• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯೋಗಿ ಈಗ ಫಾರೆವರ್!‌ 51ನೇ ಸಿನಿಮಾಗೆ ಅದ್ಧೂರಿ ಚಾಲನೆ:‌ ಸಾಥ್‌ ಕೊಟ್ಟ ಧ್ರುವ ಸರ್ಜಾ

ಪ್ರತಿಧ್ವನಿ by ಪ್ರತಿಧ್ವನಿ
July 10, 2026
in Top Story, ಸಿನಿಮಾ
0
ಯೋಗಿ ಈಗ ಫಾರೆವರ್!‌ 51ನೇ ಸಿನಿಮಾಗೆ ಅದ್ಧೂರಿ ಚಾಲನೆ:‌ ಸಾಥ್‌ ಕೊಟ್ಟ ಧ್ರುವ ಸರ್ಜಾ
Share on WhatsAppShare on FacebookShare on Telegram

ನಟ ಯೋಗಿ ನೋಡ ನೋಡುತ್ತಲೇ 51ನೇ ಸಿನಿಮಾಗೆ ಹೀರೋ. ಹೌದು, ಲೂಸ್‌ ಮಾದ ಯೋಗಿ ಸಿನಿಮಾರಂಗಕ್ಕೆ ಕಾಲಿಟ್ಟು ಎರಡು ದಶಕ ಕಳೆದಿದೆ. ಈಗ ಅವರು ಹೊಸ ಸಿನಿಮಾಗೆ ಹೀರೋ ಆಗಿದ್ದಾರೆ. ಆ ಸಿನಿಮಾಗೆ “ಫಾರೆವರ್” ಎಂದು ನಾಮಕರಣ ಮಾಡಲಾಗಿದೆ. ಅಂದಹಾಗೆ, ಇದು ಸುಪ್ರೀಮ್ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಎಂ.ವೆಂಕಟನಾರಾಯಣ್ (ಠಾಗೋರ್ ಕೃಷ್ಣ) ನಿರ್ಮಾಣ ಮಾಡುತ್ತಿದ್ದಾರೆ.

ADVERTISEMENT
Sathish Ninasam : ನೀನಾಸಂ ಸತೀಶ್ ನಿಮ್ಮ ಮಾತು ಕಮ್ಮಿ‌ ಮಾಡಿ ಒಳ್ಳೇ ಸಿನಿಮಾ ಕೊಡಿ... #pratidhvani

“ಚಂದ್ರಿಕ” ಖ್ಯಾತಿಯ ಯೋಗೇಶ್ ಎಂ ಈ ಸಿನಿಮಾದ ನಿರ್ದೇಶಕರು. “ಫಾರೆವರ್” ಚಿತ್ರಕ್ಕೆ ಪೂಜೆ ನಡೆದಿದೆ. ಚಿತ್ರದ ಮೊದಲ ಸನ್ನಿವೇಶಕ್ಕೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕ್ಲಾಪ್‌ ಮಾಡಿ ಶುಭ ಕೋರಿದ್ದಾರೆ. ಶಾಸಕ ಕೃಷ್ಣಪ್ಪ ಕ್ಯಾಮೆರಾ ಚಾಲನೆ ಮಾಡಿದ್ದಾರೆ. “ನಾಗರಹಾವು” ಚಿತ್ರದ ನಿರ್ಮಾಪಕ‌ ಸಾಜಿದ್ ಖುರೇಶಿ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡುವ ಮೂಲಕ ತಂಡಕ್ಕೆ ಶುಭ ಹಾರೈಸಿದ್ದಾರೆ.

“ನಾನು ಹಾಗೂ ಧ್ರುವ ಸರ್ಜಾ ಒಂದೇ ಸ್ಕೂಲ್ ನಲ್ಲಿ ಓದಿದವರು. ಅವರು ನನ್ನ ಪ್ರೀತಿಯ ಗೆಳೆಯ. ಅವರು ಬಂದು ನಮ್ಮ ಚಿತ್ರಕ್ಕೆ ಕ್ಲಾಪ್ ಮಾಡಿದ್ದು ಖುಷಿಯಾಗಿದೆ. ಸುಮಾರು ಎರಡು ವರ್ಷಗಳ ನಂತರ ನಾನು ನಾಯಕನಾಗಿ ನಟಿಸುತ್ತಿರುವ ಚಿತ್ರವಿದು. ಚಿತ್ರ ಅದ್ದೂರಿಯಾಗಿ ಮೂಡಿಬರಲಿದೆ. ನಿರ್ದೇಶಕರು ಒಂದೊಳ್ಳೆ ಕಥೆ ಬರೆದಿದ್ದಾರೆ. ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಫಸ್ಟ್ ಲುಕ್ ಪೋಸ್ಟರ್ ತುಂಬಾ ಚೆನ್ನಾಗಿದೆ. ಈ ಚಿತ್ರದಲ್ಲಿ ಲವ್, ಸೆಂಟಿಮೆಂಟ್, ಆಕ್ಷನ್ ಅಲ್ಲದೆ ಮತ್ತೊಂದು ಇದೆ. ಅದನ್ನು ಮುಂದಿನ ದಿನಗಳಲ್ಲಿ ಹೇಳುತ್ತೇವೆ.

ನಾನು ತುಂಬಾ ಬೈಕ್ ಇಷ್ಟ ಪಡುತ್ತೇನೆ. ಬೈಕ್‌ ರೈಡರ್ ಕೂಡ. ಈ ಕಥೆ ಅದಕ್ಕೆ ಹತ್ತಿರವಾಗಿರುವುದು ಮತ್ತಷ್ಟು ಇಷ್ಟವಾಯಿತು. ಬೆಂಗಳೂರಿನಲ್ಲೇ ಮೊದಲ ಹಂತದ ಚಿತ್ರೀಕರಣ ನಡೆಯುತ್ತಿದೆ. ಚಿತ್ರವನ್ನು ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡುವುದಾಗಿ ಹೇಳಿರುವ ನಿರ್ಮಾಪಕರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ನನ್ನ ಧನ್ಯವಾದ ಎಂದರು ಹೀರೋ ಯೋಗಿ.

Toxic Tabaahi 🔥 | Toxic | Rocking Star Yash & Kiara Advani | Vishal Mishra | Yogaraj Bhat

ನಾನು ಮೂರು ವರ್ಷಗಳಲ್ಲಿ ಅತೀ ಹೆಚ್ಚು ಬಾರಿ ವಿಮಾನದಲ್ಲಿ ಪ್ರಯಾಣ ಮಾಡಿದ್ದೇನೆ. ವಿಮಾನ ಹತ್ತಿದ ತಕ್ಷಣ ಮೊಬೈಲ್ ಪಕ್ಕಕ್ಕೆ ಇಟ್ಟು ಈ ಚಿತ್ರದ ಕಥೆ ಬರೆಯುತ್ತಿದ್ದೆ. ಪ್ರತಿಬಾರಿ ಯೋಗಿ ಅವರ ಹುಟ್ಟುಹಬ್ಬಕ್ಕೆ ವಿಶ್ ಮಾಡುವಾಗ ಈ ವರ್ಷದ ಹುಟ್ಟುಹಬ್ಬಕ್ಕೆ ಚಿತ್ರ ಆರಂಭ‌ ಮಾಡೋಣ ಅಂತ ಹೇಳುತ್ತಿದ್ದೆ. ಕಾಲ ಈಗ ಕೂಡಿ ಬಂದಿದೆ. ಇತ್ತೀಚೆಗಷ್ಟೇ ಯೋಗಿ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲೇ ಮುಹೂರ್ತ ನಡೆದಿರುವುದು ಖುಷಿಯಾಗಿದೆ. ನಮ್ಮ ಚಿತ್ರಕ್ಕೆ “ಯುಗ ಮರೆಯದ ಪ್ರೇಮ ಕಥೆ” ಎಂಬ ಅಡಿಬರಹವಿದೆ. ಹಾಗಾಗಿ ಇದೊಂದು ಪ್ರೇಮಕಥೆ. ಆದರೆ, ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ವಿಶೇಷವಾದ್ದದ್ದು ಮತ್ತೊಂದಿದೆ ಅದು ಸಸ್ಪೆನ್ಸ್‌ ಎಂದರು ನಿರ್ದೇಶಕ ಯೋಗೇಶ್ ಮುನಿಸಿದ್ದಪ್ಪ.

Karavali Film Clash : ಕರಾವಳಿ ಟ್ರೇಲರ್ ಲಾಂಚ್ ವೇಳೆ ಗದ್ದಲ ಆಗಿದ್ದು ಈ ಕಾರಣಕ್ಕೆ... #pratidhvani

ನಮ್ಮ ಸಂಸ್ಥೆಯ ಮೊದಲ ನಿರ್ಮಾಣದ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಎಂ.ವೆಂಕಟನಾರಾಯಣ(ಟಾಗೂರ್ ಕೃಷ್ಣ). ನನಗೆ ಕನ್ನಡದಲ್ಲಿ ಇದು ಮೊದಲ ಚಿತ್ರ ಎಂದರು ನಾಯಕಿ ಆಕಾಂಕ್ಷ ರಾವ್ ಪ್ರದ್ಯೂತನ್ ಸಂಗೀತವಿದೆ. ಸಂಕೇತ್ ಕ್ಯಾಮೆರಾ ಹಿಡಿಯುತ್ತಿದ್ದಾರೆ.

Previous Post

ಚೆಕ್ ಬೌನ್ಸ್‌ ಕೇಸ್‌ : ಈ ನಟನಿಗೆ ಮೂರು ತಿಂಗಳು ಜೈಲು!

Next Post

2026ರ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ನಿಗದಿ: ಈ ಬಾರಿಯ ವಿಶೇಷತೆಯೇನು..?

Related Posts

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?
Top Story

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?

by ಪ್ರತಿಧ್ವನಿ
July 25, 2026
0

ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮದ ವಿರುದ್ಧ 35 ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ...

Read moreDetails
ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

July 25, 2026
ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

July 25, 2026
ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

July 25, 2026
ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

July 25, 2026
Next Post
2026ರ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ನಿಗದಿ: ಈ ಬಾರಿಯ ವಿಶೇಷತೆಯೇನು..?

2026ರ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ನಿಗದಿ: ಈ ಬಾರಿಯ ವಿಶೇಷತೆಯೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada