• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

ಪ್ರತಿಧ್ವನಿ by ಪ್ರತಿಧ್ವನಿ
December 17, 2025
in Top Story, ದೇಶ
0
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Share on WhatsAppShare on FacebookShare on Telegram

ಬೆಂಗಳೂರು: ದೇಶದಲ್ಲಿ ಹಣ ದುಬ್ಬರ ಗ್ರಾಹಕ ಬೆಲೆ ಸೂಚ್ಯಂಕ(Retail Inflation (CPI) ನವೆಂಬರ್ 2025ರಲ್ಲಿ ಶೇ. 0.7ಕ್ಕೆ ಇಳಿಕೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ದಾಖಲಾಗಿದ್ದ ಶೇ. 5.5ರ ಹೋಲಿಕೆಯಲ್ಲಿ ಅಧಿಕ ಕುಸಿತ ಕಂಡಿದೆ. ಆಹಾರ ವಸ್ತುಗಳ ಬೆಲೆಗಳ ತೀವ್ರ ಇಳಿಕೆಯೇ ಇದಕ್ಕೆ ಪ್ರಮುಖ ಕಾರಣವಾಗಿದೆ ಎನ್ನಲಾಗುತ್ತಿದೆ.

ADVERTISEMENT
Belagavi Session: ಮತ ಕಳ್ಳತನ ಮಾಡಿ ಗೆದ್ದೋರು ಬಿಜೆಪಿಗರು ಏನು ಮಾತಾಡ್ತಾರೆ..? #pratidhvani #dkshivakumar

ಬ್ಯಾಂಕ್ ಆಫ್ ಬರೋಡಾದ ಒಂದು ಅಂದಾಜಿನ ಪ್ರಕಾರ, 2026ರ ಮೂರನೇ ತಿಂಗಳಲ್ಲಿ ಹಣ ದುಬ್ಬರ ಶೇ 0.4 ಇರಲಿದೆ. ಇದು ಈ ಹಿಂದೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಿಧಿಸಿದ್ದ 0.6 ಅಂದಾಜಿಗಿಂತ ಕಡಿಮೆಯಾಗಿದೆ.

ಆಹಾರ ಪದಾರ್ಥಗಳ ಬೆಲೆ ಇಳಿಕೆ

ಕಳೆದ ನವೆಂಬರ್‌ನಲ್ಲಿ ಆಹಾರ ಪದಾರ್ಥಗಳ ಬೆಲೆಯಲ್ಲಿ ಶೇ. 3.9 ವರ್ಷದ ಆಧಾರದಲ್ಲಿ ದಾಖಲಾಗಿದ್ದು, ಇದು ನೇರ ಬೆಲೆ ಕುಸಿತವನ್ನು ತಿಳಿಸುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಆಹಾರ ಬೆಲೆಗಳ ಏರಿಳಿತ ಶೇ. 4.05, ನಗರ ಪ್ರದೇಶಗಳಲ್ಲಿ ಶೇ. 3.60 ಆಗಿದೆ. ತರಕಾರಿ ಮತ್ತು ಧಾನ್ಯ ಬೆಲೆಗಳು ಇಳಿಕೆಯಾಗಿದ್ದರೂ, ಟೊಮ್ಯಾಟೊ ಬೆಲೆ ಮಾತ್ರ ಕಳೆದ ವರ್ಷಕ್ಕಿಂತ ಶೇ. 5.5% ಹೆಚ್ಚಾಗಿವೆ ಎಂದು ಅಂಕಿ ಅಂಶಗಳು ತಿಳಿಸಿವೆ. ನವೆಂಬರ್ 2025ರಲ್ಲಿ ಆಹಾರ ಮತ್ತು ಪಾನೀಯಗಳ ವಿಭಾಗದಲ್ಲಿ ಬೆಲೆಗಳು ಶೇ. 2.8ರಷ್ಟು ಇಳಿಕೆ ಕಂಡಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ ಆಹಾರ ಹಣದುಬ್ಬರವು ಶೇ. 8.2ರಷ್ಟು ಇತ್ತು. ಅಂದರೆ ಅಧಿಕವಾಗಿತ್ತು.

R Ashoka: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ದ ಆರ್‌ ಅಶೋಕ್‌ ವಾಗ್ದಾಳಿ..! #lakshmihebbalkar #rashok

ಆರ್‌ಬಿಐ ಬಡ್ಡಿದರ ಕಡಿತ

ಹಣ ದುಬ್ಬರದ ಹಿನ್ನೆಲೆಯಲ್ಲಿ, ಆರ್‌ಬಿಐನ ಹಣಕಾಸು ನೀತಿ ಸಮಿತಿ ಡಿಸೆಂಬರ್ 2025ರಲ್ಲಿ ರೆಪೋ ದರವನ್ನು 25 ಬೇಸಿಸ್ ಪಾಯಿಂಟ್ ಕಡಿತ ಮಾಡಿ ಶೇ. 5.25%ಕ್ಕೆ ಇಳಿಸಿದೆ. ಇದೇ ವೇಳೆ 26ರ ಆರ್ಥಿಕ ವರ್ಷದಲ್ಲಿ ಏರಿಳಿತದ ಅಂದಾಜನ್ನು ಶೇ. 2.6 ರಿಂದ ಶೇ.2ಕ್ಕೆ ಇಳಿಸಲಾಗಿದ್ದು, ಸುಧಾರಿತ ಆಹಾರ ಪೂರೈಕೆ ಮತ್ತು ಜಾಗತಿಕ ಮಟ್ಟದ ಒಳ್ಳೆಯ ವಾತಾವರಣವು ಇದಕ್ಕೆ ಕಾರಣವೆಂದು ಆರ್‌ಬಿಐ ಹೇಳಿದೆ. ಗಮನಾರ್ಹವಾಗಿ, ಆರ್‌ಬಿನ ಶೇ. 2ರಷ್ಟು ಕನಿಷ್ಠ ಮಿತಿಗಿಂತ ನಿರಂತರ ಮೂರು ತಿಂಗಳುಗಳ ಕಾಲ ಮುಂದುವರೆದಿದೆ.

Chalavadi Narayanaswamy: ಕೃಷ್ಣಭೈರೇಗೌಡ ವಿರುದ್ಧ ರೊಚ್ಚಿಗೆದ್ದ ಛಲವಾದಿ ನಾರಾಯಣಸ್ವಾಮಿ..! #krishnabyregowda

ಅಲ್ಲದೇ ಡಿಸೆಂಬರ್‌ನಲ್ಲಿ ಖಾಸಗಿ ವಲಯದ ಬೆಳವಣಿಗೆ 10 ತಿಂಗಳಲ್ಲಿ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇದರ ಪರಿಣಾಮ ಉದ್ಯೋಗ ನೇಮಕಾತಿ ಬಹುತೇಕ ಸ್ಥಗಿತಗೊಂಡಿದೆ. ಆರ್ಥಿಕ ಚಟುವಟಿಕೆಗಳು ಕ್ಷೀಣಿಸುತ್ತಿವೆ, ಹಣ ದುಬ್ಬರದ ಒತ್ತಡ ಕಡಿಮೆಯಾಗುತ್ತಿದೆ.

Lakshmi Hebbalkar : ಗೃಹ ಲಕ್ಷ್ಮಿಯನ್ನ ಹಾದಿ ಬೀದೀಲಿ ವಿರೋಧಿಸಿದ್ದವ್ರು ಬಿಜೆಪಿಯವ್ರು... ಈಗ್ಯಾಕೆ ಈ ಪ್ರೀತಿ..?

ಹಣ ದುಬ್ಬರ ಗ್ರಾಹಕ ಸೂಚ್ಯಂಕದ ಕಡಿಮೆಯಾದ ಪರಿಣಾಮ ಆಹಾರ ಬೆಲೆಗಳಲ್ಲಿ ಇಳಿಕೆಯಾಗಿ ಮನೆಮಂದಿಯ ಖರ್ಚು, ಒತ್ತಡ ತಗ್ಗಿದೆ. ಬಡ್ಡಿದರ ಕಡಿತದಿಂದ ಸಾಲದ ವೆಚ್ಚ ಇಳಿದು, ಹೂಡಿಕೆ ಮತ್ತು ಉದ್ಯಮ ಚಟುವಟಿಕೆಗಳಿಗೆ ಉತ್ತೇಜನ ಸಿಗಲಿದೆ. ಮುಖ್ಯವಾಗಿ ಕಡಿಮೆ ಹಣ ದುಬ್ಬರದ ಈ ಹಂತದಲ್ಲಿ, ಬೆಲೆ ನಿಯಂತ್ರಣಕ್ಕಿಂತ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವತ್ತ ಆರ್‌ಬಿಐಗೆ ಹೆಚ್ಚಿನ ಸ್ವಾತಂತ್ರ್ಯ ದೊರೆತಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Tags: Indidainflation rateMoneyPrice
Previous Post

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರ ಗೌಡಗೆ ಟಿವಿ ಭಾಗ್ಯ

Next Post

ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post
ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada