• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

ಪ್ರತಿಧ್ವನಿ by ಪ್ರತಿಧ್ವನಿ
August 31, 2026
in Top Story, ಕರ್ನಾಟಕ, ರಾಜಕೀಯ
0
ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕರ್ನಾಟಕ ಸರ್ಕಾರದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಪರಿಷ್ಕರಣೆ ಸರ್ವೆ ಕಾರ್ಯಕ್ಕೆ ನೀಡಿದ್ದ ಗಡುವನ್ನು ಮತ್ತೊಂದು ತಿಂಗಳು ವಿಸ್ತರಿಸಲಾಗಿದೆ. ಈ ಹಿಂದೆ ಆಗಸ್ಟ್ 31ರವರೆಗೆ ನಿಗದಿಪಡಿಸಿದ್ದ ಅವಧಿಯನ್ನು ಇದೀಗ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ.

Gruhalakshmi Guarantee Scheme : ಗೃಹಲಕ್ಷ್ಮೀ ಗ್ಯಾರಂಟಿ ಯೋಜನೆಗೆ 3 ವರ್ಷದ ಸಂಭ್ರಮ #pratidhvani

ಗೃಹಜ್ಯೋತಿ ಯೋಜನೆಯಡಿ ಅನರ್ಹ ಫಲಾನುಭವಿಗಳನ್ನು ಗುರುತಿಸಿ, ಅರ್ಹರಿಗೆ ಮಾತ್ರ ಯೋಜನೆಯ ಸೌಲಭ್ಯ ಮುಂದುವರಿಸುವ ಉದ್ದೇಶದಿಂದ ಜುಲೈ 1ರಿಂದ ರಾಜ್ಯಾದ್ಯಂತ ಪರಿಷ್ಕರಣೆ ಸರ್ವೆ ನಡೆಸಲಾಗುತ್ತಿದೆ. ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿ ಸಿಬ್ಬಂದಿ ಮನೆ ಮನೆಗೆ ತೆರಳಿ ಫಲಾನುಭವಿಗಳ ಮಾಹಿತಿಯನ್ನು ಪರಿಶೀಲಿಸುತ್ತಿದ್ದಾರೆ. ಇದುವರೆಗೆ ಸುಮಾರು ಶೇ.70ರಷ್ಟು ಸರ್ವೆ ಕಾರ್ಯ ಪೂರ್ಣಗೊಂಡಿದ್ದು, ಇನ್ನೂ ಶೇ.30ರಷ್ಟು ಕಾರ್ಯ ಬಾಕಿ ಇದೆ.

ಕೆಲವು ಮನೆಗಳಲ್ಲಿ ಫಲಾನುಭವಿಗಳು ಲಭ್ಯವಿಲ್ಲದಿರುವುದು ಹಾಗೂ ಗ್ರಾಹಕರಿಂದ ಅಗತ್ಯ ಮಾಹಿತಿ ಸಿಗದಿರುವುದು ಸರ್ವೆ ವಿಳಂಬಕ್ಕೆ ಕಾರಣವಾಗಿದೆ. ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುವ ಕೆಲವು ಫಲಾನುಭವಿಗಳಿಂದ ಅಗತ್ಯ ಮಾಹಿತಿ ಪಡೆಯಲು ಸಿಬ್ಬಂದಿಗೆ ತೊಂದರೆ ಎದುರಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ವೆ ಕಾರ್ಯ ಪೂರ್ಣಗೊಳಿಸಲು ಹೆಚ್ಚಿನ ಕಾಲಾವಕಾಶ ನೀಡುವಂತೆ ಬೆಸ್ಕಾಂ ಸೇರಿದಂತೆ ಎಸ್ಕಾಂಗಳು ಸರ್ಕಾರಕ್ಕೆ ಮನವಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ ಮಾಡಲಾಗಿದೆ.

Priyank Kharge : KPSC ಹಗರಣದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಎದ್ದು ಹೋಗಿದ್ದುHDK ಏಕೆ..? #hdkumaraswamy

ರಾಜ್ಯಾದ್ಯಂತ ಗೃಹಜ್ಯೋತಿ ಯೋಜನೆಯ ಒಟ್ಟು 1,65,32,652 ಫಲಾನುಭವಿಗಳಿದ್ದಾರೆ. ಈ ಪೈಕಿ ಬೆಸ್ಕಾಂ ವ್ಯಾಪ್ತಿಯಲ್ಲಿ 68,86,860 ಫಲಾನುಭವಿಗಳು ಇದ್ದಾರೆ. ಇದೀಗ ಸೆಪ್ಟೆಂಬರ್ 30ರವರೆಗೆ ಸರ್ವೆ ಕಾರ್ಯಕ್ಕೆ ಅವಕಾಶ ನೀಡಲಾಗಿದ್ದು, ನಿಗದಿತ ಅವಧಿಯಲ್ಲಿ ಫಲಾನುಭವಿಗಳು ಅಗತ್ಯ ಮಾಹಿತಿಯನ್ನು ಒದಗಿಸುವಂತೆ ಸೂಚಿಸಲಾಗಿದೆ. ಸರ್ವೆ ಪೂರ್ಣಗೊಂಡ ಬಳಿಕ ಅರ್ಹತೆ ಆಧರಿಸಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇದೆ.

DK Shivakumar : ಬಿಜೆಪಿ ಪಾದಯಾತ್ರೆ ಮಾಡಲಿ.. ನಾವೇನ್ ಮಾಡ್ತೀವಿ ಅಂತ ನೋಡಲಿ! #pratidhvani
Previous Post

ನಮ್ಮ ವಿರುದ್ಧ ಅಲ್ಲ..ಬಿಜೆಪಿ ವಿರುದ್ಧ ಕುಮಾರಸ್ವಾಮಿ ಹೋರಾಟ: ಸಿಎಂ ಡಿ.ಕೆ ಶಿವಕುಮಾರ್

Next Post

ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

Related Posts

ಬಿಸ್ಕತ್, ಕೂಲ್‌ಡ್ರಿಂಕ್ಸ್‌ ಪ್ಯಾಕೆಟ್‌ಗಳಲ್ಲಿ ಇನ್ಮುಂದೆ ಕೆಂಪು ಎಚ್ಚರಿಕೆ ಲೇಬಲ್? FSSAI ಮಹತ್ವದ ಪ್ರಸ್ತಾವನೆ
Top Story

ಬಿಸ್ಕತ್, ಕೂಲ್‌ಡ್ರಿಂಕ್ಸ್‌ ಪ್ಯಾಕೆಟ್‌ಗಳಲ್ಲಿ ಇನ್ಮುಂದೆ ಕೆಂಪು ಎಚ್ಚರಿಕೆ ಲೇಬಲ್? FSSAI ಮಹತ್ವದ ಪ್ರಸ್ತಾವನೆ

by ಪ್ರತಿಧ್ವನಿ
August 31, 2026
0

ಪ್ಯಾಕೆಟ್ ಆಹಾರ ಪದಾರ್ಥಗಳಲ್ಲಿ ಸಕ್ಕರೆ, ಉಪ್ಪು ಅಥವಾ ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣ ಹೆಚ್ಚಿದ್ದರೆ, ಗ್ರಾಹಕರಿಗೆ ಸುಲಭವಾಗಿ ತಿಳಿಯುವಂತೆ ಪ್ಯಾಕೆಟ್‌ನ ಮುಂಭಾಗದಲ್ಲೇ ಕೆಂಪು ಬಣ್ಣದ ಎಚ್ಚರಿಕೆ ಲೇಬಲ್ ಅಳವಡಿಸುವ...

Read moreDetails
ರಾಮನಗರದಲ್ಲಿ ಖೋಟಾ ನೋಟು ದಂಧೆ ಬಯಲು:ಐವರು ವಶಕ್ಕೆ

ರಾಮನಗರದಲ್ಲಿ ಖೋಟಾ ನೋಟು ದಂಧೆ ಬಯಲು:ಐವರು ವಶಕ್ಕೆ

August 31, 2026
ಬಿಗ್‌ಬಾಸ್ ಕನ್ನಡ ಸೀಸನ್‌ 13ಕ್ಕೆ ಸಂಕಷ್ಟ? ಸೆ.6ರ ಗ್ರ್ಯಾಂಡ್‌ ಓಪನಿಂಗ್‌ ಬಗ್ಗೆ ಹೆಚ್ಚಿದ ಅನುಮಾನ

ಬಿಗ್‌ಬಾಸ್ ಕನ್ನಡ ಸೀಸನ್‌ 13ಕ್ಕೆ ಸಂಕಷ್ಟ? ಸೆ.6ರ ಗ್ರ್ಯಾಂಡ್‌ ಓಪನಿಂಗ್‌ ಬಗ್ಗೆ ಹೆಚ್ಚಿದ ಅನುಮಾನ

August 31, 2026
ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

August 31, 2026
ನಮ್ಮ ವಿರುದ್ಧ ಅಲ್ಲ..ಬಿಜೆಪಿ ವಿರುದ್ಧ ಕುಮಾರಸ್ವಾಮಿ ಹೋರಾಟ: ಸಿಎಂ ಡಿ.ಕೆ ಶಿವಕುಮಾರ್

ನಮ್ಮ ವಿರುದ್ಧ ಅಲ್ಲ..ಬಿಜೆಪಿ ವಿರುದ್ಧ ಕುಮಾರಸ್ವಾಮಿ ಹೋರಾಟ: ಸಿಎಂ ಡಿ.ಕೆ ಶಿವಕುಮಾರ್

August 31, 2026
Next Post
ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada