• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ, ಜನರ ಕೆಲಸ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆ ನೀಗಿಸುವವರೆಗೂ ಹೋರಾಟ,

ಪ್ರತಿಧ್ವನಿ by ಪ್ರತಿಧ್ವನಿ
January 6, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ, ಜನರ ಕೆಲಸ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ADVERTISEMENT

ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ ಎಂದರು.

ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ
ಮುಖ್ಯಮಂತ್ರಿಯಾಗಿ ಅವಧಿಯನ್ನು ಪರಿಪೂರ್ಣ ಮಾಡುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಆ ಕುರಿತು ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ ಎಂದರು. ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದರು.


ಮುಖ್ಯಮಂತ್ರಿಗಳ ಅಭಿಮಾನಿಗಳು ನಾಟಿ ಕೋಳಿ ಪಲಾವ್ ಹಂಚಿರುವ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ ನನಗೆ ಈ ಬಗ್ಗೆ ತಿಳಿದಿಲ್ಲ ಎಂದ ಮುಖ್ಯಮಂತ್ರಿಗಳು ಸಾಮಾನ್ಯವಾಗಿ ಹಳ್ಳಿಗಳಲ್ಲಿ ನೆಂಟರು ಬಂದಾಗ ಮಾತ್ರ ನಾಟಿ ಕೋಳಿ ಅಡುಗೆ ಮಾಡುತ್ತಾರೆ. ನಾನೂ ಹಳ್ಳಿಯವನಾಗಿರುವುದರಿಂದ ಸಹಜವಾಗಿ ನಾಟಿ ಕೋಳಿ, ರಾಗಿ ರಾಗಿ ಮುದ್ದೆ ತಿನ್ನುತ್ತಿದ್ದೆ. ಹಳ್ಳಿಯವರ ಊಟದ ಕ್ರಮ ಇದಾಗಿದ್ದು, ನಾನು ಮುಖ್ಯಮಂತ್ರಿಯಾಗಿರುವುದರಿಂದ ಸ್ವಲ್ಪ ಪ್ರಚಾರ ಸಿಗುತ್ತಿದೆ ಎಂದರು.

ರಾಜಕಾರಣ ತೃಪ್ತಿ ತಂದಿದೆ
ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ ಎಂದ ಮುಖ್ಯಮಂತ್ರಿಗಳು ಜನರ ಕೆಲಸ ಮಾಡುವುದು ಖುಷಿಯ ಸಂಗತಿ ಎಂದರು. ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಕೆಲಸ ಮಾಡಿಕೊಡುವುದು. ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊಂಡಿದ್ದೆ. ಶಾಸಕನಾದೆ, ಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು ಸಾಧ್ಯವಾಯಿತು ಎಂದರು.

ದೇವರಾಜ ಅರಸು ಹಾಗೂ ನಾನು ಇಬ್ಬರೂ ಮೈಸೂರಿನವರೇ ಆಗಿದ್ದು, ಇಬ್ಬರೂ ದೀರ್ಘಾವಧಿಯ ಮುಖ್ಯಮಂತ್ರಿಗಳಾಗಿದ್ದು ಕಾಲಘಟ್ಟ ಬೇರೆ ಬೇರೆ. 1972ರಿಂದ 80ವರೆಗೆ ಮುಖ್ಯಮಂತ್ರಿಯಾಗಿದ್ದರು. ನಾನು ಎರಡು ಅವಧಿಗೆ ಆಗಿದ್ದೇನೆ ಎಂದರು.

ಬಜೆಟ್ ನಲ್ಲಿ ವಿಶೇಷ ಘೋಷಣೆ: ಕಾದು ನೋಡಿ
ಈ ಬಾರಿಯ ಬಜೆಟ್ ನಲ್ಲಿ ವಿಶೇಷ ಕಾರ್ಯಕ್ರಮಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬಜೆಟ್ ಆಗುವವರೆಗೂ ಕಾದು ನೋಡಿ ಎಂದರು.

ಬಳ್ಳಾರಿ ಘಟನೆ ಬಗ್ಗೆ ಗೃಹ ಸಚಿವರೊಂದಿಗೆ ಚರ್ಚೆ
ಬಳ್ಳಾರಿ ಘಟನೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಗೃಹ ಸಚಿವರೊಂದಿಗೆ ಮಾತನಾಡುತ್ತೇನೆ. ತನಿಖೆ ನಡೆಯುತ್ತಿದ್ದು, ಕೆಲವರನ್ನು ಬಂಧಿಸಲಾಗಿದೆ ಎಂದರು.

ಎಚ್. ಡಿ ಕುಮಾರಸ್ವಾಮಿ ರಾಜಕೀಯವಾಗಿ ಮಾತನಾಡುತ್ತಾರೆ
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ಅವರು ಘಟನೆಯ ಬಗ್ಗೆ ಮಾಡಿರುವ ಆರೋಪಗಳ ಪ್ರತಿಕ್ರಿಯೆ ನೀಡಿ ಜೆಡಿಎಸ್ ಹಾಗೂ ಬಿಜೆಪಿ ಕಾನೂನಿನ ರೀತಿ ಮಾತನಾಡದೆ ರಾಜಕೀಯವಾಗಿ ಮಾತನಾಡುತ್ತಾರೆ ಎಂದರು.

ಸೌಹಾರ್ದ ಭೇಟಿ
ನಿನ್ನೆ ವೇಣುಗೋಪಾಲ್ ಅವರೊಂದಿಗೆ ನಡೆದ ಮಾತುಕತೆಯ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ವಯನಾಡಿನಿಂದ ಬೆಂಗಳೂರು ಮೂಲಕ ದೆಹಲಿಗೆ ಪ್ರಯಾಣ ಬೆಳೆಸಿದ್ದ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಸೌಹಾರ್ದಯುತವಾಗಿ ಮೈಸೂರಿನಲ್ಲಿ ಭೇಟಿ ಮಾಡಲಾಯಿತು ಎಂದರು.

ಸಂಪುಟ ಪುನರ್ ರಚನೆಯ ಬಗ್ಗೆ ದೆಹಲಿಯಿಂದ ಕರೆ ಬಂದಾಗ ಮಾತನಾಡುವುದಾಗಿ ಸಿಎಂ ತಿಳಿಸಿದರು.

Tags: BK HariprasadCM SiddaramaiahDelhiDevaraj ArasDK Shivakumarhd kumarswamyKC VenugopalMallikarjun KhargeMysore
Previous Post

ಸಿದ್ದರಾಮಯ್ಯ ಐತಿಹಾಸಿಕ ಸಾಧನೆ: ದೇವರಾಜ ಅರಸು ದಾಖಲೆ ಸರಿಗಟ್ಟಿದ ಸಿದ್ದು..

Next Post

ಐಕ್ಯತೆ ಸಾರುವ ಶ್ರೀ ಗವಿಸಿದ್ದೇಶ್ವರ ಜಾತ್ರೆ: ಬಸವರಾಜ ಬೊಮ್ಮಾಯಿ

Related Posts

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!
ಇದೀಗ

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

by ಪ್ರತಿಧ್ವನಿ
April 29, 2026
0

ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ Bowring and Lady Curzon Hospital ಸಮೀಪ ಭಾರೀ ಮಳೆ ಮತ್ತು ಬಿರುಗಾಳಿಯ ನಡುವೆಯಲ್ಲಿ ಸಂಭವಿಸಿದ ಗೋಡೆ ಕುಸಿತ ದುರಂತದಲ್ಲಿ ಕನಿಷ್ಠ 7...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಐಕ್ಯತೆ ಸಾರುವ ಶ್ರೀ ಗವಿಸಿದ್ದೇಶ್ವರ ಜಾತ್ರೆ: ಬಸವರಾಜ ಬೊಮ್ಮಾಯಿ

ಐಕ್ಯತೆ ಸಾರುವ ಶ್ರೀ ಗವಿಸಿದ್ದೇಶ್ವರ ಜಾತ್ರೆ: ಬಸವರಾಜ ಬೊಮ್ಮಾಯಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada