• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

IPL ಪಂದ್ಯದ ವೇಳೆ ಸಣ್ಣ ಅಹಿತಕರ ಘಟನೆಗೂ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಶಾಲಿನಿ ರಜನೀಶ್‌ ಖಡಕ್‌ ಸೂಚನೆ

IPL 2026 : ಪಂದ್ಯಗಳ ಸುರಕ್ಷತೆಯ ಕುರಿತು ಮಹತ್ವದ ಸಭೆ ನಡೆಸಿದ ಶಾಲಿನಿ ರಜನೀಶ್‌ : ನೀಡಿರುವ ಸೂಚನೆಗಳೇನು..?

ಪ್ರತಿಧ್ವನಿ by ಪ್ರತಿಧ್ವನಿ
March 27, 2026
in ಇದೀಗ, ಕರ್ನಾಟಕ, ಕ್ರೀಡೆ, ದೇಶ, ರಾಜಕೀಯ
0
IPL ಪಂದ್ಯದ ವೇಳೆ ಸಣ್ಣ ಅಹಿತಕರ ಘಟನೆಗೂ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಶಾಲಿನಿ ರಜನೀಶ್‌ ಖಡಕ್‌ ಸೂಚನೆ
Share on WhatsAppShare on FacebookShare on Telegram

ಬೆಂಗಳೂರು : ನಾಳೆಯಿಂದ ಐಪಿಎಲ್‌ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಕೆಎಸ್‌ಸಿಎ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಸುರಕ್ಷತೆ ಕುರಿತಾಗಿ ಸುದೀರ್ಘ ಸಭೆ ನಡೆಸಿ ಸಲಹೆ, ಸೂಚನೆಗಳನ್ನು ನೀಡಿದ್ದಾರೆ.

ADVERTISEMENT
R Ashok : RCB ಟಿಕೆಟ್ MLA ಗಳಿಗೆ  ಕೊಡ್ತಿಲ್ಲ ಸರ್ ..! #pratidhvani #rashok #budgetnews #rcb #ipl #watch

ಕ್ರಿಕೆಟ್ ಪ್ರೇಮಿಗಳ ಸುರಕ್ಷತೆಗೆ ಕ್ರೀಡಾಂಗಣದ ಒಳಗೆ ಮತ್ತು ಕ್ರೀಡಾಂಗಣದ ಸುತ್ತ ರೂಪಿಸಿರುವ ಭದ್ರತಾ ವ್ಯವಸ್ಥೆ, ನಗರದ ಸಂಚಾರ ವ್ಯವಸ್ಥೆಯಲ್ಲಿ ಮಾಡಿಕೊಳ್ಳಲಾಗಿರುವ ಬದಲಾವಣೆಗಳು, ಪಾರ್ಕಿಂಗ್ ವ್ಯವಸ್ಥೆ, ಕ್ರೀಡಾಂಗಣದ ಒಳಗೆ ಕುಡಿಯುವ ನೀರು ಸೇರಿದಂತೆ ಇತರೆ ಅತ್ಯಾವಶ್ಯಕ ಸಂಗತಿಗಳ ಕುರಿತಾಗಿ ಮಾಹಿತಿ ಪಡೆದುಕೊಂಡಿದ್ದಾರೆ.

ಮೆಟ್ರೋ ರೈಲಿನ ಮೇಲೆ ಬೀಳುವ ಪ್ರಯಾಣಿಕರ ಸಾಂದ್ರತೆ, ಮೆಟ್ರೋ ಸಂಚರಿಸುವ ವೇಳಾಪಟ್ಟಿ, ಮೆಟ್ರೋ ನಿಲ್ದಾಣಗಳಲ್ಲಿ ಮಾಡಿಕೊಳ್ಳಲಾಗಿರುವ ಹೆಚ್ಚುವರಿ ಭದ್ರತೆ, ಸುರಕ್ಷತೆ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದು ಸಣ್ಣ ಅಹಿತಕರ ಘಟನೆಗೂ ಅವಕಾಶ ಆಗದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಹಲವು ಸೂಚನೆ ತಿಳಿಸಿದ್ದಾರೆ.

ಇದನ್ನೂ ಓದಿ : ಈ ಆಟಗಾರನಿಂದ ಆರ್‌ಸಿಬಿಗೆ ಬಂತು ಮತ್ತಷ್ಟು ಬಲ : ಇನ್ನು ಹೈದ್ರಾಬಾದ್‌ ವಿರುದ್ಧ ಅಬ್ಬರ ಪಕ್ಕಾ..!

ಪಂದ್ಯಾವಳಿ ಆಯೋಜನೆಗೆ ಸರ್ಕಾರ ವಿಧಿಸಿರುವ ಷರತ್ತುಗಳು ಮತ್ತು ಎಚ್ಚರಿಕೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಭೆಯಲ್ಲಿ ಶಾಲಿನಿ ರಜನೀಶ್‌ ಖಡಕ್‌ ಸೂಚನೆ ನೀಡಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಂಸ್ಥೆಗಳು ಹೈ ಅಲರ್ಟ್ ಆಗಿರಬೇಕು. ಆಯಾ ಕ್ಷಣದ ಮಾಹಿತಿಗಳನ್ನು ಮೇಲಿನ ಅಧಿಕಾರಿಗಳಿಗೆ ನಿಯಮಿತವಾಗಿ ವಿನಿಮಯ ಮಾಡಿಕೊಳ್ಳಬೇಕು ಎಂಬ ನಿಯಮಗಳ ಪಾಲನೆಗೆ ಸೂಚಿಸಿದ್ದಾರೆ.

ಸಭೆಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (KSCA) ಸಂಸ್ಥೆಯ ಆಡಳಿತ ಮಂಡಳಿ, ಪದಾಧಿಕಾರಿಗಳು, RCB (Royal Challengers Benglore) ಪದಾಧಿಕಾರಿಗಳು, ನಗರ ಪೊಲೀಸ್ ಆಯುಕ್ತರು, ಜಿಬಿಎ ಅಯುಕ್ತರು, ಮೆಟ್ರೋ ವ್ಯವಸ್ಥಾಪಕರು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರುಗಳು ಉಪಸ್ಥಿತರಿದ್ದರು.

Tags: Benglore City PoliceC S Shalini RajneeshCM SiddaramaiahDK ShivakumarDNAGovernment of KarnatakaIPL 2026IPL MatchesIPL TicketsKarnataka PoliceKSCAM Chinnaswamy Stadiumnamma metroPratidhvaniRCBSeemanth kumar singhShalini Rajaneesh IASVenkatesh Prasad
Previous Post

ಚುನಾವಣೆ ಮುಗಿದ ಬಳಿಕ ಕೇಂದ್ರ ಸರ್ಕಾರದಿಂದ ತೈಲ ಬೆಲೆ ಏರಿಕೆ : ಡಿ.ಕೆ. ಶಿವಕುಮಾರ್ ಹೊಸ ಬಾಂಬ್..!

Next Post

‘ಧುರಂಧರ್ 2’ ಮೇಲೆ ಪಾಕ್ ಪ್ರೇಕ್ಷಕರ ಟೀಕೆ: ಹಲವು ತಪ್ಪುಗಳ ಪಟ್ಟಿ ನೀಡಿದ ಪಾಕಿಸ್ತಾನಿ ಪ್ರೇಕ್ಷಕರು

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
‘ಧುರಂಧರ್ 2’ ಮೇಲೆ ಪಾಕ್ ಪ್ರೇಕ್ಷಕರ ಟೀಕೆ: ಹಲವು ತಪ್ಪುಗಳ ಪಟ್ಟಿ ನೀಡಿದ ಪಾಕಿಸ್ತಾನಿ ಪ್ರೇಕ್ಷಕರು

‘ಧುರಂಧರ್ 2’ ಮೇಲೆ ಪಾಕ್ ಪ್ರೇಕ್ಷಕರ ಟೀಕೆ: ಹಲವು ತಪ್ಪುಗಳ ಪಟ್ಟಿ ನೀಡಿದ ಪಾಕಿಸ್ತಾನಿ ಪ್ರೇಕ್ಷಕರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada