• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಹೊರಟ್ಟಿಗೆ ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ’: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
August 7, 2026
in Top Story, ಕರ್ನಾಟಕ
0
‘ಹೊರಟ್ಟಿಗೆ ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ’: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ
Share on WhatsAppShare on FacebookShare on Telegram

ಬೆಂಗಳೂರು, ಆಗಸ್ಟ್ 7: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಹೊಸ ತಿರುವು ಸಿಕ್ಕಿದ್ದು, ಅವರನ್ನು ಒತ್ತಡ ಹೇರಿ ಹಾಗೂ ದಬಾಯಿಸಿ ರಾಜೀನಾಮೆ ಕೊಡಿಸಲಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ADVERTISEMENT

ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರದಲ್ಲಿದ್ದ ಸಭಾಪತಿಯವರಿಂದ ಒತ್ತಾಯಪೂರ್ವಕವಾಗಿ ರಾಜೀನಾಮೆ ಪಡೆಯಲಾಗಿದೆ. ಇದು ವಿಧಾನಪರಿಷತ್ ನಿಯಮಾವಳಿಗಳಿಗೆ ವಿರುದ್ಧವಾಗಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವ ಬೆಳವಣಿಗೆಯಾಗಿದೆ ಎಂದು ಟೀಕಿಸಿದರು.

ರಾಜೀನಾಮೆ ಕುರಿತು ವಿಚಾರಿಸಿದಾಗ, “ನನಗೆ ಬೇರೆ ದಾರಿಯೇ ಇರಲಿಲ್ಲ. ಸುಮಾರು 20ರಿಂದ 25 ಮಂದಿ ಶಾಸಕರು ಬಂದು ನಿರಂತರ ಒತ್ತಡ ಹೇರಿದರು. ಮುಖ್ಯಮಂತ್ರಿಗಳ ಕಚೇರಿಯಿಂದ ಪತ್ರ ತರಿಸಿ, ಅದನ್ನು ಟೈಪ್ ಮಾಡಿಸಿ ನನ್ನಿಂದ ಸಹಿ ಹಾಕಿಸಿಕೊಂಡರು” ಎಂದು ಹೊರಟ್ಟಿ ತಮ್ಮ ಬಳಿ ನೋವು ವ್ಯಕ್ತಪಡಿಸಿದ್ದಾರೆ ಎಂದು ನಾರಾಯಣಸ್ವಾಮಿ ತಿಳಿಸಿದರು.

ಅಲ್ಲದೆ, ಕೆಪಿಸಿಸಿ ಅಧ್ಯಕ್ಷರು, ಸಚಿವರು ಹಾಗೂ ಕಾಂಗ್ರೆಸ್ ನಾಯಕರು ಕಚೇರಿಗೆ ಬಂದು ನಿರಂತರ ಒತ್ತಡ ತಂದ ಪರಿಣಾಮ ತಮಗೆ ರಾಜೀನಾಮೆ ನೀಡುವುದನ್ನು ಬಿಟ್ಟರೆ ಬೇರೆ ಮಾರ್ಗ ಉಳಿದಿರಲಿಲ್ಲ ಎಂದು ಹೊರಟ್ಟಿ ಹೇಳಿದ್ದಾಗಿ ಅವರು ಹೇಳಿದರು.

ಹೊರಟ್ಟಿ ಅವರು ಮತ್ತೊಬ್ಬರ ಪ್ರಮಾಣವಚನ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ಎರಡು ಗಂಟೆಗಳ ಕಾಲ ಅವರ ಕಚೇರಿಯಲ್ಲಿ ಒತ್ತಡದ ವಾತಾವರಣ ನಿರ್ಮಿಸಿ ಸಹಿ ಪಡೆಯಲಾಗಿದೆ ಎಂದು ಆರೋಪಿಸಿದ ಅವರು, ಇದು ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಯನ್ನು ಬಯಲಿಗೆಳೆಯುತ್ತದೆ ಎಂದರು.

“ಹಿಂದೆ ಬೀದಿಗಳಲ್ಲಿದ್ದ ಗೂಂಡಾಗಿರಿ ಈಗ ವಿಧಾನಸೌಧವನ್ನೇ ಪ್ರವೇಶಿಸಿದೆ. ಸಭಾಪತಿಯವರ ಕೊಠಡಿವರೆಗೂ ಇಂತಹ ಒತ್ತಡದ ರಾಜಕಾರಣ ತಲುಪಿರುವುದು ರಾಜ್ಯದ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಬೆಳವಣಿಗೆ” ಎಂದು ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದರು.

Basavaraj Horatti : ಬಸವರಾಜ ಹೊರಟ್ಟಿ ಮನೆಗೆ ಭೇಟಿ  ನೀಡಿದ ಬಿಜೆಪಿ ನಾಯಕರು..

ಈ ಘಟನೆ ಕೇವಲ ಬಸವರಾಜ ಹೊರಟ್ಟಿ ಅವರಿಗೆ ನಡೆದ ಅವಮಾನವಲ್ಲ; ಇಡೀ ವಿಧಾನಪರಿಷತ್ ಹಾಗೂ ಅದರ ಸದಸ್ಯರಿಗೆ ಮಾಡಿದ ಅಪಮಾನವಾಗಿದೆ. ಈ ವಿಚಾರವನ್ನು ಬಿಜೆಪಿ ಇಲ್ಲಿಗೇ ಬಿಡುವುದಿಲ್ಲ. ಕಾಂಗ್ರೆಸ್‌ಗೆ ತಕ್ಕ ಉತ್ತರ ಸಿಗುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಅವರು ಎಚ್ಚರಿಕೆ ನೀಡಿದರು.

Tags: Basavaraj Horatti ResignationBJP Allegationbjp karnatakaBreaking NewsChalavadi Narayanaswamycm karnatakaCongress Governmentcongress karnatakaDemocracyKarnataka Assemblykarnataka legislative councilkarnataka newsKarnataka PoliticsKPCCOpposition LeaderPolitical Controversypolitical newsSalim AhmedVIDHANA SOUDHA
Previous Post

ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ

Related Posts

ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ
Top Story

ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ

by ಪ್ರತಿಧ್ವನಿ
August 7, 2026
0

ಬೆಂಗಳೂರು, ಆಗಸ್ಟ್ 7: ಕರ್ನಾಟಕದ ಶ್ರೀಮಂತ ಕೈಮಗ್ಗ ಪರಂಪರೆಯನ್ನು ಸಂರಕ್ಷಿಸಿ, ನೇಕಾರರ ಆರ್ಥಿಕ ಸಬಲೀಕರಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮುಂಬರುವ...

Read moreDetails
NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

August 7, 2026
ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

August 7, 2026
ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

August 7, 2026
ಜಾನಪದ ಹಾಡಿಗೆ ರ್‍ಯಾಪ್‌ ಟಚ್‌: ಸಿಟಿಲೈಟ್ಸ್‌ ಸಿನಿಮಾದ ಹೊಸ ಸಾಂಗ್‌ ರಿಲೀಸ್‌

ಜಾನಪದ ಹಾಡಿಗೆ ರ್‍ಯಾಪ್‌ ಟಚ್‌: ಸಿಟಿಲೈಟ್ಸ್‌ ಸಿನಿಮಾದ ಹೊಸ ಸಾಂಗ್‌ ರಿಲೀಸ್‌

August 7, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada