ಬೆಂಗಳೂರು : ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಸಚಿವ ಸಂಪುಟ ವಿಸ್ತರಣೆಯ ವೇಳೆ ಮಂತ್ರಿ ಸ್ಥಾನ ವಂಚಿತರನ್ನು ಹಂತ ಹಂತವಾಗಿ ಸಮಾಧಾನಗೊಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.

ಈಗಾಗಲೇ ಶಾಸಕರನ್ನು ಸಚಿವರನ್ನಾಗಿ ನೇಮಕ ಮಾಡಿಕೊಂಡಿರುವ ಅವರು ಇನ್ನುಳಿದಂತೆ ಶಾಸಕರನ್ನು ಅವರವರ ಸಾಮರ್ಥ್ಯದ ಆಧಾರದ ಮೇಲೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸುತ್ತಿದ್ದಾರೆ. ಅದರಂತೆ ಇದೀಗ ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಅವರನ್ನು ಕರ್ನಾಟಕ ರಾಜ್ಯ ಗೃಹ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

ಈ ಮೂಲಕ ತಾವು ಅಂದುಕೊಂಡಂತೆಯೇ ಡಿಕೆ ಶಿವಕುಮಾರ್ ಶಾಸಕರಿಗೆ ಜವಾಬ್ದಾರಿಗಳನ್ನು ವಹಿಸುವ ಕೆಲಸ ಮಾಡುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದಷ್ಟೇ ಸಿ. ನರೇಂದ್ರ ಅವರನ್ನು ಅಂಬೇಡ್ಕರ್ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದರು. ಅದಾದ ಬಳಿಕ ಈಗ ಮಾನೆಯವರನ್ನು ನೇಮಕ ಮಾಡಿರುವುದು ಹೊಸ ಹಾಗೂ ಯುವ ಮುಖಗಳಿಗೆ ಒಂದಿಲ್ಲೊಂದು ರೀತಿಯಲ್ಲಿ ಅವಕಾಶ ಕೊಟ್ಟಂತಾಗಿದೆ.






