• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

ಪ್ರತಿಧ್ವನಿ by ಪ್ರತಿಧ್ವನಿ
September 15, 2025
in Top Story, ಕರ್ನಾಟಕ, ಸಿನಿಮಾ
0
ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.
Share on WhatsAppShare on FacebookShare on Telegram

ಕುರಿಗಾಹಿ , ಜನಪದ ಗಾಯಕ , ಸರಿಗಮಪ , ಸ್ಪರ್ಧಿಯಾದ ಬಾಳು ಬೆಳಗುಂದಿ ಸಾಹಿತ್ಯ ಹಾಗೂ ಗಾಯನದ ಸಾಂಗ್ ವೈರಲ್.

ADVERTISEMENT

ಸ್ಯಾಂಡಲ್ ವುಡ್ ನ ಯಶಸ್ವಿ ಕಾಂಬಿನೇಷನ್ ನಿರ್ದೇಶಕ ಶಶಾಂಕ್ ಹಾಗೂ ನಟ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ “ಬ್ರ್ಯಾಟ್”(BRAT) ಚಿತ್ರದ “ಗಂಗಿ ಗಂಗಿ” ಎಂಬ ಮಾಸ್ ಹಾಡು ಅದ್ದೂರಿಯಾಗಿ ಇತ್ತೀಚಿಗೆ ಬೆಂಗಳೂರು ನಗರದ ಮಂತ್ರಿ ಮಾಲ್ ನ ಒಳ ಆವರಣದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಯಾಯಿತು. ಈಗಾಗಲೇ ಈ ಚಿತ್ರದ ಪೋಸ್ಟರ್ ಹಾಗೂ ಟೀಸರ್ ಬಿಡುಗಡೆಗೊಂಡು ಭರ್ಜರಿಯಾಗಿ ಸದ್ದು ಮಾಡುತ್ತಿದೆ. ಈ “ಬ್ರ್ಯಾಟ್” ಚಿತ್ರವನ್ನು ಮಂಜುನಾಥ್ ಕಂದಕೂರ್ ಅದ್ದೂರಿಯಾಗಿ ನಿರ್ಮಿಸುತ್ತಿದ್ದು , ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆ ಮಾಡಲು ತಂಡ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇಂದು ಬಿಡುಗಡೆಯಾಗಿರುವ ಈ ಹಾಡನ್ನು ಉತ್ತರ ಕರ್ನಾಟಕದ ಪ್ರತಿಭೆ ಬಾಳು ಬೆಳಗುಂದಿ ತಾವೇ ರಚಿಸಿ ಹಾಡಿದ್ದಾರೆ. ಇವರೊಂದಿಗೆ ಗಾಯಕಿ ಇಂದು ನಾಗರಾಜ್ ಕೂಡ ಸಾಥ್ ನೀಡಿದ್ದಾರೆ. ಯಶಸ್ವಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಕಂಪೋಸಿಂಗ್ ನಲ್ಲಿ ಬಂದಿರುವ ಈ ಹಾಡಿಗೆ ನಟ ಡಾರ್ಲಿಂಗ್ ಕೃಷ್ಣ ಹಾಗೂ ಮುಂಬೈ ಬೆಡಗಿ ಅನೈರಾ ಭರ್ಜರಿಯಾಗಿ ಸ್ಟೆಪ್ ಹಾಕಿದ್ದಾರೆ. ಈ ಹಾಡು ಅಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಗೊಂಡ ನಂತರ ಚಿತ್ರತಂಡ ಚಿತ್ರದ ಕುರಿತು ಮಾಹಿತಿಯನ್ನು ಹಂಚಿಕೊಂಡರು.

C M Siddaramaiah on PM Modi : ಅಬ್ಬರದ ಭಾಷಣ ಮಾಡಿದ ಸಿಎಂ  #pratidhvani #indiavspakistan #cricket

ಈ ಚಿತ್ರದ ನಿರ್ದೇಶಕ ಶಶಾಂಕ್ ಮಾತನಾಡುತ್ತಾ ಈ ಚಿತ್ರದ ಶೀರ್ಷಿಕೆ ಬಗ್ಗೆ ಕ್ಲಾರಿಟಿ ಕೊಡ್ತೀನಿ, “ಬ್ರ್ಯಾಟ್” ಎಂದರೆ ತರ್ಲೆ ಹುಡುಗ , ಒಂದು ರೀತಿ ದಾರಿ ತಪ್ಪಿದ ಮಗ ಎಂದು ಹೇಳಬಹುದು. ಇದೊಂದು ಅಪ್ಪ-ಮಗನ ಕಥೆಯಾಗಿದ್ದು , ಭರ್ಜರಿ ಆಕ್ಷನ್ , ಥ್ರಿಲ್ಲರ್ ಜೊತೆಗೆ ಮನೋರಂಜನೆಯ ಅಂಶವು ತುಂಬಿಕೊಂಡಿದೆ. ಇಡೀ ಚಿತ್ರ ಆರಂಭದಿಂದ ಕೊನೆಯವರೆಗೂ ಎಲ್ಲಿಯೂ ಬೇಸರವಾಗದೆ ಸಂಪೂರ್ಣ ಎಂಟರ್ಟೈನ್ಮೆಂಟ್ ಸಿಗಲಿದೆ. ಒಂದೊಂದೇ ಹಾಡನ್ನು ವಿಭಿನ್ನ ರೀತಿಯಲ್ಲಿ ಬಿಡುಗಡೆ ಮಾಡುತ್ತಿದ್ದು ,ಈಗಾಗಲೇ ಸಿದ್ ಶ್ರೀರಾಮ್ ಹಾಡಿರುವ “ನಾನೇ ನೀನಂತೆ” ಎಂಬ ಹಾಡು ಎಲ್ಲೆಡೆ ಬಾರಿ ವೈರಲ್ ಆಗಿದ್ದು , ಮಿಲಿಯನ್ ಗಟ್ಟಲೆ ವೀಕ್ಷಣೆಯಾಗಿ ಜನಪ್ರಿಯವಾಗಿದೆ. ಈಗ ಬಿಡುಗಡೆಯಾಗಿರುವ “ಗಂಗಿ ಗಂಗಿ” ಎಂಬ ಮಾಸ್ ಹಾಡನ್ನು ಗ್ರಾಮೀಣ ಪ್ರತಿಭೆ , ಜನಪದ ಗಾಯಕ ಬಾಳು ಬೆಳಗುಂದಿ ಹಾಗೂ ನಾಯಕಿ ಇಂದು ನಾಗರಾಜ್ ಅದ್ಭುತವಾಗಿ ಹಾಡಿದ್ದಾರೆ. ನಮ್ಮ ಚಿತ್ರದಲ್ಲಿ ಬಹಳಷ್ಟು ಹೈಲೈಟ್ ಗಳಿದ್ದು , ಅದರಲ್ಲಿ ಅರ್ಜುನ್ ಜನ್ಯ ಅವರ ಸಂಗೀತ ಕೂಡ ಅಷ್ಟೇ ಸೊಗಸಾಗಿ ಪ್ರತಿ ಹಾಡು ಮೂಡಿಬಂದಿದೆ. ಈಗಾಗಲೇ ನನ್ನ ಹಾಗೂ ಡಾರ್ಲಿಂಗ್ ಕೃಷ್ಣ ಕಾಂಬಿನೇಷನ್ ನಲ್ಲಿ ಬಂದಿದ್ದ “ಕೌಸಲ್ಯ ಸುಪ್ರಜಾ ರಾಮ” ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿಯಾಗಿತ್ತು. ಈಗ ಮತ್ತೊಮ್ಮೆ ನಿಮ್ಮ ಮುಂದೆ
“ಬ್ರ್ಯಾಟ್” ಚಿತ್ರವನ್ನು ನವೆಂಬರ್ 14 ರಂದು ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವೆ , ಆನಂದ್ ಆಡಿಯೋ ಮೂಲಕ “ಬ್ರ್ಯಾಟ್” ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ನೀವೆಲ್ಲರೂ ನಮ್ಮ ಚಿತ್ರವನ್ನು ನೋಡಿ ಪ್ರೋತ್ಸಾಹಿಸಿ ಎಂದರು.

ನಟ ಡಾರ್ಲಿಂಗ್ ಕೃಷ್ಣ ಮಾತನಾಡುತ್ತಾ ಈ ಚಿತ್ರದ ಕಥೆ ಬಹಳ ವಿಭಿನ್ನವಾಗಿದೆ. ಅದರಲ್ಲೂ ವಿಶೇಷವಾಗಿ ನನ್ನ ಲುಕ್ ಡಿಫ್ರೆಂಟ್ ಆಗಿದೆ. ನಾನು ಡ್ಯಾನ್ಸ್ ಮಾಡಿ ಸುಮಾರು ಮೂರು ನಾಲ್ಕು ವರ್ಷಗಳೇ ಕಳೆದಿತ್ತು , ಈ ಹಾಡಿಗೆ ಸ್ಟೆಪ್ಸ್ ಹಾಕಲು ಕಾರಣ ನಮ್ಮ ನಿರ್ದೇಶಕ ಶಶಾಂಕ್. ಈ ಹಾಡು ಇಷ್ಟು ಚೆನ್ನಾಗಿ ಬಂದಿದೆ ಎಂದರೆ ಅದರ ಎಲ್ಲಾ ಕ್ರೆಡಿಟ್ ನಮ್ಮ ನೃತ್ಯ ನಿರ್ದೇಶಕ ಹಾಗೂ ಡೈರೆಕ್ಟರ್ ಗೆ ಸಲ್ಲಬೇಕು. ಹಾಗೆಯೇ ಈ “ಗಂಗಿ ಗಂಗಿ” ಹಾಡು ಇಷ್ಟು ಜೋಶ್ ನಲ್ಲಿ ಬರಲು ಬಾಳು ಬೆಳಗುಂದಿ ಅವರ ಸಾಹಿತ್ಯ, ಗಾಯನ ಹಾಗೂ ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆ ಪ್ರಮುಖ ಕಾರಣ ಕಾರಣವಾಗಿದೆ. ಹಾಗೆಯೇ ಈ ಚಿತ್ರದ ನಿರ್ಮಾಪಕ ಮಂಜುನಾಥ್ ಕಂದಕೂರ್ ಅವರಿಗಿರುವ ಸಿನಿಮಾ ಮೇಲಿನ ಪ್ರೀತಿಯೇ ಈ ಚಿತ್ರವು ಇಷ್ಟು ಸೊಗಸಾಗಿ ಬಂದಿದೆ. ಅದೇ ರೀತಿ ಇಂದು ಬಿಡುಗಡೆಯಾಗಿರುವ ಈ ಮಾಸ್ ಹಾಡು ಅದ್ದೂರಿಯಾಗಿ ಮೂಡಿ ಬಂದಿದೆ. ಸದ್ಯದಲ್ಲೇ ಚಿತ್ರ ಬರಲಿದೆ ನೀವೆಲ್ಲರೂ ನೋಡಿ ಎಂದರು. ಇನ್ನು ಈ ಚಿತ್ರದ ನಟಿ ಮನಿಶಾ ಕಂದಕೂರ್ ಮಾತನಾಡುತ್ತಾ ನಾನು ಕೂಡ ಕನ್ನಡದವಳು , ಇದು ನನ್ನ ಮೊದಲನೆಯ ಚಿತ್ರ. ಈ ಚಿತ್ರದಲ್ಲಿ ನನ್ನದು ಮಧ್ಯಮ ವರ್ಗದ ಹುಡುಗಿ ಪಾತ್ರ. ಸಿನಿಮಾ ಬಹಳ ಸೊಗಸಾಗಿ ಮೂಡಿ ಬಂದಿದೆ. ಪ್ರತಿಯೊಂದು ಹಾಡು ವಿಭಿನ್ನವಾಗಿ ಮೂಡಿ ಬಂದಿದ್ದು , ಈಗ ಬಿಡುಗಡೆಯಾಗಿರುವ “ಗಂಗಿ ಗಂಗಿ” ಹಾಡು ಬಹಳ ಚೆನ್ನಾಗಿದೆ ಎಂದು ಹೇಳಿದರು.

