• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪೊಲೀಸ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: ಪೊಲೀಸ್ ಹುದ್ದೆಗಳ ನೇಮಕಾತಿ ಬಗ್ಗೆ ಗೃಹ ಸಚಿವರ ಮಹತ್ವದ ಮಾಹಿತಿ

ಪ್ರತಿಧ್ವನಿ by ಪ್ರತಿಧ್ವನಿ
July 3, 2026
in Top Story, Uncategorized
0
ಪೊಲೀಸ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: ಪೊಲೀಸ್ ಹುದ್ದೆಗಳ ನೇಮಕಾತಿ ಬಗ್ಗೆ ಗೃಹ ಸಚಿವರ ಮಹತ್ವದ ಮಾಹಿತಿ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ 2026-27ನೇ ಸಾಲಿನಲ್ಲಿ ಒಟ್ಟು 7,925 ಪೊಲೀಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ವಿವಿಧ ಹಂತಗಳಲ್ಲಿ ನಡೆಯುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ಡಿಟೆಕ್ಟಿವ್ ಸಬ್-ಇನ್‌ಸ್ಪೆಕ್ಟರ್, ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್, ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಯನ್ನು ಪಾರದರ್ಶಕವಾಗಿ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ADVERTISEMENT
🌧️☔ರಾಜ್ಯ ಹವಾಮಾನ ವರದಿ.! CS Patil | Weather Report | Heavy Rain | PRATIDHVANI | FULL RANI

ಡಿಟೆಕ್ಟಿವ್ ಸಬ್-ಇನ್‌ಸ್ಪೆಕ್ಟರ್ ಹುದ್ದೆಗಳು

ಒಟ್ಟು 20 ಡಿಟೆಕ್ಟಿವ್ ಸಬ್-ಇನ್‌ಸ್ಪೆಕ್ಟರ್ ಹುದ್ದೆಗಳ ಪೈಕಿ 5 ಹುದ್ದೆಗಳು ಕಲ್ಯಾಣ ಕರ್ನಾಟಕ ಹಾಗೂ 15 ಹುದ್ದೆಗಳು ರಾಜ್ಯದ ಉಳಿದ ಭಾಗಕ್ಕೆ ಮೀಸಲಿರಿಸಲಾಗಿದೆ. ಈ ಹುದ್ದೆಗಳ ಅಧಿಸೂಚನೆ ಸಿದ್ಧವಾಗಿದ್ದು, ಶೀಘ್ರದಲ್ಲೇ ಕೆಇಎ ಅಧಿಕೃತವಾಗಿ ಪ್ರಕಟಿಸಲಿದೆ.

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ – 1,600 ಹುದ್ದೆಗಳು

ಒಟ್ಟು 1,600 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಪೈಕಿ 179 ಹುದ್ದೆಗಳು ಕಲ್ಯಾಣ ಕರ್ನಾಟಕಕ್ಕೆ ಹಾಗೂ 1,421 ಹುದ್ದೆಗಳು ಉಳಿದ ಭಾಗಕ್ಕೆ ಮೀಸಲಾಗಿದೆ. ಅಧಿಸೂಚನೆ ಈಗಾಗಲೇ ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡಿದ್ದು, ಜೂನ್ 22ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಜುಲೈ 24 ಕೊನೆಯ ದಿನವಾಗಿದ್ದು, 2027ರ ಫೆಬ್ರವರಿ 6ರಂದು ಲಿಖಿತ ಪರೀಕ್ಷೆ ನಡೆಯಲಿದೆ.

HD Kumaraswamy : Ramanagaraದಲ್ಲಿ ಕಳ್ಳ ಮತ ಸೃಷ್ಟಿ ಮಾಡೋಕೆ ಯಾರು ಕಾರಣ? | CM DK Shivakumar #pratidhvani

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ – 3,991 ಹುದ್ದೆಗಳು ಒಟ್ಟು 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಪೈಕಿ 596 ಹುದ್ದೆಗಳು ಕಲ್ಯಾಣ ಕರ್ನಾಟಕಕ್ಕೆ ಹಾಗೂ 3,395 ಹುದ್ದೆಗಳು ಉಳಿದ ಭಾಗಕ್ಕೆ ಮೀಸಲಾಗಿವೆ.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಜುಲೈ 3 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಗಸ್ಟ್ 2ರಂದು ಲಿಖಿತ ಪರೀಕ್ಷೆ ನಡೆಯಲಿದೆ.

ವಿಶೇಷ ಮೀಸಲು ಪೊಲೀಸ್ ಹುದ್ದೆಗಳು

1,789 ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಪೈಕಿ 334 ಹುದ್ದೆಗಳು ಕಲ್ಯಾಣ ಕರ್ನಾಟಕಕ್ಕೆ ಹಾಗೂ 1,455 ಹುದ್ದೆಗಳು ಉಳಿದ ಭಾಗಕ್ಕೆ ಮೀಸಲಾಗಿದೆ. ಈ ಹುದ್ದೆಗಳ ಅಧಿಸೂಚನೆ ಸಿದ್ಧವಾಗಿದ್ದು, ಶೀಘ್ರದಲ್ಲೇ ಪ್ರಕಟವಾಗಲಿದೆ.

ಇದರ ಜೊತೆಗೆ 161 ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹಾಗೂ 364 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಸಹ ಕಲ್ಯಾಣ ಕರ್ನಾಟಕ ಭಾಗಕ್ಕೆ ಮೀಸಲಿರಿಸಲಾಗಿದ್ದು, ಈ ಹುದ್ದೆಗಳ ಅಧಿಸೂಚನೆಯೂ ಶೀಘ್ರದಲ್ಲೇ ಹೊರಬೀಳಲಿದೆ.

Krishna Byre Gowda: ಫುಟ್ಪಾತ್ ವ್ಯಾಪಾರಿಗಳಿಗೆ ಸಚಿವರ ವಾರ್ನಿಂಗ್! ಬೇರೆಡೆ ಸ್ಥಳಾಂತರಿಸ್ತೇವೆ ಎಂದ CM!

ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಆದ್ಯತೆ

ಒಟ್ಟಾರೆ 7,925 ಪೊಲೀಸ್ ಹುದ್ದೆಗಳ ಪೈಕಿ 1,639 ಹುದ್ದೆಗಳು ಕಲ್ಯಾಣ ಕರ್ನಾಟಕ ಭಾಗಕ್ಕೆ ಹಾಗೂ 6,286 ಹುದ್ದೆಗಳು ರಾಜ್ಯದ ಉಳಿದ ಭಾಗದ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ.

ನೇಮಕಾತಿ ಪ್ರಕ್ರಿಯೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಸರ್ಕಾರ ವಿಶೇಷ ಆದ್ಯತೆ ನೀಡಿದ್ದು, ಎಲ್ಲಾ ನೇಮಕಾತಿಗಳನ್ನು ಪಾರದರ್ಶಕವಾಗಿ ನಡೆಸಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

 

Tags: #ArmedPolice#CivilPolice#JobAlert#KannadaNews#KarnatakaJobs#KKRegion#PCRecruitment#PoliceJobs#PoliceRecruitment#priyankkharge#PSIRecruitmentEmploymentNewsGovernmentJobsKarnatakagovernmentKarnatakaPoliceKEA
Previous Post

ಇಸ್ರೋಗೆ ಬಾಂಬ್ ಬೆದರಿಕೆ ಪ್ರಕರಣ ಭೇದಿಸಿದ ಬೆಂಗಳೂರು ಪೊಲೀಸರು; 24 ಗಂಟೆಯಲ್ಲಿ ಆರೋಪಿ ಬಂಧನ

Next Post

ಎಲ್ ನಿನೊ ಎಫೆಕ್ಟ್‌ಗೆ ಸರ್ಕಾರ ಅಲರ್ಟ್: ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ

Related Posts

Rain Damage
Top Story

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

by ಪ್ರತಿಧ್ವನಿ
July 5, 2026
0

ಬೆಳಗಾವಿ : ನಗರದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಒಂದೊಂದಾಗಿ ಅನಾಹುತಗಳು ಸಂಭವಿಸುತ್ತಿವೆ. ಈಗಾಗಲೇ ನಗರದ ವಿವಿಧ ಭಾಗಗಳು ಮಳೆಯ ನೀರಿನಿಂದ ಜಲಾವೃತವಾಗಿದ್ದಲ್ಲದೆ, ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆಯೇ...

Read moreDetails
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
ಪೊಲೀಸ್ ಇಲಾಖೆ-ಮಾಧ್ಯಮಗಳಿಗೆ ಹೊಸ ನಿಯಮ: ಅನುಮತಿ ಇಲ್ಲದೆ ಮಾಹಿತಿ ಹಂಚಿದರೆ ಕ್ರಮ

ಪೊಲೀಸ್ ಇಲಾಖೆ-ಮಾಧ್ಯಮಗಳಿಗೆ ಹೊಸ ನಿಯಮ: ಅನುಮತಿ ಇಲ್ಲದೆ ಮಾಹಿತಿ ಹಂಚಿದರೆ ಕ್ರಮ

July 4, 2026
‘ಗ್ರಾಮಾಯಣ’ ಚಿತ್ರಕ್ಕೆ ಕಾನೂನು ಸಂಕಷ್ಟ: ಲಹರಿ ವೇಲು ಸ್ಪಷ್ಟನೆ ಇಲ್ಲಿದೆ

‘ಗ್ರಾಮಾಯಣ’ ಚಿತ್ರಕ್ಕೆ ಕಾನೂನು ಸಂಕಷ್ಟ: ಲಹರಿ ವೇಲು ಸ್ಪಷ್ಟನೆ ಇಲ್ಲಿದೆ

July 4, 2026
Next Post
ಎಲ್ ನಿನೊ ಎಫೆಕ್ಟ್‌ಗೆ ಸರ್ಕಾರ ಅಲರ್ಟ್: ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ

ಎಲ್ ನಿನೊ ಎಫೆಕ್ಟ್‌ಗೆ ಸರ್ಕಾರ ಅಲರ್ಟ್: ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada