• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ಹೈಕಮಾಂಡ್ ತೀರ್ಮಾನ ಕಾದು ನೋಡೋಣ

ಪಕ್ಷ ಹೇಳಿದಷ್ಟು ದಿನ ಶಿವಕುಮಾರ್ ಅವರು ಅಧ್ಯಕ್ಷ ಸ್ಥಾನದಲ್ಲಿ ಇರುತ್ತಾರೆ

ಪ್ರತಿಧ್ವನಿ by ಪ್ರತಿಧ್ವನಿ
November 16, 2025
in Top Story, ಕರ್ನಾಟಕ, ರಾಜಕೀಯ
0
ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ಹೈಕಮಾಂಡ್ ತೀರ್ಮಾನ ಕಾದು ನೋಡೋಣ
Share on WhatsAppShare on FacebookShare on Telegram
MLA PM Narendra Swamy: ಸುವರ್ಣ ಮಹೋತ್ಸವ ಬೆಂಗಳೂರಿಗೆ ಸೀಮಿತವಾಗಬಾರದು, ಹಳ್ಳಿಹಳ್ಳಿ ತಲುಪಬೇಕು..! #pratidhvani

 

ADVERTISEMENT

ಬೆಂಗಳೂರು, ನ. 16:

ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಹೈಕಮಾಂಡ್. ಹೈಕಮಾಂಡ್ ಯಾವ ತೀರ್ಮಾನ ಮಾಡಲಿದೆ ಎಂದು ಕಾದು ನೋಡೋಣ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಪ್ಪಿಗೆ ನೀಡಿರುವ ಸುದ್ದಿ ಬಗ್ಗೆ ಕೇಳಿದಾಗ, “ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ನೋಡಿದ್ದೇನೆ. ಇದು ಸಿಎಂ ಹಾಗೂ ಹೈಕಮಾಂಡ್ ನಾಯಕರಿಗೆ ಬಿಟ್ಟ ವಿಚಾರ. ಕಾದು ನೋಡೋಣ” ಎಂದರು.

DK Suresh says CM hopes 'still alive' for brother DK Shivakumar amid  ongoing buzz | Bengaluru

ಸಂಪುಟ ಪುನಾರಚನೆ ಆದರೆ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂಬ ಚರ್ಚೆ ಇದೆಯಲ್ಲ ಎಂದು ಕೇಳಿದಾಗ, “ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಏನೇ ಇದ್ದರೂ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆಯೇ ಹೊರತು ಬೇರೆಯವರಲ್ಲ” ಎಂದು ಪ್ರತಿಕ್ರಿಯಿಸಿದರು.

ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ದೆಹಲಿಗೆ ಹೋಗಿದ್ದು, ನೀವೂ ತೆರಳುತ್ತಿರುವ ಕಾರಣ ಎಂದು ಕೇಳಿದಾಗ, ನಾನು ಈಗಾಗಲೇ ದೆಹಲಿಗೆ ತೆರಳಿರುವುದಾಗಿ ಮಾಧ್ಯಮಗಳು ಪ್ರಕಟಿಸಿವೆ. ನಾನು ದೆಹಲಿಗೆ ಹೋಗುವುದು ಹೊಸತಲ್ಲ. ಶಿವಕುಮಾರ್ ಅವರು ಅವರ ಕೆಲಸದ ಮೇಲೆ ಹೋಗಿದ್ದಾರೆ, ನನ್ನ ಪಾಡಿಗೆ ನಾನು ಹೋಗುತ್ತಿರುವೆ” ಎಂದು ತಿಳಿಸಿದರು.

DK Suresh on CM Change : ಸಂಪುಟ ಪುನಾರಚನೆ, ಸಿಎಂ ಬದಲಾವಣೆ ಬಗ್ಗೆ ಡಿಕೆ ಸುರೇಶ್ ಏನಂದ್ರು? #pratidhvani

ದೆಹಲಿಗೆ ಹೋದಾಗ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ದೆಹಲಿಗೆ ಹೋದಾಗ ಅವಕಾಶ ಸಿಕ್ಕರೆ ಪಕ್ಷದ ನಾಯಕರನ್ನು ಭೇಟಿ ಮಾಡುತ್ತೇನೆ” ಎಂದರು.

ಕಾಯುವ ಸಮಯ ಮುಗಿದಿದೆ ಎಂಬ ಚರ್ಚೆ ಬಗ್ಗೆ ಕೇಳಿದಾಗ, “ಆ ವಿಚಾರ ನನಗೆ ಗೊತ್ತಿಲ್ಲ. ಈ ಬಗ್ಗೆ ನೀವು ಹೇಳುತ್ತಿದ್ದು, ಏನಾಗುತ್ತದೆಯೋ ಕಾದು ನೋಡೋಣ” ಎಂದು ತಿಳಿಸಿದರು.

ನಿಮ್ಮ ಸಹೋದರ ಸಿಎಂ ಆಗಬೇಕು ಎಂಬ ಆಸೆ ನಿಮ್ಮದು ಎಂದು ಕೇಳಿದಾಗ, “ಈ ವಿಚಾರ ಸಾಕಷ್ಟು ಬಾರಿ ಹೇಳಿದ್ದೇನೆ. ಎಲ್ಲದಕ್ಕೂ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ಸಿಎಂ, ಸಚಿವರು, ಶಾಸಕರು, ಶಿವಕುಮಾರ್ ಎಲ್ಲರಿಗೂ ಹೈಕಮಾಂಡ್ ತೀರ್ಮಾನವೇ ಮುಖ್ಯ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆ ಕಾದು ನೋಡಬೇಕು” ಎಂದು ತಿಳಿಸಿದರು.

Not Easy Getting A Chair": karnataka DK Shivakumar Amid Power struggle With  Siddaramaiah

ಪವರ್ ಶೇರಿಂಗ್ ಹಾಗೂ ಸಂಪುಟ ಪುನಾರಚನೆ ಚರ್ಚೆ ಬಗ್ಗೆ ಕೇಳಿದಾಗ, “ಎಲ್ಲವನ್ನೂ ಕಾದು ನೋಡೋಣ” ಎಂದು ತಿಳಿಸಿದರು.

ಯಾರ ಕ್ಲೇಮ್ ಏನಿದೆಯೋ ಗೊತ್ತಿಲ್ಲ

ಶಿವಕುಮಾರ್ ಅವರ ಕ್ಲೇಮ್ ಮೇಲೆ ಎಲ್ಲವೂ ನಿಂತಿದೆಯಲ್ಲವೇ ಎಂದು ಕೇಳಿದಾಗ, “ಕಾದು ನೋಡೋಣ, ಇಲ್ಲಿ ಶಿವಕುಮಾರ್ ಒಬ್ಬರೇ ಕ್ಲೇಮ್ ಮಾಡುತ್ತಿಲ್ಲವಲ್ಲ. ಬಹಳಷ್ಟು ಜನರ ಕ್ಲೇಮ್ ಇದೆ. ಯಾರ ಕ್ಲೇಮ್ ಏನಿದೆಯೋ ಗೊತ್ತಿಲ್ಲವಲ್ಲ” ಎಂದರು.

ಸಂಪುಟ ಪುನಾರಚನೆಯಾದರೆ ಸಿಎಂ ಬದಲಾವಣೆ ಇಲ್ಲ ಎಂಬ ಪರಮೇಶ್ವರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಹಿರಿಯ ಸಚಿವರು, ಅವರು ಹೇಳುತ್ತಾರೆ. ಸಚಿವ ಸಂಪುಟ ಪುನಾರಚನೆ ಸಿಎಂ ಪರಮಾಧಿಕಾರ. ಹೈಕಮಾಂಡ್ ಅಪ್ಪಣೆಯೊಂದಿಗೆ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ವಿಚಾರದಲ್ಲಿ ಹೈಕಮಾಂಡ್ ಶಿವಕುಮಾರ್ ಅವರ ಬಳಿ ಚರ್ಚೆ ಮಾಡಿದರೆ, ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಅಗತ್ಯವಾದ ಸಲಹೆ ನೀಡುತ್ತಾರೆ. ಸಿಎಂ ಈಗಾಗಲೇ ಇದ್ದಾರೆ. ಸಿಎಂ ಇಲ್ಲದಿದ್ದಾಗ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಮಾಡಬಹುದು” ಎಂದು ತಿಳಿಸಿದರು.

Jagadish Shettar: ಕಾಂಗ್ರೆಸ್‌ ನಾಯಕರ ಆರೋಪಕ್ಕೆ ಜಗದೀಶ್‌ ಶೆಟ್ಟರ್‌ ಆಕ್ರೋಶ..! #biharresults #congress

ಪಕ್ಷ ಹೇಳಿದಷ್ಟು ದಿನ ಶಿವಕುಮಾರ್ ಅವರು ಅಧ್ಯಕ್ಷ ಸ್ಥಾನದಲ್ಲಿ ಇರುತ್ತಾರೆ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಪ್ರಸ್ತಾಪವನ್ನು ಹೈಕಮಾಂಡ್ ಮುಂದೆ ಇಟ್ಟಿರುವ ಬಗ್ಗೆ ಕೇಳಿದಾಗ, “ಹೈಕಮಾಂಡ್ ಯಾವ ತೀರ್ಮಾನ, ಸಲಹೆಯನ್ನು ಶಿವಕುಮಾರ್ ಅವರು ಕೇಳುತ್ತಾರೆ. ಶಿವಕುಮಾರ್ ಅವರು ಮಾತ್ರವಲ್ಲ, ಎಲ್ಲರೂ ಕೇಳುತ್ತಾರೆ. ಅದರಲ್ಲಿ ಯಾವುದೇ ಅನುಮಾನ ಬೇಡ. ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿಯಬೇಕು ಎಂಬ ಆಸೆ ಶಿವಕುಮಾರ್ ಅವರಿಗಿಲ್ಲ. ಪಕ್ಷ ಮುಂದುವರಿಯಲು ಹೇಳಿದೆ, ಎಷ್ಟು ದಿನ ಅವಕಾಶ ನೀಡುತ್ತಾರೋ ಅಷ್ಟು ದಿನ ಪಕ್ಷದ ಕೆಲಸ ಮಾಡಿಕೊಂಡು ಇರುತ್ತಾರೆ” ಎಂದು ಹೇಳಿದರು.

ಸೋಲು ಗೆಲುವು ಸಹಜ:

Bihar Seat-sharing Challenge | ಬಿಹಾರ ಚುನಾವಣೆಯಲ್ಲಿ ಸೀಟು ಹಂಚಿಕೆ ಎನ್‌ಡಿಎ,  ಮಹಾಘಟಬಂಧನ್‌ಗೆ ಕಲ್ಲುಗನ್ನಡಿ

ಬಿಹಾರ ಚುನಾವಣೆ ಬಗ್ಗೆ ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗೆಲುವು ಸೋಲು ಇದ್ದೇ ಇರುತ್ತದೆ. ಬಿಹಾರದಲ್ಲಿ ಚುನಾವಣೆಗೂ ಮುನ್ನ ಎನ್ ಡಿಎ ಸರ್ಕಾರ ಕರ್ನಾಟಕ ಗ್ಯಾರಂಟಿ ಯೋಜನೆ ಮಾದರಿಯಲ್ಲೇ ಅನುಷ್ಠಾನ ಮಾಡಿತು. ಹೀಗಾಗಿ ಮಹಿಳಾ ಮತದಾರರು ಎನ್ ಡಿಎ ಪರ ಒಲವು ತೋರಿದ್ದಾರೆ. 10 ಸಾವಿರ ರೂ. ಒಟ್ಟಿಗೆ ಮಹಿಳೆಯರ ಖಾತೆಗೆ ಹಾಕಿದ ಪರಿಣಾಮ ಹಾಗೂ ಚುನಾವಣೆ ಮುನ್ನ 47 ಲಕ್ಷ ಮತಗಳನ್ನು ಮತಪಟ್ಟಿಯಿಂದ ಕಿತ್ತು ಹಾಕಿದ್ದು ಪ್ರಮುಖ ಕಾರಣವಾಗಿದೆ. ಜನ ತೀರ್ಪು ನೀಡಿದ್ದು, ಅದನ್ನು ಸ್ವಾಗತಿಸುತ್ತೇವೆ. ನಮ್ಮ ಪಕ್ಷಕ್ಕೆ ಸೋಲು, ಗೆಲುವು ಹೊಸತಲ್ಲ. ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಾ ಪಕ್ಷ ಸಂಘಟನೆ ಮಾಡುತ್ತೇವೆ” ಎಂದು ತಿಳಿಸಿದರು.

 

Tags: cm siddaramaiah and dk shivakumarcm siddaramaiah vs dk shivakumarDCM DK Shivakumardeputy cm shivakumarDK Shivakumardk shivakumar backlashdk shivakumar breaks downdk shivakumar campdk shivakumar cm ambitiondk shivakumar emotionaldk shivakumar karnataka cmdk shivakumar latestdk shivakumar newsdk shivakumar next cmdk shivakumar reactiondk shivakumar speechdk shivakumar tensiondk shivakumar upsetdk shivakumar visitshivakumar deputy cmSiddaramaiah and DK Shivakumar
Previous Post

I Will Come Back ಅಂತ ಹೋದವಳು ಮತ್ತೆ ಬಂದಿಲ್ಲ‌: ಅರವಿಂದ್ ರೆಡ್ಡಿ ಪ್ರತ್ಯಾರೋಪ

Next Post

ನಾಳೆಯಿಂದ ಪಿಸಿಬಿ ಬೃಹತ್ ಸುವರ್ಣ ಮಹೋತ್ಸವ

Related Posts

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್
ಕರ್ನಾಟಕ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

by ಪ್ರತಿಧ್ವನಿ
November 18, 2025
0

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿ ಮತ್ತು ದತ್ತಾಂಶಗಳು ಸೋರಿಕೆಯಾಗದಂತೆ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಸೂಚಿಸಿರುವ ಹಿನ್ನೆಲೆ ಸುಳ್ಳು...

Read moreDetails
ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

November 18, 2025
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

November 18, 2025
ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

November 18, 2025
Next Post
ನಾಳೆಯಿಂದ ಪಿಸಿಬಿ ಬೃಹತ್ ಸುವರ್ಣ ಮಹೋತ್ಸವ

ನಾಳೆಯಿಂದ ಪಿಸಿಬಿ ಬೃಹತ್ ಸುವರ್ಣ ಮಹೋತ್ಸವ

Recent News

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

November 18, 2025
ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada