• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಕಲಿ ಪಿಂಚಣಿದಾರರಿಗೆ ಸರ್ಕಾರದ ಬಿಗ್‌ ಶಾಕ್: ರಾಜ್ಯದಲ್ಲಿ 18 ಲಕ್ಷ ಖಾತೆಗಳು ಸ್ಥಗಿತ

ಪ್ರತಿಧ್ವನಿ by ಪ್ರತಿಧ್ವನಿ
August 19, 2026
in Top Story, ಕರ್ನಾಟಕ, ರಾಜಕೀಯ
0
ನಕಲಿ ಪಿಂಚಣಿದಾರರಿಗೆ ಸರ್ಕಾರದ ಬಿಗ್‌ ಶಾಕ್: ರಾಜ್ಯದಲ್ಲಿ 18 ಲಕ್ಷ ಖಾತೆಗಳು ಸ್ಥಗಿತ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ರಾಜ್ಯ ಸರ್ಕಾರದ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಲ್ಲಿ ಅಕ್ರಮ ತಡೆಯಲು ನಡೆಸಿದ ವಿಶೇಷ ಪರಿಶೀಲನೆಯಲ್ಲಿ 23.14 ಲಕ್ಷ ಶಂಕಾಸ್ಪದ ಫಲಾನುಭವಿಗಳು ಪತ್ತೆಯಾಗಿದ್ದಾರೆ. ಈ ಪೈಕಿ 18.06 ಲಕ್ಷ ಮಂದಿಯ ಪಿಂಚಣಿ ಖಾತೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

Karnataka Legislative Council : ನನ್ನಂತೆ ಒಂಟಿ ಬದುಕು ಕಂಡ ಜೀವ..! | #pratidhvani

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌ ವಿಧಾನಸಭೆಯ ಕಲಾಪದಲ್ಲಿ ಈ ಮಾಹಿತಿ ನೀಡಿದ್ದು, ಅರ್ಹತೆ ಇಲ್ಲದವರು ಪಿಂಚಣಿ ಪಡೆಯಲು ದಾಖಲೆಗಳ ಕೊರತೆ ಹಾಗೂ ನಿಗದಿತ ವಿಳಾಸದಲ್ಲಿ ವಾಸಿಸದಿರುವುದು ಪ್ರಮುಖ ಕಾರಣಗಳಾಗಿವೆ ಎಂದಿದ್ದಾರೆ.

ಸರ್ಕಾರವು ‘ಸಂಯೋಜನ’ ಮೊಬೈಲ್ ಅಪ್ಲಿಕೇಶನ್ ಮೂಲಕ ಆದಾಯ ತೆರಿಗೆ ಪಾವತಿದಾರರು, ಎಪಿಎಲ್ ಕಾರ್ಡ್ ಹೊಂದಿರುವವರು, ವಯಸ್ಸಿನ ಮಾನದಂಡಕ್ಕೆ ಹೊಂದದವರು ಹಾಗೂ ಆದಾಯ ಮಿತಿ ಮೀರಿ ಪಿಂಚಣಿ ಪಡೆಯುತ್ತಿರುವವರನ್ನು ಗುರುತಿಸಿದ್ದು, ಬಳಿಕ ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದಾರೆ.

Karnataka Legislative Council : ಸಭಾಪತಿ ಮಾತಿಗೆ ಉಮಾಶ್ರೀ ಭಾವುಕ..! |  #pratidhvani

ಪರಿಶೀಲನೆಯಲ್ಲಿ ಸಂಧ್ಯಾ ಸುರಕ್ಷಾ ಯೋಜನೆಯಲ್ಲೇ ಅತಿ ಹೆಚ್ಚು ಶಂಕಾಸ್ಪದ ಪ್ರಕರಣಗಳು ಪತ್ತೆಯಾಗಿದ್ದು, 12.61 ಲಕ್ಷ ಫಲಾನುಭವಿಗಳು ಪರಿಶೀಲನೆಗೆ ಒಳಪಟ್ಟಿದ್ದಾರೆ. ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಪಿಂಚಣಿ, ವಿಧವಾ ಪಿಂಚಣಿ, ಅಂಗವಿಕಲರ ಪಿಂಚಣಿ, ಮನಸ್ವಿನಿ ಸೇರಿದಂತೆ ಇತರ ಯೋಜನೆಗಳಲ್ಲೂ ಅಕ್ರಮ ಪ್ರಕರಣಗಳು ಬೆಳಕಿಗೆ ಬಂದಿವೆ.

Advocate S. Balan Darshan case EXCLUSIVE :ಕೇಸ್‌ನಲ್ಲಿ ಮಾಫಿ ಸಾಕ್ಷಿಯಾದ್ರೆ ಮುಂದೇನು ಗತಿ..! #pratidhvani

ಅರ್ಹತಾ ದಾಖಲೆಗಳನ್ನು ಸಲ್ಲಿಸಲು ನಿರಾಕರಿಸಿದವರು, ಆದಾಯ ಪ್ರಮಾಣಪತ್ರ ನೀಡದವರು ಹಾಗೂ ವಿಳಾಸದಲ್ಲಿ ವಾಸಿಸದಿರುವವರ ಪಿಂಚಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಪಿಂಚಣಿ ಸ್ಥಗಿತಗೊಂಡವರು, ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅರ್ಹತೆ ಸಾಬೀತುಪಡಿಸಿದ ಬಳಿಕ ಮತ್ತೆ ಪಿಂಚಣಿ ಆರಂಭವಾಗಲಿದೆ ಎಂದು ಸರ್ಕಾರ ತಿಳಿಸಿದೆ.

Advocate Dilip Kumar I S  on actor Darshan ಆ.20ಕ್ಕೆ ಪ್ರದೋಷ್ ಹೇಳಿಕೆ ದಾಖಲು: ದರ್ಶನ್ ಗ್ಯಾಂಗ್ ಗೆ ಢವ ಢವ

ರಾಜ್ಯದಲ್ಲಿ ಒಟ್ಟು 83.12 ಲಕ್ಷ ಪಿಂಚಣಿ ಫಲಾನುಭವಿಗಳಿದ್ದು, 2026ರ ಜುಲೈ ತಿಂಗಳಲ್ಲಿ 62.43 ಲಕ್ಷ ಮಂದಿಗೆ ಪಿಂಚಣಿ ಪಾವತಿಸಲಾಗಿದೆ. ಜಿಲ್ಲಾವಾರು ಅಂಕಿ-ಅಂಶಗಳ ಪ್ರಕಾರ ಬೆಳಗಾವಿಯಲ್ಲಿ 1.51 ಲಕ್ಷ, ಬೆಂಗಳೂರು ನಗರದಲ್ಲಿ 1.24 ಲಕ್ಷ, ಮೈಸೂರಿನಲ್ಲಿ 1.11 ಲಕ್ಷ, ಕಲಬುರಗಿಯಲ್ಲಿ 98,984, ದಾವಣಗೆರೆಯಲ್ಲಿ 94,012, ರಾಯಚೂರಿನಲ್ಲಿ 89,387 ಹಾಗೂ ತುಮಕೂರಿನಲ್ಲಿ 71,111 ಪಿಂಚಣಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

D. K. Shivakumar : ಸದನದಲ್ಲಿ ಶಾಸಕ ಬೆಲ್ಲದ್‌ಗೆ ಕಾಲೆಳೆದ ಸಿಎಂ ಡಿಕೆಶಿ ಬಿಜೆಪಿ ನಾಯಕರಿಗೆ ನಗುವೇ ನಗು..!
Previous Post

ಬೆಳ್ಳಂಬೆಳಗ್ಗೆ ಭೀಕರ ಅಗ್ನಿ ದುರಂತ: ಮಲಗಿದಲ್ಲೇ ಕಣ್ಮುಚ್ಚಿದ 9 ವಿದೇಶಿಗರು

Next Post

3ನೇ ಮಗುವಿಗೂ ಒಂದು ವರ್ಷ ಮಾತೃತ್ವ ರಜೆ: ತಮಿಳುನಾಡು ಸರ್ಕಾರದ ಮಹತ್ವದ ಘೋಷಣೆ

Related Posts

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ
Top Story

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

by ಪ್ರತಿಧ್ವನಿ
August 19, 2026
0

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಫಾರ್ಮ್‌ಹೌಸ್‌ ಒಂದರಲ್ಲಿ ನಕಲಿ ಔಷಧಿಗಳನ್ನು ಮರುಪ್ಯಾಕ್‌ ಮಾಡುತ್ತಿದ್ದ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ದಾಳಿ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ...

Read moreDetails
ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

August 19, 2026
ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

August 19, 2026
ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

August 19, 2026
ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

August 19, 2026
Next Post
3ನೇ ಮಗುವಿಗೂ ಒಂದು ವರ್ಷ ಮಾತೃತ್ವ ರಜೆ: ತಮಿಳುನಾಡು ಸರ್ಕಾರದ ಮಹತ್ವದ ಘೋಷಣೆ

3ನೇ ಮಗುವಿಗೂ ಒಂದು ವರ್ಷ ಮಾತೃತ್ವ ರಜೆ: ತಮಿಳುನಾಡು ಸರ್ಕಾರದ ಮಹತ್ವದ ಘೋಷಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada