• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಪಕ್ಷಾಂತರ ನಿಷೇಧ ಕಾಯ್ದೆ ಕಠಿಣವಾಗಲಿ: ಸಂತೋಷ್ ಹೆಗ್ಡೆ

by
December 9, 2019
in ರಾಜಕೀಯ
0
ಪಕ್ಷಾಂತರ ನಿಷೇಧ ಕಾಯ್ದೆ ಕಠಿಣವಾಗಲಿ: ಸಂತೋಷ್ ಹೆಗ್ಡೆ
Share on WhatsAppShare on FacebookShare on Telegram

ಕರ್ನಾಟಕದ ಉಪಚುನಾವಣೆ ಫಲಿತಾಂಶದ ಕುರಿತು ನಿಮ್ಮ ಅಭಿಪ್ರಾಯವೇನು?

ADVERTISEMENT

ಫಲಿತಾಂಶದ ಬಗ್ಗೆ ಎರಡು ಮಾತಿಲ್ಲ. ಪ್ರಜಾಪ್ರಭುತ್ವದಲ್ಲಿ ನಾವೆಲ್ಲಾ ಒಪ್ಪಿಕೊಳ್ಳಬೇಕಾದ ವಿಚಾರ. ಆದರೆ ನನ್ನ ವಿಚಾರ ಏನೆಂದರೆ, ಈ ಚುನಾವಣೆ ಅಗತ್ಯವಿತ್ತೇ? ಎನ್ನುವುದು. ಯಾಕಂದರೆ ಒಂದು ಕ್ಷೇತ್ರದ ಚುನಾವಣೆಯಲ್ಲಿ ಅಲ್ಲಿನ ಮತದಾರರು ಐದು ವರ್ಷಕ್ಕೆಂದು ಪ್ರತಿನಿಧಿಗಳನ್ನು ಚುನಾಯಿಸುತ್ತಾರೆ. ಆ ಚುನಾವಣೆಗೆ ಸರ್ಕಾರ ಬಹಳಷ್ಟು ಹಣ ಖರ್ಚು ಮಾಡುತ್ತಿದೆ. ಆ ಹಿನ್ನೆಲೆಯಲ್ಲಿ ಇಷ್ಟೊಂದು ಸದಸ್ಯರು ತಮ್ಮ ವೈಯಕ್ತಿಕ ಕಾರಣಕ್ಕಾಗಿ ರಾಜಿನಾಮೆ ಕೊಟ್ಟಿದ್ದು ತಪ್ಪು ಎನ್ನುವುದು ನನ್ನ ವಿಚಾರ. ಆ ತಪ್ಪಿನ ಹಿನ್ನೆಲೆಯಲ್ಲಿ ಈ ಚುನಾವಣೆ ಅಗತ್ಯ ಇರಲಿಲ್ಲ ಎನ್ನುವುದು ಕೂಡ ನನ್ನ ಅನಿಸಿಕೆ. ಯಾಕೆಂದರೆ, ಇವರಿಗೆ ಮತದಾರರು ಮುಂದಕ್ಕೆ ಏನಾದರೂ ಉಪಚುನಾವಣೆಗೆ ನಿಂತಾಗ ಬುದ್ದಿ ಕಲಿಸಬಹುದು ಎನ್ನುವುದು ನನ್ನ ವಿಚಾರವಾಗಿತ್ತು. ಅದರಿಂದ ಇವತ್ತಿನ ಆರ್ಥಿಕ ಪರಿಸ್ಥಿತಿಯಲ್ಲಿ ಚುನಾವಣೆ ಅಗತ್ಯವಿಲ್ಲ ಎನ್ನುವುದು ನನ್ನ ತಿಳುವಳಿಕೆಯಾಗಿತ್ತು.

ಆದರೂ ಕೂಡ ಇವತ್ತಿನ ಫಲಿತಾಂಶದ ಹಿನ್ನಲೆಯಲ್ಲಿ ಮತದಾರರು ಬಹಳಷ್ಟು ಜನ ರಾಜಿನಾಮೆ ಕೊಟ್ಟವರನ್ನು ಮತ್ತೊಮ್ಮೆ ಚುನಾಯಿಸಿದ್ದಾರೆ ಇದು ಮತದಾರರ ಹಕ್ಕು. ಅದರ ಬಗ್ಗೆ ನಾನು ಏನೂ ಹೇಳಲಾಗುವುದಿಲ್ಲ. ಏಕೆಂದರೆ ಪ್ರಜಾಪ್ರಭುತ್ವದಲ್ಲಿ ಚುನಾಯಿಸಲ್ಪಟ್ಟ ಪ್ರತಿನಿಧಿಗೆ ಅವರದ್ದೆ ಆದ ಕೆಲವು ಹಕ್ಕು, ಗೌರವಗಳು ಇರುತ್ತದೆ. ಅದನ್ನು ನಾವು ಒಪ್ಪಿಕೊಳ್ಳಲೇಬೇಕಾಗುತ್ತದೆ.

ಆ ಹಿನ್ನಲೆಯಲ್ಲಿ ನಾನು ಅದನ್ನು ಚುನಾವಣೆ ಫಲಿತಾಂಶವನ್ನು ಒಪ್ಪಿಕೊಳ್ಳುತ್ತೇನೆ. ಆದರೂ ಕೂಡ ನನ್ನ ಮನಸ್ಸಲ್ಲಿ ಈ ಚುನಾವಣೆ ಅಗತ್ಯ ಇತ್ತೇ ಎನ್ನುವುದು ಇವತ್ತು ಕೂಡ ನನ್ನ ಮನಸ್ಸಲ್ಲಿ ಇದೆ. ಆದರೆ ಮುಂದಕ್ಕೆ ಅದರ ಬಗ್ಗೆ ವಾದ ಮಾಡುವ ಸಂದರ್ಭ ಇಲ್ಲ. ಏಕೆಂದರೆ ಚುನಾವಣೆ ಮುಗಿದಿದೆ, ಫಲಿತಾಂಶ ಬಂದಿದೆ, ಮರು ಚುನಾಯಿತರಾಗಿದ್ದಾರೆ, ನನ್ನ ಒಂದೇ ಒಂದು ಕೋರಿಕೆ, ಈ ಚುನಾಯಿತ ಪ್ರತಿನಿಧಿಗಳಲ್ಲಿ, ಇನ್ಮುಂದೆ ತಮ್ಮ ಕ್ಷೇತ್ರ ಮೇಲೆ ಕಳಕಳಿ ಇಟ್ಟುಕೊಳ್ಳಿ. ಯಾವ ಕಾರಣಕ್ಕೂ ಕೂಡ ರಾಜಿನಾಮೆ ಕೊಡಬೇಡಿ. ಒಂದು ವೇಳೆ ರಾಜಿನಾಮೆ ಕೊಡಬೇಕೆನ್ನುವ ಮನೋಭಾವನೆ ನಿಮ್ಮಲ್ಲಿ ಹುಟ್ಟಿದರೆ, ರಾಜಿನಾಮೆ ಬರೀ ಚುನಾಯಿತ ಹುದ್ದೆಗೆ ಮಾತ್ರವಲ್ಲ, ರಾಜಕೀಯಕ್ಕೇ ರಾಜಿನಾಮೆ ಕೊಡಿ, ಮತ್ತೊಮ್ಮೆ ಚುನಾವಣೆಗೆ ನಿಲ್ಲಬೇಡಿ ಎಂದು ನಾನು ಕೇಳಿಕೊಳ್ಳುತ್ತೇನೆ.

ಈ ಫಲಿತಾಂಶ ಪಕ್ಷಾಂತರಕ್ಕೆ ಪ್ರೇರಣೆ ಕೊಟ್ಟ ಹಾಗೆ ಆಗುತ್ತೆ ಅಲ್ವಾ?

ಹೌದು ಆಗಬಹುದು. ಅದು ತಪ್ಪು ಕೂಡ. ಇವತ್ತು 10 ಶೆಡ್ಯೂಲ್ ನಲ್ಲಿ ಇಂತಹ ಪಕ್ಷಾಂತರ ಚಟುವಟಿಕೆಯನ್ನು ನಿಲ್ಲಿಸುವುದಕ್ಕೆ ಕಾನೂನು ಮಾಡಿದ್ದಾರೆ. ಆದರೆ ಆ ಕಾನೂನು ಸರಿಯಾಗಿ ಜಾರಿಗೆ ಬಂದಿಲ್ಲವೆಂದು ಕಾಣಿಸುತ್ತಿದೆ. ಇದಕ್ಕಿಂತ ಕಠಿಣವಾದ ಮಾಡಬೇಕಾಗುತ್ತದೆ.

ಜನಮತವನ್ನು ಕಡೆಗಣಿಸಿ ಪಕ್ಷಾಂತರ ಮಾಡುವುದು ಎಷ್ಟು ಮಟ್ಟಿಗೆ ಸರಿ?

ರಾಜಕೀಯದಲ್ಲಿ, ಪ್ರಜಾಪ್ರಭುತ್ವದಲ್ಲಿ ಇದು ಸಂಪೂರ್ಣ ತಪ್ಪು ಎನ್ನುವುದು ನನ್ನ ಅನಿಸಿಕೆ. ಆದರೆ ಕೊನೆಗೆ ಚುನಾವಣೆಗೆ ನಿಂತ ನಂತರ ಗೆಲ್ಲಿಸುವುದು ಸೋಲಿಸುವುದು ಮತದಾರರಿಗೆ ಬಿಟ್ಟದ್ದು. ಅದರ ಬಗ್ಗೆ ನಾವು ಏನನ್ನೂ ಹೇಳಲಾಗದು. ಹೀಗಾಗಿ ಚುನಾವಣೆಯ ಫಲಿತಾಂಶದ ಬಗ್ಗೆ ನಾನು ಏನು ಹೇಳಲಾಗುವುದಿಲ್ಲ.

ಪಕ್ಷಾಂತರ ನಿಷೇಧ ಕುರಿತು ಯಾವ ರೀತಿ ಕಾನೂನು ಬರಬೇಕು?

ನಾನು ನೋಡಿರುವ ಹಾಗೆ 10ನೇ ಶೆಡ್ಯೂಲ್ ಕಾನೂನು ಬಂದಿದೆ. ಸುಮಾರು 10 ವರ್ಷ ಆಯಿತು ಈ ಕಾನೂನು ಬಂದು. ಆದರೆ ಇದರಿಂದ ಯಾವ ಪ್ರಯೋಜನವೂ ಆಗಿಲ್ಲ ಎನ್ನುವುದು ನನ್ನ ಅನಿಸಿಕೆ. ಇದರ ಬಗ್ಗೆ ಸಾಮಾಜಿಕ ಚರ್ಚೆಗಳು ನಡೆದರೆ, ಹೊಸ ಕಾನೂನಿಗೆ ಬೇರೆ ದಾರಿಯನ್ನು ಕಂಡುಕೊಳ್ಳಬಹುದು ಎನ್ನುವುದು ನನ್ನ ವಿಚಾರ.

Tags: Anti-Defection LawBJPbypolldemocratic systemJDSlegislatorspolitical partyprotectingಉಪ ಚುನಾವಣೆಕಾಂಗ್ರೆಸ್ಜೆಡಿಎಸ್ಪಕ್ಷಾಂತರ ನಿಷೇಧ ಕಾಯ್ದೆಪ್ರಜಾತಂತ್ರ ವ್ಯವಸ್ಥೆಬಿಜೆಪಿರಾಜಕೀಯ ಪಕ್ಷಶಾಸಕರು
Previous Post

ಕಾಂಗ್ರೆಸ್ ನಲ್ಲಿ ಸಿದ್ದು, ದಿನೇಶ್ ಪದತ್ಯಾಗಕ್ಕೆ ಕಾರಣವಾದ ಉಪ ಚುನಾವಣೆ ಸೋಲು

Next Post

ಕರ್ನಾಟಕ ರಾಷ್ಟ್ರೀಯ ಟ್ರೆಂಡ್ ಗೆ ವಿರುದ್ಧವೇಕೆ?

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ರಾಜಕೀಯ

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ರಾಜ್ಯಸಭೆ ಸ್ಥಾನ ಸ್ವೀಕರಿಸಲು ಆಸಕ್ತಿ ತೋರಿಲ್ಲ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸ್ಥಾನ ತ್ಯಜಿಸಿ ಉಪಮುಖ್ಯಮಂತ್ರಿ ಡಿ‌ಕೆ ಶಿವಕುಮಾರ್ ಅವರಿಗೆ...

Read moreDetails
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
Next Post
ಕರ್ನಾಟಕ ರಾಷ್ಟ್ರೀಯ ಟ್ರೆಂಡ್ ಗೆ ವಿರುದ್ಧವೇಕೆ?

ಕರ್ನಾಟಕ ರಾಷ್ಟ್ರೀಯ ಟ್ರೆಂಡ್ ಗೆ ವಿರುದ್ಧವೇಕೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada