಾಗಲು, ನಾವು ಶಾಸಕರು, ಸಚಿವರು ಆಗಲು ಸಾಧ್ಯವಿಲ್ಲ. ಆದ್ದರಿಂದ ಸಮಾಜದ ಋಣ ನಮ್ಮ ಮೇಲಿದೆ. ಇದನ್ನು ಮರೆಯಬಾರದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಉಸ್ತುವಾರಿ ಕಾರ್ಯದರ್ಶಿ ರಣದೀಪ್, ಕೆ.ಎ.ಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಶಿವಸ್ವಾಮಿ ಸೇರಿ ಹಲವರು ಉಪಸ್ಥಿತರಿದ್ದರು.

Tags: 5 years cm siddaramaiahBJPCM Siddaramaiahcm siddaramaiah newscm siddaramaiah press meetcm siddaramaiah speechcm siddaramaiah today newscm siddaramaiah'sCongress Partykarnataka cm siddaramaiahNew CM Siddaramaiahsiddaramaiahsiddaramaiah aboutsiddaramaiah castSiddaramaiah CMsiddaramaiah cm statementsiddaramaiah congresssiddaramaiah interviewsiddaramaiah karnataka cmsiddaramaiah newssiddaramaiah on cm chairsiddaramaiah press meetsiddaramaiah slap rowYathindra Siddaramaiah
Previous Post

Santhosh Lad: ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್‌ ಕುರಿತು ಅರಿವು ಮೂಡಿಸಿದ ಸಚಿವ ಸಂತೋಷ್‌ ಲಾಡ್..‌

Next Post

DK Shivakumar: ರಾಜ್ಯದ ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕಡ್ಡಾಯ ಆದೇಶ: ಶಿಕ್ಷಣ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

Related Posts

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
0

ಮಾನವ ಸಮಾಜದ ಅಭ್ಯುದಯಕ್ಕೆ ಬುನಾದಿಯೇ ಭೂಮಿ ಭೂಮಿಯನ್ನಾಧರಿಸಿದ ಕೃಷಿ, ಬೇಸಾಯ ಮತ್ತು ಹೈನುಗಾರಿಕೆಯ ವೃತ್ತಿಗಳು. ಬೇಸಾಯದ ತಂತ್ರಗಳು ಮತ್ತು ವಿಧಾನಗಳು ಎಷ್ಟೇ ಬದಲಾದರೂ, ಆಧುನಿಕ ವಿಜ್ಞಾನವು ಎಷ್ಟೇ...

Read moreDetails
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
Next Post

DK Shivakumar: ರಾಜ್ಯದ ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕಡ್ಡಾಯ ಆದೇಶ: ಶಿಕ್ಷಣ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada