• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Madhu Bangarappa: ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವಿರೋಧಿಸಿದ ಬಿಜೆಪಿಗೆ ಶಿಕ್ಷಕರೇ ಉತ್ತರ..!!

ಪ್ರತಿಧ್ವನಿ by ಪ್ರತಿಧ್ವನಿ
October 3, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ನಿಗದಿತ ಅವಧಿಗಿಂತ ಮುಂಚಿತವಾಗಿ ಸಮೀಕ್ಷೆ ಪೂರ್ಣಗೊಳಿಸಿದ 25 ಜನ ಶಿಕ್ಷಕರಿಗೆ ಜಿಲ್ಲಾ ಉಸ್ತುವಾರಿ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅವರು ಶಿವಮೊಗ್ಗದಲ್ಲಿ ಅಭಿನಂದಿಸಿ ಸನ್ಮಾನಿಸಿದರು.

ADVERTISEMENT

ಶಿವಮೊಗ್ಗ: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಯಶಸ್ವಿಯಾಗಿ ಮುಂದುವರೆಯುತ್ತಿದ್ದು, ಸಮೀಕ್ಷೆಯನ್ನು ನಿಗದಿತ ಅವಧಿಗಿಂತ ಮುಂಚಿತವಾಗಿ ಪೂರ್ಣಗೊಳಿಸಿದ 25 ಶಿಕ್ಷಕರಿಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ, ಶಿವಮೊಗ್ಗದಲ್ಲಿ ಇಂದು ಅಭಿನಂದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಸಮೀಕ್ಷೆಯನ್ನು ತ್ವರಿತವಾಗಿ ಪೂರ್ಣಗೊಳಿಸಿದ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, “ಸಂವಿಧಾನದ ಪೀಠಿಕೆಯನ್ನು ಓದಿ ಪ್ರಮಾಣ ಮಾಡಿದಂತೆ, ನಮ್ಮ ಶಿಕ್ಷಕರು ಈ ಕೆಲಸವನ್ನು ಅತ್ಯುತ್ತಮವಾಗಿ ಮಾಡಿದ್ದಾರೆ. ಇದು ಕೇವಲ ಸಮೀಕ್ಷೆ ಅಲ್ಲ, ಸಂವಿಧಾನವನ್ನು ಎತ್ತಿ ಹಿಡಿಯುವ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಕೆಲಸವಾಗಿದೆ” ಎಂದರು.

ಜಿಲ್ಲೆಯಲ್ಲಿ ಸಮೀಕ್ಷೆಯ ಪ್ರಗತಿಯನ್ನು ಮೆಚ್ಚಿದ ಅವರು, ರಾಜ್ಯದ ಸರಾಸರಿ 54% ರಷ್ಟಿದ್ದರೆ, ಶಿವಮೊಗ್ಗ ಜಿಲ್ಲೆಯಲ್ಲಿ 63.46% ರಷ್ಟು ಗಣತಿ ಪೂರ್ಣಗೊಂಡಿದೆ. ಅದರಲ್ಲೂ ಶಿಕಾರಿಪುರದಲ್ಲಿ ಶೇ. 70 ಮತ್ತು ಸೊರಬದಲ್ಲಿ ಶೇ. 77 ರಷ್ಟು ಮತ್ತು ಶಿವಮೊಗ್ಗ ನಗರ 56%, ತೀರ್ಥಹಳ್ಳಿ 57% ಯಶಸ್ವಿಯಾಗಿದೆ ಎಂದು ಅಂಕಿಅಂಶಗಳನ್ನು ನೀಡಿದರು. ಆರಂಭದಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳಿದ್ದರೂ, ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಅವುಗಳನ್ನು ಸರಿಪಡಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರಾದ ಪ್ರಹ್ಲಾದ್ ಜೋಶಿ, ಆರ್. ಅಶೋಕ ಮತ್ತು ಬಿ.ವೈ. ವಿಜಯೇಂದ್ರ ಅವರನ್ನು ಸಚಿವರು ತೀವ್ರವಾಗಿ ಟೀಕಿಸಿದರು. “ಸಮೀಕ್ಷೆಯನ್ನು ವಿರೋಧಿಸುವ ಬಿಜೆಪಿಯವರು ದೇಶದ್ರೋಹಿಗಳು. ಸಮಾನತೆಯನ್ನು ತರುವ ಈ ಪ್ರಯತ್ನಕ್ಕೆ ಅಡ್ಡಿಪಡಿಸುತ್ತಿರುವ ನಿಮ್ಮ (ಬಿಜೆಪಿ) ಉದ್ದೇಶವೇನು? ಬಡವರು, ತಳವರ್ಗದವರು ಏಕೆ ಮೇಲಕ್ಕೆ ಬರಬಾರದು?” ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಜಾತಿಗಣತಿ ವರದಿಯನ್ನು ಅನುಷ್ಠಾನಕ್ಕೆ ತರುವುದಾಗಿ ಭರವಸೆ ನೀಡಲಾಗಿದೆ. ಆದರೆ, ಬಿಜೆಪಿಗೆ ಪ್ರಣಾಳಿಕೆಗಿಂತ ಅದಾನಿ ಮತ್ತು ಅಂಬಾನಿ ಮಾತ್ರ ಕಾಣಿಸುತ್ತಾರೆ ಎಂದು ಹೇಳಿದರು. ವಿಜಯೇಂದ್ರರವರನ್ನು ಉಲ್ಲೇಖಿಸಿ, “ಶಿಕಾರಿಪುರದಲ್ಲೇ ಶೇ. 70ರಷ್ಟು ಸಮೀಕ್ಷೆ ಆಗಿದೆ. ಜನರೇ ನಿಮಗೆ ಏನು ಮಾಡಬೇಡಿ ಎಂದು ಹೇಳಿದರಲ್ಲ, ಅದನ್ನು ಮಾಡಿ ತೋರಿಸಿದ್ದಾರೆ. ನಿಮಗೆ ನಾಚಿಕೆಯಾಗಬೇಕು” ಎಂದರು.

ಮಾಜಿ ಉಪಮುಖ್ಯಮಂತ್ರಿಗಳಾಗಿದ್ದ ಆರ್. ಅಶೋಕ್ ಮತ್ತು ಅಶ್ವತ್ಥ ನಾರಾಯಣ ಅವರು ಸಮೀಕ್ಷೆಯನ್ನು ರಾಜಕೀಯಗೊಳಿಸುತ್ತಿರುವುದಕ್ಕೆ ಖಂಡನೆ ವ್ಯಕ್ತಪಡಿಸಿ, “ಈ ದೇಶದ ಸಂವಿಧಾನ, ಕಾನೂನು ಮತ್ತು ಸಮಾನತೆಯ ಆಧಾರದ ಮೇಲೆ ನಾವು ಆಡಳಿತ ನಡೆಸುತ್ತಿದ್ದೇವೆ. ಇದು ಸಿದ್ದರಾಮಯ್ಯನವರ ಸಮೀಕ್ಷೆ ಅಲ್ಲ, ಇದು ಸಮಾನತೆಯ ಸಮೀಕ್ಷೆ” ಎಂದು ಪ್ರತಿಪಾದಿಸಿದರು. ದಸರಾ ಉತ್ಸವಗಳಲ್ಲಿ ಭಾಗವಹಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು. ಎಲ್ಲ ಕಡೆಯೂ ಶಾಂತಿಯುತವಾಗಿ ಮತ್ತು ಅದ್ದೂರಿಯಾಗಿ ಹಬ್ಬ ಆಚರಿಸಲಾಗಿದೆ ಎಂದು ತಿಳಿಸಿದರು.

ಶಿವಮೊಗ್ಗದ ದಸರಾದಲ್ಲಿ ನಟ ಶಿವರಾಜಕುಮಾರ್ ಅವರು ಭಾಗವಹಿಸಿದ್ದನ್ನು ವಿಶೇಷವಾಗಿ ಸ್ಮರಿಸಿದ ಸಚಿವರು, “ಕೀಮೋಥೆರಪಿ ಚಿಕಿತ್ಸೆ ಮುಗಿಸಿದ ಕೆಲವೇ ದಿನಗಳಲ್ಲಿ ಶಿವಣ್ಣನವರು ನಾಡಹಬ್ಬದಲ್ಲಿ ಪಾಲ್ಗೊಂಡಿರುವುದು ಅವರ ಬದ್ಧತೆಯನ್ನು ತೋರಿಸುತ್ತದೆ” ಎಂದು ಪ್ರಶಂಸಿಸಿದರು. ಅಲ್ಲದೆ, ದಸರಾ ಯಶಸ್ಸಿಗೆ ಶ್ರಮಿಸಿದ ಕಲಾವಿದರು, ಅಧಿಕಾರಿಗಳು ಮತ್ತು ಶಿವಮೊಗ್ಗ ಜಿಲ್ಲೆಯ ಜನತೆಗೆ ವಿಶೇಷ ಧನ್ಯವಾದಗಳನ್ನು ಸಲ್ಲಿಸಿದರು.

ಸಮೀಕ್ಷೆಯು ರಾಜ್ಯದ ಜನರಿಗೆ ನ್ಯಾಯ ಮತ್ತು ಸಮಾನತೆಯನ್ನು ಒದಗಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದ್ದು, ಯಾವುದೇ ಕಾರಣಕ್ಕೂ ಈ ಕೆಲಸವನ್ನು ನಿಲ್ಲಿಸುವುದಿಲ್ಲ ಎಂದು ಸಚಿವರು ಪುನರುಚ್ಚರಿಸಿದರು.

Tags: BJPCongress PartyMadhu Bangarappamadhu bangarappa dancemadhu bangarappa housemadhu bangarappa interviewmadhu bangarappa kannadamadhu bangarappa livemadhu bangarappa ministermadhu bangarappa newsmadhu bangarappa on nepmadhu bangarappa sistersmadhu bangarappa slams bjpmadhu bangarappa songmadhu bangarappa speechmadhu bangarappa statementmadhu bangarappa todaymadhu bangarappa today newsmadhu bangarappa videomadhu bangarappa wifeminister madhu bangarappa
Previous Post

ದಸರಾ ಪಾಸ್‌ ಹೆಸರಿನಲ್ಲಿ ಸ್ವಾರ್ಥ ಅಧಿಕಾರಿಗಳಿಂದ ಮಹಾ ವಂಚನೆ !

Next Post

ಮಗನ ಬಗ್ಗೆ ಸತ್ಯ ಬಿಚ್ಚಿಟ್ಟ ತಂದೆ ದೇವೇಗೌಡ್ರು

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post

ಮಗನ ಬಗ್ಗೆ ಸತ್ಯ ಬಿಚ್ಚಿಟ್ಟ ತಂದೆ ದೇವೇಗೌಡ್ರು

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada