• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ಪ್ರತಿಧ್ವನಿ by ಪ್ರತಿಧ್ವನಿ
April 9, 2026
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Share on WhatsAppShare on FacebookShare on Telegram

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ ಕೆಐಎಡಿಬಿ ವತಿಯಿಂದ 8 ಕೋಟಿ 54 ಲಕ್ಷದ 40 ಸಾವಿರ ರೂಪಾಯಿಗಳನ್ನು ಅಕ್ರಮವಾಗಿ ಭೂ ಪರಿಹಾರ ಪಡೆದಿರುವ ಪ್ರಕರಣದಲ್ಲಿ ಕೆಎಎಸ್ ಶ್ರೇಣಿಯ ಹಿರಿಯ ವಿಶೇಷ ಭೂಸ್ವಾಧೀನಾಧಿಕಾರಿ ಡಾ. ಬಿ.ಕೆ. ಮಮತಾ ಹೆಸರು ಕೇಳಿ ಬಂದಿದೆ.

ADVERTISEMENT

ಪ್ರಮುಖವಾಗಿ ಪ್ರಜಾ ವಿಮೋಚನಾ ಬಹುಜನ ಸಮಿತಿಯ ಅಧ್ಯಕ್ಷ ಬಿಜವಾರ ನಾಗರಾಜ್ ಈ ಕುರಿತು ಧ್ವನಿ ಎತ್ತಿದ್ದು,. ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಿಗೆ ದೂರು ನೀಡಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿ ಪ್ರತಿಧ್ವನಿ ನ್ಯೂಸ್ ಗೆ ಲಭ್ಯವಾಗಿದೆ.

ಇನ್ನೂ ಇದೇ ವಿಚಾರಕ್ಕೆ ಪ್ರತಿಕ್ರಿಯೆಗಾಗಿ ಅಧಿಕಾರಿ ಮಮತಾ ಅವರನ್ನು ಸಂಪರ್ಕಿಸುವ ಪ್ರಯತ್ನವನ್ನು ಪ್ರತಿಧ್ವನಿ ನ್ಯೂಸ್ ಮಾಡಿತ್ತು. ಆದರೂ ಮೇಡಂ ಸಂಪರ್ಕಕ್ಕೆ ಬರಲಿಲ್ಲ. ಕಚೇರಿಗೂ ಪ್ರತಿಧ್ವನಿ ತಂಡ ಭೇಟಿ ನೀಡಿ 2 ಗಂಟೆಗಳ ಕಾಲ ಕಾದಿತ್ತು. ಆದರೆ ಆ ಕಡೆಯಿಂದ ಮೇಡಂ ಮ್ಯಾನೇಜರ್ ಬಂದು ಈ ಕುರಿತು ದೂರನ್ನು ಕೊಡಿ ಎಂದು ತಿಳಿಸುತ್ತಾರೆ. ಮೇಡಂ ಅವರ ಮೇಲೆಯೇ ಆಪಾದನೆ ಬಂದಿದೆ, ಮತ್ತೆ ಅವರಿಗೆ ದೂರು ಕೊಡುವುದೆಂದರೆ ಏನರ್ಥ ಎಂದು ಪ್ರತಿಧ್ವನಿ ತಂಡ ಮ್ಯಾನೇಜರ್ ಗೆ ಮರು ಪ್ರಶ್ನಿಸಿದೆ. ಆದರೆ ಅವರ ಮಾತುಗಳಲ್ಲೂ ಅಸಹಾಯಕತೆ ಎದ್ದು ಕಾಣುತ್ತಿತ್ತು. ಬೈಟ್ ಅಥವಾ ಇದರ ಮೇಲೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮೇಡಂ ಹೇಳಿದ್ದಾರೆ ಅಂತ ಅದೇ ಮ್ಯಾನೇಜರ್ ತಿಳಿಸಿದರು.

ಅಷ್ಟಕ್ಕೂ ಕರ್ನಾಟಕ ರಾಜ್ಯ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಕೈಗಾರಿಕಾ ವಲಯದಲ್ಲಿನ ಜಮೀನಿನ ರಕ್ಷಣೆ, ಕೈಗಾರಿಕಾ ಪ್ರದೇಶದ ಬೆಳವಣಿಗೆ ಹಾಗೂ ಜಮೀನುಗಳ ವಿಚಾರದಲ್ಲಿ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ಆದರೆ ಇಲ್ಲಿ ಎಲ್ಲವೂ ಉಲ್ಟಾ ಎನ್ನುವಂತಿದೆ, ಯಾಕೆಂದರೆ ತಾವು ತಪ್ಪೇ ಮಾಡಿಲ್ಲ ಎಂದಾದರೆ ಮೇಡಂ ಮಮತಾ ಅವರು ಈ ಬಗ್ಗೆ ಸ್ಪಷ್ಟನೆ ನೀಡುವುದರಿಂದ ತಪ್ಪಿಸಿಕೊಳ್ಳುತ್ತಿರಲಿಲ್ಲ. ಏನಿದೆಯೋ ಅದನ್ನೇ ಹೇಳಿ ತಮ್ಮ ಮೇಲಿನ ಆರೋಪದ ಬಗ್ಗೆ ತುಟಿ ಬಿಚ್ಚುತ್ತಿದ್ದರು. ಆದರೆ ಅವರ ನಡೆಯೂ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಲಿ ಅಥವಾ ಡಿಸಿಎಂ ಡಿಕೆ ಶಿವಕುಮಾರ್ ಅವರಾಗಲಿ ತಮ್ಮ ಸರ್ಕಾರದ ಬೆನ್ನು ತಟ್ಟಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಆದರೆ ಅವರದೇ ಸರ್ಕಾರದಲ್ಲಿನ ಪ್ರಭಾವಿ ಸಚಿವ ಎಂ.ಬಿ. ಪಾಟೀಲ್ ಅವರ ಇಲಾಖೆಯಲ್ಲೇ ಈ ರೀತಿಯಾಗಿ ಬೇಲಿಯೇ ಎದ್ದು ಹೊಲ ಮೇಯುವ ಕೆಲಸವಾಗುತ್ತಿರುವುದು ನಿಜಕ್ಕೂ ದುರಂತ..!

ಮಾನ್ಯ ಸಚಿವರೇ ನಿಮ್ಮ ಇಲಾಖೆ ಅದರಲ್ಲೂ ಕೆಐಎಡಿಬಿ ಅಧಿಕಾರಿಗಳ ಮೇಲೆ ವಿಶೇಷ ಗಮನ ಅತ್ಯಂತ ಮುಖ್ಯವಾಗಿದೆ.
ಅಲ್ಲದೆ ಈ ಪ್ರಕರಣದ ಕುರಿತು ಸಂಪೂರ್ಣ ಪಾರದರ್ಶಕ ತನಿಖೆಯಾಗಲಿ. ತಪ್ಪಿತಸ್ಥ ಭ್ರಷ್ಟ ಕುಳಗಳಿಗೆ ಹಾಗೂ ಈ ಇಡೀ 8.54 ಕೋಟಿ ಅಕ್ರಮ ಅವ್ಯವಹಾರದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ನಾಗರಾಜ್ ದೂರಿನಲ್ಲಿ ಏನಿದೆ..?
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕು, ಕುಂದಾಣ ಹೋಬಳಿ, ರಾಮನಾಥಪುರ ಗ್ರಾಮದ ಸರ್ವೆ ನಂ.148ರಲ್ಲಿ ಒಟ್ಟು 5 ಎಕರೆ 4 ಗುಂಟೆ ಜಮೀನಿನ ಪೈಕಿ 12. ಗುಂಟೆ ಬಿ ಕರಾಬು, ಉಳಿಕೆ 4 ಎಕರೆ 32 ಗುಂಟೆ ಜಮೀನು 1968 ರಿಂದ 1988ರ ತನಕ ಬಚ್ಚಪ್ಪ ಬಿನ್ ಚಿಕ್ಕಮುನಿಯಪ್ಪ ರವರ ಹೆಸರಿನಲ್ಲಿ ಖಾತೆ, ಪಹಣಿ ಚಾಲ್ತಿಯಲ್ಲಿದ್ದು, ತದ ನಂತರ ಐಎಚ್‌ ಆರ್ ಸಂಖ್ಯೆ:103/1988-89ರಂತೆ. ಸದರಿ ಖಾತೆದಾರರ ವಂಶಸ್ಥರಿದ್ದರೂ ಸಹ ಅನಧಿಕೃತವಾಗಿ, ಆಕ್ರಮವಾಗಿ ಖಾತೆ, ಪಹಣಿ ಮಾಡಿಸಿಕೊಂಡಿರುತ್ತಾರೆ. ಈಗಾಗಲೇ ಕೈಗಾರಿಕ ಪ್ರದೇಶ ಅಭಿವೃದ್ಧಿ (ಕೆಐಎಡಿಬಿ)ಯಿಂದ 8 ಕೋಟಿ 54 ಲಕ್ಷದ 40 ಸಾವಿರ ರೂ.ಗಳನ್ನು ಭೂ ಪರಿಹಾರವಾಗಿ ಪಡೆದುಕೊಂಡಿರುತ್ತಾರೆ.

 

ಸದರಿ ಜಮೀನು ವಾರಸುದಾರರಲ್ಲದಿದ್ದರೂ ಸಹ ಅನಧೀಕೃತವಾಗಿ ಸಿ.ವಾರಾಯಣಪ್ಪ ಬಿನ್ನ ಚನ್ನರಾಯಪ್ಪ ಹೆಸರಿಗೆ 1990-2005ರ ತನಕ ಪಹಣಿಯಲ್ಲಿ ಚಾಲ್ತಿಯಲ್ಲಿರುತ್ತದೆ. ನಂತರ, ಶ್ರೀನಿವಾಸ್ ಮೂರ್ತಿ ಮತ್ತು ಆರ್.ಎನ್.ರಾಮಮೂರ್ತಿ ಹೆಸರಿನಲ್ಲಿ ಪಹಣಿ ಮುಂದುವರೆದಿರುತ್ತದೆ. ಆದ್ದರಿಂದ ತಾವುಗಳು ಕೆಐಎಡಿಬಿ /774/2025-265 2206 23-03-20260ರ ಪತ್ರದಂತೆ ಮರಗಳ ಮೌಲ್ಯ ಮಾಪನ ವರದಿಯನ್ನು ನಿಗಧಿಪಡಿಸುವ ಬಗ್ಗೆ ಸೂಚಿಸಿದ್ದು, ತಾವುಗಳು ಮಾನ್ಯ ದೇವನಹಳ್ಳಿ ತಹಶೀಲ್ದಾರ್ ರವರು ಸದರಿ ಖಾತೆದಾರರ ಬಗ್ಗೆ ಪರಿಶೀಲನೆ ಮಾಡಿದ ನಂತರ, ತಾವುಗಳು ಕ್ರಮವಹಿಸಬೇಕಾಗಿ ಈ ಮೂಲಕ ತಮ್ಮಲ್ಲಿ ಕಳಕಳಿಯಿಂದ ಕೋರಿಕೊಳ್ಳುತ್ತೇವೆ ಎಂದು ನಾಗರಾಜ್‌ ಆಗ್ರಹಿಸಿದ್ದಾರೆ.

Previous Post

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

Next Post

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಪತಿಯ ಶವದ ಜೊತೆಗೆ 10 ದಿನ ಕಳೆದ ಪತ್ನಿ: ಚಿಕ್ಕಮಗಳೂರಿನಲ್ಲಿ ಮನಕಲುಕುವ ಘಟನೆ

ಪತಿಯ ಶವದ ಜೊತೆಗೆ 10 ದಿನ ಕಳೆದ ಪತ್ನಿ: ಚಿಕ್ಕಮಗಳೂರಿನಲ್ಲಿ ಮನಕಲುಕುವ ಘಟನೆ

April 9, 2026
Next Post
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada