• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

ಪ್ರತಿಧ್ವನಿ by ಪ್ರತಿಧ್ವನಿ
January 16, 2026
in Uncategorized
0
ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..
Share on WhatsAppShare on FacebookShare on Telegram

ಬೆಂಗಳೂರು : ತೀವ್ರ ಜಿದ್ದಾಜಿದ್ದಿನ ಕಣವಾಗಿ ಪರಿಣಮಿಸಿದ್ದ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಠಾಕ್ರೆ ಸಹೋದರರ ಕೋಟೆಯನ್ನು ಛಿದ್ರಗೊಳಿಸುವಲ್ಲಿ ಫಡ್ನವೀಸ್‌ ನೇತೃತ್ವದ ಬಿಜೆಪಿ ಹಾಗೂ ಶಿವಸೇನಯ ಮೈತ್ರಿ ಯಶಸ್ವಿಯಾಗಿದೆ. ಏಷ್ಯಾದಲ್ಲೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಯು ಇದೀಗ ಬಿಜೆಪಿಯ ತೆಕ್ಕೆಗೆ ಒಲಿದಿದೆ.

ADVERTISEMENT

ಒಟ್ಟು 227 ಸ್ಥಾನಗಳಿಗೆ ನಡೆದಿದ್ದ ಚುನಾವಣೆಯಲ್ಲಿ ಫಡ್ನವೀಸ್‌ ಹಾಗೂ ಏಕನಾಥ್‌ ಶಿಂಧೆ ಜೋಡಿ ಅಧ್ಬುತ ಪ್ರದರ್ಶನ ನೀಡಿದೆ ಮೂಲಕ ಮತ್ತೊಮ್ಮೆ ಸಂಘಟನಾ ಚತುರ ರಾಜಕಾರಣಿ ದೇವೇಂದ್ರ ಫಡ್ನವೀಸ್‌ ಮಹಾರಾಷ್ಟ್ರದ ಪ್ರಭಾವಿ ನಾಯಕರಾಗಿ ಹೊರಹೊಮ್ಮಿದ್ದಾರೆ. ಆದರೆ ಭಾರತ ದೇಶದ ವಾಣಿಜ್ಯ ನಗರಿಯಾದ ಮುಂಬೈಯಲ್ಲಿಯೇ ಕಾಂಗ್ರೆಸ್‌ ತನ್‌ ಶಕ್ತಿಯನ್ನು ಕಳೆದುಕೊಂಡು ಬಲಹೀನವಾಗಿದೆ. 227 ಸ್ಥಾನಗಳಲ್ಲಿ 152ರಲ್ಲಿ ಸ್ಫರ್ಧಿಸಿದ್ದ ಕಾಂಗ್ರೆಸ್ ಕೇವಲ 15 ಸ್ಥಾನಗಳಿಗೆ ತೃಪ್ತಿಪಡುವಂತಾಗಿದೆ. ಅಲ್ಲದೆ ಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿ ಕೇವಲ 3 ಸ್ಥಾನಕ್ಕೆ ಸೀಮಿತವಾಗಿದ್ದು, ಯುಬಿಟಿ 72, ಬಿಜೆಪಿ ಹಾಗೂ ಶಿಂಧೆ ನೇತೃತ್ವದ ಶಿವಸೇನೆ ಜೋಡಿ 122 ಸ್ಥಾನಗಳಲ್ಲಿ ಗೆಲುವು ದಾಖಲಿಸುವ ಮೂಲಕ ಠಾಕ್ರೆ ಬ್ರದರ್ಸ್‌ಗಳಿಗೆ ಶಾಕ್‌ ನೀಡಿವೆ. ಇತರ ಪಕ್ಷಗಳು 10 ಸ್ಥಾನಗಳಲ್ಲಿ ಗೆಲುವ ಕಂಡಿವೆ.

227 ಸ್ಥಾನಗಳಲ್ಲಿ 88ರಲ್ಲಿ ಬಿಜೆಪಿ ಗೆದ್ದಿದ್ದು, ಬಿಜೆಪಿಯ ಮಿತ್ರ ಪಕ್ಷ ಶಿವಸೇನೆ 28 ಸ್ಥಾನಗಳಲ್ಲಿ ಮುಂದಿದೆ. ಈ ಮಹಾಯುತಿ ಮೈತ್ರಿಕೂಟವು 114ರ ಅರ್ಧದಷ್ಟನ್ನು ಆರಾಮವಾಗಿ ದಾಟಿದೆ. ಹೀಗಾಗಿ ಮುಂಬೈ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೈತ್ರಿ ಅಧಿಕಾರ ನಡೆಸಲಿದೆ.

ಇನ್ನೂ ಮುಂಬೈ ನಗರದ ಜನರು ತಮ್ಮ ಪಕ್ಷಕ್ಕೆ ನೀಡಿರುವ ಬೆಂಬಲಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ಉತ್ಸಾಹಿ ಜನರು ಎನ್‌ಡಿಎಯ ಸಾರ್ವಜನಿಕ ಕಲ್ಯಾಣ ಮತ್ತು ಉತ್ತಮ ಆಡಳಿತದ ಕಾರ್ಯಸೂಚಿಯನ್ನು ಆಶೀರ್ವದಿಸಿದ್ದಾರೆ! ಹಲವಾರು ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗಳ ಫಲಿತಾಂಶಗಳು ಎನ್‌ಡಿಎ ಮತ್ತು ಮಹಾರಾಷ್ಟ್ರದ ಜನರ ನಡುವಿನ ಬಾಂಧವ್ಯವು ಇನ್ನಷ್ಟು ಗಟ್ಟಿಗೊಳಿಸಿದೆ. ನಮ್ಮ ಕೆಲಸದ ಅನುಭವ ಮತ್ತು ಅಭಿವೃದ್ಧಿಯ ದೃಷ್ಟಿಕೋನವು ಜನರ ಹೃದಯಗಳನ್ನು ತಲುಪಿದೆ ಎಂದು ಮೋದಿ ಮಹಾರಾಷ್ಟ್ರದ ಎಲ್ಲಾ ಜನರಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಜನಾದೇಶವು ಪ್ರಗತಿಗೆ ಮತ್ತಷ್ಟು ವೇಗ ನೀಡುತ್ತದೆ, ಅಲ್ಲದೆ ಇದು  ರಾಜ್ಯದ ಶ್ರೀಮಂತ ಸಂಸ್ಕೃತಿಯ ಆಚರಣೆಯಾಗಿದೆ. “ಮಹಾರಾಷ್ಟ್ರದಾದ್ಯಂತ ಜನರ ನಡುವೆ ಅವಿರತ ಶ್ರಮವಹಿಸಿದ ಪ್ರತಿಯೊಬ್ಬ ಎನ್‌ಡಿಎ ಕಾರ್ಯಕರ್ತರ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಅವರೆಲ್ಲ ನಮ್ಮ ಮೈತ್ರಿಕೂಟದ ಸಾಧನೆಯ ಬಗ್ಗೆ ಜನರಿಗೆ ತಲುಪಿಸಿದ್ದಾರೆ. ಭವಿಷ್ಯದ ಬಗ್ಗೆ ನಮ್ಮ ದೃಷ್ಟಿಕೋನವನ್ನು ಎತ್ತಿ ತೋರಿಸಿದರು ಮತ್ತು ವಿರೋಧ ಪಕ್ಷದ ಸುಳ್ಳುಗಳನ್ನು ಪರಿಣಾಮಕಾರಿಯಾಗಿ ಹಿಮ್ಮೇಟ್ಟಿಸಿದರು. ಅವರಿಗೆ ನನ್ನ ಶುಭಾಶಯಗಳು” ಎಂದು ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಬಿಜೆಪಿಯ ಐತಿಹಾಸಿಕ ಗೆಲುವನ್ನು ಸಂಭ್ರಮಿಸಿದ್ದಾರೆ.

Tags: Ajit PawarBJPBJP-Shivsena allianceBMC Election 2026congressDevendra FadnavisEknath ShindeElectinon Commission of Maharashtrakannada newskarnataka newsmaharashtra politicsNarendra ModiPratidhvaniRahul GandhiRaj ThackerayUddhav ThackareyVoters
Previous Post

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

Next Post

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

Related Posts

ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?
Uncategorized

ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?

by ಪ್ರತಿಧ್ವನಿ
March 3, 2026
0

ದೇಶದ ಪರಮೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯಿಂದ ಸಿಟ್ಟಾದ ಇರಾನ್‌, ಸೋಮವಾರ ನೆರೆಯ ಕೊಲ್ಲಿದೇಶಗಳ ಮೇಲೆ ಪ್ರತೀಕಾರ ದಾಳಿ ನಡೆಸುತ್ತಿದೆ. ಇರಾನ್‌ ಬೆಂಬಲಿತ ಹೆಜ್ಬೊಲ್ಲಾ ಬಂಡುಕೂರರು ಇಸ್ರೇಲ್‌...

Read moreDetails
ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

March 1, 2026
Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

March 1, 2026
ಈ ದಿನಾಂಕದಿಂದ ಭಾರತ-ನೇಪಾಳ ಗಡಿ ಬಂದ್: ಕಾರಣವೇನು

ಮೇಲ್ದರ್ಜೆಗೇರಿದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶೀಘ್ರದಲ್ಲಿ ಎಲ್ಲಾ ಸೌಲಭ್ಯ : ಸಚಿವ ದಿನೇಶ್ ಗುಂಡೂರಾವ್

February 28, 2026
ಈ  ಮೂರು ಊರುಗಳ ಮರುನಾಮಕರಣಕ್ಕೆ ಸರ್ಕಾರ ನಿರ್ಧಾರ: ಯಾವವು ಗೊತ್ತೆ ?

ಈ  ಮೂರು ಊರುಗಳ ಮರುನಾಮಕರಣಕ್ಕೆ ಸರ್ಕಾರ ನಿರ್ಧಾರ: ಯಾವವು ಗೊತ್ತೆ ?

February 28, 2026
Next Post
ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada