• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದೆಹಲಿಯ ಗುಂಡಿನ ದಾಳಿಗೂ ಅಲ್ಲಿನ ಎಲೆಕ್ಷನ್ ಗೂ ಇದೆಯಾ ಲಿಂಕ್..?

by
February 1, 2020
in ದೇಶ
0
ದೆಹಲಿಯ ಗುಂಡಿನ ದಾಳಿಗೂ ಅಲ್ಲಿನ ಎಲೆಕ್ಷನ್ ಗೂ ಇದೆಯಾ ಲಿಂಕ್..?
Share on WhatsAppShare on FacebookShare on Telegram

ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೀತಿದೆ. ಬಿಜೆಪಿ ಹಾಗು ಆಮ್ ಆದ್ಮಿ ಪಾರ್ಟಿ ನಡುವೆ ಜಿದ್ದಾಜಿದ್ದಿನ ಹೋರಾಟ ನಡೀತಿದೆ. ಕಾಂಗ್ರೆಸ್‌ ಸೇರಿದಂತೆ ಬೇರೆಲ್ಲಾ ಸಣ್ಣಪುಟ್ಟ ಪಕ್ಷಗಳು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. ಎಲ್ಲಾ 70 ಕ್ಷೇತ್ರಗಳಲ್ಲೂ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಗಳ ಕಡೆಗೆ ಮತದಾರನ ಒಲವು ಸ್ಪಷ್ಟವಾಗ್ತಿದೆ. ಅರವಿಂದ್ ಕೇಜ್ರಿವಾಲ್ ಸರ್ಕಾರ ಕೈಗೊಂಡಿರುವ ಜನಪರ ಕಾರ್ಯಕ್ರಮಗಳಿಗೆ ಮಾರು ಹೋಗಿದ್ದಾರೆ ಎನ್ನುತ್ತಿವೆ ರಾಜಕೀಯ ವಿಶ್ಲೇಷಣೆಗಳು. ಇದು ಬಿಜೆಪಿ ನಾಯಕರನ್ನು ಕಂಗಾಲಾಗಿಸಿದೆ.

ADVERTISEMENT

ದೆಹಲಿ ಮತದಾರರನ್ನು ಧರ್ಮದ ಆಧಾರದಲ್ಲಿ ಇಬ್ಭಾಗ ಮಾಡಲು ಬಿಜೆಪಿ ನಾಯಕರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ದೆಹಲಿಯ ಚುನಾವಣೆ ಭಾರತ, ಪಾಕಿಸ್ತಾನ ನಡುವಿನ ಯುದ್ಧಕ್ಕೆ ಹೋಲಿಸುತ್ತಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧ ಮಾಡುವವರನ್ನು ಗುಂಡಿಕ್ಕಿ ಹತ್ಯೆ ಮಾಡಬೇಕು ಎಂದು ಪ್ರಚಾರದಲ್ಲೇ ಕರೆ ಕೊಡುತ್ತಾರೆ. ಒಟ್ಟಾರೆ ಧರ್ಮದ ಆಧಾರದಲ್ಲಿ ಜನರು ರೊಚ್ಚಿಗೇಳುವಂತೆ ಮಾಡಲು ಇನ್ನಿಲ್ಲದ ಕಸರತ್ತು ನಡೆಯುತ್ತಿದೆ ಎನ್ನುವುದು ಸಾಮಾನ್ಯ ಜನರಿಗೂ ಗೊತ್ತಾಗುತ್ತಿದೆ.

ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿಕೆ ಕೊಟ್ಟ ನಾಲ್ಕೇ ದಿನದಲ್ಲಿ ದೆಹಲಿಯ ಯುವಕನೊಬ್ಬ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಹೋರಾಟಗಾರರ ಮೇಲೆ ಆರಡಿ ವ್ಯಕ್ತಿಯೊಬ್ಬ ಬಂದೂಕಿನಿಂದ ಗುಂಡು ಹಾರಿಸಿದ್ದ. ಈ ಘಟನೆಯಲ್ಲಿ ಓರ್ವ ಪತ್ರಿಕೋದ್ಯಮ ವಿದ್ಯಾರ್ಥಿ ಗಾಯಗೊಂಡು ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪರಿಚತ ವ್ಯಕ್ತಿಯೊಬ್ಬ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧ ಮಾಡುವ ಜನರ ಮೇಲೆ ದಾಳಿ ಮಾಡಿದ್ದು, ಉದ್ದೇಶಪೂರ್ವಕವಾಗಿ ನಡೆದ ಘಟನೆಯಾ ಎನ್ನುವ ಅನುಮಾನ ಮೂಡಲು ಶುರುವಾಗುತ್ತಿವೆ. ಈ ಅನುಮಾನ ಮೂಡಲು ಕಾರಣವಾಗಿದ್ದು ಅಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ. ರಾಜಕೀಯ ಯಶಸ್ವಿಗಾಗಿ ಗುಂಡು ಹಾರಿಸುವಂತೆ ಯೋಜನೆ ರೂಪಿಸಲಾಯ್ತಾ ಅನ್ನೋ ಪ್ರಶ್ನಾರ್ಥಕ ಚಿಹ್ನೆ ಮೂಡುವಂತಾಗಿದೆ. ಈ ಹೋರಾಟವನ್ನು ಹತ್ತಿಕ್ಕಿದ್ರೆ ಚುನಾವಣೆಯಲ್ಲಿ ಮತಗಳಿಸಬಹುದು ಅನ್ನೋ ಕಾರಣಕ್ಕೆ ಯಾರಾದರು ಸಂಚು ಮಾಡಿರಬಹುದು ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ಅನುಮಾನಕ್ಕೆ ಹಲವಾರು ಕಾರಣಗಳೂ ಇವೆ.

ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಅಧಿಕಾರದಲ್ಲಿದೆ. ಆದರೆ ಅಲ್ಲಿನ ಪೊಲೀಸ್ ವ್ಯವಸ್ಥೆ ಮೇಲೆ ಹಿಡಿತ ಹೊಂದಿರುವುದು ನಮ್ಮ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ. ಒಂದನೇ ಅನುಮಾನ ಏನಪ್ಪ ಅಂದ್ರೆ, ಆ ಯುವಕ ಬಂದೂಕಿನಿಂದ ಗುಂಡು ಹಾರಿಸಿದ್ದು, ಪ್ರತಿಭಟನಾಕಾರರ ಮೇಲೆ. ಆ ವೇಳೆ ದೆಹಲಿ ಪೊಲೀಸರು ಶಸ್ತ್ರ ಸಜ್ಜಿತವಾಗಿ ಕೆಲವೇ ಅಡಿಗಳ ದೂರ ನಿಂತಿದ್ದರು.

ಓರ್ವ ಬಂದೂಕುಧಾರಿ ಗುಂಡು ಹಾರಿಸುತ್ತಿದ್ದಾನೆ ಎಂದರೆ, ಕಾನೂನು ಪಾಲನೆ ಮಾಡಬೇಕಿದ್ದ ಪೊಲೀಸರು ಮಾಡಬೇಕಿದ್ದ ಮೊದಲ ಕೆಲಸ ಎಂದರೆ ಆತನ ಮೇಲೆ ಫೈರ್ ಮಾಡುವುದು. ಆದರೆ ಪೊಲೀಸರು ಆ ಕೆಲಸವನ್ನು ಮಾಡುವುದಿಲ್ಲ. ಆತನನ್ನು ತುಂಬಾ ಸಾಮಾನ್ಯ ರೀತಿಯಲ್ಲಿ ಬಂಧನ ಮಾಡುತ್ತಾರೆ. ಮತ್ತೊಂದು ಎಂದರೆ ಬಂದೂಕಿನಿಂದ ಗುಂಡು ಹಾರಿಸುವಾಗ ಆ ಪೊಲೀಸರ ತಂಡ ಸುಮ್ಮನೆ ನಿಂತಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ಈ ದೃಶ್ಯಗಳು ಪೊಲೀಸರಿಗೆ ಮೊದಲೇ ಗೊತ್ತಿತ್ತಾ ಎನ್ನುವ ಅನುಮಾನವನ್ನು ಹುಟ್ಟುಹಾಕುತ್ತಿದೆ.

ಜಾಮಿಯಾ ಮಿಲಿಯಾ ಇಸ್ಲಾಮಿಯಾ ಬಳಿ ನಡೆದ ದಾಳಿ ವೇಳೆ ಪೊಲೀಸರು ಕೆಲಕಾಲ ಯಾವುದೇ ಪ್ರತಿಕ್ರಿಯೆ ಕೊಡಲಿಲ್ಲ. ಇದೊಂದು ಅನುಮಾನ ಆದರೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ 17 ವರ್ಷದ ಯುವಕ ಗುಂಡು ಹಾರಿಸುವುದಕ್ಕಾಗಿ ಹಣ ಪಾವತಿ ಮಾಡಿದ್ದು ಯಾರು..? ಎಂದು ಪ್ರಶ್ನಿಸಿದ್ದಾರೆ. ಸಂಸತ್‌ ಬಜೆಟ್‌ ಅಧಿವೇಶನ ಆರಂಭಕ್ಕೂ ಮುನ್ನವೇ ರಾಹುಲ್‌ ಗಾಂಧಿ ಈ ಪ್ರಶ್ನೆ ಮಾಡಿರೋದು ಭಾರೀ ಕೋಲಾಹಲವನ್ನು ಸೃಷ್ಟಿ ಮಾಡುವ ಎಲ್ಲಾ ಸಾಧ್ಯಗಳು ಇವೆ.

ಇನ್ನು ಅರವಿಂದ್‌ ಕೇಜ್ರಿವಾಲ್‌ ಕೂಡ, ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಸಿಆರ್‌, ಎನ್‌ಆರ್‌ಸಿ ಆಕ್ರೋಶಭರಿತ ಹೇಳಿಕೆಗಳು ದೆಹಲಿ ಚುನಾವಣೆಯಲ್ಲಿ ಪರಿಣಾಮ ಬೀರುವುದಿಲ್ಲ. ಇಲ್ಲಿ ಅಭಿವೃದ್ಧಿ ಆಧಾರದಲ್ಲಿ ಚುನಾವಣೆ ನಡೆಯುತ್ತೆ ಎಂದಿದ್ದಾರೆ. ದೆಹಲಿ ಜಾಮಿಯಾ ಫೈರಿಂಗ್‌ ವಿಚಾರ ಮುಂದೆ ಯಾವ ಪರಿಣಾಮ ಬೀರುತ್ತೆ ಎನ್ನುವುದು ಚುನಾವಣಾ ಫಲಿತಾಂಶಕ್ಕೆ ಹಿಡಿದ ಕೈಗನ್ನಡಿಯಾಗಿರಲಿದೆ.

Tags: citizenship lawCongress MPJamia Millia protestJamia shooterRahul Gandhiteenagerಕಾಂಗ್ರೆಸ್ ಸಂಸದಜಾಮಿಯಾ ಮಿಲಿಯಾಜಾಮಿಯಾ ಶೂಟರ್ಪೌರತ್ವ ಕಾನೂನುಪ್ರತಿಭಟನೆರಾಹುಲ್ ಗಾಂಧಿ
Previous Post

ಕೇಂದ್ರ ಬಜೆಟ್‌ 2020ರ ಮುಖ್ಯಾಂಶಗಳು

Next Post

ಜನಸಾಮಾನ್ಯರಿಗೆ ಒಂದು ಕೈಲಿ ಕೊಟ್ಟು ಮತ್ತೊಂದು ಕೈಲಿ ಕಿತ್ತುಕೊಂಡ ನಿರ್ಮಲಾ

Related Posts

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
0

ಬೆಂಗಳೂರು : ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು(Mekedatu) ಸಮತೋಲಿತ ಜಲಾನಯನ ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ಕೆಇಆರ್‌ಎಸ್(KERS) ನಿರ್ದೇಶಕರ ನೇತೃತ್ವದಲ್ಲಿ ಹೊಸ ತಂಡ ರಚಿಸಿ, ಯೋಜನೆ ಕಾರ್ಯಾನುಷ್ಠಾನಕ್ಕೆ ರಾಜ್ಯ ಸರ್ಕಾರ...

Read moreDetails
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

December 12, 2025
ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

December 12, 2025

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

December 12, 2025
Next Post
ಜನಸಾಮಾನ್ಯರಿಗೆ ಒಂದು ಕೈಲಿ ಕೊಟ್ಟು ಮತ್ತೊಂದು ಕೈಲಿ ಕಿತ್ತುಕೊಂಡ ನಿರ್ಮಲಾ

ಜನಸಾಮಾನ್ಯರಿಗೆ ಒಂದು ಕೈಲಿ ಕೊಟ್ಟು ಮತ್ತೊಂದು ಕೈಲಿ ಕಿತ್ತುಕೊಂಡ ನಿರ್ಮಲಾ

Please login to join discussion

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada