• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BMTC ಬಸ್‌ಗಳ ಕೊರತೆ: ಮೋಹನ್ ದಾಸ್ ಪೈ ಟೀಕೆಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು

ಪ್ರತಿಧ್ವನಿ by ಪ್ರತಿಧ್ವನಿ
January 30, 2026
in Top Story, ಕರ್ನಾಟಕ, ರಾಜಕೀಯ
0
BMTC ಬಸ್‌ಗಳ ಕೊರತೆ: ಮೋಹನ್ ದಾಸ್ ಪೈ ಟೀಕೆಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್‌ಗಳ ಕೊರತೆ ವಿಚಾರವಾಗಿ ರಾಜ್ಯ ಸರ್ಕಾರ(State Government) ಮತ್ತು ಉದ್ಯಮಿ ಟಿ.ವಿ. ಮೋಹನ್ ದಾಸ್ ಪೈ(Mohandas Pai) ನಡುವಿನ ವಾಕ್ಸಮರ ತೀವ್ರಗೊಂಡಿದೆ. ಬಿಎಂಟಿಸಿ ಬಸ್‌ಗಳ ಸಂಖ್ಯೆ ನಗರಕ್ಕೆ ಸಾಕಾಗುತ್ತಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕಿಸಿದ್ದ ಮೋಹನ್ ದಾಸ್ ಪೈ ಅವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಹಿರಂಗ ಸವಾಲು ಹಾಕಿದ್ದಾರೆ.

Muniratna : ನಾನು ರೋಡಲ್ಲಿ ಹೋಗ್ತಿದ್ರೆ ಬಟ್ಟೆ ಹರಿತ್ತಾರೆ #pratidhvani #muniratna #rrnagara #rrnagara

ಇತ್ತೀಚೆಗೆ ಉದ್ಯಮಿ ಮೋಹನ್ ದಾಸ್ ಪೈ ಅವರು ಟ್ವೀಟ್ ಮೂಲಕ, ಬೆಂಗಳೂರಿನಲ್ಲಿ ಕನಿಷ್ಠ 10,000ಕ್ಕೂ ಹೆಚ್ಚು ಬಸ್‌ಗಳ ಕೊರತೆಯಿದೆ. ಆದರೆ ಸರ್ಕಾರ ಅಗತ್ಯಕ್ಕಿಂತ ಅರ್ಧಕ್ಕಿಂತಲೂ ಕಡಿಮೆ ಬಸ್‌ಗಳನ್ನು ಮಾತ್ರ ಖರೀದಿ ಮಾಡಲು ಮುಂದಾಗಿದೆ. ಬಸ್ ಖರೀದಿ ಪ್ರಕ್ರಿಯೆ ವಿಳಂಬವಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಆಗುತ್ತಿದೆ. ಜನರಿಗೆ ಉತ್ತಮ ಸಾರಿಗೆ ಸೇವೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿದ್ದರು.

ಉದ್ಯಮಿ ಟಿ.ವಿ. ಮೋಹನ್ ದಾಸ್ ಪೈ ಅವರ ಈ ಹೇಳಿಕೆ ರಾಜ್ಯ ಸರ್ಕಾರದ ಗಮನ ಸೆಳೆದಿದ್ದು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಪೈ ಅವರ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಚಿವರುʼಬರೀ ಟ್ವೀಟ್ ಮಾಡುವುದರಿಂದ ಸಮಸ್ಯೆ ಪರಿಹಾರವಾಗುವುದಿಲ್ಲ. ಅಂಕಿ-ಅಂಶಗಳೊಂದಿಗೆ ನೇರ ಚರ್ಚೆಗೆ ಬನ್ನಿʼ ಎಂದು ಸವಾಲು ಹಾಕಿದ್ದಾರೆ.

Karnataka Legislative Council Session : ಪರಿಷತ್ ನಲ್ಲಿ  ನಿಲ್ಲದ ವಾಕ್ಸಮರ #pratidhvani #siddaramaiah

ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಮಾಡುವುದಕ್ಕಿಂತ, ಸಾರಿಗೆ ಇಲಾಖೆಯ ವಾಸ್ತವಾಂಶಗಳೊಂದಿಗೆ ಚರ್ಚಿಸಲು ಮುಂದಾಗಬೇಕು. ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು (MD) ಪೈ ಅವರೊಂದಿಗೆ ಚರ್ಚೆಗೆ ಸಂಪೂರ್ಣ ಸಿದ್ಧರಾಗಿದ್ದು, ಬಸ್ ಖರೀದಿ, ನಿರ್ವಹಣೆ ಮತ್ತು ಭವಿಷ್ಯದ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲು ತಯಾರಿದ್ದಾರೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಸರ್ಕಾರ ಹೊಸ ಬಸ್‌ಗಳನ್ನು ಹಂತ ಹಂತವಾಗಿ ಸೇರ್ಪಡೆಗೊಳಿಸುತ್ತಿದ್ದು, ತಾಂತ್ರಿಕ ಹಾಗೂ ಹಣಕಾಸು ಕಾರಣಗಳಿಂದ ಸ್ವಲ್ಪ ವಿಳಂಬವಾಗುತ್ತಿದೆ. ಈ ಅಂಶಗಳನ್ನು ಅರಿಯದೆ ಟೀಕೆ ಮಾಡುವುದು ಸರಿಯಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಬೆಂಗಳೂರಿನಂತಹ ಮಹಾನಗರದಲ್ಲಿ ಮೆಟ್ರೋ ಜೊತೆಗೆ ಬಿಎಂಟಿಸಿ ಬಸ್‌ಗಳ ಅವಶ್ಯಕತೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವಿಶೇಷವಾಗಿ ಶಕ್ತಿ ಯೋಜನೆ ಜಾರಿಯಾದ ನಂತರ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಹೀಗಾಗಿ ಬಸ್‌ಗಳ ಕೊರತೆ ಇದೆ ಎನ್ನುವುದು ಸಾರ್ವಜನಿಕರಿಂದ ಹೆಚ್ಚಾಗಿ ಕೇಳಿಬರುತ್ತಿರುವ ದೂರು. ಹೀಗಾಗಿ ಟಿ.ವಿ. ಮೋಹನ್ ದಾಸ್ ಪೈ ಅವರು ಸಚಿವರ ಸವಾಲು ಸ್ವೀಕರಿಸಿ ಚರ್ಚೆಗೆ ಬರುತ್ತಾರಾ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.

Mr. @TVMohandasPai, Our BMTC MD is enough to handle a face-to-face debate with you on any platform.

Kindly come and discuss the facts with them directly. Are you ready to step up, or will you just keep tweeting?

Your view is not just biased—it is fundamentally dogmatic.

You… https://t.co/F2nR7Tk1yN

— Ramalinga Reddy (@RLR_BTM) January 29, 2026

Special Assembly bjP vs Bjp: ಸದನದಲ್ಲಿ ಸರ್ಕಾರ- ವಿಪಕ್ಷದ ಮಧ್ಯೆ ಕಾವೇರಿದ ಚರ್ಚೆ- ಸ್ಪೀಕರ್ ಏನ್ ಮಾಡಿದ್ರು ನೋಡಿ
Tags: bengaluruBMTCCM SiddaramaiahDCM DK ShivakumarKarnatakaMinister RamalingareddyPolitics
Previous Post

Union Budget 2026: ಟ್ರಂಪ್‌ಗೆ ಗುನ್ನ: ಕೇಂದ್ರ ಬಜೆಟ್‌ನಲ್ಲಿ ಯಾರಿಗೆ ಸಿಹಿ? ಯಾರಿಗೆ ಕಹಿ..?

Next Post

ಅಪರೂಪದ ದೃಶ್ಯ: ಒಂದೇ ವೇದಿಕೆಯಲ್ಲಿ ಬಿ.ಎಲ್ ಸಂತೋಷ್–ಡಿ.ಕೆ ಶಿವಕುಮಾರ್

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
ಅಪರೂಪದ ದೃಶ್ಯ: ಒಂದೇ ವೇದಿಕೆಯಲ್ಲಿ ಬಿ.ಎಲ್ ಸಂತೋಷ್–ಡಿ.ಕೆ ಶಿವಕುಮಾರ್

ಅಪರೂಪದ ದೃಶ್ಯ: ಒಂದೇ ವೇದಿಕೆಯಲ್ಲಿ ಬಿ.ಎಲ್ ಸಂತೋಷ್–ಡಿ.ಕೆ ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada