• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

‘ಭಾರತದ ಹಿತ’ ಎನ್ನುವ ಮೋದಿ ‘ಅಪಾಯ‘ದ ಬಗ್ಗೆ ಯೋಚಿಸಿದ್ದಾರೆಯೇ?

by
January 4, 2020
in ದೇಶ
0
‘ಭಾರತದ ಹಿತ’ ಎನ್ನುವ ಮೋದಿ ‘ಅಪಾಯ‘ದ ಬಗ್ಗೆ ಯೋಚಿಸಿದ್ದಾರೆಯೇ?
Share on WhatsAppShare on FacebookShare on Telegram

ಕಳೆದ ಐದು ತಿಂಗಳ ಹಿಂದೆ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿ ರದ್ದುಗೊಳಿಸಿದ್ದು ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ಜೊತೆಗೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ ಪಿ ಆರ್) ಜಾರಿಗೊಳಿಸಿಯೇ ಸಿದ್ದ ಎನ್ನುತ್ತಿರುವ ನರೇಂದ್ರ ಮೋದಿ‌ ಸರ್ಕಾರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಿರ್ಬಂಧಕ್ಕೆ ಒಳಗಾಗುವ ಸಾಧ್ಯತೆ ಇದೆ ಎನ್ನುವ ಮಾತುಗಳು ಬಲವಾಗಿ ಕೇಳಲಾರಂಭಿಸಿವೆ.

ADVERTISEMENT

ನೋಟು ರದ್ದತಿ ಹಾಗೂ ಸರಕು ಮತ್ತು ಸೇವಾ ತೆರಿಗೆಯನ್ನು (ಜಿ ಎಸ್ ಟಿ) ವಿವೇಚನಾರಹಿತವಾಗಿ ಜಾರಿಗೊಳಿಸುವ ಮೂಲಕ ದೇಶದ ಆರ್ಥಿಕತೆಯನ್ನು ಮೋದಿ ಸರ್ಕಾರವು ಸಂಕಟಕ್ಕೆ‌ ಸಿಲುಕಿಸಿದೆ ಎನ್ನುವ ಮಾತುಗಳನ್ನು ಪ್ರಖ್ಯಾತ ಅರ್ಥಶಾಸ್ತ್ರಜ್ಞರೇ ಹೇಳುತ್ತಿದ್ಧಾರೆ. ನಿರುದ್ಯೋಗ ಸಮಸ್ಯೆ ವ್ಯಾಪಕವಾಗುತ್ತಿದ್ದು, 45 ವರ್ಷಗಳಲ್ಲೇ ಮೊದಲ ಬಾರಿಗೆ ನಿರುದ್ಯೋಗ ಹೆಚ್ಚಾಗಿದೆ ಎಂಬ ಆತಂಕಕಾರಿ ಬೆಳವಣಿಗೆಯನ್ನು ನಿವಾರಿಸಲು ನರೇಂದ್ರ ಮೋದಿ ಸರ್ಕಾರ ಮುಂದಾಗಿಲ್ಲ. ದಿನದಿಂದ ಬೇಡಿಕೆ ಕುಸಿಯುತ್ತಿದ್ದು, ಗ್ರಾಹಕರ ಕೊಳ್ಳುವ ಶಕ್ತಿ ಕ್ಷೀಣಿಸುತ್ತಿದೆ. ಈ ಸಮಸ್ಯೆಗೆ ಪರಿಹಾರ ಹುಡುಕುವ ಪ್ರಾಮಾಣಿಕ‌ ಕೆಲಸ ಮೋದಿ‌‌ ಸರ್ಕಾರದಿಂದ ಆಗಿಲ್ಲ.‌

ಕಳೆದ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಬಳಿಕ ದೇಶದ ಜ್ವಲಂತ ಸಮಸ್ಯೆಗಳಿಗೆ ಮುಖಾಮುಖಿಯಾಗಬೇಕಾದ ಮೋದಿ‌ ಸರ್ಕಾರವು ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ವಿವಾದಿತ ವಿಚಾರಗಳನ್ನು ಜಾರಿಗೊಳಿಸುವ ಕೆಲಸಕ್ಕೆ ಮುಂದಾಗಿದ್ದು, ಬಹುಸಂಖ್ಯಾತ ಹಿಂದೂಗಳ ಮತ ಬ್ಯಾಂಕ್ ಭದ್ರಪಡಿಸಿಕೊಳ್ಳುವ ದುಸ್ಸಾಹಸಕ್ಕೆ ಕೈ ಹಾಕಿದೆ. ವಿಶ್ವಮಟ್ಟದಲ್ಲಿ ಜಾಗರೂಕತೆಯಿಂದ ವ್ಯವಹರಿಸುತ್ತಿರುವ ಭಾರತವು ಹಲವು ದಶಕಗಳ ಪರಿಶ್ರಮದಿಂದ ತನ್ನದೇ ಆದ ಅಂತಾರಾಷ್ಟ್ರೀಯ ನೀತಿಗಳನ್ನು ರೂಪಿಸಿಕೊಂಡಿದೆ. ದೇಶದ ಸಂವಿಧಾನ, ಜಾತ್ಯತೀತವಾದ ನಿಲುವುಗಳಿಂದ ಭಾರತವು ಜಾಗತಿಕವಾಗಿ ಪ್ರಶ್ನಾತೀತ ಸ್ಥಾನದಲ್ಲಿದೆ.

ಆದರೆ, ನರೇಂದ್ರ ಮೋದಿ ಸರ್ಕಾರವು ಕಾಶ್ಮೀರ ಹಾಗೂ ಸಿಎಎ ವಿಚಾರದಲ್ಲಿ ನಡೆದುಕೊಂಡಿರುವ ರೀತಿಯು ತನ್ನದೇ ನೀತಿಗಳಿಗೆ ವಿರುದ್ಧವಾಗಿ ಭಾರತ ತಂತಾನೆ ಜಾಗತಿಕ ಸಮುದಾಯದಿಂದ ಅಂತರ ಕಾಯ್ದುಕೊಳ್ಳುವ ಮಟ್ಟಕ್ಕೆ‌ ತಲುಪಿದೆ ಎನ್ನುವ ವಿಶ್ಲೇಷಣೆ ತಜ್ಞರಿಂದ ಹೊರಹೊಮ್ಮುತ್ತಿದೆ. ಇದು ಉತ್ತಮವಾದ ಬೆಳವಣಿಗೆಯಲ್ಲ. ದೀರ್ಘಾವಧಿಯಲ್ಲಿ ಜಗತ್ತಿನ ವಿವಿಧ ರಾಷ್ಟ್ರಗಳು ಭಾರತದ ಮೇಲೆ ನಿರ್ಬಂಧ ಹೇರುವ ಕಟು ನಿರ್ಧಾರ ಕೈಗೊಳ್ಳಬಹುದು ಎಂದು ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವಶಂಕರ್ ಮೆನನ್ ಸೇರಿದಂತೆ ಹಲವು ನಿವೃತ್ತ ರಾಯಭಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಭಾರತದ ಮುಸ್ಲಿಮ್ ಪ್ರಾಬಲ್ಯ ರಾಜ್ಯಗಳ ಪೈಕಿ ಅಗ್ರಸ್ಥಾನದಲ್ಲಿರುವ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ‌ ರದ್ದುಗೊಳಿಸಿದ ಮೋದಿ‌ ಸರ್ಕಾರವು ಇಡೀ ರಾಜ್ಯವನ್ನು ಅಕ್ಷರಶಃ ಜಗತ್ತಿನಿಂದ ತುಂಡರಿಸಿದೆ. ಸಿಎಎ ಅಡಿಯಲ್ಲಿ ಮುಸ್ಲಿಮೇತರ ಆರು ಸಮುದಾಯಗಳಿಗೆ ಪೌರತ್ವ ಕಲ್ಪಿಸುವ ಸಂವಿಧಾನಬಾಹಿರ ನಿರ್ಧಾರವನ್ನು ಕೈಗೊಂಡಿರುವ ಮೋದಿ‌ ಸರ್ಕಾರದ ವಿರುದ್ಧ ದೇಶಾದ್ಯಂತ ಅಸಾಧಾರಣ ವಿರೋಧ ವ್ಯಕ್ತವಾಗುತ್ತಿದೆ. ಹೋರಾಟಕ್ಕೆ ವಿಶ್ವ ಸಮುದಾಯಗಳ ಬೆಂಬಲದ ಬಗ್ಗೆ ನಿರಂತರವಾಗಿ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಚರ್ಚೆಯಾಗುತ್ತಿದ್ದು, ಜಾಗತಿಕ ಮಾಧ್ಯಮಗಳು ಮೋದಿ‌ ಸರ್ಕಾರದ ನೀತಿಗಳನ್ನು ಕಟು ವಿಮರ್ಶೆಗೆ ಒಳಪಡಿಸಿವೆ.‌ ಐದು ತಿಂಗಳಿನಿಂದ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂಗಳನ್ನು ಗೃಹ ಬಂಧನದಲ್ಲಿಟ್ಟಿರುವುದು ಹಾಗೂ ಇಂಟರ್ನೆಟ್ ನಿರ್ಬಂಧ ಹೇರುವ ಮೂಲಕ ಜನರ ಸಂವಹನ ತುಂಡರಿಸಿರುವ ಕುರಿತು ಅಲ್ಲಿನ ಮಾಧ್ಯಮಗಳು ಕಟು ನಿಲುವು ತಳೆದಿದ್ದು, ಭಾರತವನ್ನು ಇಂಟರ್ನೆಟ್ ಬಂದ್ ಮಾಡುವಲ್ಲಿ ಅಗ್ರಮಾನ್ಯ ರಾಷ್ಟ್ರ ಎಂಬ ಅಪಖ್ಯಾತಿಗೆ ಗುರಿಯಾಗಿಸಿವೆ. ಇವೆಲ್ಲವೂ ಮಾನವ ಹಕ್ಕುಗಳ ದಮನಕಾರಿ ನೀತಿಗಳಿಗೆ ಪೂರಕವಾಗಲಿವೆ. ಇದೇ ವಿಚಾರವನ್ನು ಇಟ್ಟುಕೊಂಡು ಭಾರತವನ್ನು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಏಕಾಂಗಿಯಾಗಿಸಲು ಯತ್ನಿಸುತ್ತಿರುವ ಪಾಕಿಸ್ತಾನದ ಆರೋಪಕ್ಕೆ ಬಲತಂದುಕೊಡುವ ಕೆಲಸವನ್ನು ಮೋದಿ ಸರ್ಕಾರ ಮಾಡುತ್ತಿದೆ. ತವರಿನಲ್ಲಿ‌ ವಿರೋಧ ಪಕ್ಷಗಳನ್ನು ಅಣಿಯಲು ಪಾಕಿಸ್ತಾನದ ಪರ ಪ್ರತಿಪಕ್ಷಗಳು ಸಹಾನುಭೂತಿ ತೋರುತ್ತಿವೆ ಎಂದು ಮುಗಿಬೀಳುವ ಮೋದಿ, ಜನರ ದೃಷ್ಟಿಯಲ್ಲಿ ಅವರನ್ನು ದೇಶದ್ರೋಹಿಗಳನ್ನಾಗಿಸುತ್ತಿದ್ದಾರೆ. ಆದರೆ, ವಾಸ್ತವದಲ್ಲಿ ತಾವೇ ಪಾಕಿಸ್ತಾನದ ಬಲೆಯಲ್ಲಿ ಬಿದ್ದು ಭಾರತವನ್ನು ಜಾಗತಿಕವಾಗಿ ಅಪಾಯದ ಸ್ಥಾನಕ್ಕೆ ತಂದಿಟ್ಟದ್ದಾರೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ವಿಚಾರಕ್ಕೆ ಸಂಬಂಧಿಸಿದಂತೆ ಜರ್ಮನಿಯ‌ ಛಾನ್ಸೆಲರ್ ಏಂಜೆಲಾ‌ ಮಾರ್ಕೆಲ್, ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರನ್, ಭಾರತೀಯ ಸಂಜಾತೆ ಅಮೆರಿಕಾದ ಡೆಮಾಕ್ರಟಿಕ್ ಪಕ್ಷದ ಪ್ರಮಿಳಾ‌ ಜೈಪಾಲ್ ಸೇರಿದಂತೆ ಹಲವರು ಧ್ವನಿ ಎತ್ತಿದ್ದಾರೆ. ಇದನ್ನೇ ಮುಂದಿಟ್ಟು ಅಮೆರಿಕಾ ಪ್ರವಾಸ ಕೈಗೊಂಡಿದ್ದ ಭಾರತದ ವಿದೇಶಾಂಗ ಸಚಿವ ಜೈಶಂಕರ್ ಅವರು ಪ್ರಮೀಳಾ ಭೇಟಿ ಮಾಡಿರಲಿಲ್ಲ. ಭಾರತದ ನಿಲುವಿಗೆ ಆಕ್ಷೇಪ ವ್ಯಕ್ತಪಡಿಸಿದ ಟರ್ಕಿ ಪ್ರವಾಸವನ್ನು ಮೋದಿ‌‌ ರದ್ದುಗೊಳಿಸಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಇನ್ನು ಸಿಎಎ ವಿಚಾರದಲ್ಲಿ ಮಲೇಷ್ಯಾ, ಟರ್ಕಿ ಸೇರಿದಂತೆ ಹಲವು ಮುಸ್ಲಿಮ್ ರಾಷ್ಟ್ರಗಳು ವಿರೋಧಿಸಿವೆ. ಅಮೆರಿಕಾದ ಧಾರ್ಮಿಕ ಒಕ್ಕೂಟವು ಕೇಂದ್ರ ಸಚಿವ ಅಮಿತ್ ಶಾ‌ಗೆ ನಿರ್ಬಂಧ ವಿಧಿಸಬೇಕು ಎಂದೂ ಹೇಳಿತ್ತು. ವಿಶ್ವಸಂಸ್ಥೆಯೂ ಭಾರತದ ಬೆಳವಣಿಗೆಗಳ ಮೇಲ ಕಣ್ಣಿಟ್ಟಿರುವುದಾಗಿ ಹೇಳಿದೆ. ಆದರೆ, ಇದ್ಯಾವುದನ್ನು ಲೆಕ್ಕಿಸದ ಮೋದಿ-ಶಾ ಜೋಡಿಯು ಸಿಎಎ ಜಾರಿಗೊಳಿಸುವ ತೀರ್ಮಾನಕ್ಕೆ ಬದ್ಧ ಎಂದು ಘಂಟಾಘೋಷವಾಗಿ ಹೇಳುತ್ತಿದೆ. ವಿರೋಧ ಪಕ್ಷಗಳ ಮೇಲೆ ಮುಗಿಬೀಳುತ್ತಿರುವ ಬಿಜೆಪಿ ನಾಯಕತ್ವವು ಜಾಗತಿಕವಾಗಿ ಕಳೆಗುಂದುತ್ತಿರುವ ಭಾರತದ ವರ್ಚಸ್ಸನ್ನು ಮರುಸ್ಥಾಪಿಸಲು ಯಾವ ಪ್ರಯತ್ನ ಮಾಡಲಿದೆ? ಮತಾಂಧತೆಯ ನಂಜನ್ನು ದೇಶಕ್ಕೆ ಹರಡುವ ಮೂಲಕ ಮತ ಬ್ಯಾಂಕ್ ಭದ್ರಪಡಿಸಿಕೊಳ್ಳಲು ಮುಂದಾಗಿರುವ ಬಿಜೆಪಿಯು ತಾನೇ ಸೃಷ್ಟಿಸಿದ ವಿಪರೀತಗಳಿಗೆ ಹೇಗೆ ಅಂಕುಶವಾಕಲಿದೆ? ಆರ್ಥಿಕ ವಿಫಲತೆಗಳನ್ನು ಸರಿದೂಗಿಸುವ ಹಾದಿ ಯಾವುದು? ಒಂದೊಮ್ಮೆ ಅಂತಾರಾಷ್ಟ್ರೀಯ ಸಮುದಾಯ ಭಾರತದ ಮೇಲೆ ನಿರ್ಬಂಧ ಹೇರುವ ಕಟು ನಿರ್ಧಾರ ಕೈಗೊಂಡರೆ ಅದನ್ನು ಎದುರಿಸುವ ಬಗೆ ಹೇಗೆ? ದೇಶ ಎದುರಿಸುತ್ತಿರುವ ಇಂಥ ಗಂಭೀರ ಸವಾಲುಗಳಿಗೆ ಎದುರಾಗಬೇಕಾದ ಸರ್ಕಾರವು ವಿಭಜನಕಾರಿ ನೀತಿಗಳನ್ನು ಬಲಪ್ರಯೋಗಿಸಿ ಜಾರಿಗೊಳಿಸಲು ಮುಂದಡಿ‌ ಇಟ್ಟಿದೆ. ಇದು ದೇಶದ ಆರೋಗ್ಯವನ್ನು ಮತ್ತಷ್ಟು ಹದಗೆಡಿಸುವುದರಲ್ಲಿ ಅನುಮಾನವೇ ಇಲ್ಲ.

Tags: ಜಮ್ಮು ಮತ್ತು ಕಾಶ್ಮೀರತ್ರಿವಳಿ ತಲಾಕ್ನರೇಂದ್ರ ಮೋದಿನೀತಿಮಾಹಿತಿ ಹಕ್ಕು ಕಾಯ್ದೆಸರ್ಕಾರ
Previous Post

ಬಿಜೆಪಿ ಸಂಸ್ಕೃತಿಯನ್ನು ಜಾಹೀರು ಮಾಡುತ್ತಿರುವ ಮುಖಂಡರು!

Next Post

ದೇಶದ ಜನತೆಗೆ, ಸಂಸತ್ತಿಗೆ ಸುಳ್ಳು ಹೇಳಿದ ಪ್ರವಾಸೋದ್ಯಮ ಸಚಿವ!

Related Posts

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
0

ಬೆಂಗಳೂರು : ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು(Mekedatu) ಸಮತೋಲಿತ ಜಲಾನಯನ ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ಕೆಇಆರ್‌ಎಸ್(KERS) ನಿರ್ದೇಶಕರ ನೇತೃತ್ವದಲ್ಲಿ ಹೊಸ ತಂಡ ರಚಿಸಿ, ಯೋಜನೆ ಕಾರ್ಯಾನುಷ್ಠಾನಕ್ಕೆ ರಾಜ್ಯ ಸರ್ಕಾರ...

Read moreDetails
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

December 12, 2025
ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

December 12, 2025

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

December 12, 2025
Next Post
ದೇಶದ ಜನತೆಗೆ

ದೇಶದ ಜನತೆಗೆ, ಸಂಸತ್ತಿಗೆ ಸುಳ್ಳು ಹೇಳಿದ ಪ್ರವಾಸೋದ್ಯಮ ಸಚಿವ!

Please login to join discussion

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada