• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚುನಾವಣೆ ಸಮಯದಲ್ಲೇ ಭಯೋತ್ಪಾದಕರ ದಾಳಿ ಯಾಕೆ?: ನೆಟ್ಟಿಗರ ಪ್ರಶ್ನೆಗೆ ಉತ್ತರಿಸೋರ್ಯಾರು..?

ಪ್ರತಿಧ್ವನಿ by ಪ್ರತಿಧ್ವನಿ
November 12, 2025
in Top Story, ಕರ್ನಾಟಕ, ದೇಶ, ವಿಶೇಷ
0
ಚುನಾವಣೆ ಸಮಯದಲ್ಲೇ ಭಯೋತ್ಪಾದಕರ ದಾಳಿ ಯಾಕೆ?: ನೆಟ್ಟಿಗರ ಪ್ರಶ್ನೆಗೆ ಉತ್ತರಿಸೋರ್ಯಾರು..?
Share on WhatsAppShare on FacebookShare on Telegram

ನವದೆಹಲಿ: ದೇಶದಲ್ಲಿ ಏನೇ ನಡೆದರೂ ಸಾಮಾಜಿಕ ಜಾಲತಾಣದಲ್ಲಿ ಒಂದಿಷ್ಟು ಚರ್ಚೆಗಳು ಇದ್ದೇ ಇರುತ್ತದೆ. ಘಟನೆ ಸಂಭವಿಸಿದ ರೀತಿ, ಕೇಂದ್ರ ಸರ್ಕಾರ ಕೈಗೊಂಡ ಕ್ರಮ ಹೀಗೆ ಒಂದಿಲ್ಲ ಒಂದು ಪರ-ವಿರೋಧ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತದೆ. ಸದ್ಯ ದೇಶವನ್ನೇ ಬೆಚ್ಚಿ ಬೀಳಿಸಿರುವ ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿರುವ ಸ್ಫೋಟದ ವಿಚಾರ ಟ್ರೆಂಡಿಂಗ್‌ನಲ್ಲಿದ್ದು, ಈ ಚರ್ಚೆಯಲ್ಲಿ ಉದ್ಭವವಾದ ಪ್ರಶ್ನೆಯೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ADVERTISEMENT

ದೇಶದಲ್ಲಿ ಭಯೋತ್ಪಾದಕರ ದಾಳಿ ಚುನಾವಣೆ ಸಂದರ್ಭದಲ್ಲಿಯೇ ಯಾಕೆ ನಡೆಯುತ್ತದೆ ಎನ್ನುವ ನೆಟ್ಟಿಗರೊಬ್ಬರು ಎತ್ತಿರುವ ಪ್ರಶ್ನೆ ಈಗ ಎಲ್ಲೆಡೆ ಹರಿದಾಡುತ್ತಿದೆ. ಮಾಧ್ಯಮಗಳು ಕೂಡ ರಾಜಕೀಯ ನಾಯಕರನ್ನು ಇದೇ ಪ್ರಶ್ನೆಗಳನ್ನು ಕೇಳುತ್ತಿದ್ದು, ಬಹುತೇಕ ರಾಜ್ಯದ ರಾಜಕೀಯ ನಾಯಕರು ಕೇಂದ್ರದತ್ತ ಬೊಟ್ಟು ಮಾಡುತ್ತಿದ್ದಾರೆ.

DelhiRedFortBlast: ರೋಚಕ ತಿರುವು ಪಡೆದ ದೆಹಲಿ ಕಾರು ಸ್ಫೋಟ ಪ್ರಕರಣ..! #DelhiCarBlast #DelhiCarExplosion

ದೇಶದಲ್ಲಿ ಸಂದರ್ಭದಲ್ಲಿಯೇ ಭಯೋತ್ಪಾದಕರ ದಾಳಿ ಎನ್ನುವುದನ್ನು ವಿಶ್ಲೇಷಿಸುವುದಾರೆ ಕೆಲವು ಘಟನೆಗಳನ್ನು ಇಲ್ಲಿ ಉಲ್ಲೇಖಿಸಬಹುದು.

* 2019ರಲ್ಲಿ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನೆಯ ಭದ್ರತಾ ಪಡೆಗಳ ಮೇಲೆ ಉಗ್ರಗಾಮಿಗಳು ನಡೆಸಿದ್ದ ಆತ್ಮಾ**ತಿ ಬಾಂಬ್ ದಾಳಿ ದೇಶವನ್ನೇ ನಡುಗಿಸಿತ್ತು. ಫೆಬ್ರವರಿ 14 ರಂದು ನಡೆದ ಉಗ್ರರ ಈ ದಾಳಿಯಲ್ಲಿ 40 ಮಂದಿ ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು. ಉಗ್ರರ ಈ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಪಡೆಯು ಪಾಕಿಸ್ತಾನದ ಖೈಬರ್ ಪಖ್ತುನ್‌ಖ್ವಾದಲ್ಲಿರುವ ಬಾಲಾಕೋಟ್‌ನಲ್ಲಿರುವ ಜೆಇಎಂ ಶಿಬಿರದ ಮೇಲೆ ಬಾಂಬ್ ದಾಳಿ ನಡೆಸಿ ನಾಶಗೊಳಿಸಿತು. ಈ ಘಟನೆ ನಡೆದ ಮೂರೇ ತಿಂಗಳಲ್ಲಿ ದೇಶದ ಮಹತ್ವದ ಲೋಕಸಭಾ ಚುನಾವಣೆ ನಡೆಯಿತು.

* 2025 ಏಪ್ರಿಲ್ 22ರಂದು ಜಮ್ಮು-ಕಾಶ್ಮೀರದ ಪ್ರವಾಸಿ ತಾಣವಾದ ಪಹಲ್ಗಾಮ್‌ಗೆ ನುಗ್ಗಿದ ಐದು ಸಶಸ್ತ್ರ ಭಯೋತ್ಪಾದಕರು ಪ್ರವಾಸಿಗರ ಮೇಲೆ ನಡೆಸಿದ ದಾಳಿ ನಡೆಸಿದರು. ಈ ಘಟನೆಯಲ್ಲಿ 26 ಭಾರತೀಯ ಪ್ರವಾಸಿಗರು ಸಾವನ್ನಪ್ಪಿದ್ದರು. ಈ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್‌ ಸಿಂಧೂರ್‌ ನಡೆಸಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ನಾಶಗೊಳಿಸಿದರು. ದೇಶದ ರಾಜಕೀಯ ಪ್ರತಿಷ್ಠೆಯ ಕಣವಾದ ಬಿಹಾರ ಚುನಾವಣೆಗೆ ಆರು ತಿಂಗಳು ಬಾಕಿ ಇರುವಾಗ ಈ ಘಟನೆ ನಡೆಯಿತು.

*ಇನ್ನು ಸೋಮವಾರ ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಹತ್ತಕ್ಕೂ ಹೆಚ್ಚು ಅಮಾಯಕ ಜನರು ಸಾವನ್ನಪ್ಪಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದ ಹಿಂದಿನ ದಿನವೇ ಈ ಸ್ಫೋಟ ನಡೆದಿರುವುದು ಮತ್ತಷ್ಟು ಅಚ್ಚರಿಗೆ ಕಾರಣವಾಗಿದೆ. ಇದು ಕೂಡ ಆತ್ಮಾ**ತಿ ಬಾಂಬ್ ದಾಳಿ ಎನ್ನಲಾಗುತ್ತಿದ್ದು, ದೇಶದಲ್ಲಿ ಭಯೋತ್ಪಾದಕರ ದಾಳಿ ಚುನಾವಣೆ ಸಂದರ್ಭದಲ್ಲಿಯೇ ಯಾಕೆ ನಡೆಯುತ್ತದೆ ಎನ್ನುವ ಪ್ರಶ್ನೆ ಇನ್ನಷ್ಟು ಬಲಿಷ್ಠವಾಗುವಂತೆ ಮಾಡಿದೆ. ಜೊತೆಗೆ ಚುನಾವಣೆ ಸಮಯದಲ್ಲೇ ಭಯೋತ್ಪಾದಕರ ದಾಳಿ ಯಾಕೆ ಎನ್ನುವ ನೆಟ್ಟಿಗರ ಪ್ರಶ್ನೆಗೆ ಉತ್ತರಿಸುವುದು ಯಾರು ಎನ್ನುವುದು ಕೂಡ ಸದ್ಯದ ಪ್ರಶ್ನೆಯಾಗಿದೆ.

Tags: Bihar Election 2025BJPcongressdelhi car blastElectionsIndiajammu kashmir terrorist attackPoliticsTerrorist Attack
Previous Post

ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸಿ: ಅಧಿಕಾರಿಗಳಿಗೆ ಸಚಿವ ಎನ್‌.ಎಸ್‌ ಭೋಸರಾಜು ಸೂಚನೆ

Next Post

ಚುನಾವಣೋತ್ತರ ಸಮೀಕ್ಷೆಗಳ ಮೇಲೆ ನನಗೆ ನಂಬಿಕೆ ಇಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Related Posts

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
0

"ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. (Deputy Chief...

Read moreDetails

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
Next Post
ಚುನಾವಣೋತ್ತರ ಸಮೀಕ್ಷೆಗಳ ಮೇಲೆ ನನಗೆ ನಂಬಿಕೆ ಇಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

ಚುನಾವಣೋತ್ತರ ಸಮೀಕ್ಷೆಗಳ ಮೇಲೆ ನನಗೆ ನಂಬಿಕೆ ಇಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada