ಬೆಳಗಾವಿ : ವಿವಾಹಿತೆಯನ್ನು ಓಡಿಸಿಕೊಂಡು ಹೋದ ಯುವಕನ ಮನೆ ಸಂಪೂರ್ಣ ದ್ವಂಸ ಮಾಡಿರುವ ಕ್ರೂರ ಘಟನೆ ಜಿಲ್ಲೆಯ ಉಸ್ತುವಾರಿ
ಸಚಿವ ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದಲ್ಲಿ ನಡೆದಿದೆ.

ಮಾರಕಾಸ್ತ್ರ ಸಮೇತ ಇನ್ನೂರಕ್ಕೂ ಅಧಿಕ ಜನರು ಯುವಕನ ಮನೆ ಮೇಲೆ ಅಟ್ಯಾಕ್ ಮಾಡಿದ್ದು, ಮನೆಯನ್ನು ಸಂಪೂರ್ಣ ಧ್ವಂಸ ಮಾಡುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ. ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ನಡೆಯ ಹ್ಯೇಯ ಕೃತ್ಯ ಸ್ಥಳೀಯರನ್ನು ಆತಂಕಕ್ಕೆ ದೂಡುವಂತೆ ಮಾಡಿದೆ.\
ತಲವಾರ, ಜಂಬೆ, ಕುಡಗೋಲು, ಬಡಿಗೆ ಸಮೇತ ಆಗಮಿಸಿದ್ದ ದುಷ್ಕರ್ಮಿಗಳು ಮನೆಯಲ್ಲಿದ್ದ ಯುವಕನ ಕುಟುಂಬಸ್ಥರ ಹತ್ಯೆಗೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ. ವಿವಾಹಿತೆಯ ಪೋಷಕರು, ಪತಿಯ ಪೋಷಕರಿಂದ ಯುವಕನ ಮನೆ ಮೇಲೆ ದಾಳಿ ನಡೆಸಿದ್ದು, ಯುವಕನ ಮನೆಯ ಮೇಲ್ಷಾವಣಿ, ಮನೆಯಲ್ಲಿನ ಸಾಮಗ್ರಿಗಳು ಸಂಪೂರ್ಣ ಹಾಳಾಗಿವೆ.
ಇದನ್ನೂ ಓದಿ : ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ : ಸಿಎಂ ಡಿಕೆ ಶಿವಕುಮಾರ್ ಘೋಷಣೆ..
ಇನ್ನೂ ವಿವಾಹಿತೆ ನಾಗವ್ವ ಜೊತೆಗೆ ಎರಡು ದಿನಗಳ ಹಿಂದೆ ಯಲ್ಲಪ್ಪ ಎನ್ನುವ ಯುವಕ ಎಸ್ಕೇಪ್ ಆಗಿದ್ದಾನೆ. ಅಲ್ಲದೆ ಕಳೆದ ವರ್ಷವಷ್ಟೇ ಬಸಪ್ಪ ನಾಯಕ ಜೊತೆಗೆ ನಾಗವ್ವ ನಾಯಕ ಎನ್ನುವ ಯುವತಿಯ ಮದುವೆಯಾಗಿತ್ತು. ಈ ನಡುವೆಯೇ ಬಸಪ್ಪ ನಾಯಕ ಹಾಗೂ ಯಲ್ಲಪ್ಪ ನಾಯಕ ಇಬ್ಬರೂ ಆತ್ಮೀಯ ಸ್ನೇಹಿತರಾಗಿದ್ದರು.
ಯಲ್ಲಪ್ಪ ದಂಪತಿ ಹಾಗೂ ಬಸಪ್ಪ ಎಲ್ಲರೂ ಬೆಳಗಾವಿಯ ಉದ್ಯಮ ಬಾಗದಲ್ಲಿರುವ ಅಶೋಕ್ ಐರನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಸಲುಗೆ ಬೆಳೆದು ನಾಗವ್ವ ಹಾಗೂ ಯಲ್ಲಪ್ಪ ನಾಯಕ ಓಡಿ ಹೋಗಿದ್ದಾರೆ. ಇದರಿಂದ ಆಕ್ರೋಶಗೊಂಡು ಯಲ್ಲಪ್ಪ ನಾಯಕ ಕುಟುಂಬಸ್ಥರನ್ನು ಬಸಪ್ಪ ಟಾರ್ಗೆಟ್ ಮಾಡಿ ದಾಳಿ ನಡೆಸಿದ್ದಾನೆ.
ಇನ್ನೂ ದಾಳಿ ವೇಳೆ ಮನೆಯ ಹಂಚುಗಳು ಪುಡಿ ಪುಡಿ, ಅಲ್ಮಾರಿ, ಟಿವಿ ದ್ವಂಸವಾಗಿದೆ. ಈ ದಾಳಿಯಿಂದ ಪ್ರಾಣ ಉಳಿಸಿಕೊಳ್ಳಲು ಓಡಿ ಹೋಗಿ ಯಲ್ಲಪ್ಪನ ಪೋಷಕರು ಓಡಿ ಹೋಗಿದ್ದಾರೆ. ದಾಳಿ ನಂತರ ಮನೆಯಲ್ಲಿದ್ದ ಚಿನ್ನಾಭರಣ, ಹಣ, 25 ಕುರಿ ಜೊತೆಗೆ ದುಷ್ಕರ್ಮಿಗಳು ಪರಾರಿಯಾಗಿದ್ದು, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕಾಗಿ ನಗರ ಪೊಲೀಸ್ ಆಯುಕ್ತರಿಗೆ ಅನ್ಯಾಯಕ್ಕೊಳಗಾದ ಬಡ ಕುಟುಂಬ ಆಗ್ರಹಿಸಿದೆ.






