ಬೆಂಗಳೂರು : ಆಸ್ಟ್ರೇಲಿಯಾ, ಅಮೆರಿಕ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖುಷಿ ಹಂಚಿಕೊಂಡರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಲತ: ಮೈಸೂರು ಜಿಲ್ಲೆಯವರಾದ ಕುಮಾರ ಎನ್ನುವವರು ಅಮೆರಿಕಾದಲ್ಲಿ ನೆಲೆಸಿದ್ದು, ನಂದಿನಿ ತುಪ್ಪದ ರಫ್ತಿನ ಏಜೆನ್ಸಿ ಪಡೆದಿದ್ದಾರೆ. ಕೆಎಂಎಫ್ ಹಾಗೂ ಕುಮಾರ ಅವರಿಗೆ ಶುಭವಾಗಲಿ ಎಂದು ಹೇಳಿದರು.

ಶಾಸಕರ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿರುವ ಬಗ್ಗೆ ಮಾತನಾಡಿದ ಅವರು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ಎಂದು ನೋಡೋಣ ಎಂದರು. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು. ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು. ರಾಹುಲ್ ಗಾಂಧಿಯವರನ್ನು ಸದ್ಯಕ್ಕೆ ಭೇಟಿ ಮಾಡುವುದಿಲ್ಲ ಎಂದರು.












