ಮಂಡ್ಯ: ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಬಗ್ಗೆ ಬಿಜೆಪಿಯವರು ಗಿಳಿ ಶಾಸ್ತ್ರ ಕೇಳಲಿ ಎಂದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಗಿಳಿ ಶಾಸ್ತ್ರ ಕೇಳುವ ಮೂಲಕವೇ ತಿರುಗೇಟು ನೀಡಿದ್ದಾರೆ.

ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರಾ.? ಇಲ್ವಾ..? ಎಂದು ಬಿಜೆಪಿಗರು ಮಂಡ್ಯದಲ್ಲಿ ಗಿಳಿ ಶಾಸ್ತ್ರ ಕೇಳಿದ್ದು, ಈ ವೇಳೆ ಗಿಳಿ ಚಂಬು ಇರುವ ಕಾರ್ಡ್ ತೆಗೆದಿದೆ. ಹೀಗಾಗಿ ಡಿ.ಕೆ.ಶಿವಕುಮಾರ್ ಸಿಎಂ ಆಗಲ್ಲ, ಅವರ ಕೈಗೆ ಚಂಬು ಎಂದು ಬಿಜೆಪಿಗರು ವ್ಯಂಗ್ಯವಾಡಿದ್ದಾರೆ.

ಇದಾ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ಜನರಿಗೆ ಒಳ್ಳೆಯದಾಗುತ್ತಾ ಎಂದು ಶಾಸ್ತ್ರ ಕೇಳಿದ್ದು, ಈ ವೇಳೆ ಗಿಳಿ ಹೂ ಇರುವ ಕಾರ್ಡ್ ತೆಗೆದಿದೆ. ಹೀಗಾಗಿ ಬಿಜೆಪಿಗರು ಸಿದ್ದರಾಮಯ್ಯ ಸಿಎಂ ಆಗಿದ್ರೆ ಜನರ ಕಿವಿಗೆ ಹೂ ಇಡುತ್ತಾರೆ ಎಂದು ಗೇಲಿ ಮಾಡಿದ್ದಾರೆ.








