• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
April 30, 2026
in Top Story
0
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ
Share on WhatsAppShare on FacebookShare on Telegram

ದಶಕದ ಹಿಂದೆ ರಾಜ್ಯವನ್ನೇ ಕಂಗೊಳಿಸಿದ್ದ ಧರ್ಮಸ್ಥಳದ 17 ವರ್ಷದ ಬಾಲಕಿ ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಪ್ರಕರಣದ ಮರು ತನಿಖೆ (De novo investigation) ಕುರಿತ ಅರ್ಜಿಯ ಹಿನ್ನೆಲೆಯಲ್ಲಿ, ಈ ವಿಷಯದಲ್ಲಿ ತನ್ನ ಸ್ಪಷ್ಟ ನಿಲುವು ತಿಳಿಸುವಂತೆ ನ್ಯಾಯಾಲಯವು ಕರ್ನಾಟಕ ಸರ್ಕಾರಕ್ಕೆ ನಿರ್ದೇಶಿಸಿದೆ.

ADVERTISEMENT

ಸಿಬಿಐ ತನಿಖೆಯ ನಂತರವೂ ಆರೋಪಿ ಖುಲಾಸೆಯಾಗಿರುವ ಹಿನ್ನೆಲೆಯಲ್ಲಿ, ಮರು ತನಿಖೆ ಅಗತ್ಯವೇ ಎಂಬುದರ ಬಗ್ಗೆ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ವಿವರಿಸುವ ಸಮಗ್ರ ವರದಿ ಸಲ್ಲಿಸಲು ಕೋರ್ಟ್ ಸೂಚಿಸಿದೆ. ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಹಾಗೂ ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠವು ಈ ಆದೇಶ ನೀಡಿದೆ.

KRS Party : ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ರೈತರು #pratidhvani

ಈ ಮೊದಲು ಕಾಲಾವಕಾಶ ಪಡೆದಿದ್ದರೂ ರಾಜ್ಯ ಸರ್ಕಾರ ಕ್ರಮಗಳ ವಿವರ ನೀಡದಿರುವುದಕ್ಕೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. “ಪ್ರಕರಣದ ಮರು ತನಿಖೆಗೆ ವಿಶೇಷ ತನಿಖಾ ದಳ (SIT) ರಚಿಸುವ ಸಾಧ್ಯತೆ ಇದೆವೇ? ಇತರ ಸಂಭಾವ್ಯ ಆರೋಪಿಗಳ ಪಾತ್ರ ಪರಿಶೀಲಿಸುವ ಯೋಚನೆ ಇದೆಯೇ?” ಎಂಬುದರ ಕುರಿತು ಅಫಿಡವಿಟ್ ಸಲ್ಲಿಸುವಂತೆ ರಾಜ್ಯದ ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗೆ ಪೀಠ ಸೂಚನೆ ನೀಡಿದೆ.

Parameshwar : ದೆಹಲಿಗೆ ಕೈ ನಾಯಕರು, ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು..? #satishjarkiholi #hcmahadevappa

ಸಂತ್ರಸ್ತೆಯ ಪರ ವಕೀಲರು, ಪ್ರಕರಣದ ಹಲವು ಸಾಕ್ಷಿಗಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಬಗ್ಗೆ ನ್ಯಾಯಾಲಯದ ಗಮನಕ್ಕೆ ತಂದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್, ಉಳಿದ ಸಾಕ್ಷಿಗಳಿಗೆ ಸೂಕ್ತ ಭದ್ರತೆ ಒದಗಿಸಲು ಸೂಚಿಸಿದೆ.

ಸಂತ್ರಸ್ತ ಕುಟುಂಬದ ಪರ ವಕೀಲರು ಹೊಸದಾಗಿ ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿದರು. 2012ರಲ್ಲಿ ನಡೆದ ಈ ಪ್ರಕರಣವನ್ನು 2013ರಲ್ಲಿ ಸಿಬಿಐಗೆ ವಹಿಸಲಾಗಿತ್ತು ಎಂದು ನ್ಯಾಯಾಲಯ ನೆನಪಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ವಕೀಲರು, “ಪ್ರಕರಣದ ಪ್ರಮುಖ ಸಾಕ್ಷ್ಯ ವಸ್ತುಗಳು ಇನ್ನೂ ಲಭ್ಯವಿದ್ದು, ಡಿಎನ್‌ಎ ಪರೀಕ್ಷೆ ನಡೆಸಬಹುದು. ಮೂಲ ಆರೋಪಿಗಳು ಬೇರೆ ಯಾರೋ ಎಂಬುದು ವಿಚಾರಣಾ ನ್ಯಾಯಾಲಯವೇ ಸೂಚಿಸಿದೆ,” ಎಂದು ವಾದಿಸಿದರು. ಮುಂದಿನ ವಿಚಾರಣೆಯನ್ನು ಜುಲೈ 14ಕ್ಕೆ ನಿಗದಿಪಡಿಸಲಾಗಿದೆ.

Rahul Gandhi : ಆದಿವಾಸಿಗಳ ಜಮೀನನ್ನು ಅದಾನಿಗೆ ನೀಡಲಾಗುತ್ತಿದೆ..!

2023ರ ಜೂನ್ 16ರಂದು ವಿಚಾರಣಾ ನ್ಯಾಯಾಲಯ ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿತ್ತು. ಪ್ರಾಸಿಕ್ಯೂಷನ್ ಆರೋಪ ಸಾಬೀತುಪಡಿಸಲು ವಿಫಲವಾಗಿದೆ ಎಂದು ಹೇಳಿದ ನ್ಯಾಯಾಲಯ, ತನಿಖೆಯಲ್ಲಿ ನಡೆದ ಲೋಪಗಳ ಬಗ್ಗೆ ಕ್ರಮ ಕೈಗೊಳ್ಳಲು ಸೂಚಿಸಿತ್ತು.ನಂತರ 2024ರಲ್ಲಿ ಸಂತ್ರಸ್ತೆಯ ತಂದೆ ಹೈಕೋರ್ಟ್‌ನಲ್ಲಿ ಮರು ತನಿಖೆಗೆ ಅರ್ಜಿ ಸಲ್ಲಿಸಿದರೂ, ಅದನ್ನು ವಜಾಗೊಳಿಸಲಾಗಿತ್ತು. ಆದರೆ “ಆರೋಪಿ ಖುಲಾಸೆಯಾಗಿರುವುದರಿಂದ ನಿಜವಾದ ಅಪರಾಧಿ ಯಾರು ಎಂಬ ಪ್ರಶ್ನೆ ಉಳಿದಿದೆ” ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ಇದಲ್ಲದೆ, ಧರ್ಮಸ್ಥಳ ಸುತ್ತಮುತ್ತ ನಡೆದಿರುವ ಹಲವು ಹತ್ಯೆ, ಅತ್ಯಾಚಾರ ಮತ್ತು ನಾಪತ್ತೆ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಈಗಾಗಲೇ ಎಸ್‌ಐಟಿ ರಚಿಸಿದ್ದು, ಅದರ ಅಂತಿಮ ವರದಿ ನಿರೀಕ್ಷೆಯಲ್ಲಿದೆ.

Tags: CBI investigationCourt OrderCriminal Justice Indiajustice for soujanyaKarnataka GovernmentLegal UpdateRape and Murder CaseReinvestigationSIT ProbeSoujanya Casesupreme courtWitness Protection
Previous Post

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

Next Post

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

Related Posts

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ
Top Story

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

by ಪ್ರತಿಧ್ವನಿ
April 30, 2026
0

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತದ ಹಿನ್ನೆಲೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಆಸ್ಪತ್ರೆಗೆ ಭೇಟಿ...

Read moreDetails
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
Next Post
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada