• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡೀಪ್ಟೆಕ್ ದಶಕಕ್ಕೆ ಮುನ್ನುಡಿ ಬರೆದ ಬೆಂಗಳೂರು ಟೆಕ್ ಮೇಳ, ಡೀಪ್ಟೆಕ್ ನವೋದ್ಯಮಗಳಿಗೆ ₹ 400 ಕೋಟಿ ನೆರವು: ಸಚಿವ ಪ್ರಿಯಾಂಕ್ ಖರ್ಗೆ

ವರ್ಣರಂಜಿತ ಸಮಾರೋಪ ಸಮಾರಂಭದಲ್ಲಿ ನವೋದ್ಯಮಗಳ ಚಿಂತನ – ಮಂಥನ, ಗಗನಯಾತ್ರಿ ಶುಭಾಂಶು ಶುಕ್ಲಾ , ಲೇಖಕ ಅಂಕುರ್ ವಾರಿಕೂ ಅವರಿಂದ ನವೋದ್ಯಮಗಳಿಗೆ ಹಿತವಚನ

ಪ್ರತಿಧ್ವನಿ by ಪ್ರತಿಧ್ವನಿ
November 20, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ADVERTISEMENT

ರಾಜ್ಯ ಸರ್ಕಾರದ ಜೊತೆ ಕೈಜೋಡಿಸಿರುವ ಭವಿಷ್ಯ ರೂಪಿಸುವವರು, ವೆಂಚರ್ ಕ್ಯಾಪಿಟಲ್ (ವಿಸಿ) ಹೂಡಿಕೆದಾರರಿಗೆ ಐಟಿ- ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅಭಿನಂದನೆ

ಬೆಂಗಳೂರು, ನವೆಂಬರ್ 20: ಇಲ್ಲಿ ಮೂರು ದಿನಗಳಿಂದ ನಡೆದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ ಕೊನೆಯ ದಿನ ನಡೆದ ಭವಿಷ್ಯ ರೂಪಿಸುವವರ ಸಮಾವೇಶದಲ್ಲಿ ರಾಜ್ಯ ಸರ್ಕಾರ ಮತ್ತು ನವೋದ್ಯಮಗಳಲ್ಲಿ ಹೂಡಿಕೆ ಮಾಡುವವರಿಂದ (ವಿಸಿ) ಡೀಪ್ಟೆಕ್ ನವೋದ್ಯಮಗಳಿಗೆ ನೆರವಾಗಲು ₹ 400 ಕೋಟಿ ವಿತರಿಸಲಾಗಿದೆ.

ಡೀಪ್ಟೆಕ್ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನವೋದ್ಯಮಗಳಿಗೆ ಇದೇ ಮೊದಲ ಬಾರಿಗೆ ಈ ಗಮನಾರ್ಹ ಮೊತ್ತದ ನೆರವು ನೀಡಲಾಗಿದೆ.
ʼಭವಿಷ್ಯದ ಹತ್ತು ವರ್ಷಗಳು ವೈಜ್ಞಾನಿಕ ನಾವೀನ್ಯತೆ ಆಧರಿಸಿದ ತಂತ್ರಜ್ಞಾನಗಳಾದ ಕೃತಕ ಜಾಣ್ಮೆ, ರೋಬೊಟಿಕ್ಸ್, ಕ್ವಾಂಟಂ ಕಂಪ್ಯೂಟಿಂಗ್ ಮತ್ತು ಜೈವಿಕ ತಂತ್ರಜ್ಞಾನಗಳ ದಶಕವಾಗಿರಲಿದ್ದು, ಬೆಂಗಳೂರಿನ ಟೆಕ್ ಸಮ್ಮೇಳನವು ಅದಕ್ಕೆ ಮುನ್ನುಡಿ ಬರೆದಿದೆʼ ಎಂದು ಐಟಿ, ಬಿಟಿ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಅವರು ಅಭಿಪ್ರಾಯಪಟ್ಟಿದ್ದಾರೆ.

ತುಮಕೂರು ರಸ್ತೆಯಲ್ಲಿನ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಮೂರು ದಿನಗಳಿಂದ ನಡೆದ ಬೆಂಗಳೂರು ಟೆಕ್ ಮೇಳದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ʼತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಹಾಗೂ ಮಾರುಕಟ್ಟೆಗಳನ್ನು ಸೃಷ್ಟಿಸುವಲ್ಲಿ ಡೀಪ್ಟೆಕ್ ಕ್ಷೇತ್ರಗಳಲ್ಲಿನ ಆವಿಷ್ಕಾರಗಳನ್ನು, ಮಾರುಕಟ್ಟೆ ಅವಕಾಶಗಳ ಮಹತ್ವ ಮನದಟ್ಟು ಮಾಡಿಕೊಡುವಲ್ಲಿ ತಂತ್ರಜ್ಞಾನ ಶೃಂಗಸಭೆಯು ಗಮನಾರ್ಹ ಯಶಸ್ಸು ಸಾಧಿಸಿದೆ. ಡೀಪ್ಟೆಕ್ನ ಪ್ರಯೋಜನವು ಬರೀ ಕರ್ನಾಟಕಕ್ಕೆ, ಭಾರತಕ್ಕೆ ಸೀಮಿತವಾಗಿರದೆ ಇಡೀ ವಿಶ್ವಕ್ಕೆ ದೊರೆಯಲಿದೆ. ಭವಿಷ್ಯ ರೂಪಿಸುವವರು, ವೆಂಚರ್ ಕ್ಯಾಪಿಟಲಿಸ್ಟ್ ಹೂಡಿಕೆದಾರರು ಸರ್ಕಾರದ ಜೊತೆ ಕೈಜೋಡಿಸಲು ಮುಂದೆ ಬಂದಿರುವುದು ಸ್ವಾಗತಾರ್ಹವಾಗಿದೆ. ನವೋದ್ಯಮಗಳಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ಕರ್ನಾಟಕವು ಜಾಗತಿಕ ನವೋದ್ಯಮಗಳಲ್ಲಿ ಮುಂಚೂಣಿ ಐದನೆ ಸ್ಥಾನ ಗಳಿಸುವ ಮಹತ್ವಾಕಾಂಕ್ಷೆ ಸಾಕಾರಗೊಳ್ಳಲು ಭವಿಷ್ಯ ರೂಪಿಸುವವರ ಕೊಡುಗೆ ತುಂಬ ಮಹತ್ವದ್ದಾಗಿದೆʼ ಎಂದರು.

ಭವ್ಯ, ವಿಚಾರಪ್ರಚೋದಕ ಸಮಾರೋಪ:
ಶೃಂಗಸಭೆಯು ಭವಿಷ್ಯ ರೂಪಿಸುವವರ ಸಮಾವೇಶದೊಂದಿಗೆ (ಎಫ್ಎಂಸಿ) ಮುಕ್ತಾಯಗೊಂಡಿತು. ಸುಹಾನಿ ಶಾ ಅವರಿಂದ ಸಿಂಫೊನಿ ಆಫ್ ಸೌಂಡ್ ಆ್ಯಂಡ್ ಮೈಂಡ್ ಪ್ರದರ್ಶನ, ಗಗನಯಾತ್ರಿ ಶುಭಾಂಶು ಶುಕ್ಲಾ , ಲೇಖಕ ಅಂಕುರ್ ವಾರಿಕೂ ಅವರ ಸ್ಫೂರ್ತಿದಾಯಕ ಭಾಷಣಗಳು, ಕ್ವಿಕ್ ಕಾಮರ್ಸ್ ಜೆಪ್ಟೊ ಸಹ ಸ್ಥಾಪಕ ಕೈವಲ್ಯ ವೋಹ್ರಾ, ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಭಾರತದ ಮಹಿಳಾ ಕ್ರಿಕೆಟ್ ತಾರೆ ರಿಚಾ ಘೋಷ್ ಅವರ ಜೊತೆಗಿನ ಸಂವಾದ ಕಾರ್ಯಕ್ರಮವು ನವೋದ್ಯಮಗಳ ಸ್ಥಾಪಕರಿಗೆ, ಕ್ರೀಡಾಪಟುಗಳಾಗಿ ಬೆಳೆಯುವ ಕನಸು ಕಾಣುವವರಿಗೆ ಸ್ಫೂರ್ತಿದಾಯಕವಾಗಿತ್ತು.

ಗಗನಯಾನಿ ಶುಭಾಂಶು ಶುಕ್ಲಾ ಅವರು ಮಾತನಾಡಿ, ತಮ್ಮ ಗಗನಯಾನದ ವಿಶಿಷ್ಟ ಅನುಭವಗಳನ್ನು ಸಭಿಕರ ಜೊತೆ ಹಂಚಿಕೊಂಡರು. ಗಗನಯಾನ ಹಾಗೂ ಶೂನ್ಯ ಗುರುತ್ವಾಕರ್ಷಣೆ ಸಂದರ್ಭದಲ್ಲಿ ದೇಹದಲ್ಲಿ ಆಗುವ ಬದಲಾವಣೆ, ಎದುರಾಗುವ ದೈಹಿಕ ಹಾಗೂ ಮಾನಸಿಕ ಸವಾಲುಗಳನ್ನು ವಿವರಿಸಿದರು.

ʼಮುಂಬರುವ ವರ್ಷಗಳಲ್ಲಿ ಭಾರತವು ಬಾಹ್ಯಾಂತರಿಕ್ಷ ಕಾರ್ಯಕ್ರಮಗಳಲ್ಲಿ ಗಮನಾರ್ಹವಾಗಿ ತೊಡಗಿಕೊಳ್ಳಲಿದೆ. ಈ ಕ್ಷೇತ್ರದಲ್ಲಿನ ಭಾರತದ ಭವಿಷ್ಯ ಪ್ರಖರವಾಗಿದೆ. ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿ ಗಗನಯಾನ ಕೈಗೊಳ್ಳಿದ್ದಾರೆ. ಈ ಕ್ಷೇತ್ರದಲ್ಲಿನ ನವೋದ್ಯಮಗಳಿಗೆ ಉಜ್ವಲ ಭವಿಷ್ಯ ಇದೆ. ದೇಶದ 300 ನವೋದ್ಯಮಗಳು ಈಗಾಗಲೇ ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮುಂಬರುವ ವರ್ಷಗಳಲ್ಲಿ ಇಂತಹ ನವೋದ್ಯಮಗಳ ಸಂಖ್ಯೆ ಗಮನಾರ್ಹವಾಗಿ ಹೆಚ್ಚಲಿದೆʼ ಎಂದರು.

ಅಮೆರಿಕದ ನಾಸಾ -ಏಮ್ಸ್ ಎನ್ಎಸ್ಎಸ್ ನಡೆಸಿದ ಸ್ಪೇಸ್ ಸೆಟಲ್ಮೆಂಟ್ ಡಿಸೈನ್ ಸ್ಪರ್ಧೆಯಲ್ಲಿ ಮೊದಲ ಸ್ಥಾನ ಪಡೆದಿರುವ ಕಲಬುರಗಿಯ ಎಸ್ಆರ್ಎನ್ ಮೆಹತಾ ಸಿಬಿಎಸ್ಇ ಶಾಲೆಯ ವಿದ್ಯಾರ್ಥಿಗಳು ಶುಭಾಂಶು ಶುಕ್ಲಾ ಅವರ ಜೊತೆ ಸಮೂಹ ಚಿತ್ರ ತೆಗೆದುಕೊಂಡರು.

ಲೇಖಕ ಅಂಕೂರ್ ವಾರಿಕು ಅವರು ಮಾತನಾಡಿ, ʼನವೋದ್ಯಮಗಳಿಗೆ ವಿಶ್ವಾಸಾರ್ಹತೆಯೇ ಮುಖ್ಯ . ಉದ್ಯೋಗಿಗಳು, ಗ್ರಾಹಕರು, ಸರ್ಕಾರದ ಜೊತೆ ವಿಶ್ವಾಸಾರ್ಹತೆಯಿಂದ ವರ್ತಿಸುವುದನ್ನು ರೂಢಿಸಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ. ಟಾಟಾ ಬ್ರ್ಯಾಂಡ್ನ ಯಶಸ್ಸಿಗೆ ಅದರ ವಿಶ್ವಾಸಾರ್ಹತೆ ಮಂತ್ರವೇ ಮುಖ್ಯ ಕಾರಣ. ಉದ್ಯಮ ವಹಿವಾಟಿನಲ್ಲಿ ವಿಶ್ವಾಸಾರ್ಹತೆ ರೂಢಿಸಿಕೊಂಡರೆ ಹಣ – ಸಂಪತ್ತು ಯಶಸ್ಸು ತನ್ನಷ್ಟಕ್ಕೆ ತಾವೇ ಹಿಂಬಾಲಿಸಿಕೊಂಡು ಬರುತ್ತವೆʼ ಎಂದು ವಾರಿಕು ಅವರು ನವೋದ್ಯಮ ಸ್ಥಾಪಕರಿಗೆ ಕಿವಿಮಾತು ಹೇಳಿದರು.

ಜೆಫ್ಟೊ ಸಹ ಸ್ಥಾಪಕ ಕೈವಲ್ಲ ವೋಹ್ರಾ ಅವರ ಜೊತೆಗೆ ವಾಕೂರ್ ಅವರು ನಡೆಸಿಕೊಟ್ಟ ಸಂವಾದದಲ್ಲಿ ಸಂಪತ್ತು ಮತ್ತು ಮೌಲ್ಯ ಸೃಷ್ಟಿಸುವಲ್ಲಿ ಕ್ವಿಕ್ ಕಾಮರ್ಸ್ನ ಜೆಪ್ಟೊ ಉತ್ತಮ ನಿದರ್ಶನವಾಗಿರುವುದು ಚರ್ಚೆಯ ಕೇಂದ್ರಬಿಂದುವಾಗಿತ್ತು

ʼಭಾರತದ ಮಹಿಳಾ ಕ್ರಿಕೆಟ್ ತಂಡವು ಏಕದಿನ ವಿಶ್ವ ಕಪ್ ಗೆದ್ದ ನಂತರ ಹೆಣ್ಣು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕ್ರಿಕೆಟ್ನತ್ತ ಆಕರ್ಷಿತರಾಗುತ್ತಿದ್ದಾರೆ. ಕ್ರೀಡಾಂಗಣಕ್ಕೆ ಮಹಿಳೆಯರು, ಹೆಣ್ಣು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆʼ ಎಂದು ಕ್ರಿಕೆಟ್ ಆಟಗಾರ್ತಿ ರಿಚಾ ಘೋಷ್ ನುಡಿದರು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಮಾತನಾಡಿ, ʼಕ್ರೀಡಾಂಗಣದಲ್ಲಿ ಒತ್ತಡವನ್ನು ಸಮಚಿತ್ತದಿಂದ ಎದುರಿಸಿದರೆ ಸೋಲನ್ನೂ ಗೆಲುವಾಗಿ ಬದಲಾಯಿಸಬಹುದು. ಕ್ರೀಡೆಯಲ್ಲಿನ ಸೋಲು ಹಲವಾರು ಪಾಠ ಕಲಿಸುತ್ತದೆ. ಯಾವುದೇ ಕ್ಷೇತ್ರದಲ್ಲಿರಲಿ ಸೋಲಿನಿಂದ ಧೃತಿಗೆಡಬಾರದುʼ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕಿಯೊನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ.ಎನ್.ಮಂಜುಳ, ನಿರ್ದೇಶಕ ರಾಹಲ್ ಸಂಕನೂರ್ ಇದ್ದರು.

Tags: BengaluruTechSummitBeyondBengaluruFutureMakersConclavePriyank Khargepriyank kharge interviewpriyank kharge letpriyank kharge newspriyank kharge news 2025priyank kharge press meetpriyank kharge speechpriyank kharge statementpriyank kharge today newspriyank kharge tweet
Previous Post

“ಜಾಗತಿಕ ಸೆಮಿಕಂಡಕ್ಟರ್ ಮಾರುಕಟ್ಟೆ ಮೂರು ವರ್ಷಗಳಲ್ಲಿ ರೂ 88 ಲಕ್ಷ ಕೋಟಿಗೆ ಏರಿಕೆ”

Next Post

Daily Horoscope: ಇಂದು ಮಾತಿನಲ್ಲಿ ಎಚ್ಚರವಹಿಸಬೇಕಾದ ರಾಶಿಗಳಿವು..!

Related Posts

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!
Top Story

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

by ಪ್ರತಿಧ್ವನಿ
March 5, 2026
0

ಬೆಂಗಳೂರು : ಇರಾನ್‌ - ಇಸ್ರೇಲ್‌ ನಡುವಿನ ಯುದ್ಧವು ಇಂದಿಗೆ 6ನೇ ದಿನಕ್ಕೆ ತಲುಪಿದೆ. ಈಗಾಗಲೇ ತನ್ನ ನಾಯಕನನ್ನು ಹೊಡೆದುರುಳಿಸಿದ ಅಮೆರಿಕ ಹಾಗೂ ಇಸ್ರೇಲ್‌ ವಿರುದ್ಧ ಇರಾನ್‌...

Read moreDetails
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post
Daily Horoscope: ಇಂದು ಮಾತಿನಲ್ಲಿ ಎಚ್ಚರವಹಿಸಬೇಕಾದ ರಾಶಿಗಳಿವು..!

Daily Horoscope: ಇಂದು ಮಾತಿನಲ್ಲಿ ಎಚ್ಚರವಹಿಸಬೇಕಾದ ರಾಶಿಗಳಿವು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada