ನವದೆಹಲಿ : ಬಾಂಗ್ಲಾ ದೇಶದ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧವಾಗಿರುವ ತಾರಿಕ್ ರೆಹಮಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಹಾರೈಸಿದ್ದಾರೆ.

ಹಲವು ವರ್ಷಗಳ ಕಾಲ ದೇಶದಿಂದ ಹೊರಹೋಗಿ ಅಜ್ಞಾತ ಸ್ಥಳದಲ್ಲಿ ವಾಸವಾಗಿದ್ದ ತಾರಿಕ್ ಅದೃಷ್ಟ ಖುಲಾಯಿಸಿದೆ. ಸ್ವದೇಶಕ್ಕೆ ಮರಳಿದ ಕೆಲವೇ ಕೆಲವು ದಿನಗಳಲ್ಲಿ ಬಾಂಗ್ಲಾ ಪ್ರಧಾನಿಯಾಗಲಿದ್ದಾರೆ.
ಇದನ್ನೂ ಓದಿ : ನಮೀಬಿಯಾ ವಿರುದ್ಧ ಗೆದ್ದು ಬೀಗಿದ ಭಾರತ : 93 ರನ್ಗಳ ಭರ್ಜರಿ ಜಯ..!
ಹೀಗಾಗಿ ಸಂಸತ್ ಚುನಾವಣೆಯಲ್ಲಿ ಬಹುಮತದತ್ತ ಸಾಗುತ್ತಿರುವ ಬಾಂಗ್ಲಾ ನ್ಯಾಷನಲ್ ಪಾರ್ಟಿಯ ನಾಯಕನಿಗೆ ಭಾರತದ ಪ್ರಧಾನಿ, ಪ್ರಜಾಪ್ರಭುತ್ವ ಮತ್ತು ಪ್ರಾದೇಶಿಕ ಸ್ಥಿರತೆಗೆ ದೇಶದ ಬದ್ಧತೆಯನ್ನು ತಿಳಿಸಿದ್ದಾರೆ. ಈ ಜನಾದೇಶವು ರೆಹಮಾನ್ ನಾಯಕತ್ವದ ಮೇಲಿನ ಜನರ ನಂಬಿಕೆಯನ್ನು ನಮಗೆ ತೋರಿಸುತ್ತದೆ ಎಂದು ಶ್ಲಾಘಿಸಿದ್ದಾರೆ.

ಸಂಸತ್ ಚುನಾವಣೆಯಲ್ಲಿ ಬಾಂಗ್ಲಾದೇಶದ ರಾಷ್ಟ್ರೀಯತಾವಾದಿ ಪಕ್ಷವನ್ನು ನಿರ್ಣಾಯಕ ಗೆಲುವಿನತ್ತ ಕೊಂಡೊಯ್ಯುವುದರ ಜೊತೆಗೆ ಬಾಂಗ್ಲಾದೇಶದಲ್ಲಿ ನೂತನ ರಾಜಕೀಯ ಶಕೆ ಆರಂಭಗೊಂಡಿದೆ. ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸಲು ಮತ್ತು ಕೊಡು-ಕೊಳ್ಳುವಿಕೆಯ ಅಭಿವೃದ್ಧಿ ಗುರಿಗಳನ್ನು ಮುನ್ನಡೆಸಲು ಒಟ್ಟಾಗಿ ಕೆಲಸ ಮಾಡುವಾಗ ಭಾರತವು ಪ್ರಜಾಪ್ರಭುತ್ವ, ಪ್ರಗತಿಪರ ಮತ್ತು ಅಂತರ್ಗತ ಬಾಂಗ್ಲಾದೇಶವನ್ನು ಬೆಂಬಲಿಸಲು ಸಿದ್ಧವಾಗಿದೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡು ತಿಳಿಸಿದ್ದಾರೆ.






