• Home
  • About Us
  • ಕರ್ನಾಟಕ
Wednesday, December 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಕಷ್ಟದಲ್ಲಿರುವವರಿಗೆ ಸದಾ ನೆರವಾಗುವ ಅವರ ಬದುಕು ಸಾರ್ಥಕ: ಸಿಎಂ ಸಿದ್ದರಾಮಯ್ಯ

ಶಾಮನೂರು ಶಿವಶಂಕರಪ್ಪನವರ ನಿಧನದಿಂದ ನಾಡಿಗೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟ

ಪ್ರತಿಧ್ವನಿ by ಪ್ರತಿಧ್ವನಿ
December 26, 2025
in Uncategorized
0
Share on WhatsAppShare on FacebookShare on Telegram

ADVERTISEMENT

ಅವರೊಬ್ಬ ಜಾತ್ಯಾತೀತ ಹಾಗೂ ಜನಪ್ರಿಯ ನಾಯಕ. ಎಲ್ಲ ರಾಜಕೀಯ ಪಕ್ಷದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಅಜಾತಶತ್ರು. ಜಾತ್ಯಾತೀತ ಹಾಗೂ ಜನಪ್ರಿಯ ನಾಯಕರೆನಿಸಿದ್ದ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ನಾಡಿಗೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಸಚಿವ ದಿ.ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಇಳಿವಯಸ್ಸಿನಲ್ಲಿಯೂ ಅತ್ಯಂತ ಕ್ರೀಯಾಶೀಲ
ಶಾಮನೂರು ಶಿವಶಂಕರಪ್ಪ ಅವರು ದೇಶ ಕಂಡಂತಹ ಹಿರಿಯ ಶಾಸಕ, ಮಾಜಿ ಮಂತ್ರಿ ಹಾಗೂ ದಾವಣಗೆರೆಯ ನಗರಸಭೆ ಅಧ್ಯಕ್ಷರಾಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಖಜಾಂಚಿಯಾಗೀ ಸುಧೀರ್ಘ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಅವರ ಜನ್ಮದಿನಾಚರಣೆಯಲ್ಲಿ ಹಾಗೂ ದಾಲ್ ಮಿಲ್ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದು, ಶ್ರೀಯುತರು ಶತಾಯುಷಿಗಳಾಗುತ್ತಾರೆ ಎಂಬ ನಂಬಿಕೆಯಿತ್ತು. ಅವರ ಅಗಲಿಕೆಯಿಂದ ನಾಡಿಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ. ತಮ್ಮ ಇಳಿವಯಸ್ಸಿನಲ್ಲಿಯೂ ಅತ್ಯಂತ ಕ್ರೀಯಾಶೀಲರಾಗಿದ್ದರು ಎಂದರು.

ವೀರಶೈವ ಮಹಾಸಭಾದ ರಾಷ್ಟ್ರಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆನು. ಬಿಜಾಪುರದ ಅಕ್ಕಮಹಾದೇವಿ ಮಹಿಳಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಜಗದ್ಗುರು ಬಸವಣ್ಣನವರ ಛಾಯಾಚಿತ್ರ ಕಡ್ಡಾಯಗೊಳಿಸುವ ತೀರ್ಮಾನವನ್ನು ಅಭಿನಂದಿಸಲು ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.

ಜನಮನ್ನಣೆಗೆ ಪಾತ್ರರಾಗಿದ್ದ ನಾಯಕ
ಅವರೊಬ್ಬ ಜಾತ್ಯಾತೀತ ಹಾಗೂ ಜನಪ್ರಿಯ ನಾಯಕ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯ ಪ್ರಬಲವಿಲ್ಲದಿದ್ದರೂ, ಆ ಕ್ಷೇತ್ರದಲ್ಲಿ ಜನಮನ್ನಣೆಗೆ ಪಾತ್ರರಾಗಿದ್ದರಲ್ಲದೇ, ಆರು ಬಾರಿ ಸತತವಾಗಿ ಶಾಸಕರಾಗಿ ಆಯ್ಕೆಯಾಗಿದ್ದರು. ಸದಾ ಚೈತನ್ಯಶೀಲರಾಗಿದ್ದ ಶಾಮನೂರು ಶಿವಶಂಕರಪ್ಪನವರು ಮುಂದಿನ ಚುನಾವಣೆಯಲ್ಲಿಯೂ ಭಾಗವಹಿಸುವ ಹುರುಪನ್ನು ತೋರಿದ್ದರು. ಎಲ್ಲ ರಾಜಕೀಯ ಪಕ್ಷದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಅಜಾತಶತ್ರುವಾಗಿದ್ದರು ಎಂದರು.

ಕೊಡುಗೈದಾನಿ
ಬಡವರು, ಕಷ್ಟದಲ್ಲಿರುವವರಿಗೆ ಸಹಾಯಹಸ್ತ ಚಾಚಲು ಟ್ರಸ್ಟ್ ಮೂಲಕ ನೆರವಾಗುವ ಕೊಡುಗೈದಾನಿಯಾಗಿದ್ದರು. ಪ್ರತಿಯೊಬ್ಬರಿಗೂ ಹುಟ್ಟು ಆಕಸ್ಮಿಕ, ಆದರೆ ಸಾವು ಖಚಿತ, ಈ ನಡುವಿನ ಪಯಣದಲ್ಲಿ ಬದುಕಿನ ಸಾರ್ಥಕತೆ ಕಂಡುಕೊಳ್ಳುವುದು ಮುಖ್ಯ. ದು:ಖದಲ್ಲಿರುವವರಿಗೆ ಸದಾ ನೆರವಾಗುವ ಅವರ ಬದುಕು ನಿಜಕ್ಕೂ ಸಾರ್ಥಕ ಎಂದರು.

ಬಾಪೂಜಿ ವಿದ್ಯಾಸಂಸ್ಥೆ ಮೂಲಕ ಶೈಕ್ಷಣಿಕ ಕ್ರಾಂತಿ
ಕೇವಲ ಜವಳಿ ಕೇಂದ್ರವಾಗಿದ್ದ ದಾವಣಗೆರೆಯನ್ನು ವಿದ್ಯಾಕಾಶಿ ಮಾಡಿದ ಕೀರ್ತಿ ಶ್ರೀಯುತರಿಗೆ ಸಲ್ಲುತ್ತದೆ. ಬಾಪೂಜಿ ವಿದ್ಯಾಸಂಸ್ಥೆಯನ್ನು ಸ್ಥಾಪಿಸಿ ಸಹಸ್ರಾರು ಬದುಕಿಗೆ ದಾರಿದೀಪವಾಗಿದ್ದರು. ಉದ್ಯಮಿಯಾಗೀ, ಕೈಗಾರಿಕೋದ್ಯಮಿಯಾಗೀ, ವಿದ್ಯಾ ಸಂಸ್ಥೆಗಳ ಸಂಸ್ಥಾಪಕರಾಗಿ, ರಾಜಕಾರಣಿಯಾಗಿ ಸುದೀರ್ಘ ಸೇವೆ ಸಲ್ಲಿಸಿರುವುದು ಶ್ಲಾಘನೀಯ. ಮಹಾನ್ ಚೇತನ ಶಾಮನೂರು ಶಿವಶಂಕರಪ್ಪನವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬವರ್ಗ ಹಾಗೂ ಅಭಿಮಾನಿವರ್ಗಕ್ಕೆ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

 

 

Tags: #shamanuru shivashankarappaCM Siddaramaiahcm siddaramaiah and dk shivakumarcm siddaramaiah breakfastcm siddaramaiah breakfast meetcm siddaramaiah dk shivakumar breakfast meetingcm siddaramaiah eating nati kolicm siddaramaiah in mangalorecm siddaramaiah latest newscm siddaramaiah lunchcm siddaramaiah newscm siddaramaiah speechcm siddaramaiah today newscm siddaramaiah vs dcm dk shivakumarcm siddaramaiah vs dk shivakumarkarnataka cm siddaramaiahkarnataka cm siddaramaiah castmla shamanur shivashankarappashamanur shivashankarappashamanur shivashankarappa assetsshamanur shivashankarappa deathshamanur shivashankarappa dies at 94shamanur shivashankarappa familyshamanur shivashankarappa funeralshamanur shivashankarappa liveshamanur shivashankarappa live newsshamanur shivashankarappa newsshamanur shivashankarappa no moreshamanur shivashankarappa pujashamanur shivashankarappa sonshamanur shivashankarappa speechsiddaramaiahsiddaramaiah news
Previous Post

ವೈಭವ್‌ ಸೂರ್ಯವಂಶಿಗೆ ಬಾಲ ಪುರಸ್ಕಾರ : ಮೋದಿ ಮೆಚ್ಚಿದ ಪೋರನಿಗೆ ಶುಭ ಹಾರೈಸಿದ ಮುರ್ಮು

Next Post

ಬಿಕ್ಲು ಶಿವ ಕೊಲೆ: ಶಾಸಕ ಬೈರತಿ ಬಸವರಾಜ್ ಗೆ ಬಿಗ್ ರಿಲೀಫ್

Related Posts

ಗ್ರಾಮೀಣ ಉದ್ಯೋಗದ ಮೇಲೆ ಅಂತಿಮ ಪ್ರಹಾರ..!
Top Story

ಗ್ರಾಮೀಣ ಉದ್ಯೋಗದ ಮೇಲೆ ಅಂತಿಮ ಪ್ರಹಾರ..!

by ಪ್ರತಿಧ್ವನಿ
December 27, 2025
0

ಸಂದಿಗ್ಧ ಸಮಯದಲ್ಲಿ, ಸಂಕಟದ ಹೊತ್ತಿನಲ್ಲಿ ಜೀವ ರಕ್ಷಕ ಅವಕಾಶವಾಗಿ ತನ್ನ ಪಯಣ ನಡೆಸಿದ್ದ MNREGA (ನರೇಗಾ) ಯೋಜನೆಯನ್ನು ಅಕಾಲಿಕ ಸಾವಿಗೀಡುಮಾಡಿರುವುದು, ಭಾರತದ ಅತ್ಯಂತ ಕೆಳಸ್ತರದ ಶ್ರಮಜೀವಿಗಳ ಪಾಲಿಗೆ...

Read moreDetails
ಉದ್ಯೋಗ ಖಾತರಿಯೂ.. ಮಾರುಕಟ್ಟೆಯ ತಂತ್ರವೂ..!

ಉದ್ಯೋಗ ಖಾತರಿಯೂ.. ಮಾರುಕಟ್ಟೆಯ ತಂತ್ರವೂ..!

December 21, 2025
ಲ್ಯಾಂಡ್ ಲಾರ್ಡ್ ಚಿತ್ರದ ʼನಿಂಗವ್ವ ನಿಂಗವ್ವʼ ಸಾಂಗ್‌ ರಿಲೀಸ್: ಹೇಗಿದೆ ನಿಂಗವ್ವ- ರಾಚಯ್ಯನ ಡ್ಯುಯೆಟ್?

ಲ್ಯಾಂಡ್ ಲಾರ್ಡ್ ಚಿತ್ರದ ʼನಿಂಗವ್ವ ನಿಂಗವ್ವʼ ಸಾಂಗ್‌ ರಿಲೀಸ್: ಹೇಗಿದೆ ನಿಂಗವ್ವ- ರಾಚಯ್ಯನ ಡ್ಯುಯೆಟ್?

December 20, 2025
ಎಲ್ಲವೂ ಸರಿಯಾಗಬೇಕು: ಜೈಲಾಧಿಕಾರಿಗಳಿಗೆ ಅಲೋಕ್ ಕೊಟ್ಟ ಡೆಡ್ ಲೈನ್ ಏನು..?

ಎಲ್ಲವೂ ಸರಿಯಾಗಬೇಕು: ಜೈಲಾಧಿಕಾರಿಗಳಿಗೆ ಅಲೋಕ್ ಕೊಟ್ಟ ಡೆಡ್ ಲೈನ್ ಏನು..?

December 16, 2025
ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ

December 10, 2025
Next Post
ಬಿಕ್ಲು ಶಿವ ಕೊಲೆ: ಶಾಸಕ ಬೈರತಿ ಬಸವರಾಜ್ ಗೆ ಬಿಗ್ ರಿಲೀಫ್

ಬಿಕ್ಲು ಶಿವ ಕೊಲೆ: ಶಾಸಕ ಬೈರತಿ ಬಸವರಾಜ್ ಗೆ ಬಿಗ್ ರಿಲೀಫ್

Recent News

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..
Top Story

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

by ಪ್ರತಿಧ್ವನಿ
December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?
Top Story

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

by ಪ್ರತಿಧ್ವನಿ
December 30, 2025
ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?
Top Story

ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?

by ಪ್ರತಿಧ್ವನಿ
December 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

December 30, 2025
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

December 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada