• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ನಮ್ಮ ಬೆಂಗಳೂರು - ನಮ್ಮ ಗ್ಯಾರಂಟಿ! ಈ ಅಭಿಯಾನದ ಮೂಲಕ 7 ಲಕ್ಷ ಜನರಿಗೂ ಅನುಕೂಲ ಮಾಡಿಕೊಡುವ ಗುರಿ : ಡಿಕೆ ಶಿವಕುಮಾರ್‌ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
May 13, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?
Share on WhatsAppShare on FacebookShare on Telegram

 ಬೆಂಗಳೂರು :  ನಗರದ ಇತಿಹಾಸದಲ್ಲಿ ಈವರೆಗೆ ಯಾರೂ ಇಂತಹ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಂಡಿಲ್ಲ. ನಮ್ಮ ಬೆಂಗಳೂರಿನ 23 ಲಕ್ಷ ಮನೆಗಳ ಆಸ್ತಿಗಳನ್ನು ಅಧಿಕೃತಗೊಳಿಸಿ, ಹಕ್ಕು ಪತ್ರಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ನಾವು ತೀರ್ಮಾನಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸಂತಸ ವ್ಯಕ್ತಪಡಿಸಿದ್ದಾರೆ.

ADVERTISEMENT
Girish Linganna On PM Modi’s call to global challenges : ಮೋದಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿತ್ತು..

ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯ ಸರ್ಕಾರದ 6ನೇ ಗ್ಯಾರಂಟಿ – ಭೂ ಗ್ಯಾರಂಟಿ ಹಾಗೂ ಬೆಂಗಳೂರಿಗೆ ಸಂಬಂಧಿಸಿದ ಹಲವಾರು ಅಭಿವೃದ್ಧಿ ಯೋಜನೆಗಳ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ನಾವು ಆರನೇ ಗ್ಯಾರಂಟಿ ಅಂದರೆ ಭೂ ಗ್ಯಾರಂಟಿಯ ಯೋಜನೆಯ ಮೂಲಕ ಆಸ್ತಿ ದಾಖಲೆಗಳ ದುರುಪಯೋಗವನ್ನು ತಡೆಯಲು ಪ್ರತಿಯೊಂದು ಆಸ್ತಿಯ ಮ್ಯಾಪಿಂಗ್ ಮತ್ತು ವಿವಿಧ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಜನರಿಗೆ ಅವರ ಆಸ್ತಿ ದಾಖಲೆಗಳನ್ನು ಒದಗಿಸುತ್ತೇವೆ ಎಂದು ಘೋಷಿಸಿದ್ದಾರೆ.

‘ನನ್ನ ಖಾತೆ – ನನ್ನ ಹಕ್ಕು’ ಅಭಿಯಾನವನ್ನು ನಾವು ಹಮ್ಮಿಕೊಂಡಿದ್ದೇವೆ. ಪ್ರಸ್ತುತ ನಗರದಲ್ಲಿ 7 ಲಕ್ಷ ಬಿ-ಖಾತೆಗಳಿದ್ದು, ಈ ಪೈಕಿ ಆರಂಭದಲ್ಲಿ ಬಂದ 11 ಸಾವಿರ ಅರ್ಜಿಗಳಲ್ಲಿ 7 ಸಾವಿರ ಅರ್ಜಿಗಳನ್ನು ವಿಲೇವಾರಿ ಮಾಡಿದ್ದೇವೆ. ಈಗ ಈ ಅಭಿಯಾನದ ಮೂಲಕ ಎಲ್ಲಾ 7 ಲಕ್ಷ ಜನರಿಗೂ ಅನುಕೂಲ ಮಾಡಿಕೊಡುವುದು ನಮ್ಮ ಗುರಿಯಾಗಿದೆ. ನನ್ನ ಖಾತೆ – ನನ್ನ ಹಕ್ಕು’ ಅಭಿಯಾನವನ್ನು ಮೇ 16ರಿಂದ ಆರಂಭಿಸಿ ಸುಮಾರು ಮೂರು ತಿಂಗಳ ಕಾಲ ಪ್ರತಿ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಹೈದ್ರಾಬಾದ್‌ ವಿರುದ್ಧ ರಣರೋಚಕ ಪಂದ್ಯ ಗೆದ್ದ ಗುಜರಾತ್‌ : SRH ಗಳಿಸಿರುವ ಸ್ಕೋರ್‌ ಎಷ್ಟು..?

ಒಂದು ಪಾಲಿಕೆಗೆ ಹತ್ತು ಸ್ಥಳಗಳಂತೆ ಒಟ್ಟು 50 ಜಾಗಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಎರಡನೇ ಮತ್ತು ನಾಲ್ಕನೇ ಶನಿವಾರ ರಜೆ ಇದ್ದರೂ ಸಹ ಅಧಿಕಾರಿಗಳು ಲಭ್ಯವಿದ್ದು ಕೆಲಸ ಮಾಡಲಿದ್ದಾರೆ. ಯಾರೊಬ್ಬರಿಂದಲೂ ರೂಪಾಯಿ ಲಂಚವಿಲ್ಲದೆ ಪಾರದರ್ಶಕವಾಗಿ ಮನೆ ಬಾಗಿಲಿಗೆ ಖಾತೆ ಒದಗಿಸಿಕೊಡುವುದೇ ನಮ್ಮ ಸಂಕಲ್ಪವಾಗಿದೆ ಎಂದು ಡಿಕೆ ಶಿವಕುಮಾರ್‌ ಅಭಯ ನೀಡಿದ್ದಾರೆ.

ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತಿಸಿಕೊಳ್ಳುವವರಿಗೆ ನಾವು ದೊಡ್ಡ ರಿಯಾಯಿತಿಯನ್ನು ಘೋಷಿಸಿದ್ದೇವೆ. ಸಾಮಾನ್ಯವಾಗಿ ಇದಕ್ಕೆ ಶೇ. 5ರಷ್ಟು ಗೈಡೆನ್ಸ್ ವ್ಯಾಲ್ಯೂ ಶುಲ್ಕವಿರುತ್ತದೆ. ಆದರೆ ನೂರು ದಿನದೊಳಗೆ ಅರ್ಜಿ ಸಲ್ಲಿಸುವವರಿಗೆ ಕೇವಲ ಶೇ. 2ರಷ್ಟು ಶುಲ್ಕವನ್ನು ಮಾತ್ರ ನಿಗದಿಪಡಿಸಿದ್ದೇವೆ ಎಂದು ನಗರದ ನಿವಾಸಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಆಡಳಿತಾತ್ಮಕ ಸುಧಾರಣೆಗಳ ಜೊತೆಗೆ ‘ಗ್ರೀನ್ ಬೆಂಗಳೂರು’ ನಿರ್ಮಾಣಕ್ಕೂ ನಾವು ಒತ್ತು ನೀಡಿದ್ದೇವೆ. ಈ ನಿಟ್ಟಿನಲ್ಲಿ ಕೆಂಪೇಗೌಡ ಜಯಂತಿಯ ಅಂಗವಾಗಿ ಜೂನ್ 27ರಂದು ಶಾಲೆಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಗರದಾದ್ಯಂತ 15 ಲಕ್ಷ ಸಸಿಗಳನ್ನು ನೆಡಲು ತೀರ್ಮಾನಿಸಿದ್ದೇವೆ. ಆ ಮೂಲಕ ಬೆಂಗಳೂರನ್ನು ಮತ್ತೆ ಹಸಿರು ನಗರವನ್ನಾಗಿ ಮಾಡುವತ್ತ ಹೆಜ್ಜೆ ಇಟ್ಟಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

ಯಾವಾಗ ಯಾವ ಪ್ರಕ್ರಿಯೆ..?

ಮೇ 16: ಮನೆ ಮನೆಗೆ ದಾಖಲೆ ವಿತರಣೆ ಮತ್ತು ಜಾಗೃತಿ ಆರಂಭ.
ಜೂನ್ 15: ಬಿ-ಖಾತೆ ಬದಲಾವಣೆ ಅರ್ಜಿ ಪ್ರಕ್ರಿಯೆ ಆರಂಭ.

ಈ ವೇಳೆ ಸಚಿವರಾದ ಕೆ.ಜೆ. ಜಾರ್ಜ್, ಬಿಡಿಎ ಅಧ್ಯಕ್ಷರು ಹಾಗೂ ಶಾಸಕರಾದ ಎನ್‌.ಎ. ಹ್ಯಾರಿಸ್, ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಶಾಸಕರಾದ ಎ.ಸಿ.ಶ್ರೀನಿವಾಸ್ ಹಾಗೂ ಪರಿಷತ್ ಸದಸ್ಯರಾದ ಕೆ.ಗೋವಿಂದರಾಜ್ ಉಪಸ್ಥಿತರಿದ್ದರು.

Tags: B KhataBBMPBDA PresidentBenglore Development Ministerbjp karnatakaCM Siddaramaiahcongress karnatakaDK ShivakumarGBAGBA CommissionerGood News For BengloreK J GeorgeKarnataka GovernmentLand GuaranteeLAnd Guarantee SchemeN A HarisN Maheshwar rao
Previous Post

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

Next Post

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

May 13, 2026
Next Post
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

"ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada