• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CM CUP : ಪತ್ರಕರ್ತನಾಗಿದ್ದ ಲಿಂಗರಾಜು ಯಶಸ್ವಿ ಉದ್ಯಮಿಯಾಗಿ ರೂಪುಗೊಂಡ ಸ್ಪೂರ್ತಿ ಕಥೆ..!

ಸರ್ಕಾರಿ ಇಲಾಖೆಗಳ ಜಾಹೀರಾತು, ಬ್ರ್ಯಾಂಡಿಂಗ್, ಈವೇಂಟ್ ಮ್ಯಾನೇಜ್‍ಮೆಂಟ್, ಸಾಕ್ಷ್ಯ ಚಿತ್ರಗಳನ್ನು ನಿರ್ಮಾಣ ಮಾಡುವ ಮೂಲಕ ಛಾಪು ಮೂಡಿಸಿದ್ದ ಲಿಂಗರಾಜು..

ಪ್ರತಿಧ್ವನಿ by ಪ್ರತಿಧ್ವನಿ
February 17, 2026
in Top Story, ಇದೀಗ, ಕರ್ನಾಟಕ, ಕ್ರೀಡೆ, ದೇಶ
0
CM CUP : ಪತ್ರಕರ್ತನಾಗಿದ್ದ ಲಿಂಗರಾಜು ಯಶಸ್ವಿ ಉದ್ಯಮಿಯಾಗಿ ರೂಪುಗೊಂಡ ಸ್ಪೂರ್ತಿ ಕಥೆ..!
Share on WhatsAppShare on FacebookShare on Telegram

ಬೆಂಗಳೂರು : ಸಿಎಂ ಕಪ್‌ ಬ್ಯಾಡ್ಮಿಂಟನ್‌ ಕ್ರೀಡಾಕೂಟದಲ್ಲಿ ಭಾಗವಹಿಸಿರುವ ತಂಡಗಳ ಪೈಕಿ ಇನ್‍ಸ್ಪೈರ್ ಚಾಲೆಂಜರ್ಸ್  ಕೂಡ ಇತರ ತಂಡಗಳಿಗಿಂತ ವಿಭಿನ್ನವಾಗಿ ತೊಡಗಿಸಿಕೊಂಡಿದೆ. ಪಂದ್ಯಾವಳಿ ಆರಂಭವಾದಾಗಿನಿಂದಲೂ ತಂಡದ ಆಟಗಾರರಲ್ಲಿ ಉತ್ಸಾಹ ಮಾತ್ರ ಬತ್ತಿಲ್ಲ. ಈ ತಂಡದ ಮಾಲೀಕರು ಹಾಗೂ ಉದ್ಯಮಿ ಜಿ.ಎಸ್. ಲಿಂಗರಾಜು ಕೂಡ ತಂಡಕ್ಕೆ ದೊಡ್ಡ ಶಕ್ತಿಯಾಗಿದ್ದಾರೆ.

ADVERTISEMENT
Madhu_Bangarappa : SSLC ಹಾಗೂ PUC ಪರೀಕ್ಷೆ-1 ನೆಡೆಸಲು ಜಿಲ್ಲಾಧಿಕಾರಿಗಳೊಂದಿಗೆ ಮಹತ್ವದ ವಿಡಿಯೋ ಕಾನ್ಫರೆನ್ಸ್"

ಜಿ.ಎಸ್. ಲಿಂಗರಾಜು. ಕರ್ನಾಟಕ ಮಾಧ್ಯಮ ರಂಗದಲ್ಲಿ ಚಿರಪರಿಚಿತ ಹೆಸರು. ಪತ್ರಕರ್ತನಾಗಿ ವೃತ್ತಿ ಬದುಕು ಆರಂಭಿಸಿದ್ದ ಲಿಂಗರಾಜು ಅವರು, ಇಂದು ಯಶಸ್ವಿ ಉದ್ಯಮಿಯಾಗಿ ರೂಪುಗೊಂಡಿರುವುದರ ಹಿಂದೆ ಕಠಿಣ ಪರಿಶ್ರಮವಿದೆ. ಸೋಲು – ಗೆಲುವಿನ ನಡುವೆ ಬದುಕಿನಲ್ಲಿ ಸಾಕಷ್ಟು ಸವಾಲುಗಳನ್ನು ಮೆಟ್ಟಿ ನಿಂತು, ಏರಿಳಿತಗಳನ್ನು ಅನುಭವಿಸಿರುವ ಲಿಂಗರಾಜು ಅವರು ಸಮಾಜದಲ್ಲಿ ತನ್ನದೇ ಆದ ಸ್ಥಾನಮಾನಗಳನ್ನು ಪಡೆದುಕೊಂಡಿದ್ದಾರೆ.

ಮಧ್ಯಮ ವರ್ಗದ ಕೃಷಿ ಕುಟುಂಬದಲ್ಲಿ ಜನಿಸಿರುವ ಲಿಂಗರಾಜು ಅವರು, ಪತ್ರಕರ್ತ, ಉದ್ಯಮಿ, ಸಮಾಜ ಸೇವಕನಾಗಿ ಗುರುತಿಸಿಕೊಂಡಿರುವುದು ಹೆಮ್ಮೆಯ ವಿಚಾರ. ಕುವೆಂಪು ವಿವಿಯಲ್ಲಿ ಪದವಿ ಶಿಕ್ಷಣ ಪಡೆದು, ಮೈಸೂರು ವಿವಿಯಲ್ಲಿ ಮಾನವ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಬೆಂಗಳೂರು ವಿವಿಯಲ್ಲಿ ಮಾಸ್ ಕಮ್ಯೂನಿಕೇಷನ್‍ನನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಇದನ್ನೂ ಓದಿ : CM CUP ಬ್ಯಾಡ್ಮಿಂಟನ್‌ ಟೂರ್ನಿ : KGF ಸ್ಮಾಷರ್ಶ್ ತಂಡದ ಸಾರಥಿ ಟೆಕ್ಕಿ ನವೀನ್ ಯಶೋಗಾಥೆ..!

2006ರಿಂದ 2008ರವರೆಗೆ ಪ್ರತಿಷ್ಠಿತ ಟಿವಿ 9 ಚಾನೆಲ್‍ನಲ್ಲಿ ವೃತ್ತಿಬದುಕು ಆರಂಭಿಸಿದ್ದರು. ಬಳಿಕ ಸುವರ್ಣ ನ್ಯೂಸ್ ಹಾಗೂ ಸಮಯ ನ್ಯೂಸ್‍ನಲ್ಲಿ ಕ್ರೈಮ್ ವರದಿಗಾರನಾಗಿ ಸೇವೆ ಸಲ್ಲಿಸಿದ್ದರು. ಎಲ್ಲರ ಬದುಕಿನಲ್ಲೂ ಒಂದು ಟರ್ನಿಂಗ್ ಪಾಯಿಂಟ್ ಅಂತ ಇರುತ್ತೆ. ಬಹುಶಃ ಆ ಒಂದು ಘಟನೆ ಲಿಂಗರಾಜು ಅವರ ಬದುಕಿಗೆ ಹೊಸ ತಿರುವು ನೀಡಿತ್ತು. ನಂತರ ಹಿಂತಿರುಗಿ ನೋಡಿದ್ದೇ ಇಲ್ಲ. ‌

ತನ್ನದೇ ಸ್ವಂತ ಉದ್ಯಮವನ್ನು ಸ್ಥಾಪಿಸಬೇಕು ಎಂಬ ಕನಸಿನೊಂದಿಗೆ 2012ರಲ್ಲಿ ಮನೊಮ್ಯಿಯ ಕ್ರಿಯೇಷನ್ ಎಂಬ ಮೀಡಿಯಾ ಸಂಸ್ಥೆಯನ್ನು ಶುರು ಮಾಡಿದ್ರು. ಆರಂಭದ ದಿನಗಳಲ್ಲಿ ಸಾಕಷ್ಟು ಕಷ್ಟ, ಸೋಲು, ನಿರಾಸೆ ಅನುಭವಿಸಿದ್ರೂ ಲಿಂಗರಾಜು ಎಂದಿಗೂ ಎದೆಗುಂದಲಿಲ್ಲ. ತನ್ನಲ್ಲಿರುವ ಪ್ರತಿಭೆ, ಆತ್ಮವಿಶ್ವಾಸ, ಸ್ನೇಹಮಯ ವ್ಯಕ್ತಿತ್ವದಿಂದ ಮಹತ್ವಕಾಂಕ್ಷೆಯ ಹಾದಿಯತ್ತ ಮುನ್ನುಗಿದ್ದರು.

ಆಗ ಎದುರಿಸಿದ್ದ ಸವಾಲುಗಳು ಅಷ್ಟಿಷ್ಟಲ್ಲ. ತನ್ನ ಬುದ್ಧಿವಂತಿಕೆ ಮತ್ತು ಜಾಣ್ಮೆಯಿಂದಲೇ ಎಲ್ಲವನ್ನೂ ಸರಿದೂಗಿಸಿಕೊಂಡು ಕನಸಿನ ಬೆನ್ನೇರಿ ಹೊರಟರು. ಅಲ್ಲದೆ ಇನ್‍ಸ್ಪೈರ್ ಮೀಡಿಯಾ ಎಂಬ ಮತ್ತೊಂದು ಸಂಸ್ಥೆಯನ್ನು ಆರಂಭಿಸಿ ತನ್ನ ಉದ್ಯಮವನ್ನು ವಿಸ್ತರಿಸಿದ್ರು. ಕಾರ್ಪೋರೇಟ್ ಮತ್ತು ಸರ್ಕಾರಿ ಇಲಾಖೆಗಳ ಜಾಹೀರಾತು, ಬ್ರ್ಯಾಂಡಿಂಗ್, ಈವೇಂಟ್ ಮ್ಯಾನೇಜ್‍ಮೆಂಟ್, ಸಾಕ್ಷ್ಯ ಚಿತ್ರಗಳನ್ನು ನಿರ್ಮಾಣ ಮಾಡುವ ಮೂಲಕ ಛಾಪು ಮೂಡಿಸಿದ್ದರು. ಜೊತೆಗೆ ಹೊಟೇಲ್ ಉದ್ಯಮದತ್ತ ಆಕರ್ಷಣೆಗೊಂಡ ಲಿಂಗರಾಜು ಅವರು ಈಗ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ಮಸಾಲ ರೆಸ್ಟೋರೆಂಟ್ ಅನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ.

ಅಂದ ಹಾಗೇ ಲಿಂಗರಾಜು ಅವರು ಇಂದಿಗೂ ತನ್ನ ಕಷ್ಟದ ದಿನಗಳನ್ನು ಮರೆತಿಲ್ಲ. ಎಷ್ಟೇ ಎತ್ತರಕ್ಕೆ ಬೆಳೆದ್ರೂ ಎಲ್ಲರ ಜೊತೆ ನಗುಮುಖದೊಂದಿಗೆ ಮಾತನಾಡುತ್ತಾರೆ. ನಿಸ್ವಾರ್ಥಿಯಾಗಿ ಎಲ್ಲರ ಜೊತೆಗೂ ಬೆರೆಯುತ್ತಾರೆ. ಹೀಗಾಗಿಯೇ ಅಪಾರ ಸ್ನೇಹಿತರ ಬಳಗವನ್ನು ಹೊಂದಿದ್ದಾರೆ. ತಾನೂ ಬೆಳೆಯಬೇಕು. ಇತರರು ಬೆಳೆಯಬೇಕು ಎಂಬ ಮನೋಭಾವನೆಯನ್ನು ಲಿಂಗರಾಜು ಮೈಗೂಡಿಸಿಕೊಂಡಿದ್ದಾರೆ.

Prathap Simha on Siddaramaiah: ಎಲೆಕ್ಷನ್ ಟೈಂನಲ್ಲಿ ಅಷ್ಟೇ ಗೃಹ ಲಕ್ಷ್ಮಿ ಹಣ ಹಾಕಿದ್ದಾರೆ...! #pratidhvani

ಇನ್ನು ಉದ್ಯಮದ ಜೊತೆಗೆ ಲಿಂಗರಾಜು ಅವರು ಸಮಾಜಮುಖಿ ಕಾರ್ಯಗಳ ಮೂಲಕವೂ ಗುರುತಿಸಿಕೊಂಡಿದ್ದಾರೆ. ಜನ ಕಲ್ಯಾಣ ಗ್ರಾಮೀಣ ಅಭಿವೃದ್ದಿ ಸಂಸ್ಥೆಯ ಮೂಲಕ ಚಿತ್ರದುರ್ಗದಲ್ಲಿ ಪುರಾತನ ಬಾವಿಗಳಿಗೆ ಪುನಶ್ಚೇತನ ನೀಡಿದ್ದಲ್ಲದೆ, ಹಲವಾರು ಗ್ರಾಮೀಣ ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದಾರೆ. ಹಾಗೆಯೇ ವಿ ಫೇರ್ ಕಾಸ್ ಎಂಬ ಮತ್ತೊಂದು ಎನ್‍ಜಿಒ ಸಂಸ್ಥೆಯ ಮೂಲಕ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

ಜನಸೇವಕನಾಗಿ ಜನನಾಯಕನಾಗರಬೇಕು ಎಂಬುದು ಲಿಂಗರಾಜು ಅವರ ಮುಂದಿರುವ ಗುರಿ. ಆ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದಾರೆ. ಈಗಾಗಲೇ ಅಖಿಲ ಭಾರತ ಲಿಂಗಾಯತ ಮಹಾಸಭಾದ ಯುವ ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ, ಈಗ ಕಾರ್ಯದರ್ಶಿಯಾಗಿದ್ದಾರೆ.

ಅಲ್ಲದೆ, ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಗಮನ ಸೆಳೆದು, ಬಸವ ಜಯಂತಿ, ಜ್ಯೋತಿ ರಥಯಾತ್ರೆ, ಶರಣ ಗಣ ಮೇಳ ಸೇರಿ ಹಲವಾರು ಧಾರ್ಮಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದೀಗ 2026ರ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಇನ್‍ಸ್ಪೈಯರ್ ಚಾಲೆಂಜರ್ಸ್ ತಂಡದ ಸಾರಥ್ಯ ವಹಿಸಿರುವ ಲಿಂಗರಾಜು ಅವರ ಉದ್ಯಮಕ್ಕೆ ಯಶಸ್ವಿಯಾಗಲಿ. ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂಬುವುದೇ ಎಲ್ಲರ ಹಾರೈಕೆಯಾಗಿದೆ.

Tags: 9 Dreams By CM CUPAS PonnannaBadmintonBadmiton SportsBussiness mancm cupcm cup 2026 karnatakaCM Cup FinalCongress MLACrime ReporterEntertainmentG S LingarajuHotel BussinessInspire ChallengersJournalistkannada newsKarnataka CM CUPkarnataka newsMedia PersonPratidhvaniSOCIAL WORKERSsports news
Previous Post

ಸೂರಜ್ ರೇವಣ್ಣನಿಗೆ ಕೋರ್ಟ್ ನಿಂದ ಮತ್ತೊಂದು ಶಾಕ್ !

Next Post

ಶೂನ್ಯದಿಂದ ಸಾಧನೆಯ ಶಿಖರಕ್ಕೇರಿದ ಛಲಗಾರ.. ಟೆಲಿಕಾಂ ಸ್ಕೈ ಸ್ಟ್ರೈಕರ್ಸ್ ತಂಡದ ಮಾಲೀಕ ಡಾ.ಎನ್. ನರಸಿಂಹಮೂರ್ತಿ ಸ್ಪೂರ್ತಿಯ ಚಿಲುಮೆ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಶೂನ್ಯದಿಂದ ಸಾಧನೆಯ ಶಿಖರಕ್ಕೇರಿದ ಛಲಗಾರ.. ಟೆಲಿಕಾಂ ಸ್ಕೈ  ಸ್ಟ್ರೈಕರ್ಸ್ ತಂಡದ ಮಾಲೀಕ ಡಾ.ಎನ್. ನರಸಿಂಹಮೂರ್ತಿ ಸ್ಪೂರ್ತಿಯ ಚಿಲುಮೆ

ಶೂನ್ಯದಿಂದ ಸಾಧನೆಯ ಶಿಖರಕ್ಕೇರಿದ ಛಲಗಾರ.. ಟೆಲಿಕಾಂ ಸ್ಕೈ ಸ್ಟ್ರೈಕರ್ಸ್ ತಂಡದ ಮಾಲೀಕ ಡಾ.ಎನ್. ನರಸಿಂಹಮೂರ್ತಿ ಸ್ಪೂರ್ತಿಯ ಚಿಲುಮೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada