• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೊಚ್ಚಿ ಘಟನೆ ಮನೆ ಖರೀದಿಸುವವರಿಗೆ ಎಚ್ಚರಿಕೆಯ ಗಂಟೆ 

by
October 5, 2019
in ಕರ್ನಾಟಕ
0
ಕೊಚ್ಚಿ ಘಟನೆ ಮನೆ ಖರೀದಿಸುವವರಿಗೆ ಎಚ್ಚರಿಕೆಯ ಗಂಟೆ 
Share on WhatsAppShare on FacebookShare on Telegram

ಕೇರಳದ ಕೊಚ್ಚಿಯ ಮರಾಡು ಮುನಿಸಿಪಾಲಿಟಿ ಪ್ರದೇಶದ ನಾಲ್ಕು ಬೃಹತ್ ಅಪಾರ್ಟ್ಮೆಂಟ್ ಧ್ವಂಸ ಮಾಡಲು ಸುಪ್ರೀಂ ಕೋರ್ಟ್ ಗಡು ನೀಡಿರುವ ತೀರ್ಪು ಕಾನೂನು ಉಲ್ಲಂಘಿಸಿ ಕಟ್ಟಡ ನಿರ್ಮಾಣ ಮಾಡುವ ಮತ್ತು ಅಂತಹ ಕಟ್ಟಡಗಳಲ್ಲಿ ವಸತಿ ಖರೀದಿಸುವ ಜನರಿಗೆ ಎಚ್ಚರಿಕೆಯ ಗಂಟೆಯಾಗಲಿದೆ.

ADVERTISEMENT

ನಿಯಮ ಉಲ್ಲಂಘಿಸಿದ ಕಟ್ಟಡಗಳನ್ನು ಧ್ವಂಸ ಮಾಡಲು ನ್ಯಾಯಾಲಯ ಆದೇಶ ನೀಡಿರುವುದು ಇದೇ ಮೊದಲಲ್ಲ. ಹವಾಮಾನ ವೈಪರಿತ್ಯ ಕುರಿತಾಗಿ ದೇಶ ವಿದೇಶಗಳಲ್ಲಿ ಜನಜಾಗೃತಿ ಆಗುತ್ತಿರುವ ಈ ಸಂದರ್ಭದಲ್ಲಿ ಜೀವವೈವಿಧ್ಯತೆಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ನ ಮಹತ್ವದ ತೀರ್ಪು ಇದಾಗಿದೆ. ಮಾತ್ರವಲ್ಲದೆ, ಸುಪ್ರೀಂ ಕೋರ್ಟು ನೀಡಿರುವ ಈ ಮಹತ್ವದ ತೀರ್ಪು ದೇಶದಾದ್ಯಂತ ಬೃಹತ್ ವಸತಿ ಸಮುಚ್ಛಯಗಳಲ್ಲಿ ಮನೆ ಖರೀದಿಸುವವರನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿದೆ.

ಕೆರೆಯ ದಂಡೆಯಲ್ಲಿ ಕರಾವಳಿಯ ವಲಯ ನಿಯಂತ್ರಣ (Coastal Regulation Zone) ನಿಯಮ ಉಲ್ಲಂಘಿಸಿ ನಿರ್ಮಾಣ ಮಾಡಿರುವ ನಾಲ್ಕು ಕಟ್ಟಡಗಳ 343 ಫ್ಲಾಟುಗಳು 138 ದಿನಗಳಲ್ಲಿ ನೆಲಸಮ ಆಗಲಿದೆ. ಸುಮಾರು 90 ದಿನಸಗಳಲ್ಲಿ ಕಟ್ಟಡ ಧ್ವಂಸ ಪ್ರಕ್ರಿಯೆ ನಡೆಯಲಿದ್ದು, ಮುಂದಿನ ಫೆಬ್ರವರಿ ತಿಂಗಳೊಳಗೆ ಡೆಬ್ರಿಗಳನ್ನು ಸಾಗಾಟ ಮಾಡಬೇಕಾಗಿದೆ.

ಅಪಾರ್ಟಮೆಂಟ್ ಮಾಲೀಕರ ಪ್ರತಿಭಟನೆ

ಒಂದೊಂದು ಫ್ಲಾಟ್ 50 ಲಕ್ಷ ರೂಪಾಯಿಯಿಂದ ಒಂದೂವರೆ ಕೋಟಿ ರೂಪಾಯಿ ಬೆಲೆಬಾಳುತ್ತದೆ. ಇದೀಗ ಸುಪ್ರೀಂ ಕೋರ್ಟ್ ಪ್ರತಿ ಫ್ಲಾಟ್ ಮಾಲೀಕನಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಧನ ವಿತರಿಸುವಂತೆ ಕೇರಳ ಸರಕಾರಕ್ಕೆ ಆದೇಶ ನೀಡಿದೆ.

ಕಳೆದ 13 ವರ್ಷಗಳಿಂದ ಕಾನೂನು ಹೋರಾಟ ನಡೆಯುತ್ತಿದ್ದು, ಅಂತಿಮವಾಗಿ ಕಳೆದ ಕೆಲವು ತಿಂಗಳಿಂದ ಕೊಚ್ಚಿ ನಗರದ ಸುಂದರವಾದ ಮತ್ತು ವಿಶಾಲವಾದ ವಂಬನಾಡ್ ಕೆರೆಯ ಸನಿಹದಲ್ಲಿ ನಿರ್ಮಿಸಲಾಗಿರುವ ನಾಲ್ಕು ಅಪಾರ್ಟ್ಮೆಂಟುಗಳನ್ನು ಧ್ವಂಸ ಮಾಡಲು ಸಮಯ ಮಿತಿಯನ್ನು ನಿಗದಿ ಮಾಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಕಳೆದ ವರ್ಷ ಕೇರಳದಲ್ಲಿ ಪ್ರಾಕೃತಿಕ ವಿಕೋಪ ಆಗಿರುವುದನ್ನು ಪ್ರಸ್ತಾವಿಸಿರುವ ನ್ಯಾಯಾಲಯ, ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಿ ಕರಾವಳಿಯ ನಿಯಂತ್ರಣ ವಲಯ ನಿಯಮ ಉಲ್ಲಂಘನೆ ಆಗಿರುವುದನ್ನು ಪರಿಗಣಿಸಿ ತೀರ್ಪು ನೀಡಿದೆ. ವಿವಾದಿತ ಕಟ್ಟಡಗಳಲ್ಲಿ ವಾಸಿಸುತ್ತಿರುವ ಮಂದಿಯ ವಿರುದ್ಧವಾಗಿ ತೀರ್ಪು ನೀಡುತ್ತಿಲ್ಲ. ಕಾನೂನು ಉಲ್ಲಂಘನೆ ಆಗಿರುವುದರಿಂದ ಇಂತಹ ತೀರ್ಪು ನೀಡಬೇಕಾಗಿದೆ ಎಂದು ಕೋರ್ಟ್ ಹೇಳಿದೆ.

2006ರ ನಂತರ ಈ ಕಾನೂನು ಬಾಹಿರ ಕಟ್ಟಡಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿತ್ತು. ಕೊಚ್ಚಿ ನಗರದಲ್ಲಿ ಹಿನ್ನೀರಿನಂತಿರುವ ವಂಬನಾಡು ಕೆರೆಯ ತೀರ ಬದಿಯಲ್ಲಿ ಗ್ರಾಹಕರ ಆಕರ್ಷಣೆಗಾಗಿ ನಿರ್ಮಾಣ ಮಾಡಲಾದ ವಸತಿ ಸಮುಚ್ಛಯ ಇದಾಗಿದೆ. ಈ ಕಾನೂನು ಬಾಹಿರ ಕಟ್ಟಡಗಳು ಕೊಚ್ಚಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಇಲ್ಲ. ಬದಲಾಗಿ ಮರಾಡು ಗ್ರಾಮ ಪಂಚಾಯತು (ಈಗ ಮುನಿಸಿಪಾಲಿಟಿ) ಆಡಳಿತ ವ್ಯಾಪ್ತಿಯಲ್ಲಿದೆ. ಅಂದಿನ ಪಂಚಾಯತು ಆಡಳಿತ ಮಂಡಳಿ ಕರಾವಳಿಯ ವಲಯ ನಿಯಂತ್ರಣ ನಿಯಮವನ್ನು ಪರಿಗಣಿಸದೆ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿತ್ತು.

ಆದರೆ, ಕೇರಳ ರಾಜ್ಯ ಕರಾವಳಿ ವಲಯ ನಿರ್ವಹಣಾ ಮಂಡಳಿ ಗ್ರಾಮ ಪಂಚಾಯತಿನ ಈ ಕ್ರಮವನ್ನು ಪ್ರಶ್ನೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಬಿಲ್ಡರುಗಳಿಗೆ ನೊಟೀಸು ಜಾರಿ ಮಾಡಿತ್ತು. ಮಾತ್ರವಲ್ಲದೆ, ರಾಜ್ಯ ಕರಾವಳಿ ವಲಯ ನಿಯಮಗಳ ಉಲ್ಲಂಘನೆ ಆಗಿದೆ ಎಂದು ಉಲ್ಲೇಖಿಸಿತ್ತು. ಈ ಪ್ರಕರಣಗಳನ್ನು 2007ರಲ್ಲಿ ಕೇರಳ ಹೈಕೋರ್ಟಿನಲ್ಲಿ ಪ್ರಶ್ನಿಸಿದ ಬಿಲ್ಡರುಗಳು ಪಂಚಾಯತು ಪ್ರಕರಣಕ್ಕ ತಡಯಾಜ್ಞೆ ತಂದು ಕಟ್ಟಡ ನಿರ್ಮಾಣ ಮುಂದುವರಿಸಿದ್ದರು.

2016ರಲ್ಲಿ ಈ ಪ್ರಕರಣಕ್ಕೆ ಮಹತ್ವದ ತಿರುವು ದೊರೆಯಿತು. ನಾಯಾಲಯವು ಕರಾವಳಿ ವಲಯ ನಿರ್ವಹಣಾ ಮಂಡಳಿ ವಿರುದ್ಧವಾಗಿ ತೀರ್ಪು ನೀಡಿತು. ಮಾತ್ರವಲ್ಲದೆ, ಗ್ರಾಮ ಪಂಚಾಯತು ತಪ್ಪೆಸಗಿದೆ ಎಂದು ಹೇಳಿತು. ಹೈ ಕೋರ್ಟ್ ತೀರ್ಪಿನ ವಿರುದ್ಧ ಕರಾವಳಿ ವಲಯ ನಿರ್ವಹಣಾ ಮಂಡಳಿ ಸುಪ್ರೀಂ ಕೋರ್ಟ್ ಮೆಟ್ಟಲೇರಿತು. ಮಂಡಳಿಯ ಅನುಮತಿ ಇಲ್ಲದೆ ಮರಾಡು ಗ್ರಾಮ ಪಂಚಾಯತು ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡಿದೆ ಎಂದು ಅದು ವಾದಿಸಿತು. 2019 ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಕರಾವಳಿ ವಲಯ ನಿರ್ವಹಣಾ ಮಂಡಳಿ ಪರವಾಗಿ ತೀರ್ಪು ನೀಡಿ, ಕಟ್ಟಡಗಳನ್ನು ಕೆಡಹುವಂತೆ ಆದೇಶ ನೀಡಿತು.

ಈ ವರ್ಷಆಗಸ್ಟ್ 9ರಂದು ನೆರೆ ನೀರು ತುಂಬಿಕೊಂಡ ಕೊಚ್ಚಿ ವಿಮಾನ ನಿಲ್ದಾಣ

ವಂಬನಾಡು ಕೆರೆ ಹಿನ್ನೀರು ಪ್ರದೇಶದಲ್ಲಿ ಬೃಹತ್ ಕಟ್ಟಡಗಳ ನಿರ್ಮಾಣ ಜೀವವೈವಿಧ್ಯತೆ ಅಪಾಯವಿದ್ದು, ಇದೊಂದು ಭಾರತದ ಅತ್ಯಂತ ವಿಶಾಲವಾದ ಕೆರೆ ಪ್ರದೇಶ ಎಂದು ಕರಾವಳಿ ವಲಯ ನಿರ್ವಹಣಾ ಮಂಡಳಿ ಬಲವಾದ ವಾದ ಮಂಡಿಸಿತ್ತು. ಹವಾಮಾನ ವೈಪರಿತ್ಯ ಕುರಿತಾಗಿ ದೇಶ ವಿದೇಶಗಳಲ್ಲಿ ಜನಜಾಗೃತಿ ಆಗುತ್ತಿರುವ ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಜೀವವೈವಿಧ್ಯತೆಗೆ ಸಂಬಂಧಪಟ್ಟಂತೆ ನೀಡಿದ ಮಹತ್ವದ ತೀರ್ಪು ಇದಾಗಿದ್ದು, ಕೇರಳ ಸೇರಿದಂತೆ ದೇಶದ ಬಹುತೇಕ ಕಡೆ ನಡೆದ ಪ್ರವಾಹ ಮತ್ತು ಪ್ರಾಕೃತಿಕ ಅನಾಹುತಗಳ ಬಗ್ಗೆ ಉಲ್ಲೇಖ ಮಾಡಿದ ನ್ಯಾಯಾಧೀಶರು ಸೂಕ್ಷ್ಮವಾದ ಕರಾವಳಿ ತೀರ ಪ್ರದೇಶಗಳಲ್ಲಿ ಅನಿಯಂತ್ರಿತ ಕಟ್ಟಡ ನಿರ್ಮಾಣ ಮಾಡುವುದರಿಂದ ಅಪಾಯಕಾರಿ ಸನ್ನಿವೇಶ ಉಂಟಾಗಲಿದೆ ಮತ್ತು ನೀರಿನ ಸಹಜ ಹರಿವಿಗೆ ಅಡೆತಡೆ ಆಗಲಿದೆ ಎಂದಿದ್ದಾರೆ.

ಬೆಂಗಳೂರು ಮಹಾನಗರದಲ್ಲಿ ಕೂಡ ಬಿಡಿಎ ಸೇರಿದಂತೆ ಖಾಸಗಿ ಬಿಲ್ಡರುಗಳು ನೈಸರ್ಗಿಕ ಕೆರೆ ಮತ್ತು ಕೆರೆದಂಡೆಗಳನ್ನು ಆಕ್ರಮಿಸಿ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಹೈ ಕೋರ್ಟ್ ಕಟ್ಟಡ ತೆರವು ಮಾಡುವಂತೆ ಕೆಲವು ತೀರ್ಪುಗಳನ್ನು ನೀಡಿದೆ. ಬೆಂಗಳೂರಿನ ಈ ಪ್ರಕರಣಗಳು ಮತ್ತು ಕೊಚ್ಚಿ ಪ್ರಕರಣದಲ್ಲಿ ಕೂಡ ಕಟ್ಟಡ ನಿರ್ಮಾಣ ಮಾಡಿದವರು ಗ್ರಾಹಕರಿಗೆ ಸೂಕ್ತ ದಾಖಲೆಗಳನ್ನು ಒದಗಿಸಿದ್ದಾರೆ. ಎಲ್ಲಿಯೂ ಕೂಡ ಫ್ಲಾಟ್ ಖರೀದಿ ಮಾಡುವವನಿಗೆ ಕಟ್ಟಡ ನಿಯಮ ಪ್ರಕಾರ ನಿರ್ಮಾಣ ಆಗಿಲ್ಲ ಎಂಬ ಸೂಚನೆ ದೊರೆತೇ ಇಲ್ಲ. ಯಾವುದೇ ಕಟ್ಟಡ ನಿರ್ಮಾಣ ಹಲವು ಸರಕಾರಿ ಇಲಾಖೆ ಮತ್ತು ಏಜೆನ್ಸಿಗಳ ಪ್ರಮಾಣ ಪತ್ರ ಬೇಕು. ಎಲ್ಲವೂ ಕ್ರಮ ಬದ್ಧವಾಗಿದೆಯೇ ಎಂಬುದನ್ನು ಪರಾಂಬರಿಸಲು ನಮ್ಮಲ್ಲಿ ಯಾವುದೇ ಪ್ರಾಧಿಕಾರ ಇಲ್ಲವಾಗಿದೆ.

ಇಂತಹ ಸಂದರ್ಭಗಳಲ್ಲಿ ರಿಯಲ್ ಎಸ್ಟೇಟ್ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯ್ದೆ (ರೇರಾ) 2016 ಪ್ರಕಾರ ರಚಿಸಲಾಗುವ ಪ್ರಾಧಿಕಾರಗಳು ಗ್ರಾಹಕನಿಗೆ ಸಹಾಯಕ ಮಾಡಬೇಕು ಎನ್ನುತ್ತಾರೆ ಮಂಗಳೂರಿನ ವಕೀಲರಾದ ವಿವೇಕಾನಂದ ಪನಿಯಾಲ. ರೇರಾ ಪ್ರಕಾರ ಡೆವಲಪರ್ ಕಟ್ಟಡ ನಿರ್ಮಾಣ ಮಾಡುವ ಆಸ್ತಿಗೆ ವಿಮೆ ಮಾಡಬೇಕಾಗುತ್ತದೆ. ಆಗ, ವಿಮಾ ಕಂಪೆನಿ ಆಸ್ತಿ ದಾಖಲೆಯನ್ನು ಕೂಲಂಕುಶವಾಗಿ ಪರಿಶೀಲನೆ ಮಾಡುತ್ತದೆ. ದಾಖಲೆ ಸರಿಯಾಗಿದ್ದಲ್ಲಿ ಮಾತ್ರ ವಿಮೆ ಆಗುತ್ತದೆ.

ಎರಡನೇಯದಾಗಿ, ಯಾವುದೇ ಪ್ರಕರಣಗಳು, ಉಲ್ಲಂಘನೆ ಕುರಿತು ಯಾವುದೇ ಪ್ರಾಧಿಕಾರಗಳಿಂದ ನೊಟೀಸು ಜಾರಿ ಆಗಿದ್ದರೆ ಅವುಗಳನ್ನು ಪ್ರಾಧಿಕಾರಕ್ಕೆ Real Estate Regulatory Authority (RERA) ಸಲ್ಲಿಸಬೇಕಾಗುತ್ತದೆ. ಆದರೆ, ಇವರೆಡೂ ಕೆಲಸಗಳು ಆಗುತ್ತಿಲ್ಲ ಎನ್ನುತ್ತಾರೆ ಪನಿಯಾಲ.

Tags: Coastal Regulation ZoneGovernment of KeralaKerala High CourtKerala StateKochi CityMaradu Apartmentssupreme courtಕರಾವಳಿಯ ವಲಯ ನಿಯಂತ್ರಣ ನಿಯಮಕೇರಳ ರಾಜ್ಯಕೇರಳ ಸರ್ಕಾರಕೇರಳ ಹೈ ಕೋರ್ಟ್ಕೊಚ್ಚಿ ನಗರಮರಾಡು ಅಪಾರ್ಟ್ ಮೆಂಟ್ಸ್ಸುಪ್ರೀಂ ಕೋರ್ಟ್
Previous Post

ದಲಿತರ ಮೇಲೆ ದೌರ್ಜನ್ಯ ತಡೆ ಕಾಯಿದೆ- ತಪ್ಪು ತಿದ್ದಿಕೊಂಡ ಸುಪ್ರೀಂ ಕೋರ್ಟು

Next Post

ಕಲ್ಯಾಣ ಕರ್ನಾಟಕ – ಹೆಸರಿನಲ್ಲೇನಿದೆ?

Related Posts

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್
ಕರ್ನಾಟಕ

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

by ಪ್ರತಿಧ್ವನಿ
July 13, 2025
0

ಕನಕದಾಸರು ಕುಲದ ಅವಮಾನವನ್ನು ಅನುಭವಿಸಿ ಬಳಿಕ ಅಳಿಸಿದರು: ಕೆ.ವಿ.ಪಿ ಕನಕದಾಸರನ್ನು ಭಕ್ತಿಗೆ ಕಟ್ಟಿಹಾಕದೆ-ಅವರ ಬಂಡಾಯವನ್ನೂ ನಾವು ಅರಿಯಬೇಕಿದೆ: ಕೆ.ವಿ.ಪಿ ಪ್ರತಿಭಾ ಪುರಸ್ಕಾರ ಅಂದರೆ ಆತ್ಮವಿಶ್ವಾಸದ ರಕ್ತದಾನವಿದ್ದಂತೆ: ಕೆ.ವಿ.ಪ್ರಭಾಕರ್...

Read moreDetails

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025
Next Post
ಕಲ್ಯಾಣ ಕರ್ನಾಟಕ - ಹೆಸರಿನಲ್ಲೇನಿದೆ?

ಕಲ್ಯಾಣ ಕರ್ನಾಟಕ - ಹೆಸರಿನಲ್ಲೇನಿದೆ?

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada