• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದಲಿತರ ಮೇಲೆ ದೌರ್ಜನ್ಯ ತಡೆ ಕಾಯಿದೆ- ತಪ್ಪು ತಿದ್ದಿಕೊಂಡ ಸುಪ್ರೀಂ ಕೋರ್ಟು

by
October 5, 2019
in ದೇಶ
0
ದಲಿತರ ಮೇಲೆ ದೌರ್ಜನ್ಯ ತಡೆ ಕಾಯಿದೆ- ತಪ್ಪು ತಿದ್ದಿಕೊಂಡ ಸುಪ್ರೀಂ ಕೋರ್ಟು
Share on WhatsAppShare on FacebookShare on Telegram

1989ರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ ಕುರಿತು 2018ರ ಮಾರ್ಚ್ 20ರಂದು ತಾನು ನೀಡಿದ್ದ ನಿರ್ದೇಶನಗಳನ್ನು ಸುಪ್ರೀಂ ಕೋರ್ಟ್ ವಾಪಸು ಪಡೆದಿದೆ. ಈ ಕಾಯಿದೆಯನ್ನು ದುರ್ಬಲಗೊಳಿಸದೆ ಮೊದಲಿನಂತೆಯೇ ಮುಂದುವರೆಸುವ ಇರಾದೆಯನ್ನೂ ಸಾರಿದೆ.

ADVERTISEMENT

ಈ ಕಾಯಿದೆಯನ್ನು ಅಮಾಯಕ ವ್ಯಕ್ತಿಗಳ ವಿರುದ್ಧ ಸುಳ್ಳು ಕೇಸುಗಳನ್ನು ಹಾಕಲು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು 2018ರ ಮಾರ್ಚ್ 20ರ ತೀರ್ಪು ಹೇಳಿತ್ತು. ದೌರ್ಜನ್ಯ ತಡೆ ಕಾಯಿದೆಯಡಿ ದಾಖಲಾಗುವ ಕೇಸುಗಳಲ್ಲಿ ಆಪಾದಿತರಿಗೆ ನಿರೀಕ್ಷಣಾ ಜಾಮೀನಿನ ಅವಕಾಶ ಕಲ್ಪಿಸಿತ್ತು. ಈ ತೀರ್ಪನ್ನು ವಾಪಸು ಪಡೆದಿರುವುದಾಗಿ ಸುಪ್ರೀಂ ಕೋರ್ಟಿನ ಮೂವರು ನ್ಯಾಯಮೂರ್ತಿಗಳ ನ್ಯಾಯಪೀಠ ಇದೇ ಅಕ್ಟೋಬರ್ ಒಂದರಂದು ಸಾರಿತು.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರನ್ನು ಸುಳ್ಳುಗಾರರು ಅಥವಾ ದಗಾಕೋರರು ಎಂದು ಭಾವಿಸುವುದು ತಪ್ಪು. ಮೂಲಭೂತ ಮಾನವೀಯ ಘನತೆಯ ಉಲ್ಲಂಘನೆಯಿದು. ಸುಳ್ಳು ದೂರುಗಳ ಹಿಂದಿರುವುದು ಮಾನವ ವೈಫಲ್ಯವೇ ವಿನಾ ಜಾತಿಯಲ್ಲ ಎಂದು ನ್ಯಾಯಪೀಠ ಈ ಹಿಂದಿನ ತೀರ್ಪಿನ ಕುರಿತು ಟೀಕೆ ಟಿಪ್ಪಣಿ ಮಾಡಿತು.

2018ರ ಮಾರ್ಚ್ 20ರ ತೀರ್ಪಿನಲ್ಲಿ ನೀಡಲಾಗಿದ್ದ ಮೂರು ಮುಖ್ಯ ನಿರ್ದೇಶನಗಳು ದಲಿತ ಆದಿವಾಸಿ ಸಮುದಾಯಗಳ ಪ್ರತಿಭಟನೆಗೆ ಕಾರಣವಾಗಿದ್ದವು. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆಯಡಿ ದೂರು ಸಲ್ಲಿಸಿದ ಒಡನೆಯೇ ಆಪಾದಿತರನ್ನು ಬಂಧಿಸುವಂತಿಲ್ಲ, ಹೀಗೆ ಬಂಧಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಪೂರ್ವಾನುಮತಿ ಪಡೆಯಬೇಕು, ಹಾಗೂ ದೂರಿನಲ್ಲಿ ಮಾಡಲಾಗಿರುವ ಆಪಾದನೆಗಳಲ್ಲಿ ಮೊದಲ ನೋಟಕ್ಕೆ ವಾಸ್ತವಾಂಶ ಕಾಣುತ್ತಿದೆಯೇ ಎಂಬುದರ ವಿಚಾರಣೆ ನಡೆಸಬೇಕು. ಆ ನಂತರವೇ ದೂರಿನ ಕುರಿತು ಪ್ರಥಮ ವರ್ತಮಾನ ವರದಿಯನ್ನು ದಾಖಲಿಸಬೇಕು, ಆಪಾದಿತರಿಗೆ ನಿರೀಕ್ಷಣಾ ಜಾಮೀನು ಪಡೆಯುವ ಅವಕಾಶ ಇರಬೇಕು ಎಂದು ನ್ಯಾಯಮೂರ್ತಿಗಳಾದ ಆದರ್ಶ್ ಗೋಯಲ್ ಮತ್ತು ಉದಯ ಉಮೇಶ ಲಲಿತ್ ಅವರನ್ನು ಒಳಗೊಂಡ ನ್ಯಾಯಪೀಠ 2018ರ ಮಾರ್ಚ್ ನಲ್ಲಿ ನಿರ್ದೇಶನಗಳನ್ನು ನೀಡಿತ್ತು.

ಸಾಂದರ್ಭಿಕ ಚಿತ್ರ

ಈ ಮೂರೂ ನಿರ್ದೇಶನಗಳನ್ನು ನ್ಯಾಯಮೂರ್ತಿ ಅರುಣ್ ಮಿಶ್ರ ನೇತೃತ್ವದ ಮೂವರು ಸದಸ್ಯರ ನ್ಯಾಯಪೀಠ ಅಕ್ಟೋಬರ್ ಒಂದರಂದು ವಾಪಸು ಪಡೆದು ಅಸಿಂಧು ಎಂದು ಹೊಡೆದು ಹಾಕಿದೆ. ಈ ನಿರ್ದೇಶನಗಳು ತಮ್ಮ ರಕ್ಷಣೆಗಿದ್ದ ಕಾಯಿದೆಯನ್ನು ದುರ್ಬಲಗೊಳಿಸಿವೆ ಎಂದು ದಲಿತರು-ಆದಿವಾಸಿಗಳ ಆಕ್ರೋಶ ಸ್ಫೋಟಗೊಂಡಿತ್ತು. ಹಿಂಸಾಚಾರಕ್ಕೆ ತಿರುಗಿದ ಪ್ರದರ್ಶನಗಳಲ್ಲಿ ಏಳು ಮಂದಿ ದಲಿತರೂ ಸೇರಿದಂತೆ ಒಂಬತ್ತು ಮಂದಿ ಸಾವಿಗೀಡಾಗಿದ್ದರು. ಕೇಂದ್ರ ಸರ್ಕಾರ 2018ರ ಏಪ್ರಿಲ್ ನಲ್ಲಿ ಸುಪ್ರೀಂ ಕೋರ್ಟಿನಲ್ಲಿ ಮರುವಿಮರ್ಶೆ ಮನವಿ ಸಲ್ಲಿಸಿತು. 2018ರ ಆಗಸ್ಟ್ ತಿಂಗಳಲ್ಲಿ ಈ ಮೂರೂ ನಿರ್ದೇಶನಗಳನ್ನು ತಿರಸ್ಕರಿಸುವ ಕಾಯಿದೆ ತಿದ್ದುಪಡಿಯೊಂದನ್ನು ಸಂಸತ್ತಿನಲ್ಲಿ ಅಂಗೀಕರಿಸಲಾಗಿತ್ತು.

2018ರ ಮಾರ್ಚ್ 20ರಂದು ತೀರ್ಪು ನೀಡಿದ್ದ ಅದೇ ನ್ಯಾಯಪೀಠದ (ನ್ಯಾಯಮೂರ್ತಿಗಳಾದ ಆದರ್ಶ್ ಗೋಯೆಲ್ ಮತ್ತು ಉದಯ ಉಮೇಶ್ ಲಲಿತ್) ಮುಂದೆ ಸರ್ಕಾರದ ಮರುವಿಮರ್ಶಾ ಮನವಿಯನ್ನು ಸಲ್ಲಿಸಲಾಗಿತ್ತು. ಈ ನಡುವೆ ನ್ಯಾಯಮೂರ್ತಿ ಗೋಯೆಲ್ ನಿವೃತ್ತರಾದರು. ಹೊಸ ನ್ಯಾಯಪೀಠವನ್ನು ರಚಿಸಲಾಯಿತು. ಈ ಹೊಸ ನ್ಯಾಯಪೀಠವು ಮರುವಿಮರ್ಶಾ ಅರ್ಜಿಯನ್ನು ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠಕ್ಕೆ ವಹಿಸಿತು. ಎಂ. ಆರ್. ಶಾ ಮತ್ತು ಬಿ. ಆರ್. ಗವಾಯಿ ಉಳಿದ ಇಬ್ಬರು ನ್ಯಾಯಮೂರ್ತಿಗಳು.

1989ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ತಡೆ ಕಾಯಿದೆಯನ್ನು ಜಾರಿಗೆ ತಂದದ್ದು ರಾಜೀವ್ ಗಾಂಧೀ ಸರ್ಕಾರ. ‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಾಮಾಜಿಕ-ಆರ್ಥಿಕ ಸ್ಥಿತಿಗತಿಗಳನ್ನು ಸುಧಾರಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದ್ದರೂ ಅವರು ದೌರ್ಜನ್ಯಗಳಿಗೆ ಬಲಿಯಾಗುತ್ತಲೇ ಇದ್ದಾರೆ. ಅವರಿಗೆ ನಾಗರಿಕ ಹಕ್ಕುಗಳನ್ನು ನಿರಾಕರಿಸಲಾಗುತ್ತಿದೆ. ಹಲವು ಬಗೆಯ ಅಪರಾಧಗಳು, ಅವಹೇಳನಗಳು ಹಾಗೂ ಕಿರುಕುಳಗಳಿಗೆ ಅವರನ್ನು ಗುರಿ ಮಾಡಲಾಗುತ್ತಿದೆ. ಕ್ರೂರ ಅಮಾನುಷ ಪ್ರಕರಣಗಳಲ್ಲಿ ಅವರ ಜೀವ ಆಸ್ತಿಪಾಸ್ತಿಗಳು ಕಳೆದು ಹೋಗುತ್ತಲೇ ಇವೆ’ ಎಂದು 1989ರ ಕಾಯಿದೆಯ ಉದ್ದೇಶ ಮತ್ತು ಕಾರಣಗಳಲ್ಲಿ ವಿವರಿಸಲಾಗಿತ್ತು.

ಈ ಉದ್ದೇಶ ಮತ್ತು ಕಾರಣಗಳನ್ನು ಆಧರಿಸಿ ನ್ಯಾಯಮೂರ್ತಿ ಅರುಣ್ ಮಿಶ್ರ ಅವರು ಸರ್ಕಾರದ ಮರುವಿಮರ್ಶಾ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ್ದರು. 2018ರ ಮಾರ್ಚ್ 20ರ ಸುಪ್ರೀಂ ಕೋರ್ಟ್ ತೀರ್ಪಿನ ಅಂಶಗಳನ್ನು ಅಸಿಂಧುಗೊಳಿಸಲು ಸಂಸತ್ತಿನಲ್ಲಿ ಮಾಡಲಾಗಿದ್ದ ತಿದ್ದುಪಡಿಯನ್ನು ಪ್ರಶ್ನಿಸಿ ಹಲವು ಮಂದಿ ಸುಪ್ರೀಂ ಕೋರ್ಟಿನಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದರು. 2018ರ ಮಾರ್ಚ್ 20ರಂದು ಆದರ್ಶ್ ಗೋಯಲ್ ಮತ್ತು ಉದಯ ಉಮೇಶ ಲಲಿತ್ ಅವರ ನ್ಯಾಯಪೀಠ ನೀಡಿದ್ದ ಮೂರು ನಿರ್ದೇಶನಗಳ ತೀರ್ಪನ್ನು ಈ ಅರ್ಜಿಗಳು ಸಮರ್ಥಿಸಿದ್ದವು. ಈ ಅರ್ಜಿಗಳ ಕುರಿತ ತನ್ನ ತೀರ್ಪನ್ನು ಸುಪ್ರೀಂ ಕೋರ್ಟ್ ಕಾದಿರಿಸಿದೆ. ಮೂಲ ಕಾಯಿದೆಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂಬ ಇಂಗಿತವನ್ನೂ ನೀಡಿದೆ.

ಭಾರತ ಸರ್ಕಾರದ ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋದ ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ 2007-17ರ ನಡುವಣ ಹತ್ತು ವರ್ಷಗಳ ಅವಧಿಯಲ್ಲಿ ದಲಿತರ ಮೇಲಿನ ದೌರ್ಜನ್ಯಗಳ ಪ್ರಮಾಣ ಶೇ. 66ರಷ್ಟು ಹೆಚ್ಚಿದೆ. ದೇಶದಲ್ಲಿ ನಿತ್ಯ ಸರಾಸರಿ ಆರು ಮಂದಿ ದಲಿತ ಮಹಿಳೆಯರ ಮೇಲೆ ಬಲಾತ್ಕಾರ ನಡೆಯುತ್ತಿದೆ. ಈ ಹತ್ತು ವರ್ಷಗಳಲ್ಲಿ ಪರಿಶಿಷ್ಟ ಜಾತಿಗಳಿಗೆ ಸೇರಿದ ಮಹಿಳೆಯರ ಮೇಲಿನ ಅತ್ಯಾಚಾರದ ಪ್ರಕರಣಗಳು ಇಮ್ಮಡಿಯಾಗಿವೆ. ವಿಚಾರಣೆಗೆ ಕಾದಿರುವ ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳ ಬಾಕಿಯ ಬೆಟ್ಟ ಬೆಳೆಯುತ್ತಿದೆ. ಸಜೆಯಲ್ಲಿ ಕೊನೆಯಾಗುವ ಪ್ರಕರಣಗಳ ಪ್ರಮಾಣ ಶೇ. 28ಕ್ಕೆ ಕುಸಿದಿದೆ.

ಜಾತಿ ವ್ಯವಸ್ಥೆಯ ಒಳಿತನ್ನು ಎತ್ತಿ ಹೇಳುವ ಮತ್ತು ಮೀಸಲಾತಿಯನ್ನು ಅಂತ್ಯಗೊಳಿಸುವ ಹಾಗೂ ಸಂವಿಧಾನವನ್ನು ಬದಲಾಯಿಸುವ ಮಾತುಗಳು ಕೇಂದ್ರ ಸರ್ಕಾರದ ಒಳಗಿನಿಂದ ಮತ್ತು ಹೊರಗಿನಿಂದ ಕಾಲಕಾಲಕ್ಕೆ ಕೇಳಿ ಬರುತ್ತಿವೆ. ಭಯ ಮತ್ತು ಅಪಮಾನದ ಲಜ್ಜೆಯನ್ನು ಬದಿಗೊತ್ತಿರುವ ದಲಿತರು ಪ್ರತಿರೋಧದ ಮತ್ತು ತಿಳಿವಳಿಕೆಯ ಹಾದಿ ಹಿಡಿದಿರುವುದು ಮೇಲ್ಜಾತಿಗಳನ್ನು ಇನ್ನಷ್ಟು ಕೆರಳಿಸಿ ದೌರ್ಜನ್ಯಗಳ ಸಂಖ್ಯೆ ಹೆಚ್ಚುತ್ತಿದೆ ಎಂಬ ಅಂಶವನ್ನು ಅಧ್ಯಯನಗಳು ಸಾರಿವೆ. ಇಂತಹ ಕಠೋರ ವಾಸ್ತವದ ನಡುವೆಯೂ ಪರಿಶಿಷ್ಟ ಜಾತಿ ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯ ದುರುಪಯೋಗ ಆಗುತ್ತಿದೆ ಎಂಬುದಾಗಿ 2018ರಲ್ಲಿ ಸುಪ್ರೀಂ ಕೋರ್ಟ್ ಹೇಳಿದ್ದು ಗಾಯದ ಮೇಲೆ ಬರೆ ಎಳೆದದ್ದಕ್ಕಿಂತ ಕಡಿಮೆಯೇನೂ ಅಲ್ಲ.

Tags: Government of IndiaNational Crime Record BureauReservation SystemSC ST (Prevention of Atrocities) Actsupreme courtಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆಭಾರತ ಸರ್ಕಾರಮೀಸಲಾತಿ ವ್ಯವಸ್ಥೆರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೊಸುಪ್ರೀಂ ಕೋರ್ಟ್
Previous Post

ಸಕ್ರೆಬೈಲು ಆನೆಗಳ ಸರಣಿ ಸಾವು: ಹರ್ಪಿಸ್‌ ವೈರಸ್‌ ಕಾರಣ?

Next Post

ಕೊಚ್ಚಿ ಘಟನೆ ಮನೆ ಖರೀದಿಸುವವರಿಗೆ ಎಚ್ಚರಿಕೆಯ ಗಂಟೆ 

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ಕೊಚ್ಚಿ ಘಟನೆ ಮನೆ ಖರೀದಿಸುವವರಿಗೆ ಎಚ್ಚರಿಕೆಯ ಗಂಟೆ 

ಕೊಚ್ಚಿ ಘಟನೆ ಮನೆ ಖರೀದಿಸುವವರಿಗೆ ಎಚ್ಚರಿಕೆಯ ಗಂಟೆ 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada