ಬೆಂಗಳೂರು: ಇಂದು ಬೆಳಂಬೆಳ್ಳಿಗ್ಗೆ ಡಾ.ಬಿ.ಆರ್.ಅಂಬೇಡ್ಕರ್(BR Ambedkar) ಅಭಿವೃದ್ಧಿ ನಿಗಮದ ಮೇಲೆ ಲೋಕಾಯುಕ್ತ(Lokayukta) ಪೊಲೀಸರು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ವಸಂತನಗರ ಬಳಿಯಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮ ಕಚೇರಿಯಲ್ಲಿ ಹಿಂದುಳಿದ ವರ್ಗಗಳಿಗೆ ಸಾಲ ನೀಡಲಾಗುತ್ತಿದೆ. ಆದರೆ ಪ್ರಮುಖವಾಗಿ ಸುಮಾರು ಒಂದು ಲಕ್ಷದಿಂದ ಐದು ಲಕ್ಷದವರೆಗೆ ಸಬ್ಸಿಡಿ ಆಧಾರದ ಮೇಲೆ ಸಾಲ ನೀಡುತ್ತಿದ್ದ ನಿಗಮದಲ್ಲಿ ಸಾಲ ನೀಡಲು ನಕಲಿ ದಾಖಲೆ, ನಕಲಿ ಅಭ್ಯರ್ಥಿಗಳನ್ನು ಸೃಷ್ಟಿ ಮಾಡಿ ನಿಗಮದಿಂದ 10 ಕೋಟಿ ಹಣ ದುರುಪಯೋಗ ಮಾಡಿಕೊಂಡಿದ್ದಾರೆಂದು ಲೋಕಾಯುಕ್ತಕ್ಕೆ ಅನೇಕ ದೂರುಗಳು ಸಲ್ಲಿಕೆಯಾಗಿತ್ತು.

ದೂರುಗಳು ಬಂದ ಹಿನ್ನೆಲೆ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಾಗಿತ್ತು. ಬಳಿಕ ಎಸ್ ಪಿ ಶಿವಪ್ರಕಾಶ್ ದೇವರಾಜ್ ನೇತೃತ್ವದಲ್ಲಿ 10ಕ್ಕೂ ಹೆಚ್ಚು ಪೊಲೀಸರು ಇಂದು ದಾಳಿ ನಡೆಸಿ ಆರೋಪಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.