ಈ ಚಿತ್ರದ ನಿರ್ಮಾಪಕ ಮಂಜುನಾಥ್ ಕಂದಕೂರ್ ಮಾತನಾಡುತ್ತಾ ನಮ್ಮ “ಫಸ್ಟ್ ರ‍್ಯಾಂಕ್ ರಾಜು” ಚಿತ್ರದ ನಂತರ ನಾನು ನಿರ್ಮಾಣ ಮಾಡುತ್ತಿರುವ ಎರಡನೇ ಚಿತ್ರ “ಬ್ರ್ಯಾಟ್”. ನನಗೆ ನಿರ್ದೇಶಕರು ಹೇಳಿದ ಕಥೆ ಬಹಳ ಇಷ್ಟವಾಯಿತು , ಹಾಗಾಗಿ ಈ ಸಿನಿಮಾ ಮಾಡಲು ನಿರ್ಧರಿಸಿದೆ. ಅಂದುಕೊಂಡಂತೆ ಚಿತ್ರ ಉತ್ತಮವಾಗಿ ಮೂಡಿ ಬಂದಿದೆ. ಹಾಗೆಯೇ ನಟ ಡಾರ್ಲಿಂಗ್ ಕೃಷ್ಣ ಹಾಗೂ ಶಶಾಂಕ್ ಅವರ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಚಿತ್ರವು ಮತ್ತೊಂದು ಸೂಪರ್ ಹಿಟ್ ಆಗಲಿದೆ. ಇಂದು ಬಿಡುಗಡೆಯಾಗಿರುವ ಹಾಡು ಕೂಡ ಸೊಗಸಾಗಿದೆ , ಎಲ್ಲರೂ ಚಿತ್ರವನ್ನು ಚಿತ್ರಮಂದಿರಕ್ಕೆ ಬಂದು ನೋಡಿ ಎಂದರು.

ಗ್ರಾಮೀಣ ಪ್ರತಿಭೆ ಬಾಳು ಬೆಳಗುಂದಿ ಮಾತನಾಡುತ್ತಾ
ಕುರಿಗಾಹಿಯಾಗಿದ್ದ ನಾನು ಬಹಳಷ್ಟು ಜನಪದ ಗೀತೆಗಳನ್ನು ಬರೆದು ಹಾಡುತ್ತಿದ್ದೆ. ಒಂದು ಉತ್ತಮ ವೇದಿಕೆಯಾಗಿ “ಸರಿಗಮಪ” ದಲ್ಲಿ ಅವಕಾಶ ಸಿಕ್ಕಿತು. ಆ ಕಾರ್ಯಕ್ರಮದ ಜಡ್ಜ್ ಆಗಿದ್ದ ಅರ್ಜುನ್ ಜನ್ಯ ಸರ್ ಅವರು ನನ್ನ ಹಾಡನ್ನು ಗಮನಿಸಿ ನನ್ನ ಸಂಗೀತದ ಸಿನಿಮಾದಲ್ಲಿ ನಿನಗೊಂದು ಅವಕಾಶ ಕೊಡುತ್ತೇನೆ ಎಂದಿದ್ದರು , ಅದರಂತೆ ಈ ಸಿನಿಮಾದಲ್ಲಿ ನನ್ನಿಂದ ಗೀತ ರಚನೆಯು ಬರೆಸಿ ಹಾಡಲು ಅವಕಾಶವನ್ನು ನೀಡಿದ್ದಾರೆ. ಅವರಿಗೆ ನಾನು ಸದಾ ಚಿರಋಣಿಯಾಗಿರುತ್ತೇನೆ. ಹಾಗೆಯೇ ಈ ಚಿತ್ರದ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ ಎಂದರು. ಇನ್ನು ಈ ಒಂದು ಕಾರ್ಯಕ್ರಮದಲ್ಲಿ ಚಿತ್ರದಲ್ಲಿ ನಟಿಸಿರುವ ಡ್ಯಾಗನ್ ಮಂಜು ಸೇರಿದಂತೆ ಕಿದ್ವಾಯ್ ಸಂಸ್ಥೆಯ ವೈದ್ಯ ರಾಮಚಂದ್ರ ಹಾಗೂ ಬದರಿನಾಥ್ ಸೇರಿದಂತೆ ಬಹಳಷ್ಟು ಗಣ್ಯರು ಅತಿಥಿಗಳಾಗಿ ಆಗಮಿಸಿದ್ದರು. ಎಲ್ಲಾ ಅಂದುಕೊಂಡಂತೆ ಚಿತ್ರ ಮೂಡಿ ಬಂದಿದ್ದು , ಅದ್ದೂರಿ ಪ್ರಚಾರದ ಮೂಲಕ ನವಂಬರ್ 14ರಂದು ಚಿತ್ರ ತೆರೆಯ ಮೇಲೆ ಬಿಡುಗಡೆಯಾಗಲಿದೆ.

Tags: arjun janya brat moviebrat kannada film teaserbrat kannada moviebrat kannada movie songbrat kannada movie teaserbrat kannada songsbrat kannada themebrat malayalam moviebrat moviebrat movie songsbrat movie teaserbrat new song kannadaekka kannada movieKannadakannada film reviewkannada movie bratkannada movie songskannada movieskannada new moviekannada new movie songthe devil kannada movie songsupadhyaksha kannada movieupadhyaksha kannada new movie
Previous Post

Siddaramaiah: ಸಚಿವ ಸಂತೋಷ್ ಲಾಡ್ ಮತ್ತು ಹುಬ್ಬಳ್ಳಿ-ಧಾರವಾಡ ಜಿಲ್ಲಾಧಿಕಾರಿಗಳಿಗೆ ಅಭಿನಂದಿಸಿದ ಸಿಎಂ

Next Post

CM Siddaramaiah: ಯುಟ್ಯೂಬ್ ಚಾನಲ್ ಗಳ ಆರಂಭಕ್ಕೆ ಪರವಾನಗಿ ನಿಗಧಿ ಮಾಡುವ ಬಗ್ಗೆ ಪರಿಶೀಲನೆ..!!

Related Posts

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ
ಇತರೆ / Others

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

by ಪ್ರತಿಧ್ವನಿ
January 14, 2026
0

ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆ ರೌಡಿ ಶೀಟರ್ ಮೊಹಮ್ಮದ್ ಶಬ್ಬೀರ್ ಎಂಬಾತನನ್ನ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಂಡೆಪಾಳ್ಯ ಠಾಣಾ ವ್ಯಾಪ್ತಿಯ ಮಂಗಮ್ಮನಪಾಳ್ಯದಲ್ಲಿ ನಡೆದಿದೆ. 38...

Read moreDetails
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
Next Post

CM Siddaramaiah: ಯುಟ್ಯೂಬ್ ಚಾನಲ್ ಗಳ ಆರಂಭಕ್ಕೆ ಪರವಾನಗಿ ನಿಗಧಿ ಮಾಡುವ ಬಗ್ಗೆ ಪರಿಶೀಲನೆ..!!

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada