ಸಿದ್ದರಾಮಯ್ಯ ಸರಣಿ ಟ್ಟೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಇಂತಹ ಸಮಯದಲ್ಲಿ ಕುಮಾರಸ್ವಾಮಿ, ಸಿದ್ದರಾಮಯ್ಯ ಕಾಂಗ್ರೆಸ್ ಅವರಿಗೆ ಸಂದೇಶ ಕೊಟ್ಟಿದ್ದಾರೋ? ಸಿಎಂ ಸ್ಥಾನ ತೆಗೆಯೋಕೆ ನಿಂತಿರೋರಿಗೆ ಸಂದೇಶ ಕೊಟ್ಡಿದ್ದಾರೋ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಕುರುಬ ಸಮಾಜದವನು, ನನ್ನನ್ನ ಅಸೂಯೆಯಿಂದ ತೆಗೆಯೋಕೆ ಹೋಗ್ತಾ ಇದ್ದಾರೆ ಅಂತಾರೆ. ಉತ್ತಮ ಬಜೆಟ್ ಕೊಟ್ಟವನು ನಾನು ಅಂತಾರೆ. ಸಿದ್ದರಾಮಯ್ಯ ಬೆಳೆಯೋಕೆ ಕುರುಬ ಸಮಾಜ ಮಾತ್ರವಲ್ಲ ಎಲ್ಲಾ ಸಮುದಾಯ ಬೆಂಬಲ ಕೊಟ್ಟಿದೆ.ಕುರುಬ ಸಮಾಜವನ್ನ ಎಳೆದಿರೋದು ಯಾವ ಮಟ್ಟಕ್ಕೆ ಅವರ ಹೃದಯದ ಭಾವನೆ ಇದೆ ಅಂತ ಗೊತ್ತಾಗುತ್ತದೆ.ಜಾತಿ ಹೆಸರು ಇಟ್ಟುಕೊಂಡು ಸಾಮಾಜಿಕ ನ್ಯಾಯ, ಜಾತ್ಯಾತೀತ ಅಂತ ಹೇಳ್ತಾರೆ ಎಂದು ಹೆಚ್ಡಿಕೆ ಕಿಡಿಕಾರಿದ್ದಾರೆ.

ಅಂಬೇಡ್ಕರ್, ಬಸವಣ್ಣ ಎಲ್ಲರ ಹೆಸರು ಹೇಳಿದ್ದಾರೆ. ಸಿದ್ದರಾಮಯ್ಯಗೆ ಈಗ ಜ್ಞಾನೋದಯವಾಗಿದೆ. ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡುವ ಜಾಯಮಾನದವರಲ್ಲ . ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡೊಲ್ಲ. ಇದು ಅವರ ಜಾಯಮಾನದಲ್ಲಿ ಬಂದಿದೆ. ನನ್ನ ಪಕ್ಷದಲ್ಲೇ ಇದನ್ನ ನೋಡಿದ್ದೇನೆ ನಾನು. ರಾಜ್ಯದ ಜನತೆ ವಿಷಯ, ಅಹಿಂದ ಜನರಿಗಾಗಿ ಕೆಲಸ ಮಾಡೋಕೆ ಅವರು ಅಧಿಕಾರಕ್ಕೆ ಬಂದಿಲ್ಲ. ಅವರಿಗೆ ವಯಕ್ತಿಕ ಕುರ್ಚಿ ಮುಖ್ಯ. ಕುರ್ಚಿ ಹಿಡಿಯಲು ನಮ್ಮಲ್ಲಿ ಇದ್ದಾಗ ಕೆಲವು ಪಕ್ಷದ ವಿರೋಧಿ ಚಟುವಟಿಕೆ ಮಾಡಿದ್ದರು. ಆಶ್ರಯ ಕೊಟ್ಟ ಪಕ್ಷವನ್ನೇ ಇವತ್ತು ಆವರಿಸಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಹಳಬರನ್ನ ಮೂಲೆಗುಂಪು ಮಾಡಿದ್ದಾರೆ. ನಾನು ಇದ್ದರೆ ಕಾಂಗ್ರೆಸ್, ನಾನು ಇಲ್ಲ ಅಂದರೆ ಕಾಂಗ್ರೆಸ್ ಇಲ್ಲ ಅಂತ ವಾತಾವರಣ ನಿರ್ಮಾಣ ಮಾಡ್ತಾ ಇದ್ದಾರೆ. ಈ ಮೂಲಕ ಸಿಎಂ ಸ್ಥಾನ ಬಿಡೋಕೆ ಆಗೊಲ್ಲ ಅಂತ ಹೊಸ ಅಸ್ತ್ರ ಪ್ರಯೋಗ ಮಾಡಿದ್ದಾರೆ. ಸಿದ್ದರಾಮಯ್ಯ ಕುರ್ಚಿ ಬಿಡೊಲ್ಲ ಅಂತ ಹೆಚ್ಡಿಕೆ ಹೇಳಿದ್ದಾರೆ.






