ಬೆಂಗಳೂರು : ಅಂತರಾಷ್ಟ್ರೀಯ ಮಟ್ದಲ್ಲಿ ಭಾರತಕ್ಕೆ ರಾಜತಾಂತ್ರಿಕ ಬಹುದೊಡ್ಡ ಗೆಲುವಾಗಿದೆ. ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಎದುರಾಗಿರುವ ತೈಲ ಹಾಗೂ ಗ್ಯಾಸ್ ಸಿಲಿಂಡರ್ಗಳ ಅಭಾವದ ಹಿನ್ನೆಲೆಯಲ್ಲಿ ನಡೆದಿರುವ ಈ ಬೆಳವಣಿಗೆಯಲ್ಲಿ ಭಾರತದ ಮನವಿಗೆ ಇರಾನ್ ಸರ್ಕಾರ ಮನ್ನಣೆ ನೀಡಿದೆ.

ಕಳೆದ ಫೆಬ್ರವರಿ 28 ರಂದು ಇರಾನ್ನ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಜಂಟಿ ದಾಳಿಯನ್ನು ನಡೆಸಿದ್ದ ಪರಿಣಾಮ ಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿತ್ತು. ಇದರಿಂದ ಕೆರಳಿರುವ ಇರಾನ್ ಉಭಯ ರಾಷ್ಟ್ರಗಳ ವಿರುದ್ಧ ಪ್ರತೀಕಾರದ ದಾಳಿಯನ್ನು ಮುಂದುವರೆಸಿದೆ.

ಇನ್ನೂ ಈ ದಾಳಿಯ ಕಾರಣಕ್ಕಾಗಿ ಇರಾನ್ ತನ್ನ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಬಂದ್ ಮಾಡಿದ್ದ ಪರಿಣಾಮ ಜಾಗತಿಕವಾಗಿ ತೈಲದ ದರದಲ್ಲಿ ಏರಿಕೆ ಹಾಗೂ ಗ್ಯಾಸ್ ಸಿಲಿಂಡರ್ನ ತೀವ್ರ ಅಭಾವವು ಮುಂದುವರೆದಿದೆ. ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರವು ಇರಾನ್ ಸಹಕಾರ ಕೇಳಿದೆ.
ಇದನ್ನೂ ಓದಿ : ವಿಶ್ವದ ಚಿನ್ನದ ರಾಜಧಾನಿ ಎಂದು ಯಾವ ನಗರವನ್ನು ಕರೆಯುತ್ತಾರೆ ?
ಈ ಕುರಿತು ಇರಾನ್ ವಿದೇಶಾಂಗ ಸಚಿವ ಸೈಯ್ಯದ್ ಅಬ್ಬಾಸ್ ಅರಾಗ್ಚಿ ಅವರೊಂದಿಗೆ ಭಾರತದ ವಿದೇಶಾಂಗ ಸಚಿವ ಸುಬ್ರಮಣಿಯನ್ ಜೈಶಂಕರ್ ಮಾತುಕತೆ ನಡೆಸಿದ್ದರು. ಈ ವೇಳೆ ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ತೈಲ ಟ್ಯಾಂಕರ್ ಗಳ ಓಡಾಟಕ್ಕೆ ಅನುಮತಿ ನೀಡುವಂತೆ ಮನವಿ ಮಾಡಿಕೊಂಡಿದ್ದರು.
ಇದನ್ನು ಪರಿಗಣಿಸಿರುವ ಇರಾನ್ ಸರ್ಕಾರ ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ತೈಲ ಟ್ಯಾಂಕರ್ಗಳ ಓಡಾಟಕ್ಕೆ ಅಸ್ತು ಎಂದಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ರಾಜತಾಂತ್ರಿಕವಾಗಿ ಬಹುದೊಡ್ಡ ಗೆಲುವು ಸಿಕ್ಕಂತಾಗಿದೆ. ಇದರಿಂದ ದೇಶದಲ್ಲಿ ತಲೆದೂರಿರುವ ಸಿಲಿಂಡರ್ ಹಾಗೂ ತೈಲದ ಸಮಸ್ಯೆ ಪರಿಹಾರವಾಗುವ ಸಾಧ್ಯತೆಗಳಿವೆ.






