• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ಲಾಸ್ಟಿಕ್‌ ಕಡಿವಾಣಕ್ಕೆ E-cityಯಲ್ಲಿ ʼಕಟ್ಲೆರಿ ಬ್ಯಾಂಕ್‌ʼ ಸ್ಥಾಪನೆ

by
December 27, 2019
in ಕರ್ನಾಟಕ
0
ಪ್ಲಾಸ್ಟಿಕ್‌ ಕಡಿವಾಣಕ್ಕೆ E-cityಯಲ್ಲಿ ʼಕಟ್ಲೆರಿ ಬ್ಯಾಂಕ್‌ʼ ಸ್ಥಾಪನೆ
Share on WhatsAppShare on FacebookShare on Telegram

2016ರಲ್ಲೇ ಬೆಂಗಳೂರಿನಲ್ಲಿ ಪ್ಲಾಸ್ಟಿಕ್‌ ಬ್ಯಾನ್‌ ಜಾರಿಗೆ ಬಂದಿದ್ದರೂ, ಈಗಲೂ ಈ ಪ್ಲಾಸ್ಟಿಕ್‌ ಭೂತ ಬೆಂಗಳೂರನ್ನು ಬೆಂಬಿಡದೆ ಕಾಡುತ್ತಿದೆ. ಪ್ಲಾಸ್ಟಿಕ್‌ ತ್ಯಾಜ್ಯವನ್ನು ವಿಲೇವಾರಿ ಮಾಡುವುದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ಬಹಳ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಪ್ಲಾಸ್ಟಿಕ್‌ ತ್ಯಾಜ್ಯಕ್ಕೆ ಕಡಿವಾಣ ಹಾಕಲು ಹಲವು ಯೋಜನೆಗಳನ್ನು ರೂಪಿಸಿದರೂ, ಜನರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸಿದರೂ ಅದರ ಪರಿಣಾಮ ಅಷ್ಟಕಷ್ಟೇ. ಇಂತಹ ಸಮಯದಲ್ಲಿ ಎಲೆಕ್ಟ್ರಾನಿಕ್‌ ಸಿಟಿ ಇಂಡಸ್ಟ್ರಿಯಲ್‌ ಡೆವೆಲಪ್‌ಮೆಂಟ್‌ ಅಥಾರಿಟಿ (ಎಲ್ಸಿಟಾ)ವು ಒಂದು ಪರಿಣಾಮಕಾರಿ ಯೋಜನೆಯನ್ನು ಜಾರಿಗೆ ತಂದಿದೆ.

ADVERTISEMENT

ಎಲೆಕ್ಟ್ರಾನಿಕ್‌ ಸಿಟಿಯ ಆಸುಪಾಸಿನಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕುವ ಸಲುವಾಗಿ ʼಕಟ್ಲೆರಿ ಬ್ಯಾಂಕ್‌ʼಅನ್ನು ಎಲ್ಸಿಟಾ ವತಿಯಿಂತ ಸ್ಥಾಪಿಸಲಾಗಿದೆ. ತಿಂಡಿ ತಿನಿಸುಗಳನ್ನು ಬಡಿಸಲು ಪ್ಲಾಸ್ಟಿಕ್‌ ವಸ್ತುಗಳನ್ನು ಬಳಸುವ ಬದಲಾಗಿ ಸ್ಟೀಲ್‌ ಪಾತ್ರೆಗಳನ್ನು ನೀಡುವ ಯೋಜನೆಯನ್ನು ರೂಪಿಸಿದೆ. ಅದು ಕೂಡ ಉಚಿತವಾಗಿ. ಯಾವುದೇ ಸಂಸ್ಥೆಗಳು ತಮ್ಮಲ್ಲಿ ಸಭೆ ಸಮಾರಂಭಗಳು ನಡೆಯುವಾಗ ಎಲ್ಸಿಟಾ ಆಫೀಸ್‌ಗೆ ಭೇಟಿ ನೀಡಿ ನಿಗದಿತ ಠೇವಣಿಯನ್ನು ಪಾವತಿಸಿ ಸ್ಟೀಲ್‌ ಪಾತ್ರೆಗಳನ್ನು ಎರವಲು ಪಡೆಯಬಹುದು. ನಿಗದಿತ ಸಮಯದಲ್ಲಿ ಎಲ್ಲಾ ವಸ್ತುಗಳನ್ನು ಹಿಂತಿರುಗಿಸಿ ನೀಡಿದ ಠೇವಣಿಯನ್ನು ವಾಪಸ್‌ ಪಡೆಯಬಹುದು. ಇದರಿಂದ ಅನಗತ್ಯ ಖರ್ಚು ಉಳಿಸಬಹುದು ಅಷ್ಟೇ ಅಲ್ಲದೇ, ಸುಸ್ಥಿರ ಪರಿಸರವನ್ನು ನಿರ್ಮಿಸಲು ಕೊಡುಗೆ ನೀಡಿದಂತೆಯೂ ಆಗುತ್ತದೆ.

ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ಸಭೆ ಸಮಾರಂಭಗಳು ನಡೆದರೆ ದಿನಕ್ಕೆ ಐದು ಟನ್‌ಗಳಷ್ಟು ತ್ಯಾಜ್ಯ ಉತ್ಪತ್ತಿಯಾಗುತ್ತದೆ. ಇದರಲ್ಲಿ ಹಸಿ ಕಸ ಒಣ ಕಸವನ್ನು ಬೇರ್ಪಡಿಸಿ ಅವುಗಳನ್ನು ವಿಲೇವಾರಿ ಮಾಡುವುದು ತ್ರಾಸದಾಯಕ. ಪ್ಲಾಸ್ಟಿಕ್‌ ಕಪ್‌, ಪೇಪರ್‌ ಗ್ಲಾಸ್‌ಗಳು ಕಸ ವಿಂಗಡಣೆ ಕಾರ್ಯವನ್ನು ಇನ್ನಷ್ಟು ಸಂಕೀರ್ಣಗೊಳಿಸುತ್ತವೆ. ಹೀಗಾಗಿ ಸ್ಟೀಲ್‌ ಗ್ಲಾಸ್‌ ಹಾಗೂ ಬಟ್ಟಲುಗಳ ಬಳಕೆ ಕಸದ ಪ್ರಮಾಣವನ್ನು ಕಡಿಮೆ ಮಾಡುವುದಲ್ಲದೇ, ಮರುಬಳಕೆಗೂ ಯೋಗ್ಯವಾಗಿರುತ್ತವೆ. ಎಲೆಕ್ಟ್ರಾನಿಕ್‌ ಸಿಟಿಯ ಒಳಗೆ ನಡೆಯುವ ಕಾರ್ಯಕ್ರಮದ ಕಸ ವಿಲೇವಾರಿಯನ್ನು ಎಲ್ಸಿಟಾ ಸಂಸ್ಥೆಯು ನಿರ್ವಹಿಸುತ್ತದೆ. ಹಾಗಾಗಿ ಈ ಹೊರೆಯನ್ನು ಕಡಿತಗೊಳಿಸಲು ಎಲ್ಸಿಟಾ ಕಂಡುಕೊಂಡ ದಾರಿ ʼಕಟ್ಲೆರಿ ಬ್ಯಾಂಕ್‌ʼ.

ಈ ವ್ಯವಸ್ಥೆಯು ಎಲೆಕ್ಟ್ರಾನಿಕ್‌ ಸಿಟಿಯಲ್ಲಿರುವ ಸುಮಾರು 300ಕ್ಕೂ ಹೆಚ್ಚು ಖಾಸಗಿ ಕಂಪೆನಿಗಳಿಗೆ, ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಇನ್ನಿತರರಿಗೆ ಉಪಯೋಗವಾಗಲಿದೆ. ಈ ಯೋಜನೆಯ ಉಪಯೋಗವನ್ನು ಪಡೆಯಲು ಮಾಡಬೇಕಾಗಿದ್ದು ಇಷ್ಟೇ, ಎಲ್ಸಿಟಾ ಕಛೇರಿಯಲ್ಲಿ ಸಿಗುವ ಸರಳ ಫಾರ್ಮ್‌ ಭರ್ತಿ ಮಾಡಿ ತಾವು ಎರವಲು ಪಡೆಯುವ ವಸ್ತುಗಳಿಗೆ ಸಮಾನಾದ ಡೆಪಾಸಿಟ್‌ ಹಣವನ್ನು ಪಾವತಿ ಮಾಡಬೇಕು. ಕಾರ್ಯಕ್ರಮ ಮುಗಿದ ಬಳಿಕ ವಸ್ತುಗಳನ್ನು ಹಿಂತಿರುಗಿಸಿ ತಮ್ಮ ಹಣವನ್ನು ವಾಪಾಸ್‌ ಪಡೆಯಬಹುದು. ಯಾವುದೇ ವಸ್ತು ಕಳೆದು ಹೋದಲ್ಲಿ ಅಥವಾ ಹಾನಿಯುಂಟಾದಲ್ಲಿ ಅದನ್ನು ಡೆಪಾಸಿಟ್‌ ಹಣದಿಂದ ಕಳೆಯಲಾಗುವುದು. ಎಲೆಕ್ಟ್ರಾನಿಕ್‌ ಸಿಟಿಯ ಹೊರಗಿನ ಸಂಸ್ಥೆಗಳು ಕೂಡಾ ಈ ಯೋಜನೆಯ ಉಪಯೋಗವನ್ನು ಪಡೆಯಬಹುದು.

ಮುಖ್ಯವಾಗಿ ಸಿಂಗಲ್‌ ಯೂಸ್‌ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕುವ ಸಲುವಾಗಿ ಎಲ್ಸಿಟಾ ಸಂಸ್ಥೆಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಸ್ಟೀಲ್‌ ಬಟ್ಟಲು, ಲೋಟ, ಚಮಚ ಹಾಗೂ ಇತರ ವಸ್ತುಗಳನ್ನು ಇಲ್ಲಿ ಉಚಿತವಾಗಿ ಪಡೆಯಬಹುದು. ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ಸಭೆ ಸಮಾರಂಭ ನಡೆಸುವವರಿಗೆ ಈ ಯೋಜನೆಯು ಬಹಳಷ್ಟು ಪ್ರಯೋಜನಕಾರಿಯಾಗಲಿದೆ. ಎಲ್ಲರೂ ಪ್ಲಾಸ್ಟಿಕ್‌ ಬಳಕೆಯನ್ನು ಕಡಿಮೆ ಮಾಡಿ, ಈ ಕಟ್ಲೆರಿ ಬ್ಯಾಂಕ್‌ ನ ವಸ್ತುಗಳನ್ನು ಉಪಯೋಗಿಸುವಂತೆ ಕೇಳಿಕೊಳ್ಳುತ್ತೇನೆಂದು ಎಲ್ಸಿಟಾ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಯಾದ ರಮಾ ಎನ್‌ ಅವರು ಹೇಳಿದ್ದಾರೆ.

Tags: BBMPbengaluruELCITAElectronic Cityelectronic city industrial township authoritygarbage segregationPlastic Banಎಲೆಕ್ಟ್ರಾನಿಕ್‌ ಸಿಟಿ ಇಂಡಸ್ಟ್ರಿಯಲ್‌ ಡೆವೆಲಪ್‌ಮೆಂಟ್‌ ಅಥಾರಿಟಿಎಲ್ಸಿಟಾಕಸ ವಿಲೇವಾರಿಪ್ಲಾಸ್ಟಿಕ್ ನಿಷೇಧಬಿಬಿಎಂಪಿಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ
Previous Post

ಜರ್ಮನಿ ವಿದ್ಯಾರ್ಥಿ ಬೆಂಬಲ ಅಕ್ಷಮ್ಯವಾದರೆ? ಟ್ರಂಪ್ ಪರ ಮೋದಿ ಪ್ರಚಾರ ಸರಿಯೇ?

Next Post

ಮಾನವ ಹಕ್ಕುಗಳ ಆಯೋಗದ ಕಟಕಟೆ ಹತ್ತಿದ ಗೋಲಿಬಾರ್ ಪ್ರಕರಣ

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
Next Post
ಮಾನವ ಹಕ್ಕುಗಳ ಆಯೋಗದ ಕಟಕಟೆ ಹತ್ತಿದ ಗೋಲಿಬಾರ್ ಪ್ರಕರಣ

ಮಾನವ ಹಕ್ಕುಗಳ ಆಯೋಗದ ಕಟಕಟೆ ಹತ್ತಿದ ಗೋಲಿಬಾರ್ ಪ್ರಕರಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada