• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸರ್ಕಾರದ ಬೂಕ್ಕಸಕ್ಕೆ ಬರಲಿದ್ಯಾ 10 ಲಕ್ಷ ಕೋಟಿ ಹಣ..?

ಪ್ರತಿಧ್ವನಿ by ಪ್ರತಿಧ್ವನಿ
September 12, 2025
in ಕರ್ನಾಟಕ, ರಾಜಕೀಯ, ವಿಶೇಷ
0
ಸರ್ಕಾರದ ಬೂಕ್ಕಸಕ್ಕೆ ಬರಲಿದ್ಯಾ 10 ಲಕ್ಷ ಕೋಟಿ ಹಣ..?
Share on WhatsAppShare on FacebookShare on Telegram
ADVERTISEMENT

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯಿಂದ ಉಂಟಾದ ನಷ್ಟವನ್ನು ವಸೂಲಿ ಮಾಡಲು ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದೆ. ಅಕ್ರಮ ಗಣಿಗಾರಿಕೆ ಮತ್ತು ಅಪರಾಧದಿಂದ ಉತ್ಪತ್ತಿಯಾದ ಆಸ್ತಿಯನ್ನು ವಶಪಡಿಸಿಕೊಳ್ಳಲು ಹಾಗೂ ಜಪ್ತಿ ಮಾಡಲು ಸರ್ಕಾರ ಕೈ ನಾಯಕರು ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಕರ್ನಾಟಕ ರಾಜ್ಯದ ಬಳ್ಳಾರಿ. ತುಮಕೂರು, ಚಿತ್ರದುರ್ಗ ಮತ್ತು ಇನ್ನಿತರ ಭಾಗಗಳಲ್ಲಿ ಅತ್ಯಂತ ಉತ್ಕೃಷ್ಟವಾದ ಕಬ್ಬಿಣದ ಅದಿರು ಲಭ್ಯವಾಗುತ್ತಿರುವುದನ್ನು ಗಮನಿಸಿದ ಕೆಲವು ಗಣಿ ಮಾಲೀಕರು 2000 ಇಸವಿಯಿಂದ ಅಕ್ರಮವಾಗಿ ಗಣಿಗಾರಿಕೆ ಮಾಡಿ ಲೂಟಿ ಮಾಡುತ್ತಿದ್ದರು. ಇದನ್ನು ಗಮನಿಸಿದ ಕಾಂಗ್ರೆಸ್ ಪಕ್ಷದ ನಾಯಕತ್ವವು ವಿಧಾನ ಪರಿಷತ್ತಿನಲ್ಲಿ ಹೋರಾಟ ಮಾಡಿ ಹಗರಣವನ್ನು ನ್ಯಾಯಮೂರ್ತಿ ಶ್ರೀ ಯು.ಎಲ್. ಭಟ್ ಆಯೋಗಕ್ಕೆ ತನಿಖೆ ಮಾಡಲು ಒಪ್ಪಿಸಲಾಗಿತ್ತು. ನ್ಯಾಯಮೂರ್ತಿ ಶ್ರೀ ಯು.ಎಲ್. ಭಟ್‌ರವರ ಆಯೋಗವು ಇದೊಂದು ಅಂತರರಾಜ್ಯ ಮತ್ತು ಅಂತರರಾಷ್ಟ್ರೀಯ ಹಗರಣವಾಗಿರುವುದರಿಂದ ಸಿಬಿಐ ತನಿಖೆಗೆ ವಹಿಸುವುದು ಸೂಕ್ತವೆಂದು ಆದೇಶ ಮಾಡಿತ್ತು. ಆದರೆ ಅದನ್ನು ಅಂದಿನ ರಾಜ್ಯ ಸರ್ಕಾರ ಒಪ್ಪಲಿಲ್ಲ. ಅದನ್ನು ವಿರೋಧಿಸಿ ವಿಧಾನ ಪರಿಷತ್ತಿನಲ್ಲಿ ಮತ್ತೆ ಕಾಂಗ್ರೆಸ್ ಪಕ್ಷದ ನಾಯಕತ್ವ ಮಾಡಿದ ಹೋರಾಟದಿಂದ ಅಂದಿನ ಸರ್ಕಾರ ಸದರಿ ಹಗರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಲಾಗಿತ್ತು.

ಆ ಮಧ್ಯೆ ಕಾಂಗ್ರೆಸ್ ಪಕ್ಷದಿಂದ ‘ಸತ್ಯ ಶೋಧನಾ ಸಮಿತಿ’ಯನ್ನು ಶ್ರೀ ವಿ.ಎಸ್. ಉಗ್ರಪ್ಪನವರ ನೇತೃತ್ವದಲ್ಲಿ ಶ್ರೀ ಬಸವರಾಜ ರಾಯರೆಡ್ಡಿ, ಶ್ರೀ ಅಮರೇಗೌಡ ಬಯ್ಯಾಮರ, ಶ್ರೀ ವಿ.ಮುನಿಯಪ್ಪ, ಶ್ರೀ ಕೆ. ಶಿವಮೂರ್ತಿ ನಾಯಕ್‌ರವರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಯಿತು. ಆ ಸಮಿತಿಯು ಅಕ್ರಮ ಗಣಿಗಾರಿಕೆಯ ಪೂರ್ಣ ಮಾಹಿತಿಯನ್ನು ಸಂಗ್ರಹಿಸಿ. ದಿನಾಂಕ: 16-11-2008 ರಂದು ವರದಿ ನೀಡಿ. “ಹತ್ತಾರು ಸಾವಿರ ಕೋಟಿ ಮೌಲ್ಯದ ಕಬ್ಬಿಣದ ಅದಿರನ್ನು ಕೆಲವರು ಲೂಟಿ ಮಾಡಿ ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿರುತ್ತಾರೆ. ಆದ್ದರಿಂದ ಅಕ್ರಮ ಗಣಿಗಾರಿಕೆ ವಿಷಯವನ್ನು ಸಿಬಿಐ ತನಿಖೆ ಅಥವಾ ನ್ಯಾಯಾಂಗ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಿ ರಾಜ್ಯದ ಸಂಪತ್ತನ್ನು ಉಳಿಸಬೇಕು” ಎಂದು ಸಮಿತಿಯು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಯಿತು.

ವ್ಯಕ್ತಿಗಳು/ಸಂಘ-ಸಂಸ್ಥೆಗಳು, ರಾಜಕಾರಣಿಗಳ ಮತ್ತು ಅಧಿಕಾರಿಗಳ ಸಹಕಾರದಿಂದ ಅಕ್ರಮವಾಗಿ 1.0 ಲಕ್ಷ ಕೋಟಿಗೂ ಅಧಿಕ ಬೆಲೆ ಬಾಳುವ ಕಬ್ಬಿಣದ ಅದಿರನ್ನು ಲೂಟಿ ಮಾಡಿ ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿರುತ್ತಾರೆ. ಇದನ್ನು ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ಎಂದಿಗೂ ಸಹ ಭ್ರಷ್ಟಾಚಾರವನ್ನು ಉತ್ತೇಜಿಸಿಲ್ಲ ಹಾಗೂ ಸಹಕಾರವನ್ನೂ ನೀಡಿರುವುದಿಲ್ಲ. ಭ್ರಷ್ಟಾಚಾರದ ವಿರುದ್ಧ ಹೋರಾಡುವುದೇ ಕಾಂಗ್ರೆಸ್ ಪಕ್ಷದ ಧೈಯವೆಂದು ಪಕ್ಷವು ಭಾವಿಸಿಕೊಂಡು ಬಂದಿರುತ್ತದೆ. ಆ ಕಾರಣದಿಂದ ಶ್ರೀ ರಾಹುಲ್‌ ಗಾಂಧಿ. ಶ್ರೀ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಹಿರಿಯ ನಾಯಕರು ಭ್ರಷ್ಟಾಚಾರದ ವಿರುದ್ಧ ರಾಷ್ಟ್ರ ಮಟ್ಟದಲ್ಲಿ ಹೋರಾಟ ಮಾಡುತ್ತಿದ್ದಾರೆ.

ಆದ್ದರಿಂದ ರಾಜ್ಯ ಸರ್ಕಾರ ಶ್ರೀ ಹೆಚ್.ಕೆ. ಪಾಟೀಲ್‌ ರವರ ನೇತೃತ್ವದ ಉಪ ಸಮಿತಿ ನೀಡಿರುವ ವರದಿ ಆಧಾರದ ಮೇಲೆ ತಪ್ಪಿತಸ್ಥರು ಯಾವುದೇ ಪಕ್ಷದವರಾಗಿರಲಿ, ಯಾವುದೇ ಅಧಿಕಾರಿಗಳಾಗಿರಲಿ ಅವರ ವಿರುದ್ಧ ಕ್ರಮ ಜರಗಿಸುವಂತೆ ಹೇಳಿದರು.

ಕರ್ನಾಟಕ ರಾಜ್ಯದಲ್ಲಿ ಲೆಕ್ಕವಿಲ್ಲದಷ್ಟು ಸಂಖ್ಯೆಯ ಗುತ್ತಿಗೆದಾರರು, ಸಾಗಾಣಿಕೆದಾರರು, ರಫ್ತುದಾರರು, ದಾಸ್ತಾನುದಾರರು, ಖರೀದಿದಾರರು ಮತ್ತು ಇತರ ಮಧ್ಯವರ್ತಿಗಳು ಸೇರಿದಂತೆ ಬಹು ವಹಿವಾಟುಗಳನ್ನು ಒಳಗೊಂಡ ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಂದ ಸಂಘಟಿತ ಅಪರಾಧ, ವ್ಯವಸ್ಥಿತ ಒಳಸಂಚು ಮತ್ತು ಅಪರಾಧ ಉತ್ಪತ್ತಿಗಳಿಂದಾದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲು, ಜಪ್ತಿ ಮಾಡಲು, ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ವಸೂಲಿ ಆಯುಕ್ತರೊಬ್ಬರ ನೇಮಕಾತಿಯ ಅವಶ್ಯಕತೆಯನ್ನು ಸರ್ಕಾರ ಮನಗಂಡಿದೆ. ಈ ಅಧಿನಿಯಮವನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಲಾಗಿತ್ತು. 

ಆ ಮಧ್ಯೆ ಕಾಂಗ್ರೆಸ್ ಪಕ್ಷದಿಂದ ‘ಸತ್ಯ ಶೋಧನಾ ಸಮಿತಿ’ಯನ್ನು ಶ್ರೀ ವಿ.ಎಸ್. ಉಗ್ರಪ್ಪನವರ ನೇತೃತ್ವದಲ್ಲಿ ಶ್ರೀ ಬಸವರಾಜ ರಾಯರೆಡ್ಡಿ, ಶ್ರೀ ಅಮರೇಗೌಡ ಬಯ್ಯಾಮರ, ಶ್ರೀ ವಿ.ಮುನಿಯಪ್ಪ, ಶ್ರೀ ಕೆ. ಶಿವಮೂರ್ತಿ ನಾಯಕ್‌ರವರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಯಿತು.

CM Siddaramaiah: ಸಿಎಂ ಸಿದ್ದರಾಮಯ್ಯ ಮಾತಿಗೆ ಅಧಿಕಾರಿಗಳು ನಗು..! #siddaramaiah #congress
Tags: BJPcongresscongress government in karnatakaDK ShivakumarHK PatilkaranatakacongresskarnatakacmKhargeRahul Gandhisiddaramaiah
Previous Post

ಬ್ಯಾಲೆಟ್ ಪೇಪರ್ ನಿಂದ ನಿಷ್ಪಕ್ಷಪಾತ ಚುನಾವಣೆ ನಡೆಸಿ ಇಡೀ ರಾಷ್ಟ್ರಕ್ಕೆ ತೋರಿಸುತ್ತೇವೆ : ಬಿ.ಕೆ ಹರಿಪ್ರಸಾದ್ 

Next Post

“ಮರಳಿ ಮನಸಾಗಿದೆ” ಚಿತ್ರದ ನಾಲ್ಕನೇ ಹಾಗೂ ಕೊನೆಯ ಹಾಡನ್ನು ಬಿಡುಗಡೆಮಾಡಿದ ನಟಿ ಪ್ರೇಮ..!!

Related Posts

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
0

ಬೆಂಗಳೂರು: ಕನ್ನಡದ ವಿಚಾರದಲ್ಲಿ ಸದಾ ಧ್ವನಿ ಎತ್ತುತ್ತಾ ಬಂದಿರುವ ಬಿಗ್‌ಬಾಸ್ ಕನ್ನಡ ಸ್ಪರ್ಧಿ ಅಶ್ವಿನಿ ಗೌಡ ಇದೀಗ ಫಿನಾಲೆ ವೀಕ್ ಟಾಸ್ಕ್‌ನಲ್ಲಿ ಮಾಡಿದ ತಪ್ಪಿನಿಂದ ಭಾರೀ ಟ್ರೋಲ್‌ಗೆ...

Read moreDetails
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026
Next Post

"ಮರಳಿ ಮನಸಾಗಿದೆ" ಚಿತ್ರದ ನಾಲ್ಕನೇ ಹಾಗೂ ಕೊನೆಯ ಹಾಡನ್ನು ಬಿಡುಗಡೆಮಾಡಿದ ನಟಿ ಪ್ರೇಮ..!!

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

January 14, 2026
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada