• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ

ಪ್ರತಿಧ್ವನಿ by ಪ್ರತಿಧ್ವನಿ
January 10, 2026
in Top Story, ಕರ್ನಾಟಕ, ರಾಜಕೀಯ
0
ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ
Share on WhatsAppShare on FacebookShare on Telegram

ಚಾಮರಾಜನಗರ: 2021ರಲ್ಲಿ ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಚಾಮರಾಜನಗರ (Chamarajanagar) ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ್ದ ಭೀಕರ ಆಕ್ಸಿಜನ್ ದುರಂತ ಪ್ರಕರಣದ ಸಂತ್ರಸ್ತ ಕುಟುಂಬಗಳಿಗೆ ಕೊನೆಗೂ ನ್ಯಾಯ ಸಿಕ್ಕಂತಾಗಿದೆ. ಆಕ್ಸಿಜನ್ ಕೊರತೆಯಿಂದ ಮೃತಪಟ್ಟ 36 ರೋಗಿಗಳ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಜನವರಿ 26ರ ಗಣರಾಜ್ಯೋತ್ಸವದ ದಿನವೇ ನೇಮಕಾತಿ ಆದೇಶಗಳನ್ನು ವಿತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್(K. Venkatesh) ತಿಳಿಸಿದ್ದಾರೆ.

ADVERTISEMENT
CM Ibrahim React on Siddaramaiah: ನಮ್ ಟಗರು ಸಿದ್ರಾಮಯ್ಯ ಸುಲಭ ಅಲ್ಲ  #pratidhvani

ಚಾಮರಾಜನಗರದಲ್ಲಿ ಮಾತನಾಡಿದ ಸಚಿವ ಕೆ. ವೆಂಕಟೇಶ್, ʼಆಕ್ಸಿಜನ್ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನ್ಯಾಯ ಒದಗಿಸುವುದು ಸರ್ಕಾರದ ನೈತಿಕ ಹೊಣೆ. ಸರ್ಕಾರ ನೀಡಿದ್ದ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ, ಸಂತ್ರಸ್ತ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲಾಗುತ್ತದೆ. ಗಣರಾಜ್ಯೋತ್ಸವದಂದು ಅಧಿಕೃತವಾಗಿ ನೇಮಕಾತಿ ಆದೇಶ ವಿತರಿಸಲಾಗುವುದುʼ ಎಂದು ಸ್ಪಷ್ಟಪಡಿಸಿದರು.

DK Shivakumar :  ಯತ್ನಾಳ್ ಗೆ ಟಕ್ಕರ್ ಕೊಟ್ಟ ಡಿಕೆ ಶಿವಕುಮಾರ್  #pratidhvani #dkshivamukur #yatnal

2021ರ ಮೇ 3ರಂದು, ಕೋವಿಡ್ ಸೋಂಕಿನ ತೀವ್ರತೆ ಹೆಚ್ಚಿದ್ದ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸರಬರಾಜು ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಇದರಿಂದ ಚಿಕಿತ್ಸೆ ಪಡೆಯುತ್ತಿದ್ದ 36 ಕೋವಿಡ್ ರೋಗಿಗಳು ಕೆಲವೇ ಗಂಟೆಗಳ ಅಂತರದಲ್ಲಿ ಸಾವನ್ನಪ್ಪಿದ್ದರು. ಈ ಘಟನೆ ರಾಜ್ಯವಷ್ಟೇ ಅಲ್ಲದೆ ದೇಶಾದ್ಯಂತ ತೀವ್ರ ಆಕ್ರೋಶ ಮತ್ತು ದುಃಖಕ್ಕೆ ಕಾರಣವಾಗಿತ್ತು. ಆ ಸಮಯದಲ್ಲಿ ಆರೋಗ್ಯ ವ್ಯವಸ್ಥೆಯ ನಿರ್ಲಕ್ಷ್ಯ, ಆಕ್ಸಿಜನ್ ಸರಬರಾಜು ವ್ಯವಸ್ಥೆಯ ವೈಫಲ್ಯ ಮತ್ತು ಆಡಳಿತಾತ್ಮಕ ಲೋಪಗಳ ಕುರಿತು ಗಂಭೀರ ಆರೋಪಗಳು ಕೇಳಿಬಂದಿದ್ದವು.

Yatnal on Siddaramaiah: ಇದು ಸರ್ಕಾರಿ ಕಾರ್ಯಕ್ರಮ.. ನಾನು ಟೀಕೆ ಮಾಡಲ್ಲ ಅಂತ ಹೇಳುತ್ತಲೇ ಯತ್ನಾಳ್ ಕಾಮಿಡಿ|

ದುರಂತದ ಬಳಿಕ ಸಂತ್ರಸ್ತ ಕುಟುಂಬಗಳು ನ್ಯಾಯಕ್ಕಾಗಿ ಸತತ ನಾಲ್ಕು ವರ್ಷಗಳ ಕಾಲ ಹೋರಾಟ ನಡೆಸಿದ್ದವು. ಪರಿಹಾರ, ಉದ್ಯೋಗ ಮತ್ತು ಹೊಣೆಗಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಗಳ ಮೇಲೆ ಒತ್ತಡ ಹೇರಲಾಗಿತ್ತು. ವಿವಿಧ ಹೋರಾಟಗಳು, ಮನವಿಗಳು ಮತ್ತು ಪ್ರತಿಭಟನೆಗಳ ನಂತರ ಇದೀಗ ಸರ್ಕಾರಿ ಉದ್ಯೋಗ ಘೋಷಣೆಯಾಗಿದೆ.

Tags: ‌ covid-19Chamarajanagarachamarajanagara oxygen tragedyDeathgovernment jobIndiaKarnatakaState Government
Previous Post

BBK 12: ರಘು, ಗಿಲ್ಲಿ ಜೊತೆ ರಕ್ಷಿತಾ ಆಪ್ತತೆ ವಿವಾದ: ಸುದೀಪ್‌ ನಡೆಗೆ ವೀಕ್ಷಕರ ಅಸಮಾಧಾನ

Next Post

BBK12: ಬಿಗ್‌ ಬಾಸ್‌ ಮನೆಗೆ ಹೈವೋಲ್ಟೇಜ್‌ ಎಂಟರ್‌ಟೈನ್‌ಮೆಂಟ್‌ ತಂದ ಗಿಲ್ಲಿ ಆಟದ ಗುಟ್ಟೇನು..?

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post
BBK12: ಬಿಗ್‌ ಬಾಸ್‌ ಮನೆಗೆ ಹೈವೋಲ್ಟೇಜ್‌ ಎಂಟರ್‌ಟೈನ್‌ಮೆಂಟ್‌ ತಂದ ಗಿಲ್ಲಿ ಆಟದ ಗುಟ್ಟೇನು..?

BBK12: ಬಿಗ್‌ ಬಾಸ್‌ ಮನೆಗೆ ಹೈವೋಲ್ಟೇಜ್‌ ಎಂಟರ್‌ಟೈನ್‌ಮೆಂಟ್‌ ತಂದ ಗಿಲ್ಲಿ ಆಟದ ಗುಟ್ಟೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada