• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

MB Patil: ಕೈಗಾರಿಕಾ ಉದ್ದೇಶಕ್ಕೆ ಸ್ವಾಧೀನವಾದ ಭೂಮಿಗೆ ಎರಡೆರಡು ಸಲ ಪರಿಹಾರ..!!

ಪ್ರತಿಧ್ವನಿ by ಪ್ರತಿಧ್ವನಿ
August 12, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ತಪ್ಪಿತಸ್ಥ ಅಧಿಕಾರಿಗಳಿಗೆ ರಕ್ಷಣೆ ಇಲ್ಲ, ಹೆಚ್ಚುವರಿ ಹಣ ವಸೂಲು: ಎಂ ಬಿ ಪಾಟೀಲ

ADVERTISEMENT

ಬೆಂಗಳೂರು: ಕೈಗಾರಿಕಾ ಉದ್ದೇಶಗಳಿಗೆಂದು ಕೆಐಡಿಬಿಡಿ ಮೂಲಕ ಭೂಸ್ವಾಧೀನ ಪಡಿಸಿಕೊಂಡಿರುವ ಕೆಲವೆಡೆಗಳಲ್ಲಿ ಸಂತ್ರಸ್ತ ರೈತರಿಗೆ ಅಧಿಕಾರಿಗಳ ತಪ್ಪಿನಿಂದ ಹಿಂದಿನ ಸರಕಾರದ ಅವಧಿಯಲ್ಲಿ ಎರಡೆರಡು ಬಾರಿ ಪರಿಹಾರ ಕೊಡಲಾಗಿದೆ. ಇಂತಹ ಪ್ರಕರಣಗಳ ಸಂಬಂಧ ಈಗಾಗಲೇ ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಯುತ್ತಿದ್ದು, ಒಬ್ಬರು ಜೈಲಿನಲ್ಲೂ ಇದ್ದಾರೆ. ಇಲ್ಲಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಜೊತೆಗೆ, ಹೆಚ್ಚುವರಿಯಾಗಿ ಪಾವತಿಯಾಗಿರುವ ಹಣವನ್ನು ಕಾನೂನು ರೀತ್ಯಾ ವಸೂಲು ಮಾಡಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಎಸ್‌ ಎಸ್‌ ಭೋಜೇಗೌಡ ಅವರು ಮಂಗಳವಾರ ಕೇಳಿದ ಗಮನ ಸೆಳೆಯುವ ಸೂಚನೆಗೆ ಅವರು ಉತ್ತರಿಸಿದ್ದಾರೆ.

ಧಾರವಾಡ ಜಿಲ್ಲೆಯ ಕೆಳಗೇರಿ, ಮುಮ್ಮಿಗಟ್ಟಿ, ಕೋಟೂರು ಮತ್ತು ಬೇಲೂರು ಕೈಗಾರಿಕಾ ಪ್ರದೇಶಗಳಲ್ಲಿ ಹಿಂದಿನ ಸರಕಾರವಿದ್ದಾಗ ಕೆಲವು ಜಮೀನುಗಳಿಗೆ ಎರಡೆರಡು ಬಾರಿ ಪರಿಹಾರ ವಿತರಣೆಯಾಗಿದೆ. ಇದರಲ್ಲಿ ಭೂಮಿಯ ಮೂಲ ಮಾಲೀಕರು ಮತ್ತು ಅಧಿಕಾರಿಗಳು ಷಾಮೀಲಾಗಿದ್ದು, 19.99 ಕೋಟಿ ರೂ.ಗಳಿಗೂ ಹೆಚ್ಚಿನ ಹಣ ಎರಡನೇ ಬಾರಿ ಹೆಚ್ಚುವರಿಯಾಗಿ ಪರಿಹಾರ ರೂಪದಲ್ಲಿ ಹೋಗಿದೆ. ಇದು ತನಿಖೆಯಿಂದ ದೃಢಪಟ್ಟಿದೆ. ಆಗ ಇದ್ದ ವಿಶೇಷ ಭೂಸ್ವಾಧೀನಾಧಿಕಾರಿ ಮತ್ತು ಇತರ ಸಿಬ್ಬಂದಿ ಮೇಲೆ ಪ್ರಕರಣ ದಾಖಲಾಗಿದೆ. ಇದರ ವಿಚಾರಣೆ ಕೂಡ ಪ್ರಗತಿಯಲ್ಲಿದ್ದು, ಹೆಚ್ಚುವರಿಯಾಗಿ ನೀಡಿರುವ ಹಣವನ್ನು ಹಿಂಪಡೆಯುವ ಪ್ರಕ್ರಿಯೆ ಕೂಡ ನಡೆಯುತ್ತಿದೆ. ಈ ಪ್ರಕರಣದಲ್ಲಿ ಕೇಂದ್ರ ಸರಕಾರದ ಜಾರಿ ನಿರ್ದೇಶನಾಲಯ ಕೂಡ ತನಿಖೆ ನಡೆಸಿದೆ ಎಂದು ಅವರು ವಿವರಿಸಿದ್ದಾರೆ.

ರಾಮನಗರ ಜಿಲ್ಲೆಯ ಬನ್ನಿಕುಪ್ಪೆ ಗ್ರಾಮದಲ್ಲೂ ಒಂದು ಜಮೀನಿಗೆ ಹೀಗೆಯೇ ಎರಡನೇ ಬಾರಿ 1.58 ಕೋಟಿ ರೂ. ಹಣವನ್ನು ಪರಿಹಾರವೆಂದು ಕೊಡಲಾಗಿದೆ. ಈ ಪ್ರಕರಣದಲ್ಲಿ ಹಿಂದೆ ಸಣ್ಣ ನೀರಾವರಿ ಇಲಾಖೆ ಸ್ವಾಧೀನ ಪಡಿಸಿಕೊಂಡಿದ್ದ ಜಮೀನನ್ನು ನಂತರದ ದಿನಗಳಲ್ಲಿ ಕೆಐಎಡಿಬಿ ತನ್ನ ವಶಕ್ಕೆ ತೆಗೆದುಕೊಂಡಿದೆ. ಈ ಸಂಬಂಧ ಹೈಕೋರ್ಟಿನಲ್ಲಿ ಪ್ರಕರಣ ದಾಖಲಾಗಿದ್ದು, ಭೂಮಿಯ ಮಾಲೀಕರು 75 ಲಕ್ಷ ರೂ.ಗಳನ್ನು ನ್ಯಾಯಾಲಯದಲ್ಲಿ ಠೇವಣಿ ಇಟ್ಟಿರುತ್ತಾರೆ. ಸದರಿ ಪ್ರಕರಣದಲ್ಲಿ ಅಂತಿಮ ಆದೇಶ ಬಾಕಿ ಇದ್ದು, ಸಂಬಂಧಿಸಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗಿದೆ ಎಂದು ಪಾಟೀಲ ತಿಳಿಸಿದ್ದಾರೆ.

ಈ ಪ್ರಕರಣಗಳಲ್ಲಿ ಸ್ಥಳೀಯ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದು ಈ ಬಗ್ಗೆ ತನಿಖೆ‌‌ ನಡೆದಿದೆ ಎಂದು ಹೇಳಿದರು.

Tags: 60 seconds mb patilM B PatilMB Patilmb patil​mb patil 60 secondsmb patil bijapurmb patil chit chatmb patil congressmb patil fansmb patil housemb patil interviewmb patil karnatakamb patil latestmb patil latest newsmb patil meetingmb patil ministermb patil mlamb patil newsmb patil news todaymb patil oathmb patil press meetmb patil sonmb patil speechmb patil supportersmb patil today newsmb patil todays newsmb patil videomb patil videosmbpatilMinister MB Patil
Previous Post

ಪ್ರಧಾನಿಗೆ ಪ್ರತಿಮೆ: ಡಿಸಿಎಂ ಸ್ಪಷ್ಟನೆ

Next Post

ಆಗಸ್ಟ್ 31ರಂದು ಮೈಸೂರಿನಲ್ಲಿ ಅದ್ದೂರಿಯಾಗಿ ನಡೆಯಲಿದೆ ಖ್ಯಾತ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ಹುಟ್ಟುಹಬ್ಬ..!!

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post

ಆಗಸ್ಟ್ 31ರಂದು ಮೈಸೂರಿನಲ್ಲಿ ಅದ್ದೂರಿಯಾಗಿ ನಡೆಯಲಿದೆ ಖ್ಯಾತ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ಹುಟ್ಟುಹಬ್ಬ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada