• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಉಪಚುನಾವಣೆ ಅನರ್ಹರಿಗಷ್ಟೇ ಅಲ್ಲ, ಬಿಎಸ್ ವೈ, ಸಿದ್ದುಗೂ ಪ್ರತಿಷ್ಠೆಯ ಪ್ರಶ್ನೆ

by
November 20, 2019
in ರಾಜಕೀಯ
0
ಉಪಚುನಾವಣೆ ಅನರ್ಹರಿಗಷ್ಟೇ ಅಲ್ಲ
Share on WhatsAppShare on FacebookShare on Telegram

ರಾಜ್ಯ ವಿಧಾನಸಭೆ ಉಪಚುನಾವಣೆ ಕಣ ರಂಗು ಹೆಚ್ಚಿಸಿಕೊಳ್ಳುತ್ತಿದೆ. ನಾಯಕರ ಮಧ್ಯೆ ವಾಕ್ಸಮರವೂ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಶಾಸಕ ಸ್ಥಾನದಿಂದ ಅನರ್ಹಗೊಂಡು ಬಿಜೆಪಿ ಸೇರಿ ಸ್ಪರ್ಧಿಸುತ್ತಿರುವವರಿಗೆ ಇದು ರಾಜಕೀಯವಾಗಿ ಅಳಿವು-ಉಳಿವಿನ ಪ್ರಶ್ನೆಯಾಗಿದೆ. ಇದರ ಜತೆಗೇ ಉಪ ಚುನಾವಣೆಯ ನೇತೃತ್ವ ವಹಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪ್ರತಿಪಕ್ಷ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಪ್ರತಿಷ್ಠೆ ಜತೆಗೆ ಅಳಿವು-ಉಳಿವಿನ ವಿಚಾರವೂ ಆಗಿದೆ.

ADVERTISEMENT

ಅನರ್ಹ ಶಾಸಕರಿಗೆ ಈ ಉಪ ಚುನಾವಣೆ ಸೋಲು-ಗೆಲುವಿನ ಸವಾಲಾಗಿದ್ದರೆ, ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಅವರಿಗೆ ಪಕ್ಷದಲ್ಲಿ ತಮ್ಮ ಪ್ರಾಬಲ್ಯ ಉಳಿಸಿಕೊಳ್ಳುವ ಹೋರಾಟ. ಸ್ವಲ್ಪ ಎಡವಿದರೂ ಪಕ್ಷದ ಮೇಲಿನ ಹಿಡಿತ ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಇಬ್ಬರೂ ತಮ್ಮ ಪ್ರತಿಷ್ಠೆಯನ್ನೇ ಪಣವಾಗಿಟ್ಟುಕೊಂಡು ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಪ್ರಯತ್ನ ತೀವ್ರಗೊಳಿಸಿದ್ದಾರೆ. ಮೇಲ್ನೋಟಕ್ಕೆ ನೋಡಿದಾಗ ಈ ವಿಚಾರದಲ್ಲಿ ಸಿದ್ದರಾಮಯ್ಯ ಅವರಿಗಿಂತ ಯಡಿಯೂರಪ್ಪ ಅವರು ಎರಡು ಹೆಜ್ಜೆ ಮುಂದಿದ್ದಾರೆ. ಆದರೆ, ಮತದಾರರ ತೀರ್ಪು ಬಂದ ಬಳಿಕವಷ್ಟೇ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಅವರಲ್ಲಿ ಗೆದ್ದವರಾರು, ಸೋತವರಾರು ಎಂಬುದು ನಿರ್ಧಾರವಾಗಬೇಕಷ್ಟೆ.

ಉಪ ಚುನಾವಣೆ ಅಭ್ಯರ್ಥಿಗಳ ಆಯ್ಕೆ, ಟಿಕೆಟ್ ಹಂಚಿಕೆ ಸಂದರ್ಭದಲ್ಲಿ ಎರಡೂ ಪಕ್ಷಗಳಲ್ಲಿ ಸಾಕಷ್ಟು ಅಸಮಾಧಾನ, ಬಿನ್ನಮತ ಸೃಷ್ಟಿಯಾಗಿತ್ತು. ಇದರ ಪರಿಣಾಮ ಬಿಜೆಪಿಯಲ್ಲಿ ಬಂಡಾಯದ ಬಾವುಟ ಹಾರಿದೆ. ಕಾಂಗ್ರೆಸ್ ಪಕ್ಷದಲ್ಲಿ ಬಂಡಾಯದ ಪ್ರಶ್ನೆ ಇಲ್ಲವಾದರೂ ಆಂತರಿಕ ಭಿನ್ನಮತ ಮಾತ್ರ ಬಿಜೆಪಿಯಲ್ಲಿರುವುದಕ್ಕಿಂತಲೂ ತೀವ್ರವಾಗಿದೆ. ನಾಯಕರ ನಡುವಿನ ಕಚ್ಚಾಟ ಈ ಭಿನ್ನಮತದ ಬೆಂಕಿಗೆ ತುಪ್ಪ ಸುರಿಯುತ್ತಿದೆ. ಎರಡೂ ಪಕ್ಷಗಳಲ್ಲಿ ಇದು ಶಮನವಾಗದೇ ಇದ್ದರೆ ಫಲಿತಾಂಶದಲ್ಲಿ ಅದು ಪ್ರತಿಫಲಿಸುವುದು ಖಚಿತ.

ಯಡಿಯೂರಪ್ಪ ಅವರಿಗೇನು ಪ್ರತಿಷ್ಠೆ?

ಸದ್ಯ ರಾಜ್ಯ ಬಿಜೆಪಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಶ್ನಾತೀತ ನಾಯಕ. ಅದರ ಜತೆ ಜತೆಗೇ ಅವರ ವಿರುದ್ಧ ಕತ್ತಿ ಮಸೆಯುವ ಪ್ರಯತ್ನಗಳೂ ಅಷ್ಟೇ ಜೋರಾಗಿ ನಡೆಯುತ್ತಿದೆ. ಯಡಿಯೂರಪ್ಪ ಮತ್ತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮೊದಲಿನಿಂದಲೂ ಎಣ್ಣೆ-ಸೀಗೇಕಾಯಿಗಳಂತಿದ್ದು, ಪರಸ್ಪರ ತಿರುಗೇಟು ನೀಡಲು ಕಾಯುತ್ತಲೇ ಇದ್ದಾರೆ.

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಯಡಿಯೂರಪ್ಪ ಅವರ ಇಚ್ಛೆಗೆ ವಿರುದ್ಧವಾಗಿ ಬಿ.ಎಲ್.ಸಂತೋಷ್ ಅವರ ಆಪ್ತ ನಳಿನ್ ಕುಮಾರ್ ಕಟೀಲ್ ಅವರಿಗೆ ನೀಡಿದಾಗಲೇ ಪಕ್ಷದಲ್ಲಿ ಯಡಿಯೂರಪ್ಪ ಅವರ ಹಿಡಿತವನ್ನು ಸಡಿಲಗೊಳಿಸಲು ಪ್ರಯತ್ನ ನಡೆಯುತ್ತಿರುವುದು ಸ್ಪಷ್ಟವಾಯಿತು. ನಂತರ ಬಿಜೆಪಿಗೆ ಇಬ್ಬರು ಉಪಾಧ್ಯಕ್ಷರ ನೇಮಕ, ಬಿಬಿಎಂಪಿ ಮೇಯರ್ ಆಯ್ಕೆ ವಿಚಾರದಲ್ಲಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಯಡಿಯೂರಪ್ಪ ಅವರನ್ನು ಸಂಪೂರ್ಣ ದೂರವಿಟ್ಟರು. ಪಕ್ಷದ ರಾಜ್ಯ ಕಚೇರಿಯಲ್ಲಿ ಯಡಿಯೂರಪ್ಪ ಅವರ ಅವಧಿಯಲ್ಲಿ ನೇಮಕಗೊಂಡಿದ್ದ ಕೆಲಸಗಾರರನ್ನು ಮನೆಗೆ ಕಳುಹಿಸಲಾಯಿತು. ಆರಂಭದಲ್ಲಿ ಈ ಬಗ್ಗೆ ಮೌನವಾಗಿದ್ದ ಯಡಿಯೂರಪ್ಪ, ತಮ್ಮ ವಿರುದ್ಧ ನಡೆಯುತ್ತಿರುವ ಸಂಚು ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡು ನನ್ನನ್ನು ದೂರವಿಟ್ಟು ಪಕ್ಷವನ್ನು ಅದು ಹೇಗೆ ಬೆಳೆಸುತ್ತೀರಿ ಎಂಬ ಎಚ್ಚರಿಕೆಯ ಸಂದೇಶವನ್ನು ನಾಯಕರಿಗೆ ಕಳುಹಿಸಿಕೊಟ್ಟರು. ಇದರಿಂದ ಬೆದರಿದ ರಾಜ್ಯಾಧ್ಯಕ್ಷರು ಯಡಿಯೂರಪ್ಪ ಅವರೊಂದಿಗೆ ರಾಜಿ ಸಂಧಾನ ಮಾಡಿಕೊಂಡು ಪರಿಸ್ಥಿತಿ ನಿಭಾಯಿಸಿದ್ದಾರೆ.

ಪ್ರಸ್ತುತ ಉಪ ಚುನಾವಣೆಯಲ್ಲಿ ಗೆದ್ದು ಸರ್ಕಾರವನ್ನು ಅಲ್ಪಮತದಿಂದ ಬಹುಮತದತ್ತ ಕೊಂಡೊಯ್ಯುವ ಸಂಪೂರ್ಣ ಜವಾಬ್ದಾರಿಯನ್ನು ಪಕ್ಷ ಯಡಿಯೂರಪ್ಪ ಅವರ ಹೆಗಲ ಮೇಲೆ ಹಾಕಿದೆ. ಅದಕ್ಕೆ ತಕ್ಕಂತೆ ಯಡಿಯೂರಪ್ಪ ಅವರು ಕೆಲಸ ಮಾಡುತ್ತಿದ್ದಾರೆ. ಒಂದೊಮ್ಮೆ ನಿರೀಕ್ಷಿತ ಸ್ಥಾನಗಳನ್ನು ಗೆದ್ದು ಸರ್ಕಾರ ಬಹುಮತ ಗಳಿಸಿಕೊಳ್ಳದೇ ಇದ್ದಲ್ಲಿ ಆಗ ಯಡಿಯೂರಪ್ಪ ಅವರು ಸಮಸ್ಯೆ ಎದುರಿಸಬೇಕಾಗುತ್ತದೆ. ಏಕೆಂದರೆ, ಸರ್ಕಾರ ಅಲ್ಪಮತಕ್ಕೆ ಕುಸಿದರೆ ಆಗ ಬಿಜೆಪಿ ಅಧಿಕಾರದಲ್ಲಿ ಮುಂದುವರಿಯಲು ಜೆಡಿಎಸ್ ಬೆಂಬಲ ಅಗತ್ಯವಾಗಿದೆ. ಆಗ ಮುಖ್ಯಮಂತ್ರಿಯನ್ನು ಬದಲಿಸಬೇಕು ಎಂಬ ಬೇಡಿಕೆಯನ್ನು ಜೆಡಿಎಸ್ ಮುಂದಿಟ್ಟರೆ ಯಡಿಯೂರಪ್ಪ ಮತ್ತು ಪಕ್ಷ ಇಕ್ಕಟ್ಟಿಗೆ ಸಿಲುಕಿಕೊಳ್ಳಬೇಕಾಗುತ್ತದೆ. ಹೀಗಾಗಿಯೇ ಯಡಿಯೂರಪ್ಪ ಅವರಿಗೆ ಯಾರ ಹಂಗೂ ಇಲ್ಲದೆ ಅಧಿಕಾರದಲ್ಲಿ ಮುಂದುವರಿಯಲು ಮತ್ತು ಪಕ್ಷದಲ್ಲಿ ತನ್ನ ಪ್ರಾಬಲ್ಯ ತೋರಿಸಲು ಈ ಚುನಾವಣೆಯ ಗೆಲುವು ಪ್ರತಿಷ್ಠೆಯ ವಿಚಾರವಾಗಿದೆ.

ಸಿದ್ದರಾಮಯ್ಯ ಅವರಿಗೆ ಅಳಿವು-ಉಳಿವು

ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರಿಗೆ ಇದು ಅಳಿವು-ಉಳಿವಿನ ಪ್ರಶ್ನೆ. ಮೂಲ ಕಾಂಗ್ರೆಸ್, ಅದರಲ್ಲೂ ಪಕ್ಷದ ಹಿರಿಯ ನಾಯಕರು ಸಿದ್ದರಾಮಯ್ಯ ಮೇಲೆ ಮುನಿಸಿಕೊಂಡಿದ್ದು, ಪಕ್ಷವನ್ನು ಅವರ ತೆಕ್ಕೆಯಿಂದ ಹೊರತರಲು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಇವರ ವಿರೋಧದ ನಡುವೆಯೂ ಹೈಕಮಾಂಡ್ ಸಿದ್ದರಾಮಯ್ಯ ಪರ ನಿಂತಿರುವುದು ಈ ಹಿರಿಯ ನಾಯಕರು ಮತ್ತಷ್ಟು ಕೆರಳುವಂತೆ ಮಾಡಿದೆ. ಈ ಕಾರಣಕ್ಕಾಗಿಯೇ ಅವರು ಉಪ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಿಂದ ದೂರವೇ ಉಳಿದಿದ್ದರು.

ಸದ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಏಕಾಂಗಿ ಎನ್ನುವಂತಾಗಿದ್ದಾರೆ. ಪ್ರತಿಪಕ್ಷದವರು ಮಾತ್ರವಲ್ಲ, ಸ್ವಂತ ಪಕ್ಷದವರೂ ಸಿದ್ದರಾಮಯ್ಯ ವಿರುದ್ಧ ಮುಗಿಬೀಳಲು ಸಜ್ಜಾಗಿ ನಿಂತಿದ್ದಾರೆ. ಅದಕ್ಕಿಂತಲೂ ಮುಖ್ಯವಾಗಿ ಉಪ ಚುನಾವಣೆಯಲ್ಲಿ ಹಿರಿಯ ನಾಯಕರೇ ಸಿದ್ದರಾಮಯ್ಯ ಅವರಿಗೆ ಅಸಹಕಾರ ತೋರಿಸುತ್ತಿದ್ದಾರೆ. ಇದಕ್ಕೆ ಮೂಲ ಕಾರಣ ಪಕ್ಷದ ಅಭ್ಯರ್ಥಿಗಳು ಸೋತರೆ ಅದರ ಹೊಣೆ ಉಪ ಚುನಾವಣೆಯ ಜವಾಬ್ದಾರಿ ಹೊತ್ತಿರುವ ಸಿದ್ದರಾಮಯ್ಯ ಅವರದ್ದಾಗುತ್ತದೆ. ಸಿದ್ದರಾಮಯ್ಯ ವೈಫಲ್ಯ ಕಂಡರೆ ಅದರ ಲಾಭ ಪಡೆದುಕೊಂಡು ಪಕ್ಷದಲ್ಲಿ ಅವರ ಹಿಡಿತ ಕಡಿಮೆ ಮಾಡಬಹುದು.

ಇದಕ್ಕೆ ಸಿದ್ದರಾಮಯ್ಯ ಅವರೂ ಕಾರಣರಾಗಿದ್ದಾರೆ. ತಮ್ಮ ಜತೆ ಕೆಲವೇ ಕೆಲವು ಮಂದಿಯನ್ನು ಸೇರಿಸಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ತಮ್ಮ ನಂತರ ಜತೆಗಿರುವವರು ಕಾಂಗ್ರೆಸ್ ಪಕ್ಷದ ಮುಂಚೂಣಿಯಲ್ಲಿ ಕಾಣಿಸಿಕೊಳ್ಳಬೇಕು ಎಂಬ ಕಾರಣಕ್ಕೆ ಅವರಿಗೆ ಆದ್ಯತೆ ನೀಡುತ್ತಿದ್ದಾರೆ. ಇದು ಕೂಡ ಹಿರಿಯ ನಾಯಕರಿಗೆ ತಲೆನೋವಾಗಿದೆ. ಹೀಗಾಗಿ ಸಿದ್ದರಾಮಯ್ಯ ಹಿಡಿತ ಕಮ್ಮಿಯಾದರೆ ಪಕ್ಷದಲ್ಲಿ ತಮ್ಮ ಮಾತು ನಡೆಯುತ್ತದೆ ಎಂಬುದು ಅವರ ಆಲೋಚನೆ. ಅದಕ್ಕಾಗಿ ಉಪ ಚುನಾವಣೆಯನ್ನು ಸಿದ್ದರಾಮಯ್ಯ ವಿರುದ್ಧ ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ. ಹೀಗಾಗಿ ಗೆದ್ದು ತಮ್ಮ ಅಸ್ತಿತ್ವ ಉಳಿಸುಕೊಳ್ಳಲು ಸಿದ್ದರಾಮಯ್ಯ ಹೋರಾಡುತ್ತಿದ್ದಾರೆ.

ಹಾಗೆ ನೋಡಿದರೆ ಬಿಜೆಪಿಯಲ್ಲಿ ಯಡಿಯೂರಪ್ಪ ಅವರಿಗೆ ಸಚಿವರು, ಮುಖಂಡರ ಸಾಥ್ ಸಿಗುತ್ತಿದೆ. ನಳಿನ್ ಕುಮಾರ್ ಕಟೀಲ್ ಅವರೂ ಭಿನ್ನಾಭಿಪ್ರಾಯ ದೂರವಿಟ್ಟು ಯಡಿಯೂರಪ್ಪ ಅವರೊಂದಿಗೆ ಹೋಗುತ್ತಿದ್ದಾರೆ. ಆದರೆ, ಕಾಂಗ್ರೆಸ್ ನಲ್ಲಿ ಹಿರಿಯ ನಾಯಕರ ಅಸಹಾಕಾರ ಹೆಚ್ಚಾಗುತ್ತಿದೆ. ಇದು ಗೊತ್ತಿದ್ದೇ ಸಿದ್ದರಾಮಯ್ಯ ಅವರು ಏಕಾಂಗಿಯಾಗಿ ಹೋಗುತ್ತಿದ್ದಾರೆ. ತಮ್ಮ ಕನಸಾಗಿದ್ದ ಮುಖ್ಯಮಂತ್ರಿ ಸ್ಥಾನವನ್ನು ಹೇಗೂ ಗಳಿಸಿದ್ದೂ ಆಗಿದೆ, ಕಳೆದುಕೊಂಡುದ್ದೂ ಆಗಿದೆ. ಇನ್ನು ಸೋತರೂ, ಗೆದ್ದರೂ, ಅದರಿಂದ ಏನೇ ಪರಿಣಾಮಗಳಾದರೂ ಹೆಚ್ಚಿನ ಸಮಸ್ಯೆಯೇನೂ ಆಗುವುದಿಲ್ಲ. ಹೀಗಾಗಿ ತಮ್ಮ ವಿರುದ್ಧ ಪಕ್ಷದೊಳಗೆ ತಿರುಗಿ ಬಿದ್ದವರಿಗೆ ಪಾಠ ಕಲಿಸಬೇಕು. ಅದಕ್ಕಾಗಿಯಾದರೂ ಉಪ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಬೇಕು ಎಂದು ಪ್ರಯತ್ನಿಸುತ್ತಿದ್ದಾರೆ.

Tags: B S YeddyurappaBL SantoshCongress Leader’sDisqualify MLAsKarnataka BJPKarnataka By-electionKarnataka CongressNalin Kumar Kateelsiddaramaiahಅನರ್ಹ ಶಾಸಕರುಕಾಂಗ್ರೆಸ್ ಪಕ್ಷನಳೀನ್ ಕುಮಾರ್ ಕಟೀಲುಬಿ ಎಲ್ ಸಂತೋಷ್ಬಿ ಎಸ್ ಯಡಿಯೂರಪ್ಪಬಿಜೆಪಿ ಪಕ್ಷಮೂಲ ಕಾಂಗ್ರೆಸ್ ನಾಯಕರುವಿಧಾನಸಭೆ ಉಪಚುನಾವಣೆಸಿದ್ದರಾಮಯ್ಯ
Previous Post

ಇನ್ನು ಹತ್ತೇ ದಿನ `ಫ್ರೀ ಕಾಲ್’ ಸೇವೆ!

Next Post

ತಾಮ್ರ ರಫ್ತು ಮಾಡುತ್ತಿದ್ದ ಭಾರತದಲ್ಲೇ ತಾಮ್ರದ ಕೊರತೆ!

Related Posts

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?
ರಾಜಕೀಯ

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

by ಪ್ರತಿಧ್ವನಿ
February 1, 2026
0

ಜಮಾತೆ-ಇ-ಇಸ್ಲಾಮಿ (ಜೆಇಐ) ಶನಿವಾರ  ಅಮೀರ್ ಡಾ. ಶಫೀಕರ್ ರೆಹಮಾನ್ ಅವರ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಸಾರ್ವಜನಿಕ ಜೀವನ ಮತ್ತು ನಾಯಕತ್ವದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು...

Read moreDetails
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Next Post
ತಾಮ್ರ ರಫ್ತು ಮಾಡುತ್ತಿದ್ದ ಭಾರತದಲ್ಲೇ ತಾಮ್ರದ ಕೊರತೆ!

ತಾಮ್ರ ರಫ್ತು ಮಾಡುತ್ತಿದ್ದ ಭಾರತದಲ್ಲೇ ತಾಮ್ರದ ಕೊರತೆ!

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada