• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಿಂದುಳಿದ ವರ್ಗಗಳ ಆಯೋಗದಿಂದ ಮೊಬೈಲ್ ಮೂಲಕ ಸಮೀಕ್ಷೆ : ಪ್ರತಿಯೊಬ್ಬರು ಗಣತಿದಾರರಿಗೆ ಮಾಹಿತಿ ನೀಡಿ: ಪ್ರಿಯಾಂಕ್ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
September 6, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ
0
Share on WhatsAppShare on FacebookShare on Telegram

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಸಾರ್ವಜನಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ಕಲಬುರಗಿ ಜಿಲ್ಲೆಯಲ್ಲಿ ಜೆಸ್ಕಾಂ ವತಿಯಿಂದ ಪ್ರತಿ ಮನೆಗೂ ಯು.ಹೆಚ್.ಐ.ಡಿ (UHID) ನಂಬರ್ ಜನರೇಟ್ ಮಾಡಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ADVERTISEMENT

ಈ ಸಂಬಂಧದಲ್ಲಿ ಪ್ರತಿ ಮನೆಗೂ ಸರ್ಕಾರದಿಂದ ನಿಯೋಜಿತವಾಗುವ ಗಣತಿದಾರರು ಮುಂದಿನ ದಿನಗಳಲ್ಲಿ ಮೊಬೈಲ್ ಆಪ್ ಮುಖೇನ ಸಮೀಕ್ಷೆ ಕೈಗೊಳ್ಳಲಿದ್ದು, ಆ ಸಮಯದಲ್ಲಿ ಸಾರ್ವಜನಿಕರು ಸೂಕ್ತ ಮಾಹಿತಿ ಒದಗಿಸಿ ಸಮೀಕ್ಷೆಯನ್ನು ಯಶಸ್ವಿಗೊಳಿಸಲು ಹಾಗೂ ಆ ಮೂಲಕ ರಾಜ್ಯದ ಅಭಿವೃದ್ಧಿಗೆ ಹಾಗೂ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಬುನಾದಿ ಹಾಕಲು ಮುಕ್ತ ಮನಸ್ಸಿನಿಂದ ಸಹಕಾರ ನೀಡಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ಕೋರಿದ್ದಾರೆ.

ಈ ಸಮೀಕ್ಷೆಯು ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ನೀತಿ ನಿರೂಪಣೆಗೆ ಆಧಾರವಾಗಿರುತ್ತದೆ. ಹೀಗಾಗಿ ಸಮೀಕ್ಷೆಯನ್ನು ಸಂಪೂರ್ಣ ಯಶಸ್ವಿಗೊಳಿಸುವುದು ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ ಎಂದು ಸಚಿವರು ಹೇಳಿದ್ದಾರೆ.

ಸೆಪ್ಟೆಂಬರ್ 22ರಿಂದ ಪ್ರಾರಂಭವಾಗಿ ಅಕ್ಟೋಬರ್ 7 ರವರೆಗೆ ನಡೆಯುವ ಸಮೀಕ್ಷೆಯಲ್ಲಿ ಸುಮಾರು 60 ಪ್ರಶ್ನೆಗಳಿದ್ದು, ಸಮೀಕ್ಷೆ ಕಾರ್ಯವನ್ನು ಪಡಿತರ ಚೀಟಿ ಮತ್ತು ಆಧಾರ್ ಸಂಖ್ಯೆಯ ಆಧಾರದಲ್ಲಿ ಮಾಡುವುದರಿಂದ, ಸಮೀಕ್ಷಾದಾರರು ಮನೆಗೆ ಭೇಟಿ ನೀಡಿದಾಗ ಪಡಿತರ ಚೀಟಿ, ಆಧಾರ್ ಕಾರ್ಡ್ ಅಥವಾ ಆಧಾರ್ ಕಾರ್ಡಿನ ಸಂಖ್ಯೆ, ವಿಕಲಚೇತನರಾಗಿದ್ದರೆ UID ಕಾರ್ಡ್ ಅಥವಾ ಅಂಗವಿಕಲರ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ ಸಿದ್ದ ಮಾಡಿ ಇಟ್ಟುಕೊಂಡಿದ್ದರೆ ಸಮೀಕ್ಷೆ ಸುಲಭವಾಗುತ್ತದೆ ಮತ್ತು ವೇಗವಾಗುತ್ತದೆ ಎಂಬ ಮಾಹಿತಿಯನ್ನು ಸಚಿವರು ನೀಡಿದ್ದಾರೆ.

ಕುಟುಂಬದ ಎಲ್ಲಾ ಸದಸ್ಯರೂ ತಮ್ಮ ಆಧಾರ್ ಕಾರ್ಡ್ ಗಳೊಂದಿಗೆ ಮೊಬೈಲ್ ನಂಬರ್ ಲಿಂಕ್ ಆಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುಬೇಕು.
ಸಮೀಕ್ಷೆ ಸಮಯದಲ್ಲಿ ಇಕೆವೈಸಿ ಮಾಡುವಾಗ ಆ ಸದಸ್ಯರ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ನಂಬರಿಗೆ ಬರುವ ಒಟಿಪಿಯನ್ನು ತಿಳಿಸಬೇಕಾಗುತ್ತದೆ.
ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಚಾಲ್ತಿಯಲ್ಲಿ ಇಲ್ಲದಿದ್ದಲ್ಲಿ ಆಧಾರ್ ನೋಂದಣಿ ಕೇಂದ್ರಕ್ಕೆ ತೆರಳಿ ಹೊಸ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಿಸಿಕೊಳ್ಳಬೇಕು.

ಸಮೀಕ್ಷೆಯ ಪ್ರಶ್ನಾವಳಿಯಲ್ಲಿ ಕೋರಿರುವ ವಿದ್ಯಾರ್ಹತೆ, ಕೌಶಲ್ಯ ತರಬೇತಿಯ ಅಗತ್ಯತೆ, ಆದಾಯ, ಕುಟುಂಬದ ಸ್ಥಿರ ಮತ್ತು ಚರಾಸ್ತಿ ವಿವರಗಳು, ಧರ್ಮ, ಜಾತಿ, ಉಪಜಾತಿ ಹಾಗೂ ಕುಲಕಸುಬು ಮುಂತಾದ ಎಲ್ಲಾ ವಿವರಗಳ ಮಾಹಿತಿಯನ್ನು ನೀಡಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

ಸಮೀಕ್ಷೆಯ ಪ್ರಶ್ನಾವಳಿಗಳ ಬಗ್ಗೆ ಅರಿವು ಮೂಡಿಸಲು ಪದವಿ ವಿಧ್ಯಾರ್ಥಿಗಳ ಮೂಲಕ ಸಮೀಕ್ಷಾ ಪೂರ್ವ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿರುವ ಸಚಿವರು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ ಅಥವಾ Website ವಿಳಾಸ https://kscbc.karnataka.gov.in ರಲ್ಲಿ ಮಾಹಿತಿ ಪಡೆಯಬಹುದು ಎಂದಿದ್ದಾರೆ.

Tags: Priyank Khargepriyank kharge about rsspriyank kharge attackpriyank kharge audiopriyank kharge bytepriyank kharge interviewpriyank kharge newspriyank kharge news 2025priyank kharge on bjppriyank kharge on modipriyank kharge on pm modipriyank kharge on rsspriyank kharge on rss banpriyank kharge rss banpriyank kharge speechpriyank kharge today newspriyank kharge updatespriyank kharge videopriyank kharge vs bjppriyank kharge vs rssrss priyank kharge
Previous Post

ಎರಡೂವರೆ ವರ್ಷದಲ್ಲಿ 2,422 ರೈತರ ಆತ್ಮಹ*ತ್ಯೆ – ರಾಜ್ಯ ಸರ್ಕಾರದ ಅಸಡ್ಡೆಗೆ ಜೆಡಿಎಸ್ ಆಕ್ರೋಶ ! 

Next Post

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರಿಂದ “ದೈವ” ಚಿತ್ರದ ಟೀಸರ್ ಬಿಡುಗಡೆ .

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರಿಂದ "ದೈವ" ಚಿತ್ರದ ಟೀಸರ್ ಬಿಡುಗಡೆ .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada