• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಧರ್ಮಸ್ಥಳ ‌ಅಶುದ್ಧ ಮಾಡಲು ಬಿಜೆಪಿ ಯತ್ನ..!! ಡಿಸಿಎಂ ಡಿ.ಕೆ‌.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 27, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಬಿಜೆಪಿ – ಜೆಡಿಎಸ್ ನಿಂದ ಪ್ರೀತಿ ನಿರೀಕ್ಷೆ ಅಸಾಧ್ಯ

ADVERTISEMENT

“ಧರ್ಮಸ್ಥಳ ಪ್ರಕರಣದ ಬಗ್ಗೆ ಬಾಯಿ ಮುಚ್ಚಿಕೊಂಡಿದ್ದ ಬಿಜೆಪಿಯವರು ಈಗ ರಾಜಕೀಯ ಮಾಡುತ್ತಾ ಧರ್ಮಸ್ಥಳವನ್ನು ಅಶುದ್ಧ ಮಾಡಲು ಹೊರಟಿದ್ದಾರೆ. ಭಕ್ತಾದಿಗಳನ್ನು ಇಟ್ಟುಕೊಂಡು ರಾಜಕೀಯ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ವಿಧಾ‌ನಸೌಧದಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಅವರು ಈ ವಿಚಾರ ಮಾತನಾಡಿದರು.

“ಬಿಜೆಪಿಯ ಎರಡು ಗುಂಪುಗಳ ಆಂತರಿಕ ರಾಜಕಾರಣದಿಂದ ಈ ‘ಷಡ್ಯಂತ್ರ’, ‘ಕುತಂತ್ರ’ ನಡೆಯುತ್ತಿದೆ. ಯಾರ್ಯಾರ ಬಂಧವಾಗಿದೆ, ಯಾರ್ಯಾರ ಹೇಳಿಕೆ ಯಾರ್ಯಾರ ಮೇಲೆ ಇದೆ ಎನ್ನುವುದನ್ನು ನೋಡಿದರೆ ತಿಳಿಯುತ್ತದೆ. ಬಂಧನವಾಗಿರುವವನು ಯಾವ ಪಕ್ಷದವನು. ಆತ ‘ನಮ್ಮ ಶಾಸಕ’ ಎಂದು ಹೇಳುತ್ತಾನೆ. ಅವರ ಶಾಸಕ ಏನು ಹೇಳಿದ್ದಾನೆ” ಎಂದರು.

ಷಡ್ಯಂತ್ರ ಮಾಡಿರುವುದೇ ಬಿಜೆಪಿ

“ಬಿಜೆಪಿಯವರೇ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ತೊಡಗಿದ್ದಾರೆ. ‘ಷಡ್ಯಂತ್ರ’ ಮಾಡಿರುವುದೇ ಬಿಜೆಪಿ ಮತ್ತು ಅಂಗ ಸಂಸ್ಥೆಗಳು. ಈಗ ಎಲ್ಲಿ ಹೆಸರುಗಳು ಬಯಲಾಗುತ್ತದೆಯೋ ಎಂದು ಮುಚ್ಚಲು ಪ್ರಯತ್ನ ಪಡುತ್ತಿದ್ದಾರೆ. ಸೆಪ್ಟೆಂಬರ್ 1 ರಂದು ಅಲ್ಲಿ ಸಭೆ ಮಾಡುವ ಬದಲು ಇಲ್ಲೇ ಬೆಂಗಳೂರಿನಲ್ಲಿ ಮಾಡಲಿ. ದಕ್ಷಿಣ ಕನ್ನಡ ಜಿಲ್ಲೆಗೆ ಎಷ್ಟು ಅವಮಾನ ಆಗಬೇಕೋ ಅಷ್ಟು ಆಗಿದೆ. ಭಕ್ತಾಧಿಗಳು ನಿಮ್ಮನ್ನು ಕೇಳಿ ಬಸ್ ನಲ್ಲಿ ಹೋಗುತ್ತಾರೆಯೇ? ನಾವು ಮಹಿಳೆಯರಿಗೆ ಉಚಿತ ಬಸ್ ನೀಡಿದ್ದೇವೆ” ಎಂದರು.

“ಯಾರೋ ಒಬ್ಬ ಬೈದನಲ್ಲ (ಮಹೇಶ್ ಶೆಟ್ಟಿ ತಿಮರೋಡಿ) ಆತ ಬೈದಿದ್ದು ಕಾಂಗ್ರೆಸ್ ನಾಯಕರನ್ನಲ್ಲ. ಆತ ಬೈದಿದ್ದು ಬಿಜೆಪಿ ಹಿರಿಯ ನಾಯಕನನ್ನು. ಇದು ಆಂತರಿಕ ರಾಜಕೀಯವಲ್ಲವೇ? ಆತ ಸಂಘದಲ್ಲಿ ಇದ್ದವನು, ಹಿಂದೂ ಸಂಘಟನೆಯವನು ತಾನೇ? ಕಾಂಗ್ರೆಸ್ ನವರು ಬಿ.ಎಲ್.ಸಂತೋಷ್ ಅವರನ್ನು ಬೈದಿದ್ದೇವಾ? ನಮ್ಮದು ಸಂವಿಧಾನ, ಜಾತ್ಯಾತೀತ ತತ್ವವೇ ಹೊರತು ಧರ್ಮದಲ್ಲಿ ರಾಜಕೀಯ ಮಾಡುವವರಲ್ಲ” ಎಂದು ತಿಳಿಸಿದರು.

“ಇಂತಹ ರಾಜಕೀಯ ಕುತಂತ್ರಗಳಿಗೆ ತಾವು ತಮ್ಮ‌ ಕ್ಷೇತ್ರ ಬಲಿಯಾಗಬೇಡಿ. ಧರ್ಮಸ್ಥಳ ರಾಜಕೀಯ ವೇದಿಕೆಯಲ್ಲ. ಇದನ್ನು ದುರ್ಬಳಕೆ ಮಾಡಿಕೊಳ್ಳಲು ತಾವು ಅವಕಾಶ ಕೊಡಬಾರದು ಎಂದು ಧರ್ಮಸ್ಥಳದ ಧರ್ಮಾಧಿಕಾರಿಗಳ ಬಳಿ ನಾನು ಮನವಿ ಮಾಡಿಕೊಳ್ಳುತ್ತೇನೆ” ಎಂದರು.

“ಎಸ್ ಐಟಿ ರಚನೆಯನ್ನು ವಿಪಕ್ಷಗಳು, ವೀರೇಂದ್ರ ಹೆಗ್ಗಡೆಯವರು ಒಪ್ಪಿದ್ದರು. ಈ ಮೊದಲೇ ಏಕೆ ಇವರ ರಕ್ಷಣೆಗೆ ಬಿಜೆಪಿಯವರು ನಿಲ್ಲಲಿಲ್ಲ. ಕ್ಷೇತ್ರದ ಮೇಲಿನ ನಂಬಿಕೆಗೆ ಲೋಪ ಬರದಂತೆ ನಾವು ನೋಡಿಕೊಳ್ಳಬೇಕಿದೆ.‌ ಧರ್ಮದ ಹೆಸರಿನಲ್ಲಿ ಅಶಾಂತಿ ಮೂಡಿಸುವ ಕೆಲಸ ಬಿಜೆಪಿ ಮಾಡುತ್ತಿದೆ.‌ ಎ‌ನ್ ಐಎ ತನಿಖೆ ಬೇಕು ಎಂದು ಅಂದೇ ಏಕೆ ಸೂಚನೆ ನಿಡಲಿಲ್ಲ” ಎಂದರು.

ಅವರಿಂದ ಪ್ರೀತಿ ನಿರೀಕ್ಷೆ ಅಸಾಧ್ಯ

ಆರ್‌‌‌ ಎಸ್ ಎಸ್ ಗೀತೆ ಕ್ಷಮೆ ವಿಚಾರವಾಗಿ ಜೆಡಿಎಸ್- ಬಿಜೆಪಿ ಟೀಕೆಯ ಬಗ್ಗೆ ಕೇಳಿದಾಗ, “ಅವರುಗಳು ಇರುವುದು ನನ್ನ ಪ್ರೀತಿ ಮಾಡಲೇ? ಅವರುಗಳು ಇರುವದೇ ನನ್ನ ಟೀಕೆ ಮಾಡಲು. ಅವರಿಂದ ಪ್ರೀತಿ ನಿರೀಕ್ಷೆ ಮಾಡಲು ಸಾಧ್ಯವೇ? ನಾನು ಅವರಿಂದ ನಿರೀಕ್ಷೆ ಮಾಡುವುದು ಕೇವಲ ದ್ವೇಷ ಮಾತ್ರ” ಎಂದು ಕುಹಕವಾಡಿದರು.

“ಯಾರೂ ಸಹ ನನ್ನ ಬಗ್ಗೆ ಅನುಕಂಪ,‌ ಪ್ರೀತಿ ತೋರಿಸುವುದಿಲ್ಲ” ಎಂದು ಮಾರ್ಮಿಕವಾಗಿ ನುಡಿದರು.

ಸತೀಶ್‌ ಜಾರಕಿಹೊಳಿ ಅವರ ಹೇಳಿಕೆ‌ ಬಗ್ಗೆ ಕೇಳಿದಾಗ, “ನಾನು ಅವರ ವಕ್ತಾರನಲ್ಲ. ಅವರು ನನಗಿಂತ ಹಿರಿಯ ನಾಯಕರು ಅವರ ಬಳಿಯೇ ಪ್ರತಿಕ್ರಿಯೆ ಕೇಳಿ” ಎಂದರು.

Tags: DCM DK Shivakumardeputy cm dk shivakumarDK Shivakumardk shivakumar accidentdk shivakumar assemblydk shivakumar casedk shivakumar cycledk shivakumar cycle falldk shivakumar cycle ridedk shivakumar cycle slipdk shivakumar cyclingdk shivakumar interviewdk shivakumar newsdk shivakumar on cmdk shivakumar on kannadadk shivakumar rallydk shivakumar scooterdk shivakumar speechdk shivakumar statementdk shivakumar today newsdk shivakumar video
Previous Post

ಬಿಜೆಪಿ ಅವರ ಆಂತರಿಕ ರಾಜಕಾರಣದಿಂದ ‘ಷಡ್ಯಂತ್ರ’: ಡಿಸಿಎಂ ಡಿ.ಕೆ‌.ಶಿವಕುಮಾರ್

Next Post

ವಿಘ್ನಗಳ ನಡುವೆ ವಿನಾಯಕನ ಜಪ – ನಾಡಿನ ಜನತೆಗೆ ಗಣೇಶ ಹಬ್ಬದ ಶುಭ ಕೋರಿದ ಡಿಕೆಶಿ 

Related Posts

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?
ಇದೀಗ

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

by ಪ್ರತಿಧ್ವನಿ
January 18, 2026
0

ಬೆಂಗಳೂರು : ಬಿಗ್‌ ಬಾಸ್‌ ಸೀಸನ್‌ 12ರ ಗ್ರ್ಯಾಂಡ್‌ ಫಿನಾಲೆಗೆ ಕ್ಷಣಗಣನೆ ಶುರುವಾಗಿದ್ದು, ವಿನ್ನರ್‌ ಯಾರಾಗಲಿದ್ದಾರೆ ಎಂಬುವುದು ಎಲ್ಲರಲ್ಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಈಗಾಗಲೇ ಸ್ಪರ್ಧಿಗಳ ಅಭಿಮಾನಿಗಳು...

Read moreDetails
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
Next Post
ವಿಘ್ನಗಳ ನಡುವೆ ವಿನಾಯಕನ ಜಪ – ನಾಡಿನ ಜನತೆಗೆ ಗಣೇಶ ಹಬ್ಬದ ಶುಭ ಕೋರಿದ ಡಿಕೆಶಿ 

ವಿಘ್ನಗಳ ನಡುವೆ ವಿನಾಯಕನ ಜಪ - ನಾಡಿನ ಜನತೆಗೆ ಗಣೇಶ ಹಬ್ಬದ ಶುಭ ಕೋರಿದ ಡಿಕೆಶಿ 

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada