• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೋದಿ, ರಾಹುಲ್‌ ಆಸ್ತಿ ಎಷ್ಟಿದೆ..? ಮೂರು ವರ್ಷದಲ್ಲಿ ಸಂಸದರ ಸಂಪತ್ತು ಏರಿದ್ದೆಷ್ಟು..?

ಪ್ರತಿಧ್ವನಿ by ಪ್ರತಿಧ್ವನಿ
January 9, 2026
in Top Story, ರಾಜಕೀಯ
0
ಮೋದಿ, ರಾಹುಲ್‌ ಆಸ್ತಿ ಎಷ್ಟಿದೆ..? ಮೂರು ವರ್ಷದಲ್ಲಿ ಸಂಸದರ ಸಂಪತ್ತು ಏರಿದ್ದೆಷ್ಟು..?
Share on WhatsAppShare on FacebookShare on Telegram

ಬೆಂಗಳೂರು : ದೇಶದಲ್ಲಿ ಸತತವಾಗಿ ಮೂರು ಬಾರಿ ಹ್ಯಾಟ್ರಿಕ್‌ ಗೆಲುವು ಸಾಧಿಸುವ ಮೂಲಕ ಲೋಕಸಭೆಗೆ ಸಂಸದರಾಗಿ ಆಯ್ಕೆಯಾಗಿರುವ ಸಂಸದರ ಆಸ್ತಿಯಲ್ಲಿ ಏರಿಕೆಯಾಗಿದೆ. ಇದರಲ್ಲಿ ಬಿಜೆಪಿಯ ಸಂಸದರ ಆಸ್ತಿಯಲ್ಲಿ ಹೆಚ್ಚಳವಾಗಿದ್ದು ಗಮನಾರ್ಹ ಸಂಗತಿಯಾಗಿದೆ.

ADVERTISEMENT
G Parameshwara : CLP ಸಭೆಯಲ್ಲಿ 5 ವರ್ಷ CM Siddaramaiah CM ಅಂತ ತೀರ್ಮಾನವಾಗಿದೆ #pratidhvani

ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ಪ್ರಕಟಿಸಿರುವ ವರದಿಯಲ್ಲಿ ಈ ವಿಚಾರ ಬಹಿರಂಗವಾಗಿದ್ದು, ರಾಜಕೀಯ ವಲಯದಲ್ಲಿ ವರದಿ ಸಂಚಲನ ಮೂಡಿಸಿದೆ. ಮುಖ್ಯವಾಗಿ ಗುಜರಾತ್‌ನ ಏಳು ಸಂಸದರು ಸತತ ಮೂರು ಬಾರಿ ಗೆಲುವು ಕಂಡಿದ್ದಾರೆ. ಪ್ರತಿ ಚುನಾವಣೆಯಲ್ಲಿಯೂ ಅವರ ಆಸ್ತಿಯಲ್ಲಿ ಬದಲಾವಣೆಯಾಗಿದ್ದು, ಹಲವರ ಆಸ್ತಿಯಲ್ಲಿ ಹೆಚ್ಚಳವಾಗಿದೆ ಎಂದು ವರದಿ ವಿಶ್ಲೇಷಿಸಿದೆ.

DK Shivakumar on HD Kumaraswamy: ತಾಕತ್‌ ಇದ್ರೆ ಬಿಜೆಪಿ ಅವರು ಡಿಬೇಟ್‌ಗೆ ಬರಲಿ.! #pratidhvani

ಪ್ರಧಾನಿ ಹಾಗೂ ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರದ ಸಂಸದ ನರೇಂದ್ರ ಮೋದಿ ಅವರ ಆಸ್ತಿಯು 10 ವರ್ಷದಲ್ಲಿ 1.26 ಕೋಟಿ ರೂಪಾಯಿಗಳಷ್ಟು ಹೆಚ್ಚಳವಾಗಿದೆ. ಶೇಕಡಾವಾರು ಲೆಕ್ಕಾಚಾರದಲ್ಲಿ ಮೋದಿ ಆಸ್ತಿಯು 82 ರಷ್ಟು ಅಧಿಕವಾಗಿದೆ.

ಇನ್ನೂ ಉತ್ತರ ಪ್ರದೇಶದ ರಾಯ್‌ ಬರೇಲಿ ಲೋಕಸಭಾ ಕ್ಷೇತ್ರದ ಸಂಸದ ರಾಹುಲ್‌ ಗಾಂಧಿ ಅವರ ಆಸ್ತಿಯು 10 ವರ್ಷಗಳಲ್ಲಿ 10.99 ಕೋಟಿ ರೂಪಾಯಿಗಳಷ್ಟು ಹೆಚ್ಚಳವಾಗಿದೆ. ಇದನ್ನು ಶೇಕಡಾವಾರು ಲೆಕ್ಕಾಚಾರದಲ್ಲಿ ನೋಡಿದಾಗ 117ರಷ್ಟು ಜಿಗಿದಿದೆ.

DK Shivakumar on HD Kumaraswamy: ತಾಕತ್‌ ಇದ್ರೆ ಬಿಜೆಪಿ ಅವರು ಡಿಬೇಟ್‌ಗೆ ಬರಲಿ.! #pratidhvani

ರಾಜ್ಯದ ಸಂಸದರ ಆಸ್ತಿಯಲ್ಲಿಯೂ ಜಿಗಿತ..

ಅಲ್ಲದೆ ರಾಜ್ಯದ ವಿಚಾರದಲ್ಲಿ ಗಮನಿಸಿದಾಗ ಆರು ಸಂಸದರ ಆಸ್ತಿಯಲ್ಲಿ ಹೆಚ್ಚಳ ಕಂಡಿದೆ. ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೇ ಸೇರಿದಂತೆ ಹಲವರ ಆಸ್ತಿಯಲ್ಲಿ ಏರಿಕೆಯಾಗಿದೆ. ಇವರೆಲ್ಲ ಸತತವಾಗಿ ಮೂರು ಲೋಕಸಭಾ ಚುನಾವಣೆಯಲ್ಲಿ ಗೆಲುವು ಕಂಡವರೇ ಆಗಿದ್ದಾರೆ ಎನ್ನುವುದು ಇನ್ನೊಂದು ಗಮನಾರ್ಹ ಸಂಗತಿ. ವಿಜಯಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸಂಸದ ರಮೇಶ್‌ ಜಿಗಜಿಣಗಿ ಅವರ ಆಸ್ತಿಯಲ್ಲಿ 42.68 ಕೋಟಿ ರೂಪಾಯಿಗಳಷ್ಟು ಹೆಚ್ಚಳವಾಗಿದೆ. ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ. ಮೋಹನ್‌ ಆಸ್ತಿ 33.72 ಕೋಟಿ ರೂಪಾಯಿ ಏರಿಕೆಯಾಗಿದೆ.

S. R. Vishwanath : ಕಂದಾಯ ಸಚಿವರ ಕ್ಷೇತ್ರದಲ್ಲೇ ಅಕ್ರಮ ಮನೆಗಳ ನಿರ್ಮಾಣ..! #kogilu #bjp #congress

ಇನ್ನೂ ಕೇಂದ್ರದ ಪ್ರಭಾವಿ ಸಚಿವ ಪ್ರಲ್ಹಾದ ಜೋಶಿ ಅವರ ಆಸ್ತಿಯಲ್ಲಿ 16.89 ಕೋಟಿ ರೂಪಾಯಿಗಳಷ್ಟು ಅಧಿಕವಾಗಿದೆ. ಶಿವಮೊಗ್ಗದ ಸಂಸದ ಬಿ.ವೈ.ರಾಘವೇಂದ್ರ ಆಸ್ತಿಯಲ್ಲಿ 14.82 ಕೋಟಿ ರೂಪಾಯಿಗಳು ಇನ್‌ಕ್ರೀಸ್‌ ಆಗಿದೆ. ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಶೋಭಾ ಕರಂದ್ಲಾಜೆ ಅವರ ಆಸ್ತಿ 6.67 ಮತ್ತು ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ್‌ ಅವರ ಆಸ್ತಿ 3.94 ಕೋಟಿ ರೂಪಾಯಿಗಳಷ್ಟು ಹೆಚ್ಚಳವಾಗಿದೆ.

ಅಲ್ಲದೆ ಎಡಿಆರ್‌ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಬಿಜೆಪಿ ಸಂಸದೆ ಪೂನಂಬೆನ್ ಮೇಡಂ ಅವರ ಘೋಷಿತ ಆಸ್ತಿ 2014 ರಲ್ಲಿ ಸುಮಾರು 17 ಕೋಟಿ ರೂಪಾಯಿಗಳಿಂದ 2024 ರಲ್ಲಿ 147 ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ. ಕೇವಲ ಹತ್ತು ವರ್ಷಗಳಲ್ಲಿ ಸರಿಸುಮಾರು 130 ಕೋಟಿ ರೂಪಾಯಿ ಅಥವಾ ಶೇ. 747 ರಷ್ಟು ಅಧಿಕವಾಗಿದೆ.

Union Minister Pralhad Joshi : ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿದ್ದರಾಮಯ್ಯ ವಿರುದ್ಧ ಜೋಶಿ ವಾಗ್ದಾಳಿ

ಎರಡನೇ ಸ್ಥಾನದಲ್ಲಿ ಕಛ್ ಬಿಜೆಪಿ ಸಂಸದ ವಿನೋದ್ ಲಖಂಶಿ ಚಾವ್ಡಾ ಅವರ ಹೆಸರಿದ್ದು, ಚಾವ್ಡಾ ಆಸ್ತಿ 2014 ರಲ್ಲಿ ಕೇವಲ 56 ಲಕ್ಷ ರೂಪಾಯಿ ಅಂತ ಘೋಷಿಸಿಕೊಂಡಿದ್ದರು. ಅದು 2024 ರ ವೇಳೆಗೆ 6.5 ಕೋಟಿ ರೂಪಾಯಿಗೆ ಅಧಿಕವಾಗಿ ಶೇ. 1,100 ಕ್ಕಿಂತಲೂ ಹೆಚ್ಚಳವಾಗಿದೆ.

ಹಿರಿಯ ಸಂಸದರಾಗಿರುವ ಖೇಡಾದ ದೇವುಸಿನ್ಹ್‌ ಚೌಹಾಣ್‌ ಹಾಗೂ ಜುನಾಗಢ್ ರಾಜೇಶ್‌ ನರನ್‌ಭಾಯಿ‌ ಅವರುಗಳು ಶ್ರೀಮಂತರಾಗಿದ್ದಾರೆ. ಕಳೆದ ಒಂದು ದಶಕದಲ್ಲಿ ಪ್ರತಿಯೊಬ್ಬ ಸಂಸದರೂ ತಾವು ಘೋಷಿಸಿಕೊಂಡಿದ್ದ ಆಸ್ತಿಗಿಂತ 2 ಕೋಟಿಗಿಂತಲೂ ಅಧಿಕ ಎಂದು ಹೇಳಿಕೊಂಡಿದ್ದಾರೆ.

Lakshmi Hebbalkar : ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಸುರಕ್ಷತೆಗೆ 'ಅಕ್ಕ ಪಡೆ': ಹೆಬ್ಬಾಳ್ಕರ್‌ ಏನಂದ್ರು..!

ಬಾರ್ಡೋಲಿಯ ಪರಿಶಿಷ್ಟ ಜಾತಿಯ ಮತ್ತೊಬ್ಬ ಬಿಜೆಪಿ ಸಂಸದ ಪರಭುಭಾಯಿ ನಾಗರ್‌ಭಾಯಿ ವಾಸವ ಅವರ ಆಸ್ತಿ ಸುಮಾರು 1.6 ಕೋಟಿ ರೂಪಾಯಿಗಳಿಂದ 4.7 ಕೋಟಿ ರೂಪಾಯಿಗಳಿಗೆ ಜಿಗಿದಿದೆ. ಇದು ಅವರ ಆಸ್ತಿಯಲ್ಲಿ ಸುಮಾರು ಶೇ. 195 ರಷ್ಟರ ಹೆಚ್ಚಳವನ್ನು ಸೂಚಿಸುತ್ತದೆ.

ಈ ಎಲ್ಲ ಸಂಸದರು ತಮ್ಮ ಆಸ್ತಿಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಗಮನ ಹರಿಸಿದ್ದರೆ, ಕೇಂದ್ರ ಸಚಿವ ಹಾಗೂ ನವಸಾರಿ ಸಂಸದರಾಗಿರುವ ಸಿ.ಆರ್.‌ ಪಾಟೀಲ್‌ ತಾವು ಘೋಷಿಸಿಕೊಂಡಿದ್ದ ಆಸ್ತಿಯಲ್ಲಿ ಶೇ. 47ರಷ್ಟು ಕಳೆದುಕೊಂಡಿದ್ದಾರೆ. ಹ್ಯಾಟ್ರಿಕ್‌ ಗೆಲುವು ಕಂಡ ಸಂಸದರು ಅಚ್ಚರಿ ರೀತಿಯಲ್ಲಿ ಆಸ್ತಿಯನ್ನು ಹೆಚ್ಚಿಸಿಕೊಂಡಿದ್ದಾರೆ. ಆದರೆ ಸಿ.ಆರ್.‌ ಪಾಟೀಲ್‌ ಮಾತ್ರ ಆಸ್ತಿಯಲ್ಲಿ ಕುಸಿತ ಕಂಡಿರುವುದನ್ನು ಎಡಿಆರ್‌ ವರದಿಯು ತಿಳಿಸಿದೆ.

C M Siddaramaiah : ಹೇಗಿದೆ ನೋಡಿ ಸಿದ್ದರಾಮಯ್ಯ ಕೋಪ..! #pratidhvani

ದೇಶದಲ್ಲಿ ಹಲವಾರು ಸಮಸ್ಯೆಗಳು ಇದ್ದರೂ ಅವುಗಳ ಪರಿಹಾರಕ್ಕೆ ಸಂಸದರು ಮುಂದಾಗದೆ, ತಮ್ಮ ಆಸ್ತಿಯನ್ನು ಹೆಚ್ಚಿಸಿಕೊಳ್ಳುವುದರಲ್ಲಿಯೇ ಬ್ಯುಸಿ ಆಗಿದ್ದಾರಾ ಎನ್ನುವ ಪ್ರಶ್ನೆಯು ಮೂಡುತ್ತಿದೆ. ರಾಜ್ಯದ ವಿಚಾರದಲ್ಲಿಯೂ ಅಷ್ಟೇ ಪ್ರಮುಖ ನೀರಾವರಿ ಯೋಜನೆಗಳು ಜಾರಿಯಾಗಬೇಕಿದೆ. ರಾಜ್ಯದ ಹಿತಾಸಕ್ತಿಗಳ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಬದಲು ತಮ್ಮದೇ ಏಳಿಗೆಯಲ್ಲಿ ಇವರು ಮಗ್ನರಾಗಿದ್ದಾರಾ ಎಂಬ ಅನುಮಾನ ಮೂಡುತ್ತಿದೆ.

Tags: AssetsBJPcongressIndans PoliticsKarnataka PoliticsmpPolitics
Previous Post

ಮನರೇಗಾ ಬಗ್ಗೆ ಪ್ರಹ್ಲಾದ್ ಜೋಷಿ ಬಹಿರಂಗ ಚರ್ಚೆಗೆ ಬರಲಿ: ಡಿ.ಕೆ. ಶಿವಕುಮಾರ್ ಸವಾಲ್..!

Next Post

KPCC ಅಧ್ಯಕ್ಷ ಸ್ಥಾನದ ಮೇಲೆ ರಾಜಣ್ಣ ಕಣ್ಣು: ಹೈಕಮಾಂಡ್‌ಗೆ ಹೇಳಿದ್ದೇನೆ ಎಂದ ಮಾಜಿ ಸಚಿವರು..!

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
Next Post
KPCC ಅಧ್ಯಕ್ಷ ಸ್ಥಾನದ ಮೇಲೆ ರಾಜಣ್ಣ ಕಣ್ಣು: ಹೈಕಮಾಂಡ್‌ಗೆ ಹೇಳಿದ್ದೇನೆ ಎಂದ ಮಾಜಿ ಸಚಿವರು..!

KPCC ಅಧ್ಯಕ್ಷ ಸ್ಥಾನದ ಮೇಲೆ ರಾಜಣ್ಣ ಕಣ್ಣು: ಹೈಕಮಾಂಡ್‌ಗೆ ಹೇಳಿದ್ದೇನೆ ಎಂದ ಮಾಜಿ ಸಚಿವರು..!

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada