• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಉಡುಪಿ ರಥಬೀದಿಯಲ್ಲೊಂದು ಬಂಡಾಯ!

by
January 22, 2020
in ಕರ್ನಾಟಕ
0
ಉಡುಪಿ ರಥಬೀದಿಯಲ್ಲೊಂದು ಬಂಡಾಯ!
Share on WhatsAppShare on FacebookShare on Telegram

ಉಡುಪಿಯ ರಥಬೀದಿಯಲ್ಲೊಂದು ಮೌನ ಕ್ರಾಂತಿಯೊಂದು ಶುಕ್ರವಾರ ಸಂಜೆ-ರಾತ್ರಿ ನಡೆದುಹೋಗಿದೆ. ಈ ಕ್ರಾಂತಿ ನಡೆದದ್ದು ಉಡುಪಿಯ ಶ್ರೀ ಕೃಷ್ಣ ಮಠದ ಪರ್ಯಾಯದ ಸಂಭ್ರಮಾಚರಣೆಯೊಂದಿಗೆ ಇಲ್ಲಿ ಗಮನಾರ್ಹ.

ADVERTISEMENT

ಕಳೆದ ಕೆಲ ದಿನಗಳಿಂದ ಕರಾವಳಿಯಾದ್ಯಂತ, ರಾಜ್ಯಾದ್ಯಂತ ಕಲಾಸಕ್ತರ ಗುಂಪುಗಳಲ್ಲಿ ಉಡುಪಿಯಲ್ಲಿ ಶುಕ್ರವಾರ ಸಂಜೆ ಆಯೋಜಿತವಾಗಿದ್ದ ಖ್ಯಾತ ಸಂಗೀತಗಾರ ಟಿಎಂ ಕೃಷ್ಣ ಸಂಗೀತ ಕಛೇರಿಯ ಬಗೆಗಿನೆ ಚರ್ಚೆ. ಹಿಂದುತ್ವವಾದಿಗಳು, ಈ ಸಂಗೀತ ಕಛೇರಿಯನ್ನು ಬಹಿಷ್ಕರಿಸುವುದರ ಜತೆಗೆ ಅದರ ಪ್ರಾಯೋಜಕರಾದ “ಹರ್ಷ” ಸಂಸ್ಥೆಯನ್ನೂ ಬಹಿಷ್ಕರಿಸಲೂ ಕರೆ ನೀಡಿದ್ದರು. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆದಿತ್ತು. ಕೊನೆಗೆ ಇತ್ತೀಚೆಗೆ ಕೃಷ್ಣೈಕ್ಯರಾದ ಶ್ರೀ ಪೇಜಾವರ ಮಠದ ವಿಶ್ವೇಶ ತೀರ್ಥರ ಹೆಸರನ್ನೂ ಎಳೆದು ತರಲಾಯಿತು. ಶ್ರೀಗಳು ಜೀವಂತವಾಗಿದ್ದರೆ, ಟಿಎಂ ಕೃಷ್ಣ ಸಂಗೀತ ಕಛೇರಿ ಉಡುಪಿಯಲ್ಲಿ ನಡೆಯಲು ಬಿಡುತ್ತಿರಲಿಲ್ಲ ಎಂಬ ಭಾವನಾತ್ಮಕ ಅಂಶವನ್ನೂ ಎತ್ತಿ ಕಟ್ಟಲಾಯಿತು.

ಸಾಮಾಜಿಕ ಮಾಧ್ಯಮಗಳಲ್ಲಿ ಈ ಸಂದೇಶವನ್ನು ಪರಿಣಾಮಕಾರಿಯಾಗಿ ಹರಡುವ ವ್ಯವಸ್ಥೆ ಮಾಡಲಾಗಿತ್ತು. ನಾನಾ ಜಾತಿಗಳ, ಉದ್ಯೋಗಿಗಳ ಗುಂಪಿನಲ್ಲಿ ಈ ಸಂದೇಶ ಹರಿಬಿಡಲಾಯಿತು. ಟಿಎಂ ಕೃಷ್ಣ ಅವರು ಬ್ರಾಹ್ಮಣ ವಿರೋಧಿ, ಮೋದಿ ವಿರೋಧಿ, ಅಮಿತ್ ಶಾ ವಿರೋಧಿ, ಹಿಂದುತ್ವ ವಿರೋಧಿ, ಕೊನೆಗೆ ಗುರು-ಶಿಷ್ಯ ಪರಂಪರೆ ವಿರೋಧಿ, ಗುರುಕುಲ ವ್ಯವಸ್ಥೆ ವಿರೋಧಿ ಹೀಗೆ ನಾನಾ ಭಾವನಾತ್ಮಕ ಅಂಶಗಳನ್ನು ಇಲ್ಲಿ ಪ್ರಸ್ತಾಪಿಸಲಾಗಿತ್ತು.
ಆದರೆ ಶುಕ್ರವಾರ ಸಂಜೆ ಆದದ್ದೇ ಬೇರೆ. ರಥಬೀದಿಯಲ್ಲೇ ನಡೆದ ಟಿಎಂ ಕೃಷ್ಣ ಕಚೇರಿ ಹೌಸ್‍ಫುಲ್. ಕೃಷ್ಣ ಕಚೇರಿ ಆರಂಭಕ್ಕೆ ಮುನ್ನವೇ ಅಲ್ಲಿ ಕಾಲಿಡಲು ಜಾಗವಿರಲಿಲ್ಲ. ಬಹುತೇಕ ಶೋತೃವರ್ಗ ಸ್ಥಳೀಯ ಬ್ರಾಹ್ಮಣರೇ ಆಗಿದ್ದರು. ಅಲ್ಲಿನ ಸಂಗೀತ ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲೇ ನೆರೆದಿದ್ದರು. ಯಾವುದೇ ದುರ್ಘಟನೆಗಳಿಲ್ಲದೆ ಕೃಷ್ಣ ಸಂಗೀತ ಗೋಷ್ಠಿ ಸಂಪನ್ನಗೊಂಡಿತು.

ಟಿಎಂ ಕೃಷ್ಣ ಸಂಗೀತ ಕಚೇರಿಯ ಯಶಸ್ಸು ಕಳುಹಿಸಿದ ಸಂದೇಶವೇನು? ಒಂದೆಡೆ ಕಲಾವಿದರನ್ನು ಅವರ ಎಡ ಪಂಥೀಯ ವಿಚಾರಧಾರೆ ಹಿನ್ನೆಲೆಯಲ್ಲಿ ಹಂಗಿಸುವ, ಬಹಿಷ್ಕರಿಸುವ ಕೆಲಸ ನಡೆಯುತ್ತಿರುವಾಗ, ಹಿಂದೂ ಧಾರ್ಮಿಕತೆಯ ಹೃದಯ ದಂತಿರುವ ಉಡುಪಿಯ ಜನ ಕೃಷ್ಣ ಸಂಗೀತ ಕಾರ್ಯಕ್ರಮಕ್ಕೆ ಅಭೂತಪೂರ್ವ ಬೆಂಬಲ ನೀಡುವ ಮೂಲಕ ಹೊಸ ಚರಿತ್ರೆ ಬರೆದಿದ್ದಾರೆ ಎಂದರೆ ತಪ್ಪಾಗಲಾರದು. ಏಕೆಂದರೆ, ಈ ಸಂಗೀತ ಕಚೇರಿ ಬಹಿಷ್ಕಾರದ ಕರೆ ನೀಡಿದ್ದು, ಸ್ಥಳೀಯ ವಟುಗಳೇ ಆಗಿದ್ದರು. ಒಂದೊಮ್ಮೆ ಅವರ ಕರೆಗೆ ಬೆಂಬಲಿಸಿ, ಸಂಗೀತ ಪ್ರಿಯರು, ಕೃಷ್ಣ ಕಚೇರಿ ಬಹಿಷ್ಕರಿಸಿದ್ದರೆ, ಅವರ ಅಬ್ಬರ ಇನ್ನಷ್ಟು ಜಾಸ್ತಿಯಾಗುತ್ತಿತ್ತು. ಜೊತೆಗೆ, ಇಂತಹ ಮಡಿವಂತಿಕೆಯ ಆಲೋಚನಾ ಕ್ರಮದ ಜತೆಗೆ ತಾವಿಲ್ಲ ಎಂದು ಸ್ಥಳೀಯರು ಸಾರಿ ಹೇಳಿದ್ದಾರೆ. ಈಗ ಬೇಕಿರುವುದು ಈ ಪ್ರಜ್ಞೆಯನ್ನು ಬಳಸಿಕೊಂಡು, ಕೋಮುವಾದಿಗಳ ವಿರುದ್ಧದ ಯದ್ದವನ್ನು ಜಾರಿಯಲ್ಲಿಡುವುದು.

ದಕ್ಷಿಣ ಕನ್ನಡ-ಉಡುಪಿಯಲ್ಲಿ ಹಿಂದುತ್ವವಾದಿಗಳು ಪ್ರಬಲವಾಗಿದ್ದೇ ಅಲ್ಪಸಂಖ್ಯಾತರ ತುಷ್ಟೀಕರಣದಲ್ಲಿ ಕಾಂಗ್ರೆಸ್ ತೊಡಗಿದೆ ಎಂಬ ಆರೋಪದೊಂದಿಗೆ. ಕಾಂಗ್ರೆಸ್ ಹೊರತಾರ ಜಾತ್ಯಾತೀತ ಧ್ವನಿಗಳಿಗೆ ಇಲ್ಲಿ ದೊಡ್ಡ ಮಟ್ಟದಲ್ಲಿ ಮನ್ನಣೆ ಇದೆ ಎಂಬುದು ಆಗ್ಗಾಗ್ಗೆ ಪ್ರಕಟವಾಗುತ್ತಲೇ ಇದೆ. ಕೃಷ್ಣ ವಿರುದ್ಧ ದೊಡ್ಡ ಮಟ್ಟದಲ್ಲಿ ಅಪಪ್ರಚಾರ ನಡೆಸಿದರೂ ಅಂತಹ ಅಪಪ್ರಚಾರಕ್ಕೆ ಯಾರೂ ಸೊಪ್ಪು ಹಾಕಲಿಲ್ಲ. ಅಂದರೆ ಕೋಮುವಾದಿಗಳ ವಾದ ಸರಣಿ ದೊಡ್ಡ ಪ್ರಮಾಣದ ಜನರಿಗೆ ಇಷ್ಟವಾಗಿಲ್ಲ ಎಂಬುದು ಖಚಿತವಾಗಿದೆ. ಇದನ್ನು ಬಳಸಿಕೊಂಡು, ಸಾಮರಸ್ಯದ ಸಮಾಜ ಸೃಷ್ಟಿಸುವ ಕೆಲಸ ನಡೆಯಬೇಕಿದೆ.

Tags: cancelledEventmusic concertright-wingTM KrishnaUdupiಉಡುಪಿಕಾರ್ಯಕ್ರಮಟಿ.ಎಂ.ಕೃಷ್ಣಬಲಪಂಥೀಯರದ್ದುಸಂಗೀತ ಕಛೇರಿಹಿಂದುತ್ವ
Previous Post

ಇಂದು ಸುಪ್ರೀಂಕೋರ್ಟಿನ ಮೇಲೆ ದೇಶದ ಕಣ್ಣು

Next Post

ಸರ್ಕಾರಿ ಭೂಮಿಗೆ ಕನ್ನ ಹಾಕಿದ ಭ್ರಷ್ಟರ ವಿರುದ್ಧ ತನಿಖೆ ಆಗುವುದೇ?

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post
ಸರ್ಕಾರಿ ಭೂಮಿಗೆ ಕನ್ನ ಹಾಕಿದ ಭ್ರಷ್ಟರ ವಿರುದ್ಧ ತನಿಖೆ ಆಗುವುದೇ?

ಸರ್ಕಾರಿ ಭೂಮಿಗೆ ಕನ್ನ ಹಾಕಿದ ಭ್ರಷ್ಟರ ವಿರುದ್ಧ ತನಿಖೆ ಆಗುವುದೇ?

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada