ರೇಣುಕಾಸ್ವಾಮಿ (Renukaswamy) ಸಾವಿನಿಂದ ಅವರ ಕುಟುಂಬಕ್ಕೆ ಆಧಾರ ಇಲ್ಲದಂತೆ ಆಗಿದೆ. ಆದ್ದರಿಂದ ಅವರ ಕುಟುಂಬಕ್ಕೆ ಜೀವನ ನಡೆಸೋದು ಅವರಿಗೆ ಕಷ್ಟ ಆಗುತ್ತಿದೆ. ಹಾಗಾಗಿ ಪತ್ನಿ ಸಹನಾಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಚಳ್ಳಕೆರೆ ಶಾಸಕ ಟಿ ರಘುಮೂರ್ತಿ (T Raghumurthy) ಭರವಸೆ ನೀಡಿದ್ದಾರೆ.

ದರ್ಶನ್ ಗ್ಯಾಂಗ್ (Darshan Gang) ಮೇಲೆ ರೇಣುಕಾಸ್ವಾಮಿಯನ್ನು ಕೊಂದ ಆರೋಪ ಇದೆ. ಈ ಪ್ರಕರಣ ಕೋರ್ಟ್ನಲ್ಲಿ ಇದೆ. ಇದರ ಬೆನ್ನಲ್ಲೇ ರೇಣುಕಾಸ್ವಾಮಿ ಮನೆಗೆ ಚಳ್ಳಕೆರೆ ಶಾಸಕ ಟಿ ರಘುಮೂರ್ತಿ ಭೇಟಿ ನೀಡಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ಶಾಸಕ ಟಿ ರಘುಮೂರ್ತಿ ಆತ್ಮಸ್ಥೈರ್ಯ ಹೇಳಿದ್ದಾರೆ. ಸದ್ಯ ಕುಟುಂಬಕ್ಕೆ 1 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಿ ರೇಣುಕಾಸ್ವಾಮಿ ಪತ್ನಿ ಸಹನಾಗೆ ಕೆಲಸ ಕೊಡಿಸುವ ಭರವಸೆ ನೀಡಿದ್ದಾರೆ.

ಮುರುಘಾಮಠದ ಆಡಳಿತಾಧಿಕಾರಿ ಶಿವಯೋಗಿ ಕಳಸದ್ ಅವರಿಗೆ ಕರೆ ಮಾಡಿ ಮಠದ ಸಂಸ್ಥೆಯಲ್ಲಿ ಸಹನಾಗೆ ಕೆಲಸ ನೀಡಲು ಮನವಿ ಮಾಡಿದ್ದಾರೆ. ಸಿರಿಗೆರೆ ತರಳಬಾಳು ಮಠದ ಸಂಸ್ಥೆಯಲ್ಲೂ ಪ್ರಯತ್ನಕ್ಕೆ ಸಲಹೆ ನೀಡಿದ್ದಾರೆ. ಇನ್ನು, ಕೊನೆಯ ಪಕ್ಷ ಸರ್ಕಾರಿ ಅನುದಾನಿತ ಸಂಸ್ಥೆಯಲ್ಲಿ ಕ್ಲರ್ಕ್ ಪೋಸ್ಟ್ ಕೊಡಿಸೋದಾಗಿ ಭರವಸೆ ಕೊಟ್ಟಿದ್ದಾರೆ.




